AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yoga Day

Yoga Day

ಪ್ರತಿ ವರ್ಷ ಜೂನ್ 21 ರಂದು ವಿಶ್ವದಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತದೆ. ಇದನ್ನು ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕೊಡುಗೆ ನೀಡುವ ಯೋಗದ ವಿಶಿಷ್ಟ ಮನ್ನಣೆ ಎಂದು ಪರಿಗಣಿಸಬೇಕು. ಪ್ರಾಚೀನ ಕಾಲದಿಂದಲೂ ಭಾರತದಲ್ಲಿ ಯೋಗವನ್ನು ಅಭ್ಯಾಸ ಮಾಡಲಾಗಿದೆ. ಸೆಪ್ಟೆಂಬರ್ 27, 2014 ರಂದು, ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರತಿ ವರ್ಷ ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ಪ್ರಸ್ತಾಪಿಸಿದರು. ಈ ನಿರ್ಣಯವನ್ನು 193 UN ಪ್ರತಿನಿಧಿಗಳಲ್ಲಿ 177 ಸದಸ್ಯ ರಾಷ್ಟ್ರಗಳು ಬೆಂಬಲಿಸಿದವು. ಉತ್ತರ ಗೋಳಾರ್ಧದಲ್ಲಿ ಜೂನ್ 21 ವರ್ಷದ ಸುದೀರ್ಘ ದಿನವಾಗಿರುವುದರಿಂದ, ಆ ದಿನವನ್ನು ಯೋಗ ದಿನ ಎಂದು ಪ್ರಸ್ತಾಪಿಸಲಾಗಿದೆ. ಮೊದಲ ಅಂತಾರಾಷ್ಟ್ರೀಯ ಯೋಗ ದಿನವನ್ನು 21 ಜೂನ್ 2015 ರಂದು ವಿಶ್ವದಾದ್ಯಂತ ಆಚರಿಸಲಾಯಿತು. ಯೋಗ ದಿನದ ಸಂದರ್ಭದಲ್ಲಿ ಭಾರತದಾದ್ಯಂತ ಮಾತ್ರವಲ್ಲದೆ ನ್ಯೂಯಾರ್ಕ್, ಪ್ಯಾರಿಸ್, ಬೀಜಿಂಗ್, ಬ್ಯಾಂಕಾಕ್, ಕೌಲಾಲಂಪುರ್ ಮತ್ತು ಸಿಯೋಲ್‌ನಂತಹ ಜಾಗತಿಕ ನಗರಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಯೋಗಾಸನಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹೆಚ್ಚು ಸುಧಾರಿಸಬಹುದು ಎಂದು ಹಲವು ಸಂಶೋಧನೆಗಳು ದೃಢಪಡಿಸಿವೆ. ಯೋಗ ಕೂಡ ಜೀವನದಲ್ಲಿ ಶಿಸ್ತಿಗೆ ಸಹಾಯ ಮಾಡುತ್ತದೆ.

ಇನ್ನೂ ಹೆಚ್ಚು ಓದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಂದು (ಜೂನ್ 21) ಯೋಗ ದಿನಾಚರಣೆ ಆಚರಿಸಲಾಗಿದೆ. ಜೈಲಿನಲ್ಲಿ ಎಲ್ಲಾ ಕೈದಿಗಳಿಂದ ಯೋಗಭ್ಯಾಸ ಮಾಡಿಸಲಾಗಿದೆ. ದರ್ಶನ್ ಅವರು ಪ್ರಾಣಾಯಾಮ, ದೀರ್ಘಾದಂಡ ನಮಸ್ಕಾರ, ಶವಾಸನ ಮಾಡಿದ್ದಾರೆ. ಒಂದು ಗಂಟೆಯ ಕಾಲ ಯೋಗದಲ್ಲಿ ಭಾಗಿಯಾದ ಬಳಿಕ ಅವರು ಬ್ಯಾರಕ್​ಗೆ ತೆರಳಿದರು.

ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ: ಪ್ರಧಾನಿ ಮೋದಿ

ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿ ನೆರೆದಿದ್ದ ಸಾವಿರಾರು ಸಾರ್ವಜನಿಕರೊಂದಿಗೆ ಜಂಟಿಯಾಗಿ ಸಾಮೂಹಿಕ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನವನ್ನು ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ವಿಶೇಷ ಥೀಮ್ ಅಡಿಯಲ್ಲಿ ಆಚರಿಸಲಾಗುತ್ತಿದೆ.

International Yoga Day 2026: ಯೋಗಾಭ್ಯಾಸ ಮಾಡಲು ಸರಿಯಾದ ಸಮಯ ಯಾವುದು? ಇದರ ಪ್ರಯೋಜನಗಳೇನು?

ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನವನ್ನು ಸಾಧಿಸುವ ಪ್ರಾಚೀನ ಭಾರತೀಯ ವಿಜ್ಞಾನವಾಗಿದೆ. ಇಂದು, ಯೋಗವು ವಿಶ್ವಾದ್ಯಂತ ವೇಗವಾಗಿ ಜನಪ್ರಿಯತೆಯನ್ನು ಗಳಿಸುತ್ತಿದೆ ಮತ್ತು ಲಕ್ಷಾಂತರ ಜನರು ಅದನ್ನು ತಮ್ಮ ದಿನಚರಿಯಲ್ಲಿ ಅಳವಡಿಸಿಕೊಂಡಿದ್ದಾರೆ. ಯೋಗದ ಈ ಮಹತ್ವವನ್ನು ಸಾರಲು ಪ್ರತಿವರ್ಷ ಜೂನ್‌ 21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಯೋಗ ದಿನಾಚರಣೆಗೆ ಈ ದಿನವನ್ನೇ ಏಕೆ ಆಯ್ಕೆ ಮಾಡಲಾಯಿತು ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳಿ.

ಅಂತಾರಾಷ್ಟ್ರೀಯ ಯೋಗ ದಿನ :30 ಸಾವಿರ ಜನರೊಂದಿಗೆ ಪ್ರಧಾನಿ ಮೋದಿ ಯೋಗಾಭ್ಯಾಸ

ಕೋಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 12ನೇ ಅಂತಾರಾಷ್ಟ್ರೀಯ ಯೋಗ ದಿನ 2026 ಅನ್ನು 30,000 ಜನರೊಂದಿಗೆ ಆಚರಿಸಿದರು. ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಎಂಬ ಘೋಷವಾಕ್ಯದೊಂದಿಗೆ, ಯೋಗವು ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಸಾಧಿಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದರು. ಬಂಗಾಳದ ಆಧ್ಯಾತ್ಮಿಕ ಯೋಗ ಪರಂಪರೆಯನ್ನು ಸ್ಮರಿಸಿ, ಯೋಗ ಎಲ್ಲರನ್ನು ಒಂದುಗೂಡಿಸುವ ಶಕ್ತಿ ಹೊಂದಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಯೋಗ ದಿನ 2026: ಅಮರಾವತಿಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಜೊತೆ ರಾಮ್‌ದೇವ್ ಯೋಗಾಭ್ಯಾಸ

ಅಂತಾರಾಷ್ಟ್ರೀಯ ಯೋಗ ದಿನ 2026 ರಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಮ್‌ದೇವ್ ಅವರೊಂದಿಗೆ ಯೋಗಾಭ್ಯಾಸ ಮಾಡಿದರು. ಅಮರಾವತಿಯನ್ನು ಯೋಗಧಾನಿ ಎಂದು ಘೋಷಿಸಲಾಯಿತು. ಪ್ರಧಾನ ಮಂತ್ರಿಯವರ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ದೃಷ್ಟಿಯಂತೆ, ಮಕ್ಕಳಿಗೆ ಐದು ಯೋಗ ಭಂಗಿಗಳನ್ನು ಕಲಿಸುವ ಮಹತ್ವವನ್ನು ಒತ್ತಿಹೇಳಲಾಯಿತು. ಯೋಗವು ದೀರ್ಘಾಯುಷ್ಯ, ರೋಗನಿರೋಧಕ ಶಕ್ತಿ ಮತ್ತು ದೇಹದ ಆರೋಗ್ಯಕ್ಕೆ ಸಹಕಾರಿ ಎಂದು ತಿಳಿಸಲಾಯಿತು.

ಯೋಗ ಒಂದು ದಿನದ ಕಾರ್ಯಕ್ರಮ ಆಗುವುದು ಬೇಡ, 365 ದಿನ ನಿಮ್ಮ ಜೀವನದ ಭಾಗವಾಗಿರಲಿ: ಮೋದಿ

International Yoga Day 2026: ಯೋಗ ಕೇವಲ ಒಂದು ದಿನದ ಕಾರ್ಯಕ್ರಮವಾಗುವುದು ಬೇಡ, 362 ದಿನವೂ ನಿಮ್ಮ ಜೀವನದ ಅಂಗವಾಗಿರಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೋಲ್ಕತ್ತಾದಲ್ಲಿ ಇಂದು ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಯೋಗವನ್ನು ಅಳವಡಿಸಿಕೊಂಡರೆ ಸಮಾಜ ಸ್ವಸ್ಥವಾಗಿರುತ್ತೆ, ರಾಷ್ಟ್ರವು ಕೂಡ ಅಧಿಕ ಸಕ್ಷಮ ಹಾಗೂ ಸಮೃದ್ಧವಾಗಿರುತ್ತದೆ. 100 ದಿನಗಳ ಆನ್​ಲೈನ್ ಯೋಗ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, 130 ದೇಶಗಳ 30 ಲಕ್ಷಕ್ಕೂ ಅಧಿಕ ಮಂದಿ ಇದರಲ್ಲಿ ಪಾಲ್ಗೊಂಡಿದ್ದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

International Yoga Day 2026 : ಕೋಲ್ಕತ್ತಾದಲ್ಲಿ ನಮೋ ಯೋಗ!

ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದಲ್ಲಿ ಈ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಮುಖ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಕ್ಕೆ ಭಾರತೀಯ ತತ್ವಜ್ಞಾನ ಮತ್ತು ಯೋಗವನ್ನು ಪರಿಚಯಿಸಿದ ಸ್ವಾಮಿ ವಿವೇಕಾನಂದರು ಜನಿಸಿದ ಪುಣ್ಯಭೂಮಿ ಕೊಲ್ಕತ್ತಾ. ಅವರು ಸ್ಥಾಪಿಸಿದ ರಾಮಕೃಷ್ಣ ಮಿಷನ್ ಹಾಗೂ ಬೇಲೂರು ಮಠಗಳು ಇಂದಿಗೂ ಆಧ್ಯಾತ್ಮಿಕ ಮತ್ತು ದೈಹಿಕ ಶಿಸ್ತಿನ ಪ್ರಮುಖ ಕೇಂದ್ರಗಳಾಗಿವೆ. ಯೋಗದ ಜಾಗತಿಕ ಪ್ರಚಾರಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಈ ಬಾರಿ ಕೊಲ್ಕತ್ತಾವನ್ನು ಪ್ರಮುಖ ವೇದಿಕೆಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ನೇರಪ್ರಸಾರ ಇಲ್ಲಿದೆ.

International Yoga Day: ಈ ಬಾರಿ ಕೊಲ್ಕತ್ತಾದಲ್ಲೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲು ಕಾರಣವೇನು?

ಭಾರತ ಸರ್ಕಾರವು ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದ ಐತಿಹಾಸಿಕ ರೆಡ್ ರೋಡ್‌ನಲ್ಲಿ ಆಯೋಜಿಸಲು ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿಂದಲೇ ಯೋಗ ದಿನಾಚರಣೆಯನ್ನು ಮುನ್ನಡೆಸಲಿದ್ದಾರೆ. ಈ ಬಾರಿ ಕೇಂದ್ರ ಸರ್ಕಾರ ಯೋಗ ದಿನಾಚರಣೆಗೆ ಕೊಲ್ಕತ್ತಾವನ್ನು ಆಯ್ಕೆ ಮಾಡಿಕೊಂಡಿದ್ದು ಏಕೆ? ಎಂಬುದರ ಮಾಹಿತಿ ಇಲ್ಲಿದೆ.

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್​​ನಲ್ಲಿ ಮುಂದುವರಿದ ಭಾರತದ ಪ್ರಾಬಲ್ಯ: ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ಅಹಮದಾಬಾದ್‌ನ ಏಕಾ ಅರೆನಾದಲ್ಲಿ ನಡೆಯುತ್ತಿರುವ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಭಾರತ 40 ಚಿನ್ನ ಸೇರಿದಂತೆ ಒಟ್ಟು 50 ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮಾಜಿ ಮಿಸ್ ಗುಜರಾತ್ ಹೀನಾ ರಾಜಗೋರ್ ಅವರು ಹಿರಿಯರ ವಿಭಾಗದ ಫಾರ್ವರ್ಡ್ ಬೆಂಡ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಈ ಸ್ವರ್ಣದೊಂದಿಗೆ ಭಾರತದ ಪ್ರಾಬಲ್ಯ ಮುಂದುವರಿದೆ.

ಯೋಗ ಜಾಗತಿಕ ಕ್ರೀಡೆಯಾಗಲಿದೆ ಎಂದ ಮೋದಿ; ಮೊದಲ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ ಅಹಮದಾಬಾದ್‌ನಲ್ಲಿ ಆರಂಭ

ಯೋಗವು ಜಗತ್ತಿಗೆ ಭಾರತ ನೀಡಿದ ಸಾರ್ವಕಾಲಿಕ ಕೊಡುಗೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಅಲ್ಲದೆ, ಅಹಮದಾಬಾದ್‌ನಲ್ಲಿ ಆರಂಭವಾಗಿರುವ ಮೊದಲ 'ವಿಶ್ವ ಯೋಗಾಸನ ಕ್ರೀಡಾ ಚಾಂಪಿಯನ್‌ಶಿಪ್' ಜಾಗತಿಕ ಮಟ್ಟದಲ್ಲಿ ಈ ಪ್ರಾಚೀನ ಶಿಸ್ತಿನ ಪಯಣದ ಒಂದು ಐತಿಹಾಸಿಕ ಕ್ಷಣವಾಗಿದೆ ಎಂದು ಅವರು ಶ್ಲಾಘಿಸಿದ್ದಾರೆ. ಈ ಯೋಗಾಸನ ಕ್ರೀಡೆಯು ಸಂಸ್ಕೃತಿಗಳು ಮತ್ತು ರಾಷ್ಟ್ರಗಳ ನಡುವೆ ದೈಹಿಕ ಯೋಗಕ್ಷೇಮ, ಮಾನಸಿಕ ಸಮತೋಲನ ಮತ್ತು ಸಾಮರಸ್ಯವನ್ನು ಉತ್ತೇಜಿಸುವುದನ್ನು ಮುಂದುವರಿಸಿದೆ ಎಂದು ಅವರು ಹೇಳಿದ್ದಾರೆ. ಅಹಮದಾಬಾದ್‌ನಲ್ಲಿ ನಡೆದ ಉದ್ಘಾಟನಾ ವಿಶ್ವ ಯೋಗಾಸನ ಕ್ರೀಡಾ ಚಾಂಪಿಯನ್‌ಶಿಪ್‌ನ ಭಾಗವಹಿಸುವವರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ಮೋದಿ ಮಾತನಾಡಿದರು.

ಸಶಸ್ತ್ರ ಸಂಘರ್ಷ ಕೊನೆಗೊಳಿಸಿದ ಐತಿಹಾಸಿಕ ಸಾಧನೆಯ ಮಹತ್ವದ ಘಳಿಗೆ: ಈ ಶಾಂತಿ ಪ್ರಕ್ರಿಯೆಯಲ್ಲಿ ಗುರುದೇವರು

ಕೊಲಂಬಿಯಾದ ಬೊಗೋಟಾದ ಐಕಾನಿಕ್ ಪ್ಲಾಜಾ ಲಾ ಸಂತಾ ಮಾರಿಯಾದಲ್ಲಿ ಸಾವಿರಾರು ಜನರು ಜಮಾಯಿಸಿ, ಗುರುದೇವ ಶ್ರೀ ಶ್ರೀ ರವಿ ಶಂಕರ್ ರವರೊಂದಿಗೆ 11ನೇ ಅಂತರರಾಷ್ಟ್ರೀಯ ಯೋಗ ದಿನವನ್ನು ಅತ್ಯಂತ ಆತ್ಮೀಯವಾಗಿ ಆಚರಿಸಿದರು. ಈ ವರ್ಷದ ಉತ್ಸವಕ್ಕೆ ವಿಶೇಷ ಮಹತ್ವವಿತ್ತು—ಇದು ಕೊಲಂಬಿಯಾ ದೇಶಕ್ಕೆ ಶಾಂತಿ ದೊರೆತು ನಿಖರವಾಗಿ ಹತ್ತನೇ ವರ್ಷ.

ವಿಶ್ವ ಯೋಗ ದಿನ: ಮತ್ತೆ ವೈರಲ್ ಆಗುತ್ತಿದೆ ಡಾ. ರಾಜ್​ಕುಮಾರ್ ವಿಡಿಯೋ

ಎಷ್ಟೋ ವಿಚಾರಗಳಲ್ಲಿ ರಾಜ್​ಕುಮಾರ್ ಅವರು ಮಾದರಿ. ಯೋಗ ಕಲಿಯಲು ಕೂಡ ಅವರು ಅನೇಕರಿಗೆ ಸ್ಫೂರ್ತಿ. ಅಣ್ಣಾವ್ರು ಯೋಗ ಮಾಡಿದ ವಿಡಿಯೋಗಳು ವೈರಲ್ ಆಗುತ್ತಿವೆ. ಪ್ರತಿ ವರ್ಷ ವಿಶ್ವ ಯೋಗ ದಿನದ ಪ್ರಯುಕ್ತ ಡಾ. ರಾಜ್​ಕುಮಾರ್ ಅವರನ್ನು ಸ್ಮರಿಸಿಕೊಳ್ಳಲಾಗುತ್ತದೆ. ಈ ಬಾರಿ ಕೂಡ ಅದು ಮರುಕಳಿಸಿದೆ.

ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​