
IPL
2008 ರಲ್ಲಿ ಆರಂಭವಾದ ವಿಶ್ವ ಕ್ರಿಕೆಟ್ನ ಅತ್ಯಂತ ಶ್ರೀಮಂತ ಟಿ20 ಲೀಗ್ ಐಪಿಎಲ್ ಇದುವರೆಗೆ 15 ಆವೃತ್ತಿಗಳನ್ನು ಪೂರೈಸಿದೆ. ಇದೀಗ ಲೀಗ್ನ 16ನೇ ಆವೃತ್ತಿ ಇದೇ ಮಾರ್ಚ್ ತಿಂಗಳಲ್ಲಿ ಆರಂಭವಾಗಲಿದೆ. ಈ ಲೀಗ್ನಲ್ಲಿ ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿವೆ. ಈ ಲೀಗ್ನ ಅತ್ಯಂತ ಯಶಸ್ವಿ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ತಲಾ ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿವೆ. ವರ್ಷದಿಂದ ವರ್ಷಕ್ಕೆ ತನ್ನ ಬ್ರಾಂಡ್ ಮೌಲ್ಯದಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಾಣುತ್ತಿರುವ ಈ ಲೀಗ್ನ ಒಟ್ಟು ಬ್ರ್ಯಾಂಡ್ ಮೌಲ್ಯವು 28% ರಷ್ಟು 10.7 ಬಿಲಿಯನ್ ಡಾಲರ್ (ಸುಮಾರು ₹89,232 ಕೋಟಿ) ಹೆಚ್ಚಾಗಿದೆ. ತಂಡಗಳ ಪೈಕಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಬ್ರಾಂಡ್ ಮೌಲ್ಯ 87 ಮಿಲಿಯನ್ ಎಂದು ಅಂದಾಜಿಸಲಾಗಿದೆ. ಅಂದರೆ ಸುಮಾರು 725 ಕೋಟಿ ಆಗಿದೆ. ಹಾಗೆಯೇ ಒಮ್ಮೆಯೂ ಐಪಿಎಲ್ ಟ್ರೋಫಿ ಗೆಲ್ಲದ ಆರ್ಸಿಬಿ ತಂಡ 582 ಕೋಟಿ ರೂ. (69.8 ದಶಲಕ್ಷ ಡಾಲರ್) ಬ್ರಾಂಡ್ ಮೌಲ್ಯದೊಂದಿಗೆ 4ನೇ ಸ್ಥಾನದಲ್ಲಿದೆ.
‘ವಿಷಕಾರಿ ಪಾತ್ರಗಳಿದ್ದವು’; ತಾನಾಡಿದ ಐಪಿಎಲ್ ತಂಡದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಎಬಿ ಡಿವಿಲಿಯರ್ಸ್
AB de Villiers IPL: ಎಬಿ ಡಿವಿಲಿಯರ್ಸ್ ಅವರ ಐಪಿಎಲ್ ವೃತ್ತಿಜೀವನದ ಆರಂಭ ಡೆಲ್ಲಿ ಡೇರ್ಡೆವಿಲ್ಸ್ನೊಂದಿಗೆ ಆಗಿತ್ತು. ಆದರೆ ಅಲ್ಲಿ ಅವರು ಕೆಲವು ಸವಾಲುಗಳನ್ನು ಎದುರಿಸಿದರು. ತಂಡದಲ್ಲಿ ಕೆಲವು "ವಿಷಕಾರಿ" ಪಾತ್ರಗಳಿದ್ದವು ಎಂದು ಅವರು ಬಹಿರಂಗಪಡಿಸಿದ್ದಾರೆ. ಆದರೆ ಆರ್ಸಿಬಿಗೆ ಸೇರಿದ ನಂತರ ನನ್ನ ವೃತ್ತಿಜೀವನವು ಹೊಸ ಉತ್ತುಂಗಕ್ಕೇರಿತು ಎಂದು ಡಿವಿಲಿಯರ್ಸ್ ಹೇಳಿಕೊಂಡಿದ್ದಾರೆ.
- pruthvi Shankar
- Updated on: Jun 15, 2025
- 7:08 pm
ಬರೋಬ್ಬರಿ 11 ಸಿಕ್ಸ್: IPLನಲ್ಲಿ ಅಟ್ಟರ್ ಫ್ಲಾಪ್, MLCಯಲ್ಲಿ ಸಿಡಿಲಬ್ಬರ
MLC ಟಿ20 ಲೀಗ್ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿರುವ ಜೇಕ್ ಪ್ರೇಸರ್ ಮೆಕ್ಗುರ್ಕ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಈ ಬಾರಿಯ ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ 6 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಮೆಕ್ಗುರ್ಕ್ ಕಲೆಹಾಕಿದ್ದು ಕೇವಲ 55 ರನ್ಗಳು ಮಾತ್ರ. ಅಂದರೆ ಕೇವಲ 9.17 ಸರಾಸರಿಯಲ್ಲಿ ಮಾತ್ರ ರನ್ ಗಳಿಸಿದ್ದರು.
- Zahir Yusuf
- Updated on: Jun 15, 2025
- 10:49 am
ಸೋಲಿನ ಸರಪಳಿ ಬ್ರೇಕ್… 3 ತಂಡಗಳಿಗೆ ಒಲಿದ ಚಾಂಪಿಯನ್ ಪಟ್ಟ
WTC Final: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ 2025ರ ಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡಕ್ಕೆ ಸೋಲುಣಿಸಿ ಸೌತ್ ಆಫ್ರಿಕಾ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದು ಐಸಿಸಿ ಟೂರ್ನಿಯಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಸಿಕ್ಕ 2ನೇ ಟ್ರೋಫಿ. ಇದಕ್ಕೂ ಮುನ್ನ 1998 ರಲ್ಲಿ ಸೌತ್ ಆಫ್ರಿಕಾ ತಂಡ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತ್ತು. ಇದೀಗ 27 ವರ್ಷಗಳ ಬಳಿಕ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರಿದೆ.
- Zahir Yusuf
- Updated on: Jun 15, 2025
- 8:31 am
ಬೆಂಗಳೂರು ಕಾಲ್ತುಳಿತ ಪ್ರಕರಣ: ಎಲ್ಲ ದಾಖಲೆಗಳನ್ನು ಸಿಎಸ್ ವಶದಲ್ಲಿಡಲು ಹೈಕೋರ್ಟ್ ಸೂಚನೆ
ಆರ್ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ (ಜೂ.03) ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣದ ಬಳಿ ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಈ ಸಂಬಂಧ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಈ ಬಂಧನದಿಂದ ಬಿಡುಗಡೆ ಕೋರಿ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿ ಕೋರ್ಟ್, ಮಧ್ಯಂತರ ಜಾಮೀನು ನೀಡಿದೆ.
- Ramesha M
- Updated on: Jun 12, 2025
- 6:32 pm
ಬೆಂಗಳೂರು ಕಾಲ್ತುಳಿತ: RCB ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲ್ಗೆ ಮಧ್ಯಂತರ ಜಾಮೀನು
ಆರ್ಸಿಬಿ ಗೆಲುವನ್ನು ಸಂಭ್ರಮಿಸಲು ಬುಧವಾರ (ಜೂ.03) ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣದ ಬಳಿ ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಈ ಸಂಬಂಧ ಆರ್ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಈ ಬಂಧನದಿಂದ ಬಿಡುಗಡೆ ಕೋರಿ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿ ಕೋರ್ಟ್, ಮಧ್ಯಂತರ ಜಾಮೀನು ನೀಡಿದೆ.
- Ramesha M
- Updated on: Jun 12, 2025
- 3:45 pm
ಆರ್ಸಿಬಿ ಸಂಭ್ರಮಾಚರಣೆ ಕಾಲತ್ತುಳಿತ: ಹಲವು ಪ್ರಶ್ನೆಗಳನ್ನೆತ್ತಿದ ಬಿಜೆಪಿ, ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ
ಬೆಂಗಳೂರಿನಲ್ಲಿ ಆರ್ಸಿಬಿ ಐಪಿಎಲ್ ವಿಜಯೋತ್ಸವದ ಸಂದರ್ಭದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟ ಘಟನೆಯ ಕುರಿತು ಪ್ರತಿಪಕ್ಷ ನಾಯಕ ಅಶೋಕ್ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಜನದಟ್ಟಣೆ ನಿರ್ವಹಣೆ ವೈಫಲ್ಯ, ಅಸಮರ್ಪಕ ಭದ್ರತೆ, ಮತ್ತು ಮೂಲಸೌಕರ್ಯಗಳ ಕೊರತೆಯನ್ನು ಅವರು ಪ್ರಶ್ನಿಸಿದ್ದಾರೆ. ಸಮಗ್ರ ತನಿಖೆ ನಡೆಸುವಂತೆ ಮತ್ತು ಹೊಣೆಗಾರಿಕೆಯನ್ನು ನಿರ್ಧರಿಸುವಂತೆ ಅವರು ಆಗ್ರಹಿಸಿದ್ದಾರೆ.
- Ganapathi Sharma
- Updated on: Jun 12, 2025
- 2:31 pm
ಐಪಿಎಲ್ನಲ್ಲಿ ವಿಫಲ… ಕ್ರಿಕೆಟ್ನಿಂದ ದೂರ ಸರಿದ ರಶೀದ್ ಖಾನ್
IPL 2025 Rashid Khan: ರಶೀದ್ ಖಾನ್ ಈ ಬಾರಿಯ ಐಪಿಎಲ್ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೆ 15 ಪಂದ್ಯಗಳಲ್ಲೂ ಕಣಕ್ಕಿಳಿದಿದ್ದ ಅವರು ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಇದೀಗ ಕಳಪೆ ಫಾರ್ಮ್ ಕಾರಣ ಕ್ರಿಕೆಟ್ನಿಂದ ಕೆಲ ಕಾಲ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.
- Zahir Yusuf
- Updated on: Jun 12, 2025
- 1:54 pm
ಆರ್ಸಿಬಿ ಸಂಭ್ರಮಾಚರಣೆ ಕಾಲ್ತುಳಿತ: ಮಕ್ಕಳ ಹಕ್ಕುಗಳ ಆಯೋಗದಿಂದಲೂ ಕೇಸ್
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದು, ಮಕ್ಕಳಿಗೂ ಗಾಯಗಳಾಗಿರುವ ಬಗ್ಗೆ ಮಾಹಿತಿ ಇರುವುದರಿಂದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ಆಯೋಗವು ಸಿಐಡಿಗೆ ಪತ್ರ ಬರೆದು ಮಕ್ಕಳಿಗೆ ಆದ ಹಾನಿಯ ಬಗ್ಗೆ ಮಾಹಿತಿ ಕೋರಿದೆ.
- Prajwal Kumar NY
- Updated on: Jun 12, 2025
- 12:04 pm
2 ತಂಡಗಳಿಗೆ ನಿಕೋಲಸ್ ಪೂರನ್ ನಾಯಕ..!
Mumbai Indians: ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು (ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್) ಒಡೆತನದಲ್ಲಿ ಒಟ್ಟು 6 ತಂಡಗಳಿವೆ. ಅವುಗಳೆಂದರೆ ಮುಂಬೈ ಇಂಡಿಯನ್ಸ್ (ಪುರುಷರ ತಂಡ), ಮುಂಬೈ ಇಂಡಿಯನ್ಸ್ (ಮಹಿಳಾ ತಂಡ), ಎಂಐ ಎಮಿರೇಟ್ಸ್, ಎಂಐ ನ್ಯೂಯಾರ್ಕ್, ಎಂಐ ಕೇಪ್ಟೌನ್ ಹಾಗೂ ಎಂಐ ಓವಲ್ ಇನ್ವಿನ್ಸಿಬಲ್.
- Zahir Yusuf
- Updated on: Jun 12, 2025
- 10:54 am
RCB Team Sale: ಆರ್ಸಿಬಿ ಮಾರಾಟವಾದರೆ ಅದರ ಮೌಲ್ಯ ಎಷ್ಟು ಬಿಲಿಯನ್ ಗೊತ್ತೇ?: ಕೇಳಿದ್ರೆ ಶಾಕ್ ಆಗ್ತೀರಾ
Royal Challengers Bengaluru Sold: ಆರ್ಸಿಬಿ ತಂಡಕ್ಕೆ ಕಂಪನಿಯು ಬರೋಬ್ಬರಿ 2 ಬಿಲಿಯನ್ ವರೆಗೆ ಮೌಲ್ಯವನ್ನು ಪಡೆಯುವ ನಿರೀಕ್ಷೆಯಿದೆ. ಆದಾಗ್ಯೂ, ಇನ್ನೂ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಮತ್ತು ಇದರಲ್ಲಿ ಕಂಪನಿಯು ತನ್ನ ಪಾಲನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ. ಡಿಯಾಜಿಯೊದ ವಕ್ತಾರರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅದೇ ಸಮಯದಲ್ಲಿ, ಯುನೈಟೆಡ್ ಸ್ಪಿರಿಟ್ಸ್ನ ಪ್ರತಿನಿಧಿಯೂ ಸಹ ಪ್ರತಿಕ್ರಿಯಿಸಲಿಲ್ಲ.
- Vinay Bhat
- Updated on: Jun 12, 2025
- 9:18 am