AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL

IPL

2008 ರಲ್ಲಿ ಆರಂಭವಾದ ವಿಶ್ವ ಕ್ರಿಕೆಟ್​ನ ಅತ್ಯಂತ ಶ್ರೀಮಂತ ಟಿ20 ಲೀಗ್ ಐಪಿಎಲ್​ ಇದುವರೆಗೆ 18 ಆವೃತ್ತಿಗಳನ್ನು ಪೂರೈಸಿದೆ. ಇದೀಗ ಲೀಗ್​ನ 19ನೇ ಆವೃತ್ತಿಗೆ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿರುವ ಈ ಲೀಗ್​ನಲ್ಲಿ ಅತ್ಯಂತ ಯಶಸ್ವಿ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ತಲಾ ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿವೆ. ಉಳಿದಂತೆ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ 3 ಬಾರಿ, ಸನ್​ರೈಸರ್ಸ್​ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್, ಡೆಕ್ಕನ್ ಚಾರ್ಜಸ್, ಗುಜರಾತ್ ಟೈಟನ್ಸ್, ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ತಲಾ ಒಂದು ಬಾರಿ ಈ ಟ್ರೋಫಿಯನ್ನು ಎತ್ತಿಹಿಡಿದಿವೆ. 18 ವರ್ಷಗಳ ಬಳಿಕ ಈ ಟ್ರೋಫಿ ಎತ್ತಿಹಿಡಿದಿರುವ ಆರ್​ಸಿಬಿ ತಂಡ ಹಾಲಿ ಚಾಂಪಿಯನ್ ಆಗಿ 19ನೇ ಆವೃತ್ತಿಗೆ ಕಾಲಿಡಲಿದೆ.

ಇನ್ನೂ ಹೆಚ್ಚು ಓದಿ

IPL 2027: ಹಾರ್ದಿಕ್ ಪಾಂಡ್ಯ ಖರೀದಿ ಬಗ್ಗೆ ಮೌನ ಮುರಿದ ಸಿಎಸ್​ಕೆ ಸಿಇಒ

Hardik Pandya to CSK for IPL 2027: 2027ರ ಐಪಿಎಲ್‌ಗೆ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಬಿಟ್ಟು ಸಿಎಸ್‌ಕೆ ಸೇರುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು. ಕೆಕೆಆರ್, ರಾಜಸ್ಥಾನ್ ಕೂಡ ಆಸಕ್ತಿ ಹೊಂದಿವೆ ಎನ್ನಲಾಗಿತ್ತು. ಆದರೆ, ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಈ ಎಲ್ಲಾ ಸುದ್ದಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಇದು ಕೇವಲ ಊಹಾಪೋಹ. ಪಾಂಡ್ಯ ಅಥವಾ ಮುಂಬೈ ಇಂಡಿಯನ್ಸ್‌ನೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

IPLಗೆ ಗುಡ್ ಬೈ ಹೇಳಿದ ಹ್ಯಾರಿ ಬ್ರೂಕ್..!

Harry Brook: ಹ್ಯಾರಿ ಬ್ರೂಕ್​ ಈ ಹಿಂದೆ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿದಿದ್ದರು. ಈ ವೇಳೆ ಭರ್ಜರಿ ಶತಕ ಸಿಡಿಸಿ ಮಿಂಚಿದ್ದರು. ಇದಾದ ಬಳಿಕ 2025 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೂ ಆಯ್ಕೆಯಾಗಿದ್ದರು. ಇದಾಗ್ಯೂ ಅವರು ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿರಲಿಲ್ಲ. ಇದೀಗ ಇಂಗ್ಲೆಂಡ್ ಪರ ದೀರ್ಘಾವಧಿಯವರೆಗೆ ಆಡಲು ಫ್ರಾಂಚೈಸಿ ಲೀಗ್​ಗಳಿಂದ ಹಿಂದೆ ಸರಿಯುತ್ತಿರುವುದಾಗಿ ಹ್ಯಾರಿ ಬ್ರೂಕ್ ಸ್ಪಷ್ಟನೆ ನೀಡಿದ್ದಾರೆ.

ಹಾರ್ದಿಕ್ ಪಾಂಡ್ಯ ಖರೀದಿಗೆ ಸಾಲುಗಟ್ಟಿ ನಿಂತ ಫ್ರಾಂಚೈಸಿಗಳು; ಹೊಸ ಸೇರ್ಪಡೆ ಸಿಎಸ್​ಕೆ

Hardik Pandya's IPL 2027 Future: 2027ರ IPL ಗೂ ಮುನ್ನ ಕಳಪೆ ಪ್ರದರ್ಶನದಿಂದಾಗಿ ಹಾರ್ದಿಕ್ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್ ತಂಡದಿಂದ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಚೆನ್ನೈ ಸೂಪರ್ ಕಿಂಗ್ಸ್, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಸೇರಿದಂತೆ ಹಲವು ತಂಡಗಳು ಪಾಂಡ್ಯರನ್ನು ತಮ್ಮ ತೆಕ್ಕೆಗೆ ಹಾಕಿಕೊಳ್ಳಲು ಪೈಪೋಟಿ ನಡೆಸುತ್ತಿವೆ. ಆಲ್‌ರೌಂಡರ್ ಆಗಿ ಪಾಂಡ್ಯರ ಸಾಮರ್ಥ್ಯ ಮತ್ತು ಜನಪ್ರಿಯತೆ ಅವರನ್ನು ಆಕರ್ಷಕ ಆಟಗಾರನನ್ನಾಗಿ ಮಾಡಿದೆ.

RCB ಫ್ರಾಂಚೈಸಿ ಮಾರಾಟ: ಇನ್ಮುಂದೆ 2 ತಂಡಗಳಿಗೆ ಹೊಸ ಮಾಲೀಕರು!

IPL 2027, RCB : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಈ ಹಿಂದೆ ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿತ್ತು. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿತ್ತು. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಿ, ಮದ್ಯದ ಉದ್ಯಮದ ಮೇಲೆ ಗಮನ ಹರಿಸಲು ನಿರ್ಧರಿಸಿದೆ.

ಆಟಗಾರನ ಹೊಡೆದಾಟ… ಕ್ರಿಕೆಟಿಗ ಶಶಾಂಕ್ ಸಿಂಗ್ ವಿರುದ್ಧ FIR ದಾಖಲು

ಶಶಾಂಕ್ ಸಿಂಗ್ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ಪರ ಆಡುವ ಭಾರತದ ಅತ್ಯಂತ ಭರವಸೆಯ ಆಲ್-ರೌಂಡರ್. ತಮ್ಮ ಬಿರುಸಿನ ಬ್ಯಾಟಿಂಗ್ ಮತ್ತು ಅತ್ಯುತ್ತಮ ಫಿನಿಶಿಂಗ್ ಆಟದೊಂದಿಗೆ ಗಮನ ಸೆಳೆದಿರುವ ಇವರು, ಐಪಿಎಲ್​ನಲ್ಲಿ ಈವರೆಗೆ ಒಟ್ಟು 53 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 161 ಕ್ಕೂ ಹೆಚ್ಚಿನ ಸ್ಟ್ರೈಕ್ ರೇಟ್‌ನಲ್ಲಿ 905 ರನ್‌ಗಳನ್ನು ಗಳಿಸಿದ್ದಾರೆ.

15 ವರ್ಷ, 6 ಟ್ರೋಫಿ; ಟ್ರೋಲಿಗರಿಗೆ ಆಹಾರವಾದ ಸಂಜೀವ್ ಗೋಯೆಂಕಾ

Rishabh Pant: ಲಕ್ನೋ ಸೂಪರ್​ಜೈಂಟ್ಸ್ ತಂಡದಲ್ಲಿ ದಾಖಲೆಯ 27 ಕೋಟಿ ರೂ.ಗೆ ಸೇರಿದ್ದ ರಿಷಭ್ ಪಂತ್, ಕೇವಲ ಎರಡೇ ವರ್ಷಕ್ಕೆ ತಂಡದಿಂದ ಹೊರಬಿದ್ದಿದ್ದಾರೆ. ನಾಯಕನಾಗಿ ಮತ್ತು ಆಟಗಾರನಾಗಿ ವೈಫಲ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ. 2025ರ ಮೆಗಾ ಹರಾಜಿನ ಬಳಿಕ ಮಾಲೀಕ ಸಂಜೀವ್ ಗೋಯೆಂಕಾ, ಪಂತ್‌ರನ್ನು ಧೋನಿ-ರೋಹಿತ್‌ಗೆ ಹೋಲಿಸಿ ಭವಿಷ್ಯದ ನಾಯಕ ಎಂದು ಹೊಗಳಿದ್ದರು. ಈಗ ಅವರ ಈ ಯೂ-ಟರ್ನ್ ನೆಟ್ಟಿಗರ ಟ್ರೋಲಿಂಗ್‌ಗೆ ಕಾರಣವಾಗಿದೆ.

ಲಕ್ನೋ ಫ್ರಾಂಚೈಸಿಗೆ ಮೂರೇ ಪದಗಳಲ್ಲಿ ವಿದಾಯ ಹೇಳಿದ ರಿಷಭ್ ಪಂತ್..!

Rishabh Pant IPL: 2026ರ ಐಪಿಎಲ್ ನಂತರ ರಿಷಭ್ ಪಂತ್ ಲಕ್ನೋ ಸೂಪರ್ ಜೈಂಟ್ಸ್ ತೊರೆದು ಡೆಲ್ಲಿ ಕ್ಯಾಪಿಟಲ್ಸ್ ಸೇರಿದ್ದಾರೆ. ಈ ಟ್ರೇಡ್‌ನಲ್ಲಿ ಕುಲ್ದೀಪ್ ಯಾದವ್ ಲಕ್ನೋಗೆ ತೆರಳಿದ್ದಾರೆ. ಪಂತ್ ವೇತನ 27 ಕೋಟಿಯಿಂದ 15 ಕೋಟಿಗೆ ಇಳಿದಿದೆ. ನಾಯಕತ್ವ ರಾಜೀನಾಮೆಗೆ ಫ್ರಾಂಚೈಸಿಯೇ ಒತ್ತಡ ಹೇರಿತ್ತು ಎಂಬ ಮಾಹಿತಿ ಬಹಿರಂಗಗೊಂಡಿದೆ. ಪಂತ್ ಕೇವಲ ಮೂರು ಪದಗಳಲ್ಲಿ ಲಕ್ನೋ ತಂಡಕ್ಕೆ ಧನ್ಯವಾದ ಹೇಳಿದ್ದಾರೆ.

IPL 2027: ಎಷ್ಟು ಕೋಟಿ ಹೇಳಿ… ಹಾರ್ದಿಕ್ ಪಾಂಡ್ಯ ಖರೀದಿಗೆ KKR..!

Hardik Pandya: ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡವನ್ನು 38 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ ಎಂಐ ಪಡೆ ಗೆದ್ದಿರುವುದು ಕೇವಲ 15 ಮ್ಯಾಚ್​ಗಳಲ್ಲಿ ಮಾತ್ರ. ಅಂದರೆ ಬರೋಬ್ಬರಿ 23 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸೋಲನುಭವಿಸಿದೆ. ಹೀಗಾಗಿಯೇ ಹಾರ್ದಿಕ್ ಪಾಂಡ್ಯರನ್ನು ಟ್ರೇಡ್ ಮಾಡಲು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮುಂದಾಗಿದೆ.

IPL 2027: ಬಿಗ್ ಟ್ರೇಡ್… ಇಬ್ಬರು ಆಟಗಾರರ ತಂಡಗಳು ಅದಲು-ಬದಲು

Rishabh Pant: ರಿಷಭ್ ಪಂತ್ ಕಳೆದ ಎರಡು ಐಪಿಎಲ್ ಸೀಸನ್‌ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಪರವಾಗಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಐಪಿಎಲ್ 2025 ರಲ್ಲಿ ಎಲ್​ಎಸ್​ಜಿ ತಂಡದ ನಾಯಕನಾಗಿ ಕಣಕ್ಕಿಳಿದ ಪಂತ್ 14 ಪಂದ್ಯಗಳಲ್ಲಿ 312 ರನ್​ ಮಾತ್ರ ಕಲೆಹಾಕಿದ್ದರು. ಇನ್ನು ಐಪಿಎಲ್ 2026 ರಲ್ಲಿ ಪಂತ್ ಕಲೆಹಾಕಿದ್ದು 269 ರನ್​ಗಳು ಮಾತ್ರ. ಹೀಗಾಗಿಯೇ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ರಿಷಭ್ ಪಂತ್ ಅವರನ್ನು ಟ್ರೇಡ್ ಆಯ್ಕೆ ಮೂಲಕ ಮಾರಾಟ ಮಾಡಿದೆ.

ಹಾರ್ದಿಕ್​ಗಾಗಿ ಸ್ಫೋಟಕ ಆರಂಭಿಕನನ್ನೇ ಬಿಟ್ಟುಕೊಡಲು ಮುಂದಾದ ರಾಜಸ್ಥಾನ್ ರಾಯಲ್ಸ್

Mumbai Indians Plans: ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನದಿಂದ, ಫ್ರಾಂಚೈಸಿ ಬದಲಾವಣೆಗೆ ಮುಂದಾಗಿದೆ. ಹಾರ್ದಿಕ್‌ರನ್ನು ರಾಜಸ್ಥಾನ್ ರಾಯಲ್ಸ್‌ಗೆ ಟ್ರೇಡ್ ಮಾಡಿ, ಯಶಸ್ವಿ ಜೈಸ್ವಾಲ್‌ರನ್ನು ತಂಡಕ್ಕೆ ಸೇರಿಸಿಕೊಳ್ಳಲು ಮಾತುಕತೆ ನಡೆದಿದೆ. ರೋಹಿತ್ ಶರ್ಮಾ ಬದಲಿಗೆ ಜೈಸ್ವಾಲ್ ಅವರನ್ನು ಭವಿಷ್ಯದ ಆರಂಭಿಕರನ್ನಾಗಿ ಮಾಡಲು ಮುಂಬೈ ಚಿಂತಿಸಿದೆ. ತಿಲಕ್ ವರ್ಮಾಗೆ ನಾಯಕತ್ವ ನೀಡುವ ಸಾಧ್ಯತೆಯೂ ಇದೆ. ಇದು ಮುಂಬೈ ಇಂಡಿಯನ್ಸ್‌ನ ಮುಂದಿನ ಆವೃತ್ತಿಗೆ ದೊಡ್ಡ ಬದಲಾವಣೆಯಾಗಿದೆ.

12 ಕೋಟಿ ರೂ. ಮೈನಸ್… ಡೆಲ್ಲಿ ಕ್ಯಾಪಿಟಲ್ಸ್​ಗೆ ರಿಷಭ್ ರಿಎಂಟ್ರಿ!

Rishabh Pant: ರಿಷಭ್ ಪಂತ್ ಕಳೆದ ಎರಡು ಐಪಿಎಲ್ ಸೀಸನ್‌ಗಳಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಪರವಾಗಿ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಐಪಿಎಲ್ 2025 ರಲ್ಲಿ ಎಲ್​ಎಸ್​ಜಿ ತಂಡದ ನಾಯಕನಾಗಿ ಕಣಕ್ಕಿಳಿದ ಪಂತ್ 14 ಪಂದ್ಯಗಳಲ್ಲಿ 312 ರನ್​ ಮಾತ್ರ ಕಲೆಹಾಕಿದ್ದರು. ಇನ್ನು ಐಪಿಎಲ್ 2026 ರಲ್ಲಿ ಪಂತ್ ಕಲೆಹಾಕಿದ್ದು 269 ರನ್​ಗಳು ಮಾತ್ರ. ಹೀಗಾಗಿಯೇ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ರಿಷಭ್ ಪಂತ್ ಅವರನ್ನು ಟ್ರೇಡ್ ಆಯ್ಕೆ ಮೂಲಕ ಮಾರಾಟ ಮಾಡಿದೆ.

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಕೋಚ್?

Delhi Capitals Shake-up: ಐಪಿಎಲ್ 2026 ರಲ್ಲಿ ಪ್ಲೇಆಫ್‌ಗೆ ಅರ್ಹತೆ ಪಡೆಯದ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಮಹತ್ವದ ಬದಲಾವಣೆಗಳಾಗಲಿವೆ. ಅಕ್ಷರ್ ಪಟೇಲ್ ಬದಲು ಕನ್ನಡಿಗ ಕೆಎಲ್ ರಾಹುಲ್‌ಗೆ ನಾಯಕತ್ವ ನೀಡುವ ಮತ್ತು ರಿಷಭ್ ಪಂತ್ ಅವರನ್ನು ತಂಡಕ್ಕೆ ಮರಳಿ ಕರೆತರುವ ಮಾತುಕತೆಗಳು ನಡೆಯುತ್ತಿವೆ. ಜೊತೆಗೆ, ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಡೆಲ್ಲಿ ಕ್ಯಾಪಿಟಲ್ಸ್‌ನ ಸಹಾಯಕ ಕೋಚ್ ಆಗಿ ಸೇರಲಿದ್ದಾರೆ ಎಂದು ವರದಿಯಾಗಿದೆ. ಈ ನಡೆಗಳು ತಂಡಕ್ಕೆ ಹೊಸ ಚೈತನ್ಯ ನೀಡುವ ನಿರೀಕ್ಷೆಯಿದೆ.

1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ