
Indian Railways
ಭಾರತೀಯ ರೈಲ್ವೆ ಭಾರತ ಸರ್ಕಾರದ, ರೈಲ್ವೇ ಖಾತೆಯ ಅಧೀನದ, ಒಂದು ಇಲಾಖೆ. ಭಾರತ ಉದ್ದಗಲಕ್ಕೂ ಹರಡಿದ ರೈಲು ಮಾರ್ಗಗಳ (ಉಗಿ ಬಂಡಿ ದಾರಿಗಳ) ನಿರ್ವಹಣೆಯ ಜವಾಬ್ದಾರಿ ಈ ಇಲಾಖೆಯದಾಗಿದೆ. 1853 ರಲ್ಲಿ ಸ್ಥಾಪಿತವಾದ ಇದು ಪ್ರಪಂಚದ ಅತಿದೊಡ್ಡ ರೈಲು ಜಾಲಗಳಲ್ಲಿ ಒಂದಾಗಿದೆ, ವಿವಿಧ ಪ್ರದೇಶಗಳನ್ನು ಸಂಪರ್ಕಿಸುತ್ತದೆ ಮತ್ತು ಸರಕುಗಳು ಮತ್ತು ಪ್ರಯಾಣಿಕರ ಚಲನೆಯನ್ನು ಸುಗಮಗೊಳಿಸುತ್ತದೆ. ರೈಲ್ವೇ ಖಾತೆಯ ಮುಖ್ಯಸ್ಥರು ಕ್ಯಾಬಿನೆಟ್ ದರ್ಜೆಯ ಮಂತ್ರಿಯಾಗಿದ್ದರೆ, ರೈಲ್ವೇ ಇಲಾಖೆಯ ಆಡಳಿತ ವ್ಯವಸ್ಥೆ ರೈಲ್ವೇ ಮಂಡಳಿಯ ಅಧೀನದಲ್ಲಿದೆ. ರೈಲ್ವೇ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ರೈಲ್ವೇಗಳು ದಿನನಿತ್ಯ ಸಾವಿರಾರು ರೈಲುಗಳನ್ನು ಓಡಿಸುವುದರೊಂದಿಗೆ ವಿಸ್ತಾರವಾದ ಜಾಲವನ್ನು ಹೊಂದಿದೆ. ವ್ಯಾಪಾರ ಮತ್ತು ಪ್ರಯಾಣವನ್ನು ಸಕ್ರಿಯಗೊಳಿಸುವ ಮೂಲಕ ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ಇದು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ.
ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ಸಚಿವ ಸೋಮಣ್ಣ ಸೂಚನೆ
ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವವರು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕು ಎಂದು ಸೂಚಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ವಿಚಾರವಾಗಿ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಮಧ್ಯ ಪ್ರವೇಶಿಸಿ, ಪರೀಕ್ಷಾರ್ಥಿಗಳು ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಯಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿದ್ದಾರೆ.
- Web contact
- Updated on: Apr 28, 2025
- 9:17 am
ರೈಲ್ವೆ ಪರೀಕ್ಷೆಯಲ್ಲಿ ಜನಿವಾರ ಮಾತ್ರವಲ್ಲ, ಮಂಗಳಸೂತ್ರವೂ ನಿಷಿದ್ಧ! ವ್ಯಾಪಕ ಆಕ್ರೋಶ
ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯದಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ. ಇದೀಗ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಪರೀಕ್ಷೆಯೊಂದಕ್ಕೆ ಹಾಜರಾಗುವವರು ಮಂಗಳಸೂತ್ರ, ಧಾರ್ಮಿಕ ಸಂಕೇತಗಳನ್ನು ತೆಗೆದು ಹಾಜರಾಗಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿರುವುದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.
- Ashok
- Updated on: Apr 28, 2025
- 8:43 am
ಟ್ರೈನ್ ಆಪರೇಶನ್; ಖಾಸಗಿಗೆ ವಹಿಸುವ ಪ್ರಯೋಗ ಯಶಸ್ವಿ; ತೇಜಸ್ ಎಕ್ಸ್ಪ್ರೆಸ್ ರೈಲಿಂದ 3 ಕೋಟಿ ರೂಗೂ ಅಧಿಕ ಲಾಭ
Indian railways update: ಭಾರತೀಯ ರೈಲ್ವೆಸ್ ದೇಶದ ವಿವಿಧೆಡೆ 50 ನಿಲ್ದಾಣಗಳನ್ನು ವಿಶ್ವದರ್ಜೆಗೆ ಉನ್ನತೀಕರಿಸುವ ಯೋಜನೆ ಹಮ್ಮಿಕೊಂಡಿದೆ. ಹಾಗೆಯೇ, 150 ಟ್ರೈನುಗಳನ್ನು ಖಾಸಗಿ ಆಪರೇಟರ್ಗಳಿಗೆ ವಹಿಸುವ ಯೋಜನೆಯೂ ಇದೆ. ಇದರ ಭಾಗವಾಗಿ ಐಆರ್ಸಿಟಿಸಿ ಸಂಸ್ಥೆ ತೇಜಸ್ ಎಕ್ಸ್ಪ್ರೆಸ್ ಟ್ರೈನ್ ಆಪರೇಟ್ ಮಾಡುತ್ತಿದೆ. ಅಕ್ಟೋಬರ್ 2ರಿಂದ 28ರವರೆಗೆ ಇದು ಮೂರು ಕೋಟಿಗೂ ಅಧಿಕ ಆದಾಯ ಕಂಡಿದ್ದು, 70 ಲಕ್ಷ ರೂ ಲಾಭ ಮಾಡಿದೆ.
- Vijaya Sarathy SN
- Updated on: Apr 18, 2025
- 6:16 pm
ಬೆಳಗಾವಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು: ತಪ್ಪಿದ ಭಾರೀ ಅನಾಹುತ, 4 ಗಂಟೆ ಕಾಲ ರೈಲುಗಳ ಸಂಚಾರ ಸ್ಥಗಿತ
ಬೆಳಗಾವಿ ಗೂಡ್ಸ್ ರೈಲು ಅಪಘಾತ: ಗೂಡ್ಸ್ ರೈಲೊಂದು ಬೆಳಗಾವಿ ರೈಲ್ವೆ ನಿಲ್ದಾಣದ ಸಮೀದಲ್ಲಿ ಹಳಿ ತಪ್ಪಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು. ಸರಕು ಸಾಗಣೆ ರೈಲಿನ ಅಪಘಾತದ ಪರಿಣಾಮ ರಾಣಿ ಚೆನ್ನಮ್ಮ ರೈಲು ಕೂಡ ಅಪಘಾತವಾಗುವ ಸಾಧ್ಯತೆ ಇದ್ದು, ಅಧಿಕಾರಿಗಳ ಸಮಯಪ್ರಜ್ಞೆಯಿಂದ ಸಂಭಾವ್ಯ ಭಾರೀ ದುರಂತ ತಪ್ಪಿದೆ.
- Sahadev Mane
- Updated on: Apr 15, 2025
- 10:42 am
ಮಂಗಳೂರು ಪುತ್ತೂರು ಪ್ಯಾಸೆಂಜರ್ ರೈಲು ಕುಕ್ಕೆ ಸುಬ್ರಹ್ಮಣ್ಯಕ್ಕೆ ವಿಸ್ತರಣೆ: ವೇಳಾಪಟ್ಟಿ ಇಲ್ಲಿದೆ
ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ರೈಲು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಕಬಕ ಪುತ್ತೂರಿನ ವರೆಗೆ ಸಂಚರಿಸುತ್ತಿದ್ದ ರೈಲನ್ನು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ವರೆಗೆ ವಿಸ್ತರಣೆ ಮಾಡಲಾಗಿದೆ. ರೈಲಿಗೆ ಚಾಲನೆ ನೀಡಲಾಗಿದ್ದು, ವೇಳಾಪಟ್ಟಿ ಹಾಗೂ ಇತರ ವಿವರಗಳು ಇಲ್ಲಿವೆ.
- Pruthviraj
- Updated on: Apr 12, 2025
- 6:39 pm
Bengaluru Kannur Special Train: ಬೆಂಗಳೂರು – ಕಣ್ಣೂರು ಮಧ್ಯೆ ವಿಶೇಷ ಎಕ್ಸ್ಪ್ರೆಸ್ ರೈಲು, ಇಲ್ಲಿದೆ ವಿವರ
ಬೆಂಗಳೂರು ಕಣ್ಣೂರು ವಿಶೇಷ ಎಕ್ಸ್ಪ್ರೆಸ್ ರೈಲು: ಹಬ್ಬಗಳ ರಜೆ ಹಾಗೂ ಬೇಸಗೆ ರಜೆ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸುವುದಕ್ಕಾಗಿ ಈಗಾಗಲೇ ನೈಋತ್ಯ ರೈಲ್ವೆ ಕೆಲವು ವಿಶೇಷ ರೈಲುಗಳನ್ನು ಘೋಷಿಸಿದೆ. ಕರ್ನಾಟಕದ ವಿವಿಧ ಜಿಲ್ಲೆಗಳು ಹಾಗೂ ಇತರ ರಾಜ್ಯಗಳಿಗೂ ವಿಶೇಷ ರೈಲುಗಳು ಸಂಚರಿಸಲಿವೆ. ಇದೀಗ ಕೇರಳದ ಕಣ್ಣೂರು ಹಾಗೂ ಬೆಂಗಳೂರು ಮಧ್ಯೆ ವಿಶೇಷ ರೈಲು ಘೋಷಿಸಿದ್ದು, ವಿವರಗಳು ಇಲ್ಲಿವೆ.
- Ganapathi Sharma
- Updated on: Apr 11, 2025
- 12:42 pm
Mangaluru Kukke Subrahmanya Train: ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು: ಸಚಿವ ಸೋಮಣ್ಣ ಘೋಷಣೆ
ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ರೈಲು: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸಿಹಿ ಸುದ್ದಿ ನೀಡಿದ್ದಾರೆ. ತುಮಕೂರಿನಲ್ಲಿ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇದೇ ತಿಂಗಳ 12ನೇ ತಾರೀಖಿನಿಂದ ಮಂಗಳೂರು ಕುಕ್ಕೆ ಸುಬ್ರಹ್ಮಣ್ಯ ಮಧ್ಯೆ ಹೊಸ ರೈಲು ಸಂಚರಿಸಲಿದೆ ಎಂದು ಘೋಷಣೆ ಮಾಡಿದ್ದಾರೆ.
- Mahesha E
- Updated on: Apr 12, 2025
- 5:48 pm
Bengaluru Mysuru Train: ಬೆಂಗಳೂರು ಮೈಸೂರು ರೈಲು ಪ್ರಯಾಣಿಕರಿಗೆ ಸಂಕಷ್ಟ
ಮೈಸೂರು ಬೆಂಗಳೂರು ಮೆಮು ರೈಲು: ಅದು ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಅರಮನೆ ನಗರಿ ಮೈಸೂರಿಗೆ ಸಂಪರ್ಕ ಕಲ್ಪಿಸುವ ಮೆಮು ಪ್ಯಾಸೆಂಜರ್ ರೈಲು. ಈ ರೈಲು ಬಡವರ ಪಾಲಿನ ಐರಾವತ ಎಂದೇ ಹೇಳಬಹುದು. ಅಷ್ಟೊಂದು ದುಬಾರಿ ಏನಿಲ್ಲ, ಕೈಗೆಟುಕುವ ದರದಲ್ಲಿ ಸುರಕ್ಷಿತವಾಗಿ ಪ್ರಯಾಣ ಮಾಡಬಹುದು. ಆದರೆ ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪ್ರಯಾಣಿಕರು ಪ್ರತಿದಿನ ಉಸಿರುಕಟ್ಟಿಕೊಂಡು ಪ್ರಯಾಣ ಮಾಡುವ ಹಾಗಾಗಿದೆ.
- Kiran Surya
- Updated on: Apr 9, 2025
- 6:37 am
Photos: ರಾಮೇಶ್ವರಂನಲ್ಲಿ ಪ್ರಧಾನಿ ಮೋದಿ ಉದ್ಘಾಟಿಸಿದ ಪಂಬನ್ ಸೇತುವೆ ಹೇಗಿದೆ? ಇಲ್ಲಿವೆ ಫೋಟೋಸ್
ಪ್ರಧಾನಿ ನರೇಂದ್ರ ಮೋದಿ ರಾಮನವಮಿಯಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಭಾರತದ ಮೊದಲ ಲಿಫ್ಟ್ ಸಮುದ್ರ ಸೇತುವೆ (ಪಂಬನ್ ರೈಲು ಸೇತುವೆ) ಉದ್ಘಾಟಿಸಿದ್ದಾರೆ. ಇದು 72.2 ಮೀಟರ್ ಅಗಲದ ಸಮುದ್ರ ಮಾರ್ಗವಾಗಿದೆ. ಸೇತುವೆಯ ಒಂದು ಲೇನ್ನಲ್ಲಿ ಎರಡು ಟ್ರಕ್ಗಳು ಏಕಕಾಲದಲ್ಲಿ ಸುಲಭವಾಗಿ ಚಲಿಸಬಹುದು. ಈ ಸೇತುವೆಯನ್ನು 17 ಮೀಟರ್ವರೆಗೆ ಎತ್ತರಿಸಬಹುದು. ಈ ಸೇತುವೆ ಹಳೆಯ ಸೇತುವೆಗಿಂತ 3 ಮೀಟರ್ ಎತ್ತರವಾಗಿದೆ. ಈ ಸೇತುವೆಯನ್ನು ಬಾಳಿಕೆ ಬರುವಂತೆ ಮಾಡಲು, ಸ್ಟೇನ್ಲೆಸ್ ಸ್ಟೀಲ್ ಅನ್ನು ಬಳಸಲಾಗಿದೆ. ಇದರೊಂದಿಗೆ, ಇದನ್ನು ಸುರಕ್ಷಿತವಾಗಿ ಬಣ್ಣ ಬಳಿಯಲಾಗಿದೆ.
- Nayana Rajeev
- Updated on: Apr 6, 2025
- 2:56 pm
3 ರಾಜ್ಯಗಳು, 4 ರೈಲ್ವೆ ಯೋಜನೆ; 18,658 ಕೋಟಿ ರೂ ಹೂಡಿಕೆ: ಕೇಂದ್ರ ಸಂಪುಟ ಅನುಮೋದನೆ
₹18,658 Crore Rail Projects Approved: ಭಾರತೀಯ ರೈಲ್ವೆ ಸಂಸ್ಥೆ ಮೂರು ರಾಜ್ಯಗಳಲ್ಲಿ ಕೈಗೊಂಡಿರುವ ವಿವಿಧ ನಾಲ್ಕು ರೈಲ್ವೆ ಯೋಜನೆಗಳಿಗೆ 18,658 ಕೋಟಿ ರೂ ಹೂಡಿಕೆ ಮಾಡಲಾಗುತ್ತಿದೆ. ಕೇಂದ್ರ ಸಂಪುಟ ಈ ಯೋಜನೆಗಳಿಗೆ ಹಸಿರು ನಿಶಾನೆ ತೋರಿದೆ. ಮಹಾರಾಷ್ಟ್ರ, ಛತ್ತೀಸ್ಗಡ ಮತ್ತು ಒಡಿಶಾ ರಾಜ್ಯಗಳಲ್ಲಿ ನಡೆಯಲಿರುವ ಈ ಯೋಜನೆಗಳಿಂದ ಬಹಳಷ್ಟು ಉಪಯೋಗವಾಗುವ ನಿರೀಕ್ಷೆ ಇದೆ.
- Vijaya Sarathy SN
- Updated on: Apr 4, 2025
- 4:53 pm