IPL
2008 ರಲ್ಲಿ ಆರಂಭವಾದ ವಿಶ್ವ ಕ್ರಿಕೆಟ್ನ ಅತ್ಯಂತ ಶ್ರೀಮಂತ ಟಿ20 ಲೀಗ್ ಐಪಿಎಲ್ ಇದುವರೆಗೆ 18 ಆವೃತ್ತಿಗಳನ್ನು ಪೂರೈಸಿದೆ. ಇದೀಗ ಲೀಗ್ನ 19ನೇ ಆವೃತ್ತಿಗೆ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿರುವ ಈ ಲೀಗ್ನಲ್ಲಿ ಅತ್ಯಂತ ಯಶಸ್ವಿ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ತಲಾ ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿವೆ. ಉಳಿದಂತೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 3 ಬಾರಿ, ಸನ್ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್, ಡೆಕ್ಕನ್ ಚಾರ್ಜಸ್, ಗುಜರಾತ್ ಟೈಟನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ತಲಾ ಒಂದು ಬಾರಿ ಈ ಟ್ರೋಫಿಯನ್ನು ಎತ್ತಿಹಿಡಿದಿವೆ. 18 ವರ್ಷಗಳ ಬಳಿಕ ಈ ಟ್ರೋಫಿ ಎತ್ತಿಹಿಡಿದಿರುವ ಆರ್ಸಿಬಿ ತಂಡ ಹಾಲಿ ಚಾಂಪಿಯನ್ ಆಗಿ 19ನೇ ಆವೃತ್ತಿಗೆ ಕಾಲಿಡಲಿದೆ.
IPL 2026: ಒಂದೇ ಸ್ಟೇಡಿಯಂ ಮೇಲೆ RCB ಮತ್ತು RR ಕಣ್ಣು..!
IPL 2026: 2025, ಜೂನ್ 4 ರಂದು ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟಿದ್ದರು. ಈ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಲೋಪದೋಷಗಳು ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಈ ದುರಂತದ ಬಳಿಕ ಬಿಸಿಸಿಐ ಬೆಂಗಳೂರಿನಲ್ಲಿ ಯಾವುದೇ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ.
- Zahir Yusuf
- Updated on: Jan 7, 2026
- 7:54 am
IPL: ಬಾಂಗ್ಲಾದೇಶ ಸೇರಿದಂತೆ ಈ ದೇಶಗಳಲ್ಲಿ ಐಪಿಎಲ್ ಪ್ರಸಾರ ನಿಷೇಧ
IPL Ban: ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್ನಿಂದ ಕೈಬಿಟ್ಟ ನಂತರ, ಬಾಂಗ್ಲಾದೇಶ ಸರ್ಕಾರ ಐಪಿಎಲ್ ಪ್ರಸಾರವನ್ನು ನಿಷೇಧಿಸಿದೆ. ಅಲ್ಲದೆ, ಭಾರತದಲ್ಲಿ ನಡೆಯುವ ಟಿ20 ವಿಶ್ವಕಪ್ ಬಹಿಷ್ಕರಿಸುವ ಎಚ್ಚರಿಕೆ ನೀಡಿದೆ. ಪಾಕಿಸ್ತಾನವೂ ಐಪಿಎಲ್ ಪ್ರಸಾರ ನಿಷೇಧಿಸಿದೆ. ಕ್ರಿಕೆಟ್ ಹೆಚ್ಚು ಜನಪ್ರಿಯವಲ್ಲದ ಕೆಲವು ದೇಶಗಳಲ್ಲೂ ಐಪಿಎಲ್ ಪ್ರಸಾರವಾಗುವುದಿಲ್ಲ. ಬಾಂಗ್ಲಾದೇಶದಲ್ಲಿ ಐಪಿಎಲ್ ದೊಡ್ಡ ಅಭಿಮಾನಿ ಬಳಗ ಹೊಂದಿದೆ. ಈ ನಿಷೇಧದಿಂದ ಅಭಿಮಾನಿಗಳಿಗೆ ನಿರಾಸೆಯಾಗಿದೆ.
- pruthvi Shankar
- Updated on: Jan 6, 2026
- 10:24 pm
IPL 2026: ಬಾಂಗ್ಲಾದೇಶ್ನಲ್ಲಿ ಐಪಿಎಲ್ ಬ್ಯಾನ್: ಮುಂದೇನು?
ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದಾಳಿಯನ್ನು ಖಂಡಿಸಿ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಬಾಂಗ್ಲಾ ಆಟಗಾರರನ್ನು ಕೈ ಬಿಡುವಂತೆ ಪ್ರತಿಭಟನೆಗಳು ನಡೆದಿದ್ದವು. ಇದರ ಬೆನ್ನಲ್ಲೇ ಬಿಸಿಸಿಐ, ಕೆಕೆಆರ್ ತಂಡದಲ್ಲಿದ್ದ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈ ಬಿಡುವಂತೆ ಸೂಚಿಸಿತ್ತು. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದಾರೆ.
- Zahir Yusuf
- Updated on: Jan 6, 2026
- 9:24 am
IPL 2026: ಬಾಂಗ್ಲಾದೇಶ್ನಲ್ಲಿ ಐಪಿಎಲ್ ಬ್ಯಾನ್?
IPL 2026: ಬಾಂಗ್ಲಾದೇಶದಲ್ಲಿನ ಹಿಂದೂಗಳ ಮೇಲಿನ ದಾಳಿಯನ್ನು ಖಂಡಿಸಿ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಬಾಂಗ್ಲಾ ಆಟಗಾರರನ್ನು ಕೈ ಬಿಡುವಂತೆ ಪ್ರತಿಭಟನೆಗಳು ನಡೆದಿದ್ದವು. ಇದರ ಬೆನ್ನಲ್ಲೇ ಬಿಸಿಸಿಐ, ಕೆಕೆಆರ್ ತಂಡದಲ್ಲಿದ್ದ ಮುಸ್ತಫಿಝುರ್ ರೆಹಮಾನ್ ಅವರನ್ನು ಕೈ ಬಿಡುವಂತೆ ಸೂಚಿಸಿತ್ತು. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಮುಸ್ತಫಿಝುರ್ ರೆಹಮಾನ್ ಅವರನ್ನು ತಂಡದಿಂದ ಕೈ ಬಿಟ್ಟಿದ್ದಾರೆ. ಇದರ ಬೆನ್ನಲ್ಲೇ ಬಾಂಗ್ಲಾದೇಶ್ನಲ್ಲಿ ಐಪಿಎಲ್ ನಿಷೇಧಿಸಲು ಮುಂದಾಗಿದ್ದಾರೆ.
- Zahir Yusuf
- Updated on: Jan 4, 2026
- 10:55 am
IPL 2026: ಮುಸ್ತಾಫಿಜುರ್ ರೆಹಮಾನ್ ಐಪಿಎಲ್ನಿಂದ ನಿಷೇಧ? ಸ್ಪಷ್ಟನೆ ನೀಡಿದ ಬಿಸಿಸಿಐ
Mustafizur Rahman IPL 2026: ಐಪಿಎಲ್ 2026ರ ಮಿನಿ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಭಾರತ-ಬಾಂಗ್ಲಾದೇಶ ರಾಜತಾಂತ್ರಿಕ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಶಿವಸೇನೆ ಸೇರಿದಂತೆ ಹಲವರು ಅವರ ನಿಷೇಧಕ್ಕೆ ಆಗ್ರಹಿಸಿದ್ದಾರೆ. ಆದರೆ, ಬಿಸಿಸಿಐ ಈ ಕುರಿತು ಸರ್ಕಾರದಿಂದ ಯಾವುದೇ ನಿರ್ಬಂಧದ ಸೂಚನೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ಮುಸ್ತಾಫಿಜುರ್ IPL ಆಡುವುದು ಖಚಿತವಾಗಿದೆ.
- pruthvi Shankar
- Updated on: Jan 2, 2026
- 3:48 pm
ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್ಗಳನ್ನು ಎಸೆದ CSK ಆಟಗಾರ
Aman Khan Unwanted Record: ಪುದುಚೇರಿ ತಂಡದ ನಾಯಕ ಅಮಾನ್ ಖಾನ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಕಣಕ್ಕಿಳಿಯಲಿದ್ದಾರೆ. ಐಪಿಎಲ್ 2026ರ ಮಿನಿ ಹರಾಜಿನ ಮೂಲಕ ಸಿಎಸ್ಕೆ ಅಮಾನ್ ಖಾನ್ ಅವರನ್ನು 40 ಲಕ್ಷ ರೂ.ಗೆ ಖರೀದಿಸಿದ್ದಾರೆ.
- Zahir Yusuf
- Updated on: Dec 30, 2025
- 2:00 pm
IPL 2026: ಆರ್ಸಿಬಿಗೆ ತಲೆನೋವಾದ 7 ಕೋಟಿ ಮೊತ್ತದ ಸ್ಟಾರ್ ಆಲ್ರೌಂಡರ್ ಕಳಪೆ ಪ್ರದರ್ಶನ
Venkatesh Iyer's Poor Form: ವೆಂಕಟೇಶ್ ಅಯ್ಯರ್ ವಿಜಯ್ ಹಜಾರೆ ಟ್ರೋಫಿಯಲ್ಲಿ ನೀರಸ ಪ್ರದರ್ಶನ ನೀಡಿದ್ದು, ಮೂರು ಪಂದ್ಯಗಳಲ್ಲಿ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾಗಿದ್ದಾರೆ. ಆರ್ಸಿಬಿ 7 ಕೋಟಿಗೆ ಖರೀದಿಸಿದ ಅಯ್ಯರ್ ಕಳಪೆ ಫಾರ್ಮ್, ಮುಂಬರುವ ಐಪಿಎಲ್ಗೆ ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅವರ ಬದಲಿಗೆ ತಂಡದಲ್ಲಿ ಬೇರೆ ಆಯ್ಕೆಗಳೂ ಇವೆ ಎಂಬುದು ಗಮನಾರ್ಹ.
- pruthvi Shankar
- Updated on: Dec 29, 2025
- 10:34 pm
IPL 2026: ಪ್ರಮುಖ ಆಟಗಾರ ಗಾಯಾಳು: RCBಗೆ ಚಿಂತೆ ಶುರು
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಯ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ 17 ಆಟಗಾರರನ್ನು ರಿಟೈನ್ ಮಾಡಿಕೊಂಡಿತ್ತು. ಅಲ್ಲದೆ ಮಿನಿ ಆಕ್ಷನ್ ಮೂಲಕ 8 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಐಪಿಎಲ್ 2026 ಕ್ಕಾಗಿ ಸಕಲ ರೀತಿಯಲ್ಲೂ ಸಜ್ಜಾಗಿದೆ.
- Zahir Yusuf
- Updated on: Dec 27, 2025
- 12:54 pm
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
Dubai Capitals vs Sharjah Warriorz: ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಶಾರ್ಜಾ ವಾರಿಯರ್ಸ್ ಹಾಗೂ ದುಬೈ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಶಾರ್ಜಾ ವಾರಿಯರ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 134 ರನ್ಗಳಿಸಲಷ್ಟೇ ಶಕ್ತರಾಗಿದ್ದರು.
- Zahir Yusuf
- Updated on: Dec 25, 2025
- 10:24 am
IPL 2026: ಬಾಂಗ್ಲಾದಲ್ಲಿ ಹಿಂದೂಗಳ ಹಿಂಸಾಚಾರ; ಕೆಕೆಆರ್ ತಂಡಕ್ಕೆ ಭಾರತೀಯರಿಂದ ಹಿಡಿಶಾಪ
KKR IPL 2026: 2026ರ ಐಪಿಎಲ್ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಬಾಂಗ್ಲಾದೇಶದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿಸಿದ್ದಕ್ಕೆ ಭಾರತೀಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ಕಾರಣ ನೆಟ್ಟಿಗರು ಕೆಕೆಆರ್ ಮತ್ತು ಬಿಸಿಸಿಐ ವಿರುದ್ಧ ಆಕ್ರೋಶಗೊಂಡಿದ್ದು, ತಂಡವನ್ನು ಬಹಿಷ್ಕರಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸಿದ್ದಾರೆ.
- pruthvi Shankar
- Updated on: Dec 23, 2025
- 6:06 pm
ಭಾರತೀಯ ಬೌಲರ್ಗಳನ್ನು ಸೌತ್ ಆಫ್ರಿಕಾಗೆ ಕಳುಹಿಸಲಿರುವ LSG
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮಿನಿ ಹರಾಜಿಗೂ ಮುನ್ನ 19 ಆಟಗಾರರನ್ನು ಉಳಿಸಿಕೊಂಡಿದ್ದ ಲಕ್ನೋ ಸೂಪರ್ ಜೈಂಟ್ಸ್ ಆಕ್ಷನ್ ಮೂಲಕ 6 ಆಟಗಾರರನ್ನು ಖರೀದಿಸಿದೆ. ಅದರಂತೆ ಮುಂಬರುವ ಸೀಸನ್ನಲ್ಲಿ ಶ್ರೀಲಂಕಾದ ವನಿಂದು ಹಸರಂಗ, ಸೌತ್ ಆಫ್ರಿಕಾದ ಅನ್ರಿಕ್ ನೋಕಿಯ, ಆಸ್ಟ್ರೇಲಿಯಾದ ಜೋಶ್ ಇಂಗ್ಲಿಸ್ LSG ಪರ ಕಣಕ್ಕಿಳಿಯಲಿದ್ದಾರೆ.
- Zahir Yusuf
- Updated on: Dec 23, 2025
- 10:24 am
IPL 2026: ಡೆಲ್ಲಿ ತಂಡದ ನಾಯಕತ್ವದಿಂದ ಅಕ್ಷರ್ ಪಟೇಲ್ ಔಟ್; ಕನ್ನಡಿಗನಿಗೆ ನಾಯಕತ್ವ ಪಟ್ಟ
Delhi Capitals IPL 2026: ಡೆಲ್ಲಿ ಕ್ಯಾಪಿಟಲ್ಸ್ 2026ರ ಐಪಿಎಲ್ಗೆ ನಾಯಕತ್ವ ಬದಲಾವಣೆ ಮಾಡುತ್ತಿದೆ. ಅಕ್ಷರ್ ಪಟೇಲ್ ಬದಲು ಕೆಎಲ್ ರಾಹುಲ್ ನಾಯಕರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಚ್ಚರಿಯೆಂದರೆ, ಡಿಸಿ ನಾಯಕತ್ವ ಕಳೆದುಕೊಂಡ ಅಕ್ಷರ್, ಐಸಿಸಿ ಟಿ20 ವಿಶ್ವಕಪ್ 2026ಕ್ಕೆ ಟೀಂ ಇಂಡಿಯಾದ ಉಪನಾಯಕರಾಗಿ ಬಡ್ತಿ ಪಡೆದಿದ್ದಾರೆ. ಅವರ ಸ್ಥಿರ ಪ್ರದರ್ಶನದಿಂದಾಗಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.
- pruthvi Shankar
- Updated on: Dec 22, 2025
- 7:17 pm