AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways

Indian Railways

ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ (ಉಗಿ ಬಂಡಿ ದಾರಿಗಳ) ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. 1853 ರಲ್ಲಿ ಸ್ಥಾಪಿತವಾದ ಇದು ಪ್ರಪಂಚದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ, ವಿವಿಧ ಪ್ರದೇಶಗಳನ್ನು ಸಂಪರ್ಕಿಸುತ್ತದೆ ಮತ್ತು ಸರಕುಗಳು ಮತ್ತು ಪ್ರಯಾಣಿಕರ ಚಲನೆಯನ್ನು ಸುಗಮಗೊಳಿಸುತ್ತದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ದರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ. ರೈಲ್ವೇ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರೈಲ್ವೇಗಳು ದಿನನಿತ್ಯ ಸಾವಿರಾರು ರೈಲುಗಳನ್ನು ಓಡಿಸುವುದರೊಂದಿಗೆ ವಿಸ್ತಾರವಾದ ಜಾಲವನ್ನು ಹೊಂದಿದೆ. ವ್ಯಾಪಾರ ಮತ್ತು ಪ್ರಯಾಣವನ್ನು ಸಕ್ರಿಯಗೊಳಿಸುವ ಮೂಲಕ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ಇನ್ನೂ ಹೆಚ್ಚು ಓದಿ

ಬುಲೆಟ್ ರೈಲು ಯೋಜನೆ ವಿಳಂಬವನ್ನು ಟೀಕಿಸಿದ ಜಪಾನ್ ಮಾಜಿ ಸಚಿವ; ಭಾರತ ತಿರುಗೇಟು

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆ ವಿಳಂಬವಾಗುತ್ತಿರುವುದಕ್ಕೆ ಭಾರತದ ಸಚಿವರು ಮತ್ತು ಅಧಿಕಾರಿಗಳೇ ಕಾರಣ ಎಂದು ಜಪಾನ್‌ನ ಮಾಜಿ ಸಚಿವರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಜಪಾನ್‌ನ ಮಾಜಿ ನ್ಯಾಯಾಂಗ ಸಚಿವ ಹಿದೇಕಿ ಮಾಕಿಹರಾ ಅವರು ಜುಲೈ 15ರಂದು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಈ ಬಗ್ಗೆ ಪೋಸ್ಟ್ ಒಂದನ್ನು ಮಾಡಿದ್ದು, ಭಾರತೀಯ ಅಧಿಕಾರಿಗಳು ಮಾತುಕತೆಯ ವೇಳೆ ಜಪಾನ್‌ಗೆ ನೀಡಿದ ಭರವಸೆಗಳನ್ನು ಪದೇ ಪದೇ ಮುರಿದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪವನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಸಂಪೂರ್ಣವಾಗಿ ತಳ್ಳಿಹಾಕಿದೆ.

ಅಮೃತ್​​ ಯೋಜನೆಯಡಿ ನವೀಕೃತಗೊಂಡ ಕರ್ನಾಟಕದ 4 ರೈಲ್ವೇ ನಿಲ್ದಾಣಗಳನ್ನು ವರ್ಚುವಲ್​​ ಮೂಲಕ ಉದ್ಘಾಟಿಸಿದ ಮೋದಿ

ಪ್ರಧಾನಿ ಮೋದಿ ಅವರು ಅಮೃತ ಭಾರತ್‌ ಯೋಜನೆಯಡಿ ನವೀಕೃತಗೊಂಡ ದೇಶದ 75 ರೈಲ್ವೇ ನಿಲ್ದಾಣಗಳನ್ನು ಉದ್ಘಾಟಿಸಿದ್ದು, ಇದರಲ್ಲಿ ಕರ್ನಾಟಕದ ಬಾದಾಮಿ, ಅಳ್ನಾವರ, ಕೊಪ್ಪಳ ಹಾಗೂ ಬಂಟ್ವಾಳ ನಿಲ್ದಾಣಗಳು ಕೂಡ ಸೇರಿವೆ. ಸ್ಥಳೀಯ ಸಂಸ್ಕೃತಿ ಮತ್ತು ವಾಸ್ತುಶಿಲ್ಪದಿಂದ ಪ್ರೇರಿತವಾಗಿ ನಿಲ್ದಾಣಗಳ ಕಟ್ಟದ ವಿನ್ಯಾಸ ಮಾಡಲಾಗಿದ್ದು, ವಿಶ್ವ ದರ್ಜೆಯ ಮತ್ತು ಪ್ರಯಾಣಿಕ ಸ್ನೇಹಿ ಸೌಲಭ್ಯಗಳನ್ನು ಇವು ಹೊಂದಿವೆ. ಜೊತೆಗೆ ಡಿಜಿಟಲ್​​ ಸ್ಪರ್ಶ ಪಡೆದಿವೆ.

Hydrogen Train Launch Live: ಹರಿಯಾಣದಲ್ಲಿ ದೇಶದ ಮೊದಲ ‘ಹೈಡ್ರೋಜನ್ ರೈಲಿ’ಗೆ ಪಿಎಂ ಮೋದಿ ಇಂದು ಚಾಲನೆ, ನೇರ ಪ್ರಸಾರI

ಭಾರತದ ಇಂಧನ ಮತ್ತು ರೈಲ್ವೆ ವಲಯದಲ್ಲಿ ಇಂದು ಹೊಸ ಕ್ರಾಂತಿ ಸೃಷ್ಟಿಯಾಗುತ್ತಿದೆ. ಹರಿಯಾಣ, ಚಂಡೀಗಢ ಮತ್ತು ಪಂಜಾಬ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಜಿಂದ್ ರೈಲು ನಿಲ್ದಾಣದಿಂದ ಜಿಂದ್ ಮತ್ತು ಸೋನಿಪತ್ ನಡುವೆ ಚಲಿಸಲಿರುವ ಭಾರತದ ಮೊದಲ 'ಹೈಡ್ರೋಜನ್ ಚಾಲಿತ ರೈಲಿ'ಗೆ ಹಸಿರು ನಿಶಾನೆ ತೋರಲಿದ್ದಾರೆ.

ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ನಾಳೆ ಪ್ರಧಾನಿ ಮೋದಿ ಚಾಲನೆ; ಇದರ ವಿಶೇಷತೆ ಒಂದೆರಡಲ್ಲ!

ಭಾರತೀಯ ರೈಲ್ವೆ ವಲಯದಲ್ಲಿ ಪರಿಸರಸ್ನೇಹಿ ತಂತ್ರಜ್ಞಾನದ ಹೊಸ ಕ್ರಾಂತಿಗೆ ನಾಳೆ ಅಧಿಕೃತ ಚಾಲನೆ ಸಿಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಹರಿಯಾಣದ ಜಿಂದ್‌ನಿಂದ ಭಾರತದ ಮೊಟ್ಟಮೊದಲ ಹೈಡ್ರೋಜನ್ ಚಾಲಿತ ರೈಲನ್ನು ಉದ್ಘಾಟಿಸಲಿದ್ದಾರೆ. ಚೆನ್ನೈನ ಇಂಟಿಗ್ರೇಟೆಡ್ ಕೋಚ್ ಫ್ಯಾಕ್ಟರಿಯಲ್ಲಿ ವಿನ್ಯಾಸಗೊಳಿಸಲಾದ ಈ ರೈಲಿನ ಮೂಲಕ ಭಾರತವು ಜರ್ಮನಿ, ಜಪಾನ್, ಚೀನಾ ಮತ್ತು ಅಮೆರಿಕದಂತಹ ಅತ್ಯಾಧುನಿಕ ರೈಲ್ವೆ ತಂತ್ರಜ್ಞಾನ ಹೊಂದಿರುವ ಜಾಗತಿಕ ದೇಶಗಳ ಸಾಲಿಗೆ ಸೇರಲಿದೆ. ಈ ರೈಲುಗಳು ಡೀಸೆಲ್ ರೈಲುಗಳಿಗಿಂತ ಅತ್ಯಂತ ಶಬ್ದರಹಿತವಾಗಿ ಹಾಗೂ ಶೂನ್ಯ ಮಾಲಿನ್ಯದೊಂದಿಗೆ ಚಲಿಸಲಿವೆ.

ಅಮೃತ್ ಭಾರತ್ ನಿಲ್ದಾಣ ಯೋಜನೆ; ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ

ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಅತ್ಯಂತ ದೊಡ್ಡ ಕ್ರಾಂತಿಕಾರಿ ಬದಲಾವಣೆಗೆ ಕೇಂದ್ರ ಸರ್ಕಾರ ಮುನ್ನುಡಿ ಬರೆದಿದೆ. ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಬರೋಬ್ಬರಿ 71,000 ಕೋಟಿ ರೂ. ಬೃಹತ್ ಹೂಡಿಕೆಯೊಂದಿಗೆ ರೈಲ್ವೆ ಜಾಲವನ್ನು ವಿಶ್ವದರ್ಜೆಯ ಸಾರಿಗೆ ಹಬ್‌ಗಳನ್ನಾಗಿ ಪರಿವರ್ತಿಸಲಾಗುತ್ತಿದೆ. ಒಟ್ಟು 1,340 ರೈಲ್ವೆ ನಿಲ್ದಾಣಗಳು ಒಂದು ಭವ್ಯ ದೃಷ್ಟಿಕೋನದೊಂದಿಗೆ ಸಂಪೂರ್ಣ ಆಧುನಿಕ ಹಾಗೂ ಸುಂದರ ರೂಪಾಂತರವನ್ನು ಪಡೆಯುತ್ತಿವೆ. ದೇಶಾದ್ಯಂತ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಕಾರ್ಯವು ಅತ್ಯಂತ ವೇಗವಾಗಿ ಸಾಗುತ್ತಿದ್ದು, ಅತ್ಯಾಧುನಿಕ ಸೌಲಭ್ಯಗಳು ಸಾರ್ವಜನಿಕ ಸೇವೆಗೆ ಸಿದ್ಧವಾಗುತ್ತಿವೆ. ಈಗಾಗಲೇ ಒಟ್ಟು 122 ರೈಲ್ವೆ ನಿಲ್ದಾಣಗಳ ಆಧುನೀಕರಣದ ಕೆಲಸ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಹೊಸ ಐಆರ್​ಸಿಟಿಸಿ ವೆಬ್​ಸೈಟ್ ಸಿದ್ಧ; ಬೀಟಾ ಆವೃತ್ತಿ ಬಿಡುಗಡೆ; ರೈಲ್ವೆ ಟಿಕೆಟ್ ಬುಕಿಂಗ್ ಇನ್ಮುಂದೆ ಸರಳ

Indian Railways launch Beta version of new IRCTC website: ಭಾರತೀಯ ರೈಲ್ವೇಸ್ ಇಲಾಖೆಯು ಸುಧಾರಿತ ಐಆರ್​ಸಿಟಿಸಿ ವೆಬ್​ಸೈಟ್ ರೂಪಿಸಿದೆ. ಇವತ್ತು ಜುಲೈ 16ರಂದು ಹೊಸ ವೆಬ್​ಸೈಟ್​ನ ಬೀಟಾ ಆವೃತ್ತಿ ಬಿಡುಗಡೆ ಆಗುತ್ತಿದೆ. ಹಳೆಯ ವೆಬ್​ಸೈಟ್​ನಲ್ಲಿ ಇದ್ದ ಮಂದಗತಿ, ಕ್ಯಾಪ್ಚಾ ರಗಳೆ ಇತ್ಯಾದಿ ಸಮಸ್ಯೆಗಳನ್ನು ಸರಿಪಡಿಸಲಾಗಿದೆ. ಹೊಸ ವೆಬ್​ಸೈಟ್​ನಲ್ಲಿ ಟಿಕೆಟ್ ಬುಕಿಂಗ್ ಪ್ರಕ್ರಿಯೆ ಬಹಳ ಸರಳಗೊಂಡಿದೆ.

ಭಾರತದ ಮೊದಲ ಹೈಡ್ರೋಜನ್ ಟ್ರೈನ್; ಇದು ವಿಶ್ವದ ಅತಿ ಶಕ್ತಿಶಾಲಿ, ಅತಿ ಉದ್ದದ ಜಲಜನಕ ರೈಲು

India's first and world most powerful Hydrogen Train: ಭಾರತದ ಮೊದಲ ಹೈಡ್ರೋಜನ್ ರೈಲು ಜುಲೈ 17, ಶುಕ್ರವಾರ ಬೆಳಗ್ಗೆ 7.40ಕ್ಕೆ ಪ್ರಧಾನಿ ಮೋದಿ ಅವರಿಂದ ಚಾಲನೆಗೊಳ್ಳಲಿದೆ. ಹರ್ಯಾಣದ ಜಿಂದ್​ನಿಂದ ಸೋನೆಪತ್​ವರೆಗೆ 89 ಕಿಮೀ ಮಾರ್ಗದಲ್ಲಿ ಈ ರೈಲು ಸಂಚರಿಸಲಿದೆ. ಜಿಂದ್ ರೈಲ್ವೆ ನಿಲ್ದಾಣದಿಂದ 7.40ಕ್ಕೆ ಹೊರಟು ಸೋನೆಪತ್ ನಿಲ್ದಾಣಕ್ಕೆ 9.40ಕ್ಕೆ ತಲುಪಲಿದೆ. ಈ ರೈಲು ಸೇವೆ ಪದಾರ್ಪಣೆಗೊಂಡಿರುವುದು ಭಾರತದ ಪಾಲಿಗೆ ಮತ್ತೊಂದು ಐತಿಹಾಸಿಕ ಮೈಲಿಗಲ್ಲೆನಿಸಿದೆ.

ಹ್ಯಾಂಗ್ ಆಗಲ್ಲ, ಪಾವತಿ ವಿಫಲಗೊಳ್ಳಲ್ಲ,ಇನ್ಮುಂದೆ ರೈಲಿನಲ್ಲಿ ನೀವೇ ಆರಿಸಿಕೊಳ್ಳಿ ನಿಮ್ಮಿಷ್ಟದ ಸೀಟು, ಹೊಸ ವೆಬ್​ಸೈಟ್ ಬಿಡುಗಡೆ ಮಾಡಿದ ಐಆರ್​ಸಿಟಿಸಿ

IRCTC New Website Launch: IRCTC ಹೊಸ ವೆಬ್‌ಸೈಟ್ ಈಗ ವೇಗದ ರೈಲು ಟಿಕೆಟ್ ಬುಕಿಂಗ್‌ಗೆ ಲಭ್ಯ. ಹ್ಯಾಂಗ್ ಆಗುವಿಕೆ, ಪಾವತಿ ವೈಫಲ್ಯಗಳು ಇನ್ನು ಇರಲ್ಲ. ಇನ್ಮುಂದೆ ನಿಮ್ಮಿಷ್ಟದ ಸೀಟು ಆರಿಸಿ, ಏಕ ಪರದೆಯಲ್ಲೇ ಸೀಟು ಲಭ್ಯತೆ ನೋಡಿ. ಫೇರ್ ಕ್ಯಾಲೆಂಡರ್, ಕಡಿಮೆ ಕ್ಯಾಪ್ಚಾದಂತಹ ವೈಶಿಷ್ಟ್ಯಗಳು ಲಭ್ಯ. ನಿಮಿಷಕ್ಕೆ 1.5 ಲಕ್ಷ ಟಿಕೆಟ್ ಬುಕ್ ಮಾಡುವ ಸಾಮರ್ಥ್ಯದೊಂದಿಗೆ ಇದು IRCTC ಡಿಜಿಟಲ್ ರೂಪಾಂತರದ ಭಾಗವಾಗಿದೆ.

ಚಲಿಸುವ ರೈಲಿನಲ್ಲಿ ಪೂಜೆ, ವಿಡಿಯೋ ವೈರಲ್ ಆದ ಬೆನ್ನಲ್ಲೇ ಭಾರತೀಯ ರೈಲ್ವೆಯಿಂದ ಸ್ಪಷ್ಟನೆ

ಚಲಿಸುವ ರೈಲಿನಲ್ಲಿ ಪೂಜೆ ನೆರವೇರಿಸಿದ ವಿಡಿಯೋ ವೈರಲ್ ಆಗಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿತ್ತು. ಇದರ ಬಗ್ಗೆ ಸ್ಪಷ್ಟನೆ ನೀಡಿದ ಭಾರತೀಯ ರೈಲ್ವೆ, ಇದು ಸಾಮಾನ್ಯ ಕೋಚ್ ಅಲ್ಲ. ₹3 ಲಕ್ಷ ನೀಡಿ ಖಾಸಗಿಯಾಗಿ ಕಾಯ್ದಿರಿಸಿದ ಐಷಾರಾಮಿ 'ಸಲೂನ್ ಕಾರ್' ಬೋಗಿಯಲ್ಲಿ ನಡೆದ ಪೂಜೆ ಎಂದು ತಿಳಿಸಿದೆ. ಆದರೂ, ಚಲಿಸುವ ರೈಲಿನಲ್ಲಿ ಇಂತಹ ಆಚರಣೆಗಳ ಸುರಕ್ಷತೆಯ ಬಗ್ಗೆ ಚರ್ಚೆ ಮುಂದುವರೆದಿದೆ.

ಬೆಂಗಳೂರಿಗೆ ಎರಡು ಬುಲೆಟ್ ರೈಲುಗಳು; ಭಾರತದಲ್ಲಿ ಉದ್ದೇಶಿತ ಹೈಸ್ಪೀಡ್ ರೈಲುಗಳ ಪಟ್ಟಿ

List of India's proposed bullet train projects: ಅಹ್ಮದಾಬಾದ್ ಮತ್ತು ಮುಂಬೈ ನಡುವಿನ ಹೈಸ್ಪೀಡ್ ರೈಲು ಕಾರಿಡಾರ್​ನ ಮೊದಲ ಹಂತದ ಯೋಜನೆ ಮುಂದಿನ ವರ್ಷ ಜಾರಿಯಾಗಲಿದೆ. 2027ರ ಆಗಸ್ಟ್ 15ರಂದು ಸೂರತ್-ಬಿಲಿಮೋರಾ ನಡುವಿನ ಮಾರ್ಗದಲ್ಲಿ ಮೊದಲ ಬುಲೆಟ್ ರೈಲು ಸಂಚಾರ ಆರಂಭವಾಗಬಹುದು. ಭಾರತದಲ್ಲಿ ಅನುಮೋದನೆ ಪಡೆದಿರುವ ಮತ್ತು ಪ್ರಸ್ತಾಪದ ಹಂತದಲ್ಲಿರುವ ಹಲವು ಬುಲೆಟ್ ರೈಲು ಯೋಜನೆಗಳಿವೆ.

Video: ಮುಂಬೈ ನಿಲ್ದಾಣದಲ್ಲಿ ಹೈಡ್ರಾಮಾ: ಯುವತಿಯ ಕಾಲು ಹಿಡಿದು ಹಠ ಮಾಡುತ್ತಾ ಪ್ಲಾಟ್‌ಫಾರ್ಮ್ ಮೇಲೆ ಮಲಗಿದ ಯುವಕ

ಮುಂಬೈನ ಬೊರಿವಾಲಿ ರೈಲ್ವೆ ನಿಲ್ದಾಣದಲ್ಲಿ ಯುವತಿಯ ಕಾಲಿಗೆ ಬಿದ್ದ ಯುವಕನ ವಿಡಿಯೋ ಭಾರಿ ವೈರಲ್ ಆಗಿದೆ. ಇದು ನಿಜವಾದ ಪ್ರೀತಿಯೋ, ಕೇವಲ ನಾಟಕವೋ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿದೆ. ರೈಲ್ವೆ ಪೊಲೀಸರ ಮಧ್ಯಪ್ರವೇಶದ ನಂತರ ಪ್ರಕರಣ ತಿಳಿಯಾಯಿತು. ಇಂತಹ ಸಾರ್ವಜನಿಕ ಪ್ರದರ್ಶನಗಳು ಕಾನೂನಿನ ದೃಷ್ಟಿಯಿಂದ ಹೇಗೆ ಪರಿಗಣಿಸಲ್ಪಡುತ್ತವೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಖ್ಯಾತಿಗಾಗಿ ಇಂತಹ ನಾಟಕಗಳು ಸೃಷ್ಟಿಯಾಗುತ್ತವೆಯೇ ಎಂಬ ಪ್ರಶ್ನೆಗಳನ್ನೂ ಇದು ಹುಟ್ಟುಹಾಕಿದೆ.

ರೈಲ್ವೆ ಟಿಕೆಟ್ ನಿಯಮಗಳ ಪರಿಷ್ಕರಣೆ; ಟಿಕೆಟ್​ನ ವಾಟ್ಸಾಪ್ ಸ್ಕ್ರೀನ್​ಶಾಟ್, ಫೋಟೋ, ಪಿಡಿಎಫ್ ಕಾಪಿಗಳು ಮಾನ್ಯವಾ?

Indian Railways digital ticket rules: ಯಾರೋ ಬುಕ್ ಮಾಡಿದ ಟಿಕೆಟ್​ನ ಸ್ಕ್ರೀನ್​ಶಾಟ್ ಇಟ್ಟುಕೊಂಡು ರೈಲಿನಲ್ಲಿ ಪ್ರಯಾಣಿಸಲು ಆಗುವುದಿಲ್ಲ. ಭಾರತೀಯ ರೈಲ್ವೆ ಇಲಾಖೆ ಡಿಜಿಟಲ್ ಟಿಕೆಟ್ ನಿಯಮಗಳನ್ನು ಪರಿಷ್ಕರಿಸಿದೆ. ನಿಮ್ಮದೇ ನಂಬರ್​ನಲ್ಲಿ ಬುಕ್ ಮಾಡಿದ ಟಿಕೆಟ್ ಆಗಿರಬೇಕು, ಅಥವಾ ಟಿಕೆಟ್ ಬುಕ್ ಮಾಡಿದವರೂ ಜೊತೆಯಲ್ಲಿ ಪ್ರಯಾಣಿಸುತ್ತಿರಬೇಕು.

ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ನೀರಾವರಿ ಪೈಪ್‌ಲೈನ್ ಒಡೆದು ಆಕಾಶದೆತ್ತರಕ್ಕೆ ಚಿಮ್ಮಿದ ನೀರು
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಅಲೆಗಳ ಮಧ್ಯೆ ಮುಳುಗುತ್ತಿದ್ದ ಮಾನಸಿಕ ಅಸ್ವಸ್ಥನ ಪ್ರಾಣ ಉಳಿಸಿದ ಖಾಕಿ ಪಡೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಬಿಡದಿ ಟೌನ್‌ಶಿಪ್ ಯೋಜನೆ ಪರ ರೈತರಿಂದ ಭೂ ಪರಿಹಾರಕ್ಕೆ ಅರ್ಜಿ ಸಲ್ಲಿಕೆ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಉಳ್ಳಾಲ ಕಡಲತೀರಕ್ಕೆ ಅಪ್ಪಳಿಸಿದ ಲಕ್ಷಾಂತರ ಬೂತಾಯಿ ಮೀನಿನ ರಾಶಿ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?