Indian Railways
ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ (ಉಗಿ ಬಂಡಿ ದಾರಿಗಳ) ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. 1853 ರಲ್ಲಿ ಸ್ಥಾಪಿತವಾದ ಇದು ಪ್ರಪಂಚದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ, ವಿವಿಧ ಪ್ರದೇಶಗಳನ್ನು ಸಂಪರ್ಕಿಸುತ್ತದೆ ಮತ್ತು ಸರಕುಗಳು ಮತ್ತು ಪ್ರಯಾಣಿಕರ ಚಲನೆಯನ್ನು ಸುಗಮಗೊಳಿಸುತ್ತದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ದರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ. ರೈಲ್ವೇ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರೈಲ್ವೇಗಳು ದಿನನಿತ್ಯ ಸಾವಿರಾರು ರೈಲುಗಳನ್ನು ಓಡಿಸುವುದರೊಂದಿಗೆ ವಿಸ್ತಾರವಾದ ಜಾಲವನ್ನು ಹೊಂದಿದೆ. ವ್ಯಾಪಾರ ಮತ್ತು ಪ್ರಯಾಣವನ್ನು ಸಕ್ರಿಯಗೊಳಿಸುವ ಮೂಲಕ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.
ಇನ್ನೂ ಹೆಚ್ಚು ಓದಿಚೀನಾ, ಪಾಕಿಸ್ತಾನ, ಬಾಂಗ್ಲಾದೇಶ ಗಡಿಗಳಲ್ಲಿ ಪ್ರಬಲ ರೈಲು ಜಾಲ ಅಳವಡಿಕೆಗೆ ಭಾರತ ಯೋಜನೆ; 45,000 ಕೋಟಿ ರೂ ಹೂಡಿಕೆ ಸಾಧ್ಯತೆ
India to strengthen border regions by upgrading railway infrastructure: ಗಡಿಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲು ಮತ್ತು ಸಮರ ಸನ್ನದ್ಧತೆಯನ್ನು ತೀವ್ರಗೊಳಿಸಲು ಭಾರತ ಮತ್ತೊಂದು ಹೆಜ್ಜೆ ಇಡುತ್ತಿದೆ. ಪಾಕಿಸ್ತಾನ, ಚೀನಾ, ಬಾಂಗ್ಲಾ ಗಡಿಗಳಲ್ಲಿ ರೈಲ್ವೆ ಮೂಲ ಸೌಕರ್ಯ ಅಭಿವೃದ್ಧಿಗೆ ಭಾರತ ಯೋಜನೆ ಹಾಕಿದೆ. 45,000 ಕೋಟಿ ರೂ ಹೂಡಿಕೆ ಬೇಕಾಗಬಹುದು. ಎರಡು ವರ್ಷದಲ್ಲಿ ಈ ಹೂಡಿಕೆ ಆಗಲಿದೆ.
- Vijaya Sarathy SN
- Updated on: Aug 3, 2026
- 2:35 pm
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಎಡಕುಮೇರಿ ಗುಡ್ಡಕುಸಿತದಿಂದ ಇಂದೂ ಹಲವು ರೈಲುಗಳ ಸಂಚಾರ ಬಂದ್
ಸಕಲೇಶಪುರದ ಎಡಕುಮೇರಿ ಬಳಿ ರೈಲ್ವೆ ಹಳಿಗೆ ಗುಡ್ಡಕುಸಿತವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ಮಾರ್ಗದಲ್ಲಿ ಇಂದು ಕೂಡ ಹಲವು ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಕೆಲವು ರೈಲುಗಳ ಮಾರ್ಗ ಬದಲಿಸಲಾಗಿದೆ. ಶನಿವಾರ ರಾತ್ರಿ ಗುಡ್ಡ ಕುಸಿತ ಸಂಭವಿಸಿ ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ನಿರಂತರ ಮಳೆಯಿಂದಾಗಿ ಮಣ್ಣು ತೆರವು ಕಾರ್ಯಾಚರಣೆಗೂ ಅಡ್ಡಿಯಾಗುತ್ತಿದೆ.
- Manjunath KB
- Updated on: Aug 3, 2026
- 9:16 am
ರೈಲು ಪ್ರಯಾಣಿಕರೇ ಗಮನಿಸಿ; ನಾಳೆಯಿಂದ ರೈಲ್ವೆ ಇಲಾಖೆಯಿಂದ ಲಗೇಜ್ ಆನ್ಲೈನ್ ಬುಕಿಂಗ್ ಆರಂಭ
ರೈಲ್ವೆ ನಿಲ್ದಾಣಗಳಲ್ಲಿ ಉದ್ದದ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು, ಪ್ರಯಾಣಿಕರು ಟಿಕೆಟ್ ಕಾಯ್ದಿರಿಸುವಾಗಲೇ ಹೆಚ್ಚುವರಿ ಲಗೇಜ್ ವಿವರಗಳನ್ನು ನಮೂದಿಸಿ ಲಗೇಜ್ ಬುಕ್ ಮಾಡಲು ಅನುಕೂಲವಾಗುವಂತೆ ರೈಲ್ವೆ ಇಲಾಖೆಯು ನಾಳೆಯಿಂದ (ಜುಲೈ 31) ಆನ್ಲೈನ್ ಸೌಲಭ್ಯವನ್ನು ಪ್ರಾರಂಭಿಸುತ್ತಿದೆ. ಪ್ರಸ್ತುತ, ಉಚಿತ ಮಿತಿಗಿಂತ ಹೆಚ್ಚಿನ ಲಗೇಜ್ ಒಯ್ಯುವ ಪ್ರಯಾಣಿಕರು ರೈಲು ಹೊರಡುವ ಮೊದಲು ಪಾರ್ಸಲ್ ಕಚೇರಿಗಳಿಗೆ ತೆರಳಿ ತಮ್ಮ ಹೆಚ್ಚುವರಿ ಲಗೇಜ್ ಅನ್ನು ಕಾಯ್ದಿರಿಸಬೇಕಾಗಿತ್ತು. ಆದರೆ, ಇನ್ಮುಂದೆ ಆ ತಲೆಬಿಸಿ ಇರುವುದಿಲ್ಲ.
- Sushma Chakre
- Updated on: Jul 30, 2026
- 4:30 pm
August 2026 Rule Changes: ಆಗಸ್ಟ್ 1 ರಿಂದ ಜಾರಿಗೆ ಬರಲಿವೆ 5 ಹೊಸ ನಿಯಮಗಳು: ಎಲ್ಪಿಜಿ ದರ,ತತ್ಕಾಲ್ ಬುಕಿಂಗ್ ಮತ್ತು ಬ್ಯಾಂಕಿಂಗ್ ಮೇಲೆ ಭಾರಿ ಪ್ರಭಾವ
ಆಗಸ್ಟ್ 1, 2026 ರಿಂದ 5 ಪ್ರಮುಖ ನಿಯಮಗಳು ಜಾರಿಗೆ ಬರಲಿವೆ. ಇವು ಎಲ್ಪಿಜಿ ದರ, ರೈಲ್ವೆ ತತ್ಕಾಲ್ ಬುಕಿಂಗ್, ಬ್ಯಾಂಕಿಂಗ್ ಸೇವೆ, ಅಂಚೆ ಶುಲ್ಕ ಹಾಗೂ ಫಾಸ್ಟ್ಟ್ಯಾಗ್ ಕೆವೈಸಿ ಮೇಲೆ ಪರಿಣಾಮ ಬೀರಲಿವೆ. ಸಿಲಿಂಡರ್ ಬೆಲೆ ಪರಿಷ್ಕರಣೆ, ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್ಸ್ ಮಿತಿ, ರೈಲ್ವೆ ಟಿಕೆಟ್ ಸುಧಾರಣೆಗಳು ಸಾರ್ವಜನಿಕರ ದೈನಂದಿನ ಬಜೆಟ್ ಮತ್ತು ವೆಚ್ಚಗಳ ಮೇಲೆ ನೇರ ಪ್ರಭಾವ ಬೀರಲಿದ್ದು, ಎಲ್ಲರೂ ತಿಳಿದುಕೊಳ್ಳುವುದು ಮುಖ್ಯವಾಗಿದೆ.
- Nayana Rajeev
- Updated on: Jul 29, 2026
- 11:47 am
ಧಾರವಾಡದ ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
Dharwad News: ಲೋಂಡಾ ಭಾಗದಲ್ಲಿ ಉಂಟಾದ ವಿದ್ಯುತ್ ಪೂರೈಕೆ ಸಮಸ್ಯೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ರೈಲು ನಿಲ್ದಾಣದಲ್ಲಿ ಬೆಂಗಳೂರು–ಬೆಳಗಾವಿ ಎಕ್ಸ್ಪ್ರೆಸ್ ಹಾಗೂ ರಾಣಿ ಚೆನ್ನಮ್ಮ ಎಕ್ಸ್ಪ್ರೆಸ್ ಸೇರಿದಂತೆ ಕೆಲವು ರೈಲುಗಳು ನಾಲ್ಕು ಗಂಟೆಗೂ ಹೆಚ್ಚು ಕಾಲ ನಿಂತಿದ್ದು, ಪ್ರಯಾಣಿಕರು ಪರದಾಡಿದರು. ರೈಲು ನಿಲ್ದಾಣದಲ್ಲಿನ ಪರಿಸ್ಥಿತಿಯ ವಿಡಿಯೋ ಇಲ್ಲಿದೆ.
- Narasimha Murti Pyati
- Updated on: Jul 28, 2026
- 12:40 pm
ಕರ್ನಾಟಕಕ್ಕೆ ಒಳ್ಳೆ ಸುದ್ದಿ; ಬಳ್ಳಾರಿ- ಗುಂತಕಲ್ ನಡುವಿನ 1,264 ಕೋಟಿ ವೆಚ್ಚದ ರೈಲು ಮಾರ್ಗಕ್ಕೆ ಸಂಪುಟ ಒಪ್ಪಿಗೆ
ಕೇಂದ್ರ ಸಂಪುಟ ಸಭೆಯ ನಂತರ ನಿರ್ಧಾರಗಳ ಬಗ್ಗೆ ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ ಸಂಪುಟವು ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಕರ್ನಾಟಕ ಹಾಗೂ ಆಂಧ್ರಪ್ರದೇಶದ ನಡುವೆ ಸಂಪರ್ಕ ಕಲ್ಪಿಸುವ 1,264 ಕೋಟಿ ರೂ. ವೆಚ್ಚದ ಬಳ್ಳಾರಿ-ಗುಂತಕಲ್ ನಡುವಿನ ರೈಲು ಮಾರ್ಗಕ್ಕೆ ಅನುಮೋದನೆ ನೀಡಲಾಗಿದೆ. 3 ಮತ್ತು 4ನೇ ಹಂತದ ರೈಲು ಮಾರ್ಗಗಳಿಗೆ ಸಂಪುಟ ಅನುಮೋದನೆ ನೀಡಿದೆ.
- Sushma Chakre
- Updated on: Jul 24, 2026
- 10:05 pm
ಬುಲೆಟ್ ರೈಲು ಯೋಜನೆ ವಿಳಂಬವನ್ನು ಟೀಕಿಸಿದ ಜಪಾನ್ ಮಾಜಿ ಸಚಿವ; ಭಾರತ ತಿರುಗೇಟು
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆ ವಿಳಂಬವಾಗುತ್ತಿರುವುದಕ್ಕೆ ಭಾರತದ ಸಚಿವರು ಮತ್ತು ಅಧಿಕಾರಿಗಳೇ ಕಾರಣ ಎಂದು ಜಪಾನ್ನ ಮಾಜಿ ಸಚಿವರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಜಪಾನ್ನ ಮಾಜಿ ನ್ಯಾಯಾಂಗ ಸಚಿವ ಹಿದೇಕಿ ಮಾಕಿಹರಾ ಅವರು ಜುಲೈ 15ರಂದು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಈ ಬಗ್ಗೆ ಪೋಸ್ಟ್ ಒಂದನ್ನು ಮಾಡಿದ್ದು, ಭಾರತೀಯ ಅಧಿಕಾರಿಗಳು ಮಾತುಕತೆಯ ವೇಳೆ ಜಪಾನ್ಗೆ ನೀಡಿದ ಭರವಸೆಗಳನ್ನು ಪದೇ ಪದೇ ಮುರಿದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಸಂಪೂರ್ಣವಾಗಿ ತಳ್ಳಿಹಾಕಿದೆ.
- Sushma Chakre
- Updated on: Jul 17, 2026
- 8:20 pm
ಅಮೃತ್ ಯೋಜನೆಯಡಿ ನವೀಕೃತಗೊಂಡ ಕರ್ನಾಟಕದ 4 ರೈಲ್ವೇ ನಿಲ್ದಾಣಗಳನ್ನು ವರ್ಚುವಲ್ ಮೂಲಕ ಉದ್ಘಾಟಿಸಿದ ಮೋದಿ
ಪ್ರಧಾನಿ ಮೋದಿ ಅವರು ಅಮೃತ ಭಾರತ್ ಯೋಜನೆಯಡಿ ನವೀಕೃತಗೊಂಡ ದೇಶದ 75 ರೈಲ್ವೇ ನಿಲ್ದಾಣಗಳನ್ನು ಉದ್ಘಾಟಿಸಿದ್ದು, ಇದರಲ್ಲಿ ಕರ್ನಾಟಕದ ಬಾದಾಮಿ, ಅಳ್ನಾವರ, ಕೊಪ್ಪಳ ಹಾಗೂ ಬಂಟ್ವಾಳ ನಿಲ್ದಾಣಗಳು ಕೂಡ ಸೇರಿವೆ. ಸ್ಥಳೀಯ ಸಂಸ್ಕೃತಿ ಮತ್ತು ವಾಸ್ತುಶಿಲ್ಪದಿಂದ ಪ್ರೇರಿತವಾಗಿ ನಿಲ್ದಾಣಗಳ ಕಟ್ಟದ ವಿನ್ಯಾಸ ಮಾಡಲಾಗಿದ್ದು, ವಿಶ್ವ ದರ್ಜೆಯ ಮತ್ತು ಪ್ರಯಾಣಿಕ ಸ್ನೇಹಿ ಸೌಲಭ್ಯಗಳನ್ನು ಇವು ಹೊಂದಿವೆ. ಜೊತೆಗೆ ಡಿಜಿಟಲ್ ಸ್ಪರ್ಶ ಪಡೆದಿವೆ.
- Prasanna Hegde
- Updated on: Jul 17, 2026
- 6:52 pm
Hydrogen Train Launch Live: ಹರಿಯಾಣದಲ್ಲಿ ದೇಶದ ಮೊದಲ ‘ಹೈಡ್ರೋಜನ್ ರೈಲಿ’ಗೆ ಪಿಎಂ ಮೋದಿ ಇಂದು ಚಾಲನೆ, ನೇರ ಪ್ರಸಾರI
ಭಾರತದ ಇಂಧನ ಮತ್ತು ರೈಲ್ವೆ ವಲಯದಲ್ಲಿ ಇಂದು ಹೊಸ ಕ್ರಾಂತಿ ಸೃಷ್ಟಿಯಾಗುತ್ತಿದೆ. ಹರಿಯಾಣ, ಚಂಡೀಗಢ ಮತ್ತು ಪಂಜಾಬ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ರೈಲು ನಿಲ್ದಾಣದಿಂದ ಜಿಂದ್ ಮತ್ತು ಸೋನಿಪತ್ ನಡುವೆ ಚಲಿಸಲಿರುವ ಭಾರತದ ಮೊದಲ 'ಹೈಡ್ರೋಜನ್ ಚಾಲಿತ ರೈಲಿ'ಗೆ ಹಸಿರು ನಿಶಾನೆ ತೋರಲಿದ್ದಾರೆ.
- Nayana Rajeev
- Updated on: Jul 17, 2026
- 11:27 am
ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ನಾಳೆ ಪ್ರಧಾನಿ ಮೋದಿ ಚಾಲನೆ; ಇದರ ವಿಶೇಷತೆ ಒಂದೆರಡಲ್ಲ!
ಭಾರತೀಯ ರೈಲ್ವೆ ವಲಯದಲ್ಲಿ ಪರಿಸರಸ್ನೇಹಿ ತಂತ್ರಜ್ಞಾನದ ಹೊಸ ಕ್ರಾಂತಿಗೆ ನಾಳೆ ಅಧಿಕೃತ ಚಾಲನೆ ಸಿಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹರಿಯಾಣದ ಜಿಂದ್ನಿಂದ ಭಾರತದ ಮೊಟ್ಟಮೊದಲ ಹೈಡ್ರೋಜನ್ ಚಾಲಿತ ರೈಲನ್ನು ಉದ್ಘಾಟಿಸಲಿದ್ದಾರೆ. ಚೆನ್ನೈನ ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿಯಲ್ಲಿ ವಿನ್ಯಾಸಗೊಳಿಸಲಾದ ಈ ರೈಲಿನ ಮೂಲಕ ಭಾರತವು ಜರ್ಮನಿ, ಜಪಾನ್, ಚೀನಾ ಮತ್ತು ಅಮೆರಿಕದಂತಹ ಅತ್ಯಾಧುನಿಕ ರೈಲ್ವೆ ತಂತ್ರಜ್ಞಾನ ಹೊಂದಿರುವ ಜಾಗತಿಕ ದೇಶಗಳ ಸಾಲಿಗೆ ಸೇರಲಿದೆ. ಈ ರೈಲುಗಳು ಡೀಸೆಲ್ ರೈಲುಗಳಿಗಿಂತ ಅತ್ಯಂತ ಶಬ್ದರಹಿತವಾಗಿ ಹಾಗೂ ಶೂನ್ಯ ಮಾಲಿನ್ಯದೊಂದಿಗೆ ಚಲಿಸಲಿವೆ.
- Sushma Chakre
- Updated on: Jul 16, 2026
- 9:46 pm
ಅಮೃತ್ ಭಾರತ್ ನಿಲ್ದಾಣ ಯೋಜನೆ; ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಕ್ರಾಂತಿಕಾರಿ ಬದಲಾವಣೆಗೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಬರೋಬ್ಬರಿ 71,000 ಕೋಟಿ ರೂ. ಬೃಹತ್ ಹೂಡಿಕೆಯೊಂದಿಗೆ ರೈಲ್ವೆ ಜಾಲವನ್ನು ವಿಶ್ವದರ್ಜೆಯ ಸಾರಿಗೆ ಹಬ್ಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಒಟ್ಟು 1,340 ರೈಲ್ವೆ ನಿಲ್ದಾಣಗಳು ಒಂದು ಭವ್ಯ ದೃಷ್ಟಿಕೋನದೊಂದಿಗೆ ಸಂಪೂರ್ಣ ಆಧುನಿಕ ಹಾಗೂ ಸುಂದರ ರೂಪಾಂತರವನ್ನು ಪಡೆಯುತ್ತಿವೆ. ದೇಶಾದ್ಯಂತ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾರ್ಯವು ಅತ್ಯಂತ ವೇಗವಾಗಿ ಸಾಗುತ್ತಿದ್ದು, ಅತ್ಯಾಧುನಿಕ ಸೌಲಭ್ಯಗಳು ಸಾರ್ವಜನಿಕ ಸೇವೆಗೆ ಸಿದ್ಧವಾಗುತ್ತಿವೆ. ಈಗಾಗಲೇ ಒಟ್ಟು 122 ರೈಲ್ವೆ ನಿಲ್ದಾಣಗಳ ಆಧುನೀಕರಣದ ಕೆಲಸ ಯಶಸ್ವಿಯಾಗಿ ಪೂರ್ಣಗೊಂಡಿದೆ.
- Sushma Chakre
- Updated on: Jul 16, 2026
- 8:42 pm
ಹೊಸ ಐಆರ್ಸಿಟಿಸಿ ವೆಬ್ಸೈಟ್ ಸಿದ್ಧ; ಬೀಟಾ ಆವೃತ್ತಿ ಬಿಡುಗಡೆ; ರೈಲ್ವೆ ಟಿಕೆಟ್ ಬುಕಿಂಗ್ ಇನ್ಮುಂದೆ ಸರಳ
Indian Railways launch Beta version of new IRCTC website: ಭಾರತೀಯ ರೈಲ್ವೇಸ್ ಇಲಾಖೆಯು ಸುಧಾರಿತ ಐಆರ್ಸಿಟಿಸಿ ವೆಬ್ಸೈಟ್ ರೂಪಿಸಿದೆ. ಇವತ್ತು ಜುಲೈ 16ರಂದು ಹೊಸ ವೆಬ್ಸೈಟ್ನ ಬೀಟಾ ಆವೃತ್ತಿ ಬಿಡುಗಡೆ ಆಗುತ್ತಿದೆ. ಹಳೆಯ ವೆಬ್ಸೈಟ್ನಲ್ಲಿ ಇದ್ದ ಮಂದಗತಿ, ಕ್ಯಾಪ್ಚಾ ರಗಳೆ ಇತ್ಯಾದಿ ಸಮಸ್ಯೆಗಳನ್ನು ಸರಿಪಡಿಸಲಾಗಿದೆ. ಹೊಸ ವೆಬ್ಸೈಟ್ನಲ್ಲಿ ಟಿಕೆಟ್ ಬುಕಿಂಗ್ ಪ್ರಕ್ರಿಯೆ ಬಹಳ ಸರಳಗೊಂಡಿದೆ.
- Vijaya Sarathy SN
- Updated on: Jul 16, 2026
- 12:56 pm