
Indian Railways
ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ (ಉಗಿ ಬಂಡಿ ದಾರಿಗಳ) ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. 1853 ರಲ್ಲಿ ಸ್ಥಾಪಿತವಾದ ಇದು ಪ್ರಪಂಚದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ, ವಿವಿಧ ಪ್ರದೇಶಗಳನ್ನು ಸಂಪರ್ಕಿಸುತ್ತದೆ ಮತ್ತು ಸರಕುಗಳು ಮತ್ತು ಪ್ರಯಾಣಿಕರ ಚಲನೆಯನ್ನು ಸುಗಮಗೊಳಿಸುತ್ತದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ದರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ. ರೈಲ್ವೇ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರೈಲ್ವೇಗಳು ದಿನನಿತ್ಯ ಸಾವಿರಾರು ರೈಲುಗಳನ್ನು ಓಡಿಸುವುದರೊಂದಿಗೆ ವಿಸ್ತಾರವಾದ ಜಾಲವನ್ನು ಹೊಂದಿದೆ. ವ್ಯಾಪಾರ ಮತ್ತು ಪ್ರಯಾಣವನ್ನು ಸಕ್ರಿಯಗೊಳಿಸುವ ಮೂಲಕ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.
Bengaluru Bidar Specail Train: ಬೆಂಗಳೂರು ಬೀದರ್ ಮಧ್ಯೆ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ವಿವರ
ನೈರುತ್ಯ ರೈಲ್ವೆಯು ಬೆಂಗಳೂರಿನ ಸರ್ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣ ಮತ್ತು ಬೀದರ್ ಮಧ್ಯೆ ವಿಶೇಷ ಎಕ್ಸ್ಪ್ರೆಸ್ ರೈಲು ಘೋಷಣೆ ಮಾಡಿದೆ. ಒಟ್ಟು ಐದು ಟ್ರಿಪ್ ಸಂಚಾರ ಮಾಡಲಿರುವ ಹೊಸ ರೈಲುಗಳು ಯಾವಾಗೆಲ್ಲ ಸಂಚರಿಸಲಿವೆ? ವೇಳಾಪಟ್ಟಿ ಹೇಗೆ? ಎಲ್ಲೆಲ್ಲಿ ನಿಲುಗಡೆ ಹೊಂದಿರಲಿದೆ ಎಂಬ ವಿವರ ಇಲ್ಲಿದೆ.
- Ganapathi Sharma
- Updated on: Jun 14, 2025
- 9:46 am
ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ
ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ, ಭಾರತೀಯ ರೈಲ್ವೆ ತತ್ಕಾಲ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ಭಾರತೀಯ ರೈಲ್ವೆ ಸಚಿವಾಲಯವು ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ನಿಮಯದಲ್ಲಿ ಹೊಸ ಬದಲಾವಣೆ ಮಾಡಿದೆ. ತತ್ಕಾಲ್ ಟಿಕೆಟ್ ಬುಕಿಂಗ್ ಗೆ ಆಧಾರ್ ಜೋಡಣೆಯನ್ನು ಕಡ್ಡಾಯ ಮಾಡಿ ರೈಲ್ವೆ ಸಚಿವಾಲಯ ಆದೇಶಿಸಿದೆ. ಇನ್ನು ತತ್ಕಾಲ್ ಟಿಕೆಟ್ ಬುಕಿಂಗ್ ನಲ್ಲಿ ಏನೆಲ್ಲಾ ಬದಲಾವಣೆ ಮಾಡಲಾಗಿದೆ? ಹೇಗೆ ಬುಕ್ ಮಾಡಬೇಕೆನ್ನುವ ವಿವರ ಇಲ್ಲಿದೆ.
- Ramesh B Jawalagera
- Updated on: Jun 11, 2025
- 11:02 pm
ಕರ್ನಾಟಕಕ್ಕೆ ಗುಡ್ ನ್ಯೂಸ್; 6,405 ಕೋಟಿ ಮೌಲ್ಯದ 2 ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ
7 ಜಿಲ್ಲೆಗಳನ್ನು ಒಳಗೊಂಡ ಎರಡು ಬಹುಪಥ ರೈಲ್ವೆ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಜಾರ್ಖಂಡ್, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ 6,405 ಕೋಟಿ ರೂ. ಮೌಲ್ಯದ 2 ರೈಲ್ವೆ ಯೋಜನೆಗಳಿಗೆ ಸಂಪುಟ ಒಪ್ಪಿಗೆ ನೀಡಿದೆ. ಈ ಉಪಕ್ರಮಗಳು ಪ್ರಯಾಣ ಅನುಕೂಲತೆಯನ್ನು ಸುಧಾರಿಸುತ್ತದೆ, ಲಾಜಿಸ್ಟಿಕ್ ವೆಚ್ಚವನ್ನು ಕಡಿಮೆ ಮಾಡುತ್ತದೆ, ತೈಲ ಆಮದುಗಳನ್ನು ಕಡಿಮೆ ಮಾಡುತ್ತದೆ ಮತ್ತು ಕಡಿಮೆ CO2 ಹೊರಸೂಸುವಿಕೆಗೆ ಕೊಡುಗೆ ನೀಡುತ್ತದೆ.
- Sushma Chakre
- Updated on: Jun 11, 2025
- 4:35 pm
Infra Revolution: ಭಾರತದಲ್ಲಿ ಇನ್ಫ್ರಾಸ್ಟ್ರಕ್ಚರ್ ಕ್ರಾಂತಿ; 11 ವರ್ಷಗಳಲ್ಲಿ ಆದ ಸಾಧನೆಗಳೇನು? ಇಲ್ಲಿದೆ ಪಟ್ಟಿ
Highlights of infrastructure revolution in India since 2014: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರದಲ್ಲಿ 11 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಸರ್ಕಾರ ಮೂಲಸೌಕರ್ಯಕ್ಕೆ ಸಾಕಷ್ಟು ಒತ್ತು ಕೊಟ್ಟಿದೆ. 2014ರಿಂದ ಭಾರತದಲ್ಲಿ ಇನ್ಫ್ರಾಸ್ಟ್ರಕ್ಚರ್ ಕ್ರಾಂತಿಯೇ ನಡೆದಿದೆ. ನೆಲ, ಜಲ ಮತ್ತು ವಾಯು ಮಾರ್ಗಗಳಲ್ಲಿ ಸಂಚಾರ ಜಾಲ ವಿಸ್ತರಿಸಿದೆ. ಇದರ ಮುಖ್ಯಾಂಶಗಳು ಈ ಲೇಖನದಲ್ಲಿವೆ...
- Vijaya Sarathy SN
- Updated on: Jun 11, 2025
- 12:28 pm
ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ ಮೋದಿ
ಜಮ್ಮು ಮತ್ತು ಕಾಶ್ಮೀರ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚೆನಾಬ್ ರೈಲ್ವೆ ಸೇತುವೆಯನ್ನು ಉದ್ಘಾಟಿಸಿದರು. ಈ ವೇಳೆ 46,000 ಕೋಟಿ ರೂ. ಮೌಲ್ಯದ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ವೇಳೆ ಕತ್ರಾ-ಶ್ರೀನಗರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು.
- Sushma Chakre
- Updated on: Jun 6, 2025
- 6:06 pm
ವಿಶ್ವದ ಅತಿ ಎತ್ತರದ ಚೆನಾಬ್ ಸೇತುವೆ ನಿರ್ಮಾಣದ ಹಿಂದಿದೆ ಬೆಂಗಳೂರು ಐಐಎಸ್ಸಿ ಪ್ರೊಫೆಸರ್ 17 ವರ್ಷದ ಶ್ರಮ!
ಜಗತ್ತಿನ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣದಲ್ಲಿ ಬೆಂಗಳೂರಿನ ಐಐಎಸ್ಸಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರೊಫೆಸರ್, ರಾಕ್ ಎಂಜಿನಿಯರಿಂಗ್ ತಜ್ಞೆ ಜಿ. ಮಾಧವಿ ಲತಾ ಕೂಡ ಮಹತ್ವದ ಪಾತ್ರ ವಹಿಸಿದ್ದಾರೆ. ಸುಮಾರು 17 ವರ್ಷಗಳಿಂದ ಕಾಮಗಾರಿಗೆ ಸಲಹೆ ಸೂಚನೆ ನೀಡುವಲ್ಲಿ ಅವರು ಕಾರ್ಯನಿರ್ವಹಿಸಿದ್ದಾರೆ.
- Web contact
- Updated on: Jun 6, 2025
- 12:58 pm
ಮುಂಬೈ: ರೈಲು ಇಳಿಯುವಾಗ ಕಬ್ಬಿಣದ ಬೇಲಿಯಲ್ಲಿ ಕುತ್ತಿಗೆ ಸಿಲುಕಿ ವ್ಯಕ್ತಿ ಸಾವು
ರೈಲು(Train) ಬಂದು ನಿಲ್ದಾಣದಲ್ಲಿ ನಿಂತಾಗ ವ್ಯಕ್ತಿಯೊಬ್ಬ ಇಳಿಯಬೇಕಿದ್ದ ಬಾಗಿಲು ಬಿಟ್ಟು ಹಿಂಬದಿಯ ಬಾಗಿಲಿನಿಂದ ಹಾರಿದ ಪರಿಣಾಮ ಕಬ್ಬಿಣದ ಬೇಲಿಯಲ್ಲಿ ಕುತ್ತಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮುಂಬೈನ ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಪಶ್ಚಿಮ ರೈಲ್ವೆ ಜಾಲದಲ್ಲಿರುವ ನಿಲ್ದಾಣದಲ್ಲಿ ಬೆಳಗ್ಗೆ 9.45 ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳೀಯ ರೈಲಿನಿಂದ ಇಳಿಯುವ ಪ್ರಯತ್ನದ ವೇಳೆ, ಬೇಲಿಯಲ್ಲಿ ಸಿಲುಕಿಕೊಂಡು ವ್ಯಕ್ತಿಯ ಕುತ್ತಿಗೆಗೆ ಹಾನಿಯಾಗಿತ್ತು ಎಂದು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
- Nayana Rajeev
- Updated on: Jun 5, 2025
- 1:07 pm
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈಲ್ವೆ ಇಲಾಖೆ, ರಾಜ್ಯ ಖಾತೆ ಸಚಿವ ವಿ ಸೋಮಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದ್ದಾರೆ. ರೈಲ್ವೆ ಇಲಾಖೆ ಕೆಲಸಗಳಿಗೆ ಸಂಬಂಧಪಟ್ಟಂತೆ ಸಿದ್ದರಾಮಯ್ಯನವರು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದು ಸೋಮಣ್ಣ ಹೇಳಿದ್ದಾರೆ. ಸೋಮಣ್ಣ ಮಾತಿನ ವಿಡಿಯೋ ಇಲ್ಲಿದೆ.
- Web contact
- Updated on: Jun 1, 2025
- 6:25 pm
Video: ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೂ ಹೀಗಾಗ್ಬಹುದು
ಯುವಕ-ಯುವತಿಯರಲ್ಲಿ ರೀಲ್ಸ್ ಮಾಡುವ ಗೀಳು ಹೆಚ್ಚಾಗಿದೆ. ಹಾಗೆಯೇ ಅಪಾಯಕಾರಿ ಸ್ಥಳಗಳಲ್ಲಿ ರೀಲ್ಸ್ ಮಾಡಲು ಹೋಗಿ ಅಪಾಯ ತಂದುಕೊಳ್ಳುತ್ತಿದ್ದಾರೆ. ಹಾಗೆಯೇ ಸಾಮಾಜಿಕ ಜಾಲತಾನಗಳಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಯುವಕನೊಬ್ಬ ಕಿವಿಗೆ ಇಯರ್ಫೋನ್ ಹಾಕಿಕೊಂಡು ಹಳಿಯಲ್ಲಿ ರೀಲ್ಸ್ ಮಾಡುತ್ತಿರುವಾಗ ವೇಗವಾಗಿ ಬಂದ ರೈಲು ಆತನಿಗೆ ಡಿಕ್ಕಿ ಹೊಡೆದಿದೆ. ಆತ ರೈಲ್ವೆ ಹಳಿಯಿಂದ ಸ್ವಲ್ಪ ಪಕ್ಕದಲ್ಲಿದ್ದ ಕಾರಣ ಜೀವ ಉಳಿದಿದೆ. ಇಲ್ಲವಾದರೆ ದೇಹ ಛಿದ್ರವಾಗುವುದಂತೂ ಪಕ್ಕ.
- Nayana Rajeev
- Updated on: Jun 1, 2025
- 3:27 pm
ಜಪಾನ್ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ; ಹೀಗಿರಲಿದೆ ಬುಲೆಟ್ ಟ್ರೈನ್
ಭಾರತದ ಮೊದಲ ಬುಲೆಟ್ ರೈಲಾದ ಶಿಂಕನ್ಸೆನ್ ನ ಪ್ರಾಯೋಗಿಕ ಸಂಚಾರ ಜಪಾನ್ ನಲ್ಲಿ ಆರಂಭವಾಗಿದೆ. 2026ರ ಆರಂಭದಲ್ಲಿ ಭಾರತಕ್ಕೆ ಈ ರೈಲುಗಳ ರವಾನೆಯಾಗಲಿದೆ. ಅಹಮದಾಬಾದ್-ಮುಂಬೈ ಕಾರಿಡಾರ್ ನಲ್ಲಿ ಸಂಚರಿಸಲಿರುವ ಭಾರತದ ಮೊದಲ ಬುಲೆಟ್ ರೈಲು ಶಿಂಕನ್ಸೆನ್ ಜಪಾನ್ ನಲ್ಲಿ ಸಂಚಾರದ ಟ್ರಯಲ್ ಆರಂಭಿಸಿದೆ. ಭಾರತವು ತನ್ನ ಮೊದಲ ಬುಲೆಟ್ ರೈಲು ಕಾರಿಡಾರ್ ಗಾಗಿ ಎರಡು E5 ಸರಣಿಯ ಶಿಂಕನ್ಸೆನ್ ರೈಲು ಸೆಟ್ ಗಳನ್ನು ಸ್ವೀಕರಿಸಲಿದೆ.
- Sushma Chakre
- Updated on: May 30, 2025
- 10:11 pm