Indian Railways
ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ (ಉಗಿ ಬಂಡಿ ದಾರಿಗಳ) ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. 1853 ರಲ್ಲಿ ಸ್ಥಾಪಿತವಾದ ಇದು ಪ್ರಪಂಚದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ, ವಿವಿಧ ಪ್ರದೇಶಗಳನ್ನು ಸಂಪರ್ಕಿಸುತ್ತದೆ ಮತ್ತು ಸರಕುಗಳು ಮತ್ತು ಪ್ರಯಾಣಿಕರ ಚಲನೆಯನ್ನು ಸುಗಮಗೊಳಿಸುತ್ತದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ದರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ. ರೈಲ್ವೇ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರೈಲ್ವೇಗಳು ದಿನನಿತ್ಯ ಸಾವಿರಾರು ರೈಲುಗಳನ್ನು ಓಡಿಸುವುದರೊಂದಿಗೆ ವಿಸ್ತಾರವಾದ ಜಾಲವನ್ನು ಹೊಂದಿದೆ. ವ್ಯಾಪಾರ ಮತ್ತು ಪ್ರಯಾಣವನ್ನು ಸಕ್ರಿಯಗೊಳಿಸುವ ಮೂಲಕ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.
ವಂದೇ ಭಾರತ್ ಸ್ಲೀಪರ್ ಟ್ರೈನ್ನಲ್ಲಿ ಸಖತ್ ಫೀಚರ್ಸ್; ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳೂ ಕಠಿಣ
Vande Bharat Sleeper Train ticket cancellation rules: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ಟ್ರೈನ್ ಜನವರಿ 17ರಂದು ಚಾಲನೆಗೊಂಡಿದೆ. ಈ ಹೈ ಸ್ಪೀಡ್ ಟ್ರೈನ್ನಲ್ಲಿ ಟಿಕೆಟ್ ದರ ದುಬಾರಿಯಾಗಿದೆಯಾದರೂ ರೈಲಿನಲ್ಲಿ ಹೊಸ ಹೊಸ ಫೀಚರ್ಗಳನ್ನು ಪರಿಚಯಿಸಲಾಗಿದೆ. ಇದರ ಟಿಕೆಟ್ ಕ್ಯಾನ್ಸಲೇಶನ್ ನಿಯಮಗಳು ಇತರ ಟ್ರೈನುಗಳಿಗಿಂತ ಹೆಚ್ಚು ಬಿಗಿಯಾಗಿವೆ.
- Vijaya Sarathy SN
- Updated on: Jan 19, 2026
- 12:36 pm
ಹಾಸನ-ಸೋಲಾಪುರ ಎಕ್ಸ್ಪ್ರೆಸ್ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರ ಪರದಾಟ
ಅದು ಬೆಂಗಳೂರು ಮಾರ್ಗವಾಗಿ ಹಾಸನಕ್ಕೆ ತೆರಳುವ ಹಾಸನ-ಸೋಲಾಪುರ ಎಕ್ಸ್ಪ್ರೆಸ್ ರೈಲು. ಸೋಮವಾರ ಬೆಳಗ್ಗೆ ಕಲಬುರಗಿ ತಲುಪಿದಾಗ ರೈಲಿನಲ್ಲಿ ನೀರು ಬಾರದೆ ಪ್ರಯಾಣಿಕರು ಪರದಾಡಿದರು. ಎಕ್ಸ್ಪ್ರೆಸ್ ರೈಲಿನಲ್ಲೂ ಸರಿಯಾದ ವ್ಯವಸ್ಥೆ ಇಲ್ಲದ್ದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲಿನಲ್ಲಿ ನೀರಿಲ್ಲದೆ ಪ್ರಯಾಣಿಕರು ಒದ್ದಾಡಿದ ವಿಡಿಯೋ ಇಲ್ಲಿದೆ ನೋಡಿ.
- Dattatraya Patil
- Updated on: Jan 19, 2026
- 12:00 pm
Vande Bharat Sleeper: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿನ ವಿಶೇಷತೆ, ಟಿಕೆಟ್ ದರ ಏನು?
ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಈ ವಂದೇ ಭಾರತ್ ಸ್ಲೀಪರ್ ರೈಲು ಹೌರಾ ಮತ್ತು ಕಾಮಾಕ್ಯದ ನಡುವೆ ಸಂಚರಿಸಲಿದೆ. ಇಂದಿನಿಂದ ಆರಂಭವಾಗಿರುವ ಈ ವಿಶೇಷ ರೈಲಿನ ಟಿಕೆಟ್ ಬೆಲೆ ಎಷ್ಟು? ಬುಕಿಂಗ್ ಹೇಗೆ? ಇದರ ವಿಶೇಷತೆಯೇನು? ಎಂಬಿತ್ಯಾದಿ ವಿವರಗಳು ಇಲ್ಲಿವೆ.
- Sushma Chakre
- Updated on: Jan 17, 2026
- 5:14 pm
ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ವಿದ್ಯಾರ್ಥಿಗಳು, ಲೋಕೋ ಪೈಲಟ್ ಜೊತೆ ಮೋದಿ ಸಂವಾದ
ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಿದ ಬಳಿಕ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಲೋಕೋ ಪೈಲಟ್ಗಳೊಂದಿಗೆ ಸಂವಾದ ನಡೆಸಿದರು. ಈ ಸ್ಲೀಪರ್ ರೈಲು ಸೇವೆಯು ಹೌರಾವನ್ನು ಕಾಮಾಕ್ಯ (ಗುವಾಹಟಿ) ಜೊತೆ ಸಂಪರ್ಕಿಸುತ್ತದೆ. ಇದು ಪ್ರಯಾಣಿಕರಿಗೆ ವೇಗವಾದ, ಹೆಚ್ಚು ಆರಾಮದಾಯಕ ಮತ್ತು ತಾಂತ್ರಿಕವಾಗಿ ಅಪ್ಗ್ರೇಡ್ ಆದ ಪ್ರಯಾಣದ ಅನುಭವವನ್ನು ನೀಡುತ್ತದೆ.
- Sushma Chakre
- Updated on: Jan 17, 2026
- 3:37 pm
Vande Bharat Sleeper Train: ಬಂಗಾಳದ ಮಾಲ್ಡಾದಲ್ಲಿ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಪಶ್ಚಿಮ ಬಂಗಾಳದ ಮಾಲ್ಡಾ ಟೌನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಚಾಲನೆ ನೀಡಿದರು. ಗುವಾಹಟಿ (ಕಾಮಾಕ್ಯ) ಹಾಗೂ ಹೌರಾ ನಡುವಿನ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಆಗಿ ಹಸಿರು ನಿಶಾನೆ ತೋರಿದರು. ಆಧುನಿಕ ಭಾರತದ ಸಾರಿಗೆ ಅಗತ್ಯಗಳನ್ನು ಪೂರೈಸಲು ಆಧುನಿಕ ಸೌಲಭ್ಯಗಳೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲನ್ನು ತಯಾರಿಸಲಾಗಿದೆ. ಇದು ಸಂಪೂರ್ಣ ಹವಾನಿಯಂತ್ರಿತ ಸ್ಲೀಪರ್ ರೈಲು ಆಗಿದ್ದು, ಕಡಿಮೆ ದರದಲ್ಲಿ ಪ್ರಯಾಣಿಕರಿಗೆ ವಿಮಾನಯಾನದಂತಹ ಅನುಭವವನ್ನು ನೀಡುತ್ತದೆ.
- Sushma Chakre
- Updated on: Jan 17, 2026
- 2:40 pm
ಪಶ್ಚಿಮ ಬಂಗಾಳದಿಂದ ಬರೋ ರೈಲುಗಳಲ್ಲೇ ಬರ್ತಾರಾ ಬಾಂಗ್ಲಾ ಅಕ್ರಮ ವಲಸಿಗರು? ಬೆಂಗಳೂರಿನ ಭದ್ರತೆಗೆ ಭಾರಿ ಆತಂಕ
ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ರೈಲುಗಳಲ್ಲಿ ಅಕ್ರಮ ವಲಸಿಗರ ಸಂಚಾರ ರಾಷ್ಟ್ರೀಯ ಭದ್ರತೆಗೆ ಅಪಾಯ ಎಂದು ಕರ್ನಾಟಕ ವಿಧಾನ ಪರಿಷತ್ನ ಛಲವಾದಿ ನಾರಾಯಣಸ್ವಾಮಿ ಕಳವಳ ವ್ಯಕ್ತಪಡಿಸಿದ್ದಾರೆ. ನಕಲಿ ದಾಖಲೆಗಳ ಬಳಕೆಯನ್ನು ತಡೆಯಲು ಬಯೋಮೆಟ್ರಿಕ್ ಗುರುತು ಪರಿಶೀಲನೆ, ರೈಲು ನಿಗಾ ಮತ್ತು ರಾಷ್ಟ್ರೀಯ ಡೇಟಾಬೇಸ್ಗೆ ಬುಕಿಂಗ್ ವ್ಯವಸ್ಥೆ ಜೋಡಿಸುವಂತೆ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ.
- Ganapathi Sharma
- Updated on: Jan 17, 2026
- 12:20 pm
Vande Bharat Sleeper Train: ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲು ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ
India's First Vande Bharat Sleeper Train launch: ದೇಶದ ಮೊದಲ ವಂದೇ ಭಾರತ್ ಸ್ಲೀಪರ್ ಕೋಚ್ ರೈಲನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಈ ರೈಲು ಹೌರಾ ಮತ್ತು ಗುವಾಹಟಿ ನಡುವೆ ಸಂಚರಿಸಲಿದ್ದು, ರಾತ್ರಿ ಪ್ರಯಾಣದ ವಿಶಿಷ್ಟ ಅನುಭವ ನೀಡಲಿದೆ.
- Ganapathi Sharma
- Updated on: Jan 17, 2026
- 2:54 pm
ರೈಲ್ವೆ ಟಿಕೆಟ್ ಬುಕಿಂಗ್ ಅಲರ್ಟ್: ಆಧಾರ್ ದೃಢೀಕೃತ ಬಳಕೆದಾರರಿಗೆ ನಿಯಮ ಬದಲಾವಣೆ
IRCTC rules change for Aadhaar authenticated users: ಐಆರ್ಸಿಟಿಸಿಯ ಆಧಾರ್ ದೃಢೀಕೃತ ಬಳಕೆದಾರರಿಗೆ ಟಿಕೆಟ್ ಬುಕಿಂಗ್ನನಲ್ಲಿ ಹೆಚ್ಚಿನ ಆದ್ಯತೆ ಸಿಗುತ್ತದೆ. ಅಡ್ವಾನ್ಸ್ ರಿಸರ್ವೇಶನ್ ಪೀರಿಯಡ್ ಆರಂಭವಾದ ಮೊದಲ ದಿನ ಸಂಪೂರ್ಣವಾಗಿ ಆಧಾರ್ ದೃಢೀಕೃತ ಬಳಕೆದಾರರಿಗೆ ಮೀಸಲಾಗಿರುತ್ತದೆ. ಆ ದಿನ ಏಜೆಂಟ್ ಆಗಲೀ ಬೇರೆಯವರಾಗಲೀ ಯಾರೂ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಇರುವುದಿಲ್ಲ.
- Vijaya Sarathy SN
- Updated on: Jan 12, 2026
- 3:46 pm
Viral Video: ರೈಲಿನ ಸಿಂಕ್ನಲ್ಲಿ ಸಿಲುಕಿದ್ದ ಕಸವನ್ನು ಕೈಯಿಂದ ತೆಗೆದ ಪ್ರಯಾಣಿಕನಿಗೆ ಭಾರಿ ಮೆಚ್ಚುಗೆ
ಯುವಕನೊಬ್ಬ ರೈಲಿನ ವಾಶ್ ಬೇಸಿನ್ನಲ್ಲಿ ಸಿಲುಕಿಕೊಂಡಿದ್ದ ಕಸವನ್ನು ಕೈನಲ್ಲಿ ತೆಗೆದಿರುವ ವಿಡಿಯೋ ವೈರಲ್ ಆಗಿದೆ. ಹಲವು ಬಾರಿ ರೈಲಿನ ವಾಶ್ರೂಂನಲ್ಲಿ ನಲ್ಲಿ ಸರಿ ಇರುವುದಿಲ್ಲ, ಕೆಲವೊಮ್ಮೆ ನೀರೇ ಬರುವುದಿಲ್ಲ, ಕೆಲವೊಮ್ಮೆ ಸಿಂಕ್ನಲ್ಲಿ ನೀರು ತುಂಬಿ ಹೋಗಿರುತ್ತದೆ. ಆದರೆ ಪ್ರಯಾಣಿಕರು ಅದರ ಬಗ್ಗೆ ಎಷ್ಟಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ, ರೈಲ್ವೆಗೆ ದೂರು ಕೊಡುವುದೂ ಇಲ್ಲ, ಆಗ ವ್ಯವಸ್ಥೆ ಸರಿಯಾಗುವುದಾದರೂ ಹೇಗೆ?. ರೈಲಿನ ಸಿಂಕ್ನಲ್ಲಿ ಪ್ಲಾಸ್ಟಿಕ್ ಸಿಲುಕಿ ಅದರಲ್ಲಿ ನೀರು ನಿಂತುಕೊಂಡಿತ್ತು, ಆಗ ಈ ಯುವಕ ನೀರಿನಲ್ಲಿರುವ ಪ್ಲಾಸ್ಟಿಕ್ ಅನ್ನು ಕೈಯಲ್ಲೇ ತೆಗೆದು, ನೀರು ಸರಾಗವಾಗಿ ಕೆಳಗೆ ಇಳಿಯಲು ಅವಕಾಶ ಮಾಡಿಕೊಟ್ಟಿದ್ದಾನೆ.
- Nayana Rajeev
- Updated on: Jan 9, 2026
- 7:56 am
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಜನದಟ್ಟಣೆಯ ರೈಲನ್ನು ಹತ್ತಲು ಯುವಕನೊಬ್ಬ ಕಷ್ಟಪಡುತ್ತಿರುವ ವಿಡಿಯೋ ಇಂಟರ್ನೆಟ್ನಲ್ಲಿ ಹರಿದಾಡುತ್ತಿದೆ.
- Sushma Chakre
- Updated on: Jan 7, 2026
- 10:18 pm
Railway stocks: ಬಜೆಟ್ಗೆ ಮುಂಚೆ ರೈಲ್ವೆ ಕ್ಷೇತ್ರದ ಯಾವ ಷೇರುಗಳನ್ನು ಖರೀದಿಸಬಹುದು?
Railway stocks to Buy Ahead of Budget 2026: ಫೆಬ್ರುವರಿ 1ರಂದು ಬಜೆಟ್ ಮಂಡನೆಯಾಗಲಿದ್ದು, ಈ ಬಾರಿ ರೈಲ್ವೆ ಕ್ಷೇತ್ರದ ಮತ್ತಷ್ಟು ಬಲವರ್ಧನೆಗೆ ಗಮನ ಹರಿಸುವ ನಿರೀಕ್ಷೆ ಇದೆ. ಇತ್ತೀಚೆಗೆ ಇಲಾಖೆಯ ರೈಲು ಪ್ರಯಾಣ ದರವನ್ನು ಏರಿಸಿದೆ. ಇದರಿಂದ ಈ ಕ್ಷೇತ್ರಕ್ಕೆ ಹೆಚ್ಚಿನ ಆದಾಯ ಬರುವ ನಿರೀಕ್ಷೆ ಇದೆ. ಬಜೆಟ್ನಲ್ಲಿ 1.3 ಲಕ್ಷ ಕೋಟಿ ರೂ ಬಂಡವಾಳ ವೆಚ್ಚ ಬರುವ ನಿರೀಕ್ಷೆ ಇದೆ. ಹೀಗಾಗಿ, ರೈಲ್ವೆ ಸ್ಟಾಕ್ಗಳಿಗೆ ಬೇಡಿಕೆ ಹೆಚ್ಚಿದೆ.
- Vijaya Sarathy SN
- Updated on: Jan 6, 2026
- 1:17 pm
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಭಾನುವಾರ ಮಧ್ಯಾಹ್ನ ಭುವನೇಶ್ವರದಿಂದ ತಿರುಪತಿಗೆ ಸೂಪರ್ ಫಾಸ್ಟ್ ವೀಕ್ಲಿ ಎಕ್ಸ್ಪ್ರೆಸ್ ರೈಲು ಸೋಂಪೇಟ ರೈಲು ನಿಲ್ದಾಣಕ್ಕೆ ಬಂದು ನಿಂತಿತು. ರೈಲು ಆ ನಿಲ್ದಾಣದಲ್ಲಿ ಕೇವಲ ಎರಡು ನಿಮಿಷಗಳ ಕಾಲ ನಿಲ್ಲುತ್ತದೆ. ಪ್ರಯಾಣಿಕರು ರೈಲನ್ನು ಹತ್ತಿ ಹತ್ತುತ್ತಿದ್ದಾಗ ಆ ಯುವಕ ರೈಲಿನ ಮೇಲ್ಭಾಗಕ್ಕೆ ಹತ್ತಿ ಹುಚ್ಚಾಟ ನಡೆಸಿದ್ದಾನೆ. ಭುವನೇಶ್ವರ-ತಿರುಪತಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಮೇಲ್ಛಾವಣಿಯ ಮೇಲೆ ವ್ಯಕ್ತಿಯೊಬ್ಬ ಹತ್ತಿದ್ದಾನೆ. ಈ ಅವ್ಯವಸ್ಥೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡು, ಹೈ ವೋಲ್ಟೇಜ್ ಲೈನ್ಗಳಿಂದ ಆ ವ್ಯಕ್ತಿಯನ್ನು ರಕ್ಷಿಸಲು ಅಧಿಕಾರಿಗಳು ರೈಲನ್ನು ನಿಲ್ಲಿಸಿದರು. ಹೀಗಾಗಿ, ರೈಲು ಸೋಂಪೆಟ್ ರೈಲು ನಿಲ್ದಾಣದಿಂದ 20 ನಿಮಿಷ ತಡವಾಗಿ ಹೊರಟಿತು.
- Sushma Chakre
- Updated on: Jan 5, 2026
- 10:13 pm