Indian Railways
ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ (ಉಗಿ ಬಂಡಿ ದಾರಿಗಳ) ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. 1853 ರಲ್ಲಿ ಸ್ಥಾಪಿತವಾದ ಇದು ಪ್ರಪಂಚದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ, ವಿವಿಧ ಪ್ರದೇಶಗಳನ್ನು ಸಂಪರ್ಕಿಸುತ್ತದೆ ಮತ್ತು ಸರಕುಗಳು ಮತ್ತು ಪ್ರಯಾಣಿಕರ ಚಲನೆಯನ್ನು ಸುಗಮಗೊಳಿಸುತ್ತದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ದರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ. ರೈಲ್ವೇ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರೈಲ್ವೇಗಳು ದಿನನಿತ್ಯ ಸಾವಿರಾರು ರೈಲುಗಳನ್ನು ಓಡಿಸುವುದರೊಂದಿಗೆ ವಿಸ್ತಾರವಾದ ಜಾಲವನ್ನು ಹೊಂದಿದೆ. ವ್ಯಾಪಾರ ಮತ್ತು ಪ್ರಯಾಣವನ್ನು ಸಕ್ರಿಯಗೊಳಿಸುವ ಮೂಲಕ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.
ರಕ್ಷಣಾ, ರೈಲ್ವೆ ವಲಯಕ್ಕೂ ತಟ್ಟಿದ ಯುದ್ಧದ ಬಿಸಿ: ಟೂಲ್ಸ್ ಪ್ರೊಪೈಲ್ ಕಚ್ಚಾವಸ್ತು ಸರಬರಾಜು ಮಾಡುವ ಆಟೋಮೊಬೈಲ್ ಇಂಡಸ್ಟ್ರಿ ಬಂದ್
ಇರಾನ್-ಇಸ್ರೇಲ್ ಯುದ್ಧದ ಬಿಸಿ ಬೆಂಗಳೂರಿನ ಪೀಣ್ಯಾ ಕೈಗಾರಿಕಾ ವಲಯಕ್ಕೂ ತಟ್ಟಿದೆ. ಕಚ್ಚಾ ವಸ್ತು ಮತ್ತು LPG ಕೊರತೆಯಿಂದ ಶ್ರೀ ಲಕ್ಷ್ಮಿ ಪ್ರೊಪೈಲ್ ಆಟೋಮೊಬೈಲ್ ಇಂಡಸ್ಟ್ರಿ ತಾತ್ಕಾಲಿಕವಾಗಿ ಮುಚ್ಚಿದೆ. ಇದು ರಕ್ಷಣಾ ಮತ್ತು ರೈಲ್ವೆ ವಲಯಕ್ಕೆ ಬಿಡಿಭಾಗಗಳನ್ನು ಪೂರೈಸುತ್ತಿತ್ತು. ನೂರಾರು ಕಾರ್ಮಿಕರು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದು, ಬೆಂಗಳೂರಿನ 400ಕ್ಕೂ ಹೆಚ್ಚು ಕೈಗಾರಿಕೆಗಳು ಸಂಕಷ್ಟ ಎದುರಿಸುತ್ತಿವೆ.
- Vinay Kashappanavar
- Updated on: Mar 23, 2026
- 8:56 am
ಯುಗಾದಿ, ರಂಜಾನ್ ರಜೆಗೆ ಊರಿಗೆ ಹೋದವರಿಗೆ ಬೆಂಗಳೂರಿಗೆ ವಾಪಸ್ ಬರಲು ವಿಶೇಷ ರೈಲುಗಳು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
ಯುಗಾದಿ ಮತ್ತು ರಂಜಾನ್ ರಜೆಗಳಿಗಾಗಿ ಬೆಂಗಳೂರಿನಿಂದ ಊರಿಗೆ ತೆರಳಿದ್ದ ಪ್ರಯಾಣಿಕರು ಮರಳಲು ನೈಋತ್ಯ ರೈಲ್ವೆ (SWR) ವಿಶೇಷ ರೈಲುಗಳನ್ನು ವ್ಯವಸ್ಥೆಗೊಳಿಸಿದೆ. ಹೆಚ್ಚುವರಿ ದಟ್ಟಣೆ ನಿಭಾಯಿಸಲು ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ವಿಜಯಪುರ, ಹೊಸಪೇಟೆ ಮತ್ತು ಗೋವಾ ಮಾರ್ಗಗಳಲ್ಲಿ ಈ ರೈಲುಗಳು ಸಂಚರಿಸುತ್ತಿವೆ. ವೇಳಾಪಟ್ಟಿ ಮತ್ತು ನಿಲುಗಡೆ ಮಾಹಿತಿ ಇಲ್ಲಿದೆ.
- Ganapathi Sharma
- Updated on: Mar 19, 2026
- 8:21 am
ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಜಾರಿಬಿದ್ದ ಯುವಕ ಬದುಕುಳಿದಿದ್ದು ಹೇಗೆ?
ಚಲಿಸುವ ರೈಲಿನಿಂದ ಇಳಿಯಲು ಅಥವಾ ಹತ್ತಲು ಪ್ರಯತ್ನಿಸಬೇಡಿ ಎಂದು ರೈಲ್ವೆ ಅಧಿಕಾರಿಗಳು ಪ್ರಯಾಣಿಕರಿಗೆ ಆಗಾಗ್ಗೆ ಎಚ್ಚರಿಕೆ ನೀಡುತ್ತಾರೆ. ಏಕೆಂದರೆ ಅದು ಜೀವವನ್ನೇ ತೆಗೆಯಬಹುದು. ಆದರೂ ಕೆಲವರು ಇದನ್ನು ನಿರ್ಲಕ್ಷ್ಯ ಮಾಡಿ ತಮ್ಮ ಜೀವವನ್ನೇ ಪಣಕ್ಕಿಡುತ್ತಾರೆ. ಇದೇ ರೀತಿಯ ಘಟನೆಯ ಆಘಾತಕಾರಿ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಚಲಿಸುವ ರೈಲು ಹತ್ತಿದ ಯುವಕ ಬದುಕುಳಿದಿದ್ದೇ ಪವಾಡ.
- Sushma Chakre
- Updated on: Mar 18, 2026
- 11:02 pm
ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಗೂಡ್ಸ್ ಮ್ಯಾನೇಜರ್ ಎಲ್ಡಿಸಿ ಹುದ್ದೆಗಳ ಮುಂಬಡ್ತಿ ಪರೀಕ್ಷೆ ಮುಂದೂಡಿಕೆ
ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಡೆಸಿದ ಪ್ರತಿಭಟನೆಗೆ ಮಣಿದ ರೈಲ್ವೆ ಇಲಾಖೆಯು, ಗೂಡ್ಸ್ ಮ್ಯಾನೇಜರ್ ಎಲ್ಡಿಸಿ ಹುದ್ದೆಗಳ ಮುಂಬಡ್ತಿ ಪರೀಕ್ಷೆಯನ್ನು ರದ್ದುಗೊಳಿಸಿದೆ. ಕರವೇ ಕಾರ್ಯಕರ್ತರು ಪರೀಕ್ಷಾ ಪ್ರಕ್ರಿಯೆಯಲ್ಲಿನ ಕೆಲವು ಅಸಂಗತತೆಗಳು ಮತ್ತು ಕನ್ನಡ ಭಾಷೆ ಕಡೆಗಣನೆ ಕುರಿತು ಆಕ್ಷೇಪ ವ್ಯಕ್ತಪಡಿಸಿ, ತೀವ್ರ ಹೋರಾಟ ನಡೆಸಿದ್ದರು. ಈ ಹೋರಾಟದ ಪರಿಣಾಮವಾಗಿ ಪರೀಕ್ಷೆ ಮುಂದೂಡಿಕೆಯಾಗಿದೆ.
- Sanjayya Chikkamath
- Updated on: Mar 17, 2026
- 12:10 pm
ಈ ವಂದೇ ಭಾರತ್ ರೈಲಿನಲ್ಲಿ ಪುರುಷ ಸಿಬ್ಬಂದಿಯೇ ಇರ್ಲಿಲ್ಲ, ಎಲ್ಲರೂ ಮಹಿಳೆಯರೇ!
ಮಾರ್ಚ್ 8 ರಂದು ಮಹಿಳಾ ದಿನಾಚರಣೆ ಅಂಗವಾಗಿ ಬೆಂಗಳೂರು–ಮೈಸೂರು ನಡುವಿನ ವಂದೇ ಭಾರತ್ನಎಕ್ಸ್ಪ್ರೆಸ್ ರೈಲನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು. ನೈಋತ್ಯ ರೈಲ್ವೆ ನಡೆಸಿದ ಈ ವಿಶೇಷ ಕಾರ್ಯಕ್ರಮವು ಮಹಿಳಾ ಸಬಲೀಕರಣಕ್ಕೆ ಮತ್ತೊಂದು ಉದಾಹರಣೆಯಾಗಿ ಗಮನಸೆಳೆಯಿತು. ಮಹಿಳಾ ಸಿಬ್ಬಂದಿಯಿಂದಲೇ ವಂದೇ ಭಾರತ್ ರೈಲು ಕಾರ್ಯಾಚರಣೆ ನಡೆಸಿದ ವಿಡಿಯೋ ಇಲ್ಲಿದೆ ನೋಡಿ.
- Ganapathi Sharma
- Updated on: Mar 9, 2026
- 7:57 am
ಬೆಂಗಳೂರಿನಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಿದ್ದತೆ: ಪರಿಸರ ಹೋರಾಟಗಾರರ ಆಕ್ರೋಶ
ಬೆಂಗಳೂರಿನ, ಏರ್ಪೋರ್ಟ್ ಮಾದರಿಯ ಮೊದಲ ರೈಲು ನಿಲ್ದಾಣ ಬೈಯಪ್ಪನಹಳ್ಳಿ ಬಳಿಯ ಸರ್ಎಂ ವಿಶ್ವೇಶ್ವರಯ್ಯ ರೈಲ್ವೆ ಸ್ಟೇಷನ್ನಲ್ಲಿ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆ, ನೂರಾರು ಮರಗಳನ್ನು ಕಡಿಯಲು ರೈಲ್ವೆ ಇಲಾಖೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಇದರ ವಿರುದ್ಧ ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಗಳ ಕಡಿಯುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
- Kiran Surya
- Updated on: Mar 2, 2026
- 8:50 am
82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್ ಅಲಾಟ್ ಮಾಡಿದ ರೈಲ್ವೆ ವಿರುದ್ಧ ದೂರು, ಭಾರತೀಯ ರೈಲ್ವೆ ಕೊಟ್ಟ ಉತ್ತರವೇನು?
82 ವರ್ಷದ ಮಹಿಳೆಗೆ ಅಪ್ಪರ್ ಬರ್ತ್ ಹಂಚಿಕೆ ವಿವಾದದ ಕುರಿತು ಭಾರತೀಯ ರೈಲ್ವೆ ತನ್ನ ನಿಯಮಗಳನ್ನು ಸ್ಪಷ್ಟಪಡಿಸಿದೆ. ಹಿರಿಯ ನಾಗರಿಕರು ಮತ್ತು 45 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಖಾಲಿ ಇದ್ದರೆ ಕೆಳ ಬರ್ತ್ ಸ್ವಯಂ ಚಾಲಿತವಾಗಿ ಲಭಿಸುತ್ತದೆ. ಆದರೆ, ಒಂದೇ PNR ನಲ್ಲಿ ಎರಡು ಟಿಕೆಟ್ಗಳನ್ನು ಬುಕ್ ಮಾಡಿದಾಗ ಕೆಳ ಬರ್ತ್ ಸಿಗುವ ಸಾಧ್ಯತೆ ಹೆಚ್ಚು. ಗುಂಪು ಬುಕಿಂಗ್ನಲ್ಲಿ ಈ ಆದ್ಯತೆ ಸಿಗದಿರಬಹುದು ಎಂಬ ಬಗ್ಗೆಯೂ ಲೇಖನ ಮಾಹಿತಿ ನೀಡಿದೆ.
- Nayana Rajeev
- Updated on: Mar 2, 2026
- 8:05 am
ದಾವಣಗೆರೆ-ಬೆಂಗಳೂರು ಪ್ರಯಾಣಕ್ಕೆ ಎರಡೂವರೆ ಗಂಟೆ ಸಾಕು! ತುಮಕೂರು-ದಾವಣಗೆರೆ ನೇರ ರೈಲ್ವೆ ಮಾರ್ಗ ಮುಂದಿನ ವರ್ಷ ಸಿದ್ಧ
ತುಮಕೂರು-ಚಿತ್ರದುರ್ಗ-ದಾವಣಗೆರೆ ಹೊಸ ರೈಲು ಮಾರ್ಗವು 2027ಕ್ಕೆ ವೇಳೆಗೆ ಪೂರ್ಣಗೊಳ್ಳಲಿದೆ. ಈ ಯೋಜನೆಯಿಂದ ದಾವಣಗೆರೆ-ಬೆಂಗಳೂರು ನಡುವಿನ ಪ್ರಯಾಣ ಕೇವಲ 2.5 ಗಂಟೆಗೆ ಇಳಿಯಲಿದೆ. ಮಧ್ಯ ಕರ್ನಾಟಕದ ಅಭಿವೃದ್ಧಿಗೆ ಇದು ಮಹತ್ವದ ತಿರುವು ನೀಡಲಿದ್ದು, ವ್ಯಾಪಾರ, ಶಿಕ್ಷಣ, ಉದ್ಯೋಗ ಕ್ಷೇತ್ರಗಳಿಗೆ ದೊಡ್ಡ ಉತ್ತೇಜನ ಸಿಗಲಿದೆ.
- Basavaraj Doddamani
- Updated on: Feb 27, 2026
- 8:06 am
ರೈಲು ಈ ನಿಲ್ದಾಣಕ್ಕೆ ಬಂದಾಗ ಬೋಗಿಗಳಲ್ಲಿನ ದೀಪಗಳು ಆರಿ ಹೋಗುತ್ತೆ
ತಾಂಬರಂ ರೈಲು ನಿಲ್ದಾಣದಲ್ಲಿ ಸ್ಥಳೀಯ ರೈಲುಗಳು ಬಂದಾಗ ದೀಪಗಳು ಆಫ್ ಆಗುತ್ತವೆ. ಇದು ಭಯಪಡುವ ವಿಷಯವಲ್ಲ, ಬದಲಿಗೆ ತಾಂತ್ರಿಕ ಕಾರಣ. ರೈಲು ಒಂದು ವಿದ್ಯುತ್ ವಲಯದಿಂದ ಇನ್ನೊಂದಕ್ಕೆ ಬದಲಾದಾಗ 2-3 ಸೆಕೆಂಡುಗಳ ಕಾಲ ವಿದ್ಯುತ್ ಸರಬರಾಜು ನಿಲ್ಲುತ್ತದೆ. ಇದು ಸಹಜ ಪ್ರಕ್ರಿಯೆಯಾಗಿದ್ದು, ಪ್ರಯಾಣಿಕರ ಅರಿವಿಗಾಗಿ ಫಲಕಗಳನ್ನು ಅಳವಡಿಸಲಾಗಿದೆ. ಭವಿಷ್ಯದಲ್ಲಿ ಹೊಸ ತಂತ್ರಜ್ಞಾನದಿಂದ ಈ ಸಮಸ್ಯೆ ಪರಿಹಾರವಾಗುವ ನಿರೀಕ್ಷೆಯಿದೆ.
- Nayana Rajeev
- Updated on: Feb 20, 2026
- 9:47 am
ಬೆಂಗಳೂರಿನಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಸೆಂಟರ್: ವಿ ಸೋಮಣ್ಣ ಮಹತ್ವದ ಘೋಷಣೆ
ಸಚಿವ ವಿ ಸೋಮಣ್ಣ ಅವರು ಬೆಂಗಳೂರು ಮತ್ತು ರಾಜ್ಯದಾದ್ಯಂತ ಮಹತ್ವದ ರೈಲ್ವೆ ಯೋಜನೆಗಳನ್ನು ಹಮ್ಮಿಕೊಂಡಿರುವ ಬಗ್ಗೆ ವಿವರಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಯಶವಂತಪುರ, ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಗಳ ಆಧುನೀಕರಣ, ಹೊಸ ನಾಲ್ಕು ಪಥದ ರೈಲ್ವೆ ಮಾರ್ಗಗಳ ನಿರ್ಮಾಣ ಹಾಗೂ ಯಲಹಂಕದಲ್ಲಿ ದೇಶದ ಅತಿದೊಡ್ಡ ಮೆಗಾ ಕೋಚಿಂಗ್ ಟರ್ಮಿನಲ್ ಸ್ಥಾಪನೆಯಂತಹ ಯೋಜನೆಗಳು ಇದರಲ್ಲಿ ಸೇರಿವೆ.
- Ganapathi Sharma
- Updated on: Feb 17, 2026
- 12:12 pm
ಬೆಂಗಳೂರು ರೈಲು ಪ್ರಯಾಣಿಕರಿಗೆ ಕೇಂದ್ರ ಸಚಿವ ಸೋಮಣ್ಣ ಗುಡ್ ನ್ಯೂಸ್: ಕೊನೆಗೂ ಈಡೇರಿತು ಬಹುಕಾಲದ ಬೇಡಿಕೆ
ಬೆಂಗಳೂರಿನ ನಾಯಂಡಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಎಕ್ಸ್ಪ್ರೆಸ್ ರೈಲುಗಳಿಗೆ ನಿಲುಗಡೆ ಸೌಲಭ್ಯ ಕಲ್ಪಿಸುವ ಬಹುಕಾಲದ ಬೇಡಿಕೆ ಈಡೇರಿದೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ನಾಲ್ಕು ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಚಾಲನೆ ನೀಡಿದರು. ಇದರಿಂದ ಮೆಜೆಸ್ಟಿಕ್ ಮೇಲಿನ ಒತ್ತಡ ಕಡಿಮೆಯಾಗಲಿದ್ದು, ಬೆಂಗಳೂರು ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.
- Ganapathi Sharma
- Updated on: Feb 17, 2026
- 9:38 am
ಭಾರತದ ಈ ರೈಲು ನಿಲ್ದಾಣಗಳಿಂದ ನೇರವಾಗಿ ಫಾರಿನ್ಗೆ ಹೋಗಬಹುದು ಗೊತ್ತೇ!
ನೆರೆಯ ರಾಷ್ಟ್ರಗಳಿಗೆ ನೇರ ಪ್ರಯಾಣಿಕ ರೈಲು ಸೇವೆ ಒದಗಿಸುವ ವಿಶ್ವದ ಕೆಲವೇ ದೇಶಗಳಲ್ಲಿ ಭಾರತವೂ ಒಂದು. ಗಡಿಯಾಚೆಗಿನ ಸಂಚಾರ, ವ್ಯಾಪಾರ, ಸಾಂಸ್ಕೃತಿಕ ಬಾಂಧವ್ಯ ಹಾಗೂ ಐತಿಹಾಸಿಕ ಸಂಪರ್ಕಗಳನ್ನು ಬಲಪಡಿಸಲು ಭಾರತವು ನೇಪಾಳ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ದೇಶಗಳೊಂದಿಗೆ ರೈಲು ಸಂಪರ್ಕವನ್ನು ಅಭಿವೃದ್ಧಿಪಡಿಸಿದೆ (ಈ ಪೈಕಿ ಸದ್ಯ ಪಾಕಿಸ್ತಾನದೊಂದಿಗಿನ ರೈಲು ಸಂಪರ್ಕ ಕಡಿತಗೊಂಡಿದೆ). ಭಾರತದಿಂದ ನೇರವಾಗಿ ಕಾರ್ಯನಿರ್ವಹಿಸುವ ಪ್ರಮುಖ ಅಂತಾರಾಷ್ಟ್ರೀಯ ರೈಲು ನಿಲ್ದಾಣ, ಮಾರ್ಗಗಳ ವಿವರ ಇಲ್ಲಿದೆ.
- Ganapathi Sharma
- Updated on: Feb 16, 2026
- 2:41 pm