AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Railways

Indian Railways

ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ (ಉಗಿ ಬಂಡಿ ದಾರಿಗಳ) ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. 1853 ರಲ್ಲಿ ಸ್ಥಾಪಿತವಾದ ಇದು ಪ್ರಪಂಚದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ, ವಿವಿಧ ಪ್ರದೇಶಗಳನ್ನು ಸಂಪರ್ಕಿಸುತ್ತದೆ ಮತ್ತು ಸರಕುಗಳು ಮತ್ತು ಪ್ರಯಾಣಿಕರ ಚಲನೆಯನ್ನು ಸುಗಮಗೊಳಿಸುತ್ತದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ದರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ. ರೈಲ್ವೇ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರೈಲ್ವೇಗಳು ದಿನನಿತ್ಯ ಸಾವಿರಾರು ರೈಲುಗಳನ್ನು ಓಡಿಸುವುದರೊಂದಿಗೆ ವಿಸ್ತಾರವಾದ ಜಾಲವನ್ನು ಹೊಂದಿದೆ. ವ್ಯಾಪಾರ ಮತ್ತು ಪ್ರಯಾಣವನ್ನು ಸಕ್ರಿಯಗೊಳಿಸುವ ಮೂಲಕ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.

ಇನ್ನೂ ಹೆಚ್ಚು ಓದಿ

ಗುವಾಹಟಿ-ಕೊಲ್ಕತ್ತಾ ಮಾರ್ಗದಲ್ಲಿ ಶೀಘ್ರದಲ್ಲೇ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ

ನೂತನ ವಂದೇ ಭಾರತ್ ಸ್ಲೀಪರ್ ರೈಲು ದೆಹಲಿ, ಉತ್ತರ ಪ್ರದೇಶ, ಬಿಹಾರ ಮತ್ತು ಬಂಗಾಳದ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡಲಿದೆ. ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲು ಸುಧಾರಿತ ಸುರಕ್ಷತಾ ವ್ಯವಸ್ಥೆ, ವಿಶ್ವ ದರ್ಜೆಯ ಬೋಗಿಗಳನ್ನು ಹೊಂದಿದೆ. ಈ ರೈಲು ಯಾವಾಗಿಂದ ಸಂಚಾರ ಆರಂಭಿಸಲಿದೆ? ಯಾವ ಮಾರ್ಗದಲ್ಲಿ ಸಾಗಲಿದೆ? ಇದರ ದರ ಎಷ್ಟಿರಲಿದೆ? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

Indian Railways: ಭಾರತೀಯ ರೈಲುಗಳ ಬೋಗಿಗಳು ವಿಭಿನ್ನ ಬಣ್ಣಗಳನ್ನು ಹೊಂದಿರುವುದೇಕೆ?

ನಿಮ್ಮ ಮನಸ್ಸಿನಲ್ಲಿ ಎಂದಾದರೂ ರೈಲಿನ ಬೋಗಿಗಳು ಯಾಕೆ ಬೇರೆ ಬೇರೆ ಬಣ್ಣದ್ದಿರುತ್ತವೆ ಎನ್ನುವ ಪ್ರಶ್ನೆ ಮೂಡಿದೆಯೇ? ಕೆಲವು ರೈಲುಗಳು ಕೆಂಪು ಬಣ್ಣದ ಬೋಗಿಗಳನ್ನು ಹೊಂದಿದ್ದರೆ, ಇನ್ನು ಕೆಲವು ಹಸಿರು ಬಣ್ಣದ ಬೋಗಿಗಳನ್ನು ಹೊಂದಿರುತ್ತವೆ, ಇನ್ನು ಕೆಲವು ನೀಲಿ ಬಣ್ಣದ ಬೋಗಿಗಳನ್ನು ಹೊಂದಿರುತ್ತವೆ. ಭಾರತೀಯ ರೈಲು ಬೋಗಿಗಳ ಬಣ್ಣಗಳು ಕೇವಲ ಸೌಂದರ್ಯ ಮತ್ತು ನೋಟಕ್ಕಾಗಿ ಮಾತ್ರವಲ್ಲ, ಅವು ರೈಲಿನ ಬಗ್ಗೆಯೂ ಬಹಳಷ್ಟು ಬಹಿರಂಗಪಡಿಸುತ್ತವೆ. ಈ ಬಣ್ಣಗಳು ರೈಲಿನ ಪ್ರಕಾರ, ವೇಗ ಮತ್ತು ಬಳಸಿದ ಕೋಚ್ ತಂತ್ರಜ್ಞಾನದ ಪ್ರಕಾರವನ್ನು ಸೂಚಿಸುತ್ತವೆ. ಇದು ರೈಲ್ವೆ ಉದ್ಯೋಗಿಗಳಿಗೆ ರೈಲನ್ನು ಸುಲಭವಾಗಿ ನಿರ್ವಹಿಸಲು, ದುರಸ್ತಿ ಮಾಡಲು ಮತ್ತು ನಿರ್ವಹಿಸಲು ಸಹಾಯ ಮಾಡುತ್ತದೆ.

ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್ ರೈಲು; ಪರೀಕ್ಷೆಯ ವಿಡಿಯೋ ಇಲ್ಲಿದೆ

ಇಂದು ರೈಲ್ವೆ ಸುರಕ್ಷತಾ ಆಯುಕ್ತರು ವಂದೇ ಭಾರತ್ ಸ್ಲೀಪರ್ ಅನ್ನು ಪರೀಕ್ಷಿಸಿದರು. ಇದು ಕೋಟಾ ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿತು. ಈ ರೈಲಿನೊಳಗೆ ಗ್ಲಾಸ್​​ನಲ್ಲಿ ನೀರನ್ನು ಇಟ್ಟು ವಿಡಿಯೋ ಚಿತ್ರೀಕರಿಸಲಾಗಿದ್ದು, ಸ್ಪೀಡ್​​ ವಿವರ ಕೂಡ ಈ ವಿಡಿಯೋದಲ್ಲಿ ರೆಕಾರ್ಡ್ ಆಗಿದೆ. ಈ ನೀರಿನ ಪರೀಕ್ಷೆಯು ಈ ಹೊಸ ಪೀಳಿಗೆಯ ರೈಲಿನ ತಾಂತ್ರಿಕ ವೈಶಿಷ್ಟ್ಯಗಳನ್ನು ಪ್ರದರ್ಶಿಸಿತು.

Train Fare Hike: ಇಂದಿನಿಂದ ರೈಲು ಪ್ರಯಾಣ ದುಬಾರಿ, ಹೊಸ ಟಿಕೆಟ್ ದರಗಳ ಕುರಿತು ಇಲ್ಲಿದೆ ಮಾಹಿತಿ

ಭಾರತೀಯ ರೈಲ್ವೆ ಇಲಾಖೆ ಡಿಸೆಂಬರ್ 26 ರಿಂದ ದೇಶಾದ್ಯಂತ ರೈಲು ಪ್ರಯಾಣ ದರ ಹೆಚ್ಚಿಸಿದೆ. ಉಪನಗರ ರೈಲುಗಳನ್ನು ಹೊರತುಪಡಿಸಿ, ದೀರ್ಘ ಪ್ರಯಾಣದ ಟಿಕೆಟ್‌ಗಳು ದುಬಾರಿಯಾಗಲಿವೆ. ಸಾಮಾನ್ಯ, ಮೇಲ್, ಎಕ್ಸ್‌ಪ್ರೆಸ್, ಎಸಿ ವಿಭಾಗಗಳಲ್ಲಿ ಪ್ರತಿ ಕಿಲೋಮೀಟರ್‌ಗೆ 1 ರಿಂದ 2 ಪೈಸೆ ಏರಿಕೆ ಮಾಡಲಾಗಿದೆ. ಈ ವರ್ಷದಲ್ಲಿ ಇದು ಎರಡನೇ ದರ ಹೆಚ್ಚಳವಾಗಿದ್ದು, ರೈಲ್ವೆಗೆ 600 ಕೋಟಿ ರೂ. ಆದಾಯ ಗಳಿಸುವ ಗುರಿ ಹೊಂದಿದೆ.

ಬೆಂಗಳೂರು ಹೊರವಲಯದಲ್ಲಿ ಮತ್ತೊಂದು ರೈಲು ಮಾರ್ಗ: ಆರಂಭದಲ್ಲೇ ವಿಘ್ನ

ದೇವನಹಳ್ಳಿ ಬಳಿ ಕೆಂಪೇಗೌಡ ವಿಮಾನ ನಿಲ್ದಾಣ ಕಾರ್ಯಾರಂಭಿಸಿದ ನಂತರ ರಾಜ್ಯ ಮತ್ತು ಕೇಂದ್ರದಿಂದ ನೂರಾರು ಹೊಸ ಯೋಜನೆಗಳು ಈ ಭಾಗದಲ್ಲಿ ಜಾರಿಯಾಗುತ್ತಿದ್ದು ಸಾವಿರಾರು ಎಕರೆ ಭೂಮಿಯನ್ನು ಸರ್ಕಾರ ವಶಪಡಿಸಿಕೊಂಡಿದೆ. ಈ ಬೆನ್ನಲ್ಲೇ ಇದೀಗ ಮತ್ತೊಂದು ಹೊಸ ರೈಲು ಮಾರ್ಗಕ್ಕೆ ಸರ್ಕಾರ ಮುಂದಾಗಿದ್ದು, ಅದರ ವಿರುದ್ದ ಸ್ಥಳಿಯ ರೈತರು ಹೋರಾಟದ ಹಾದಿ ಹಿಡಿಯಲು ಮುಂದಾಗಿದ್ದಾರೆ.

ಟ್ರೈನ್ ಟಿಕೆಟ್ ಬೆಲೆ ಪ್ರತೀ ಕಿಮೀಗೆ 1-2 ಪೈಸೆ ಹೆಚ್ಚಳ; ಡಿ. 26ರಿಂದ ಹೊಸ ದರ ಜಾರಿ

Indian Railways hikes fares from Dec 26th: ಭಾರತೀಯ ರೈಲ್ವೇಸ್ ಜುಲೈ ನಂತರ ಮತ್ತೊಮ್ಮೆ ರೈಲು ಟಿಕೆಟ್ ದರಗಳನ್ನು ಹೆಚ್ಚಿಸಲು ನಿರ್ಧರಿಸಿದೆ. ಜನರಲ್ ಕೋಚ್​ಗಳಲ್ಲಿ 215 ಕಿಮೀಗಿಂತ ಹೆಚ್ಚಿನ ದೂರದ ಪ್ರಯಾಣವಾದರೆ ಪ್ರತಿ ಕಿಮೀಗೆ 1 ಪೈಸೆಯಷ್ಟು ಬೆಲೆ ಏರಿಕೆ ಆಗಲಿದೆ. ಎಸಿ ಕೋಚ್ ಮತ್ತು ಮೇಲ್ ಟ್ರೈನ್, ಎಕ್ಸ್​ಪ್ರೆಸ್ ಟ್ರೈನ್​ಗಳಲ್ಲಿ ಪ್ರತೀ ಕಿಮೀಗೆ 2 ಪೈಸೆಯಷ್ಟು ಟಿಕೆಟ್ ಬೆಲೆ ಏರಲಿದೆ. ಡಿ. 26ರಿಂದ ಪರಿಷ್ಕೃತ ದರ ಜಾರಿಗೆ ಬರುತ್ತದೆ.

ಪಾಂಡವಪುರದಲ್ಲಿ ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್

ರೈಲನ್ನು ಇಳಿಯುವ ಭರದಲ್ಲಿ ರೈಲು ನಿಲ್ಲುವ ಮೊದಲೇ ಪ್ರಯಾಣಿಕರು ರೈಲಿನಿಂದ ಕೆಳಗೆ ಹಾರಿಬಿಡುತ್ತಾರೆ. ಇದರಿಂದ ಕೆಲವೊಮ್ಮೆ ಕೆಲವರು ರೈಲಿನಡಿ ಸಿಲುಕಿ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಇನ್ನು ಕೆಲವು ಜನರು ಕಾಲು ಮುರಿದುಕೊಂಡಿದ್ದಾರೆ. ಪಾಂಡವಪುರದಲ್ಲಿ ಡಿಸೆಂಬರ್ 13ರಂದು ಪಾಂಡವಪುರದ ಸ್ಟೇಷನ್ ಮಾಸ್ಟರ್ ಅಭಿಜಿತ್ ಸಿಂಗ್ ಅವರು ಚಲಿಸುವ ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕರೊಬ್ಬರನ್ನು ರಕ್ಷಿಸುವ ಮೂಲಕ ದಿಟ್ಟತನ ತೋರಿದ್ದಾರೆ. ರೈಲ್ವೆ ಇಲಾಖೆ ಸಿಸಿಟಿವಿಯಲ್ಲಿ ಸೆರೆಯಾದ ಈ ವಿಡಿಯೋವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದೆ.

Indian Railways Update: ರೈಲ್ವೆ ಪ್ರಯಾಣಿಕರೇ ಗಮನಿಸಿ, ಇನ್ಮುಂದೆ ಟಿಕೆಟ್​ ಅನ್ನು ಮೊಬೈಲ್​ನಲ್ಲಿ ತೋರಿಸಿದ್ರೆ ಸಾಲ್ದು

ಭಾರತೀಯ ರೈಲ್ವೆ ಡಿಜಿಟಲ್ ವಂಚನೆ ತಡೆಗಟ್ಟಲು ಹೊಸ ನಿಯಮ ಜಾರಿಗೊಳಿಸಿದೆ. ಇನ್ಮುಂದೆ ಯುಟಿಎಸ್, ಎಟಿವಿಎಂ ಅಥವಾ ಕೌಂಟರ್ ಟಿಕೆಟ್‌ಗಳಿಗೆ ಮುದ್ರಿತ ಪ್ರತಿಯನ್ನು ಕೊಂಡೊಯ್ಯುವುದು ಕಡ್ಡಾಯ. AI ಬಳಸಿ ನಕಲಿ ಟಿಕೆಟ್ ಸೃಷ್ಟಿ ಪ್ರಕರಣಗಳ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. E-ಟಿಕೆಟ್ ಮತ್ತು M-ಟಿಕೆಟ್‌ಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಪ್ರಯಾಣಿಕರು ಸುರಕ್ಷಿತ ಮತ್ತು ಪಾರದರ್ಶಕ ಪ್ರಯಾಣಕ್ಕಾಗಿ ಇದನ್ನು ಪಾಲಿಸಬೇಕು.

ತರಕಾರಿ ಕೊಳ್ಳಲು ಸಿಗ್ನಲ್​​ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!

ತರಕಾರಿ ಖರೀದಿಸಲು ರೈಲು ಎಂಜಿನ್ ಅನ್ನು ಸಿಗ್ನಲ್​​ನಲ್ಲಿ ನಿಲ್ಲಿಸಿರುವುದನ್ನು ತೋರಿಸುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅದನ್ನೇನು ಬಸ್, ಕಾರು ಎಂದುಕೊಂಡಿದ್ದಾರಾ? ಅದು ಹೇಗೆ ಸಿಕ್ಕ ಕಡೆಗೆಲ್ಲ ನಿಲ್ಲಿಸಿ ಹೋಗುತ್ತಾರೆ? ಎಂದು ನೆಟ್ಟಿಗರು ಈ ವಿಡಿಯೋಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಖೈರಾಬಾದ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಟಪ್ಪಾ ಖಜುರಿಯಾ ರೈಲ್ವೆ ಕ್ರಾಸಿಂಗ್ ಬಳಿ ಈ ಘಟನೆ ನಡೆದಿದೆ.

ಕರ್ನಾಟಕದಲ್ಲಿ ರೈಲ್ವೆ ಯೋಜನೆಗಳು ವಿಳಂಬವಾಗ್ತಿರೋದೇಕೆ? ಕೇಂದ್ರ ಸರ್ಕಾರ ಕೊಟ್ಟ ಕಾರಣ ಇಲ್ಲಿದೆ

ಕೇಂದ್ರ ಸರ್ಕಾರವು ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಬೃಹತ್ ಅನುದಾನ ನೀಡಿದ್ದರೂ, ರಾಜ್ಯ ಸರ್ಕಾರದ ಭೂಸ್ವಾಧೀನ ವಿಳಂಬದಿಂದಾಗಿ ಹಲವು ಯೋಜನೆಗಳು ಸ್ಥಗಿತಗೊಂಡಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ತಿಳಿಸಿದ್ದಾರೆ. ರೈಲ್ವೆ ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಸಹಕಾರ ಅಗತ್ಯ ಎಂದು ಅವರು ಹೇಳಿದ್ದಾರೆ.

ಭಾರತೀಯ ರೈಲುಗಳಲ್ಲಿ ಉಚಿತ ನೀರಿನ ಬಾಟಲಿ ನೀಡುವುದಿಲ್ಲವೇ? ರೈಲ್ವೆ ಇಲಾಖೆ ಸ್ಪಷ್ಟನೆ

ಭಾರತೀಯ ರೈಲ್ವೆ ಇಲಾಖೆ ರೈಲುಗಳಲ್ಲಿ ಉಚಿತ ನೀರಿನ ಬಾಟಲಿಗಳನ್ನು ನೀಡುವ ಬಗ್ಗೆ ಸಂಪೂರ್ಣವಾದ ಸ್ಪಷ್ಟನೆ ನೀಡಿದೆ. ರೈಲುಗಳಲ್ಲಿ ಉಚಿತ ನೀರಿನ ಬಾಟಲಿಗಳ ಬಗ್ಗೆ ಪ್ರಯಾಣಿಕರಲ್ಲಿ ಗೊಂದಲವಿದೆ. ವಂದೇ ಭಾರತ್, ಶತಾಬ್ದಿ ಮತ್ತು ರಾಜಧಾನಿ ಎಕ್ಸ್​​ಪ್ರೆಸ್​​ನಂತಹ ಪ್ರೀಮಿಯಂ ರೈಲುಗಳಲ್ಲಿ ರೈಲ್ವೆ ಉಚಿತ ನೀರಿನ ಬಾಟಲಿಗಳನ್ನು ಒದಗಿಸುತ್ತಿದೆ. ಆದರೆ, ಆಹಾರವಿಲ್ಲದ ಆಯ್ಕೆಯನ್ನು ಹೊಂದುವ ಪ್ರಯಾಣಿಕರಿಗೆ ನೀರಿನ ಬಾಟಲಿ ನೀಡುವುದಿಲ್ಲ ಎಂಬ ಪ್ರಚಾರ ನಡೆಯುತ್ತಿದೆ.

ಯಶವಂತಪುರ – ಕಾರವಾರ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ಇತ್ಯಾದಿ ವಿವರ

Yeshwantpur Karwar Special Express train: ನೈಋತ್ಯ ರೈಲ್ವೇಯು ಕ್ರಿಸ್ಮಸ್ ಮತ್ತು ಹೊಸ ವರ್ಷ ಪ್ರಯುಕ್ತ ಬೆಂಗಳೂರಿನ ಯಶವಂತಪುರ ಮತ್ತು ಕಾರವಾರ ಮಧ್ಯೆ ವಿಶೇಷ ಎಕ್ಸ್​ಪ್ರೆಸ್ ರೈಲು ಘೋಷಣೆ ಮಾಡಿದೆ. ಇದರಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಬೆಂಗಳೂರು ನಡುವಣ ಸಂಚಾರ ಸುಗಮವಾಗಲಿದೆ. ರೈಲು ವೇಳಾಪಟ್ಟಿ, ನಿಲುಗಡೆ ವಿವರ ಇಲ್ಲಿದೆ.

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?