AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL

IPL

2008 ರಲ್ಲಿ ಆರಂಭವಾದ ವಿಶ್ವ ಕ್ರಿಕೆಟ್​ನ ಅತ್ಯಂತ ಶ್ರೀಮಂತ ಟಿ20 ಲೀಗ್ ಐಪಿಎಲ್​ ಇದುವರೆಗೆ 18 ಆವೃತ್ತಿಗಳನ್ನು ಪೂರೈಸಿದೆ. ಇದೀಗ ಲೀಗ್​ನ 19ನೇ ಆವೃತ್ತಿಗೆ ಡಿಸೆಂಬರ್ 16 ರಂದು ಮಿನಿ ಹರಾಜು ನಡೆಯಲಿದೆ. ಒಟ್ಟು 10 ತಂಡಗಳು ಪಾಲ್ಗೊಳ್ಳುತ್ತಿರುವ ಈ ಲೀಗ್​ನಲ್ಲಿ ಅತ್ಯಂತ ಯಶಸ್ವಿ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ತಲಾ ಐದು ಬಾರಿ ಚಾಂಪಿಯನ್ ಪಟ್ಟಕ್ಕೇರಿವೆ. ಉಳಿದಂತೆ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ 3 ಬಾರಿ, ಸನ್​ರೈಸರ್ಸ್​ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್, ಡೆಕ್ಕನ್ ಚಾರ್ಜಸ್, ಗುಜರಾತ್ ಟೈಟನ್ಸ್, ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡಗಳು ತಲಾ ಒಂದು ಬಾರಿ ಈ ಟ್ರೋಫಿಯನ್ನು ಎತ್ತಿಹಿಡಿದಿವೆ. 18 ವರ್ಷಗಳ ಬಳಿಕ ಈ ಟ್ರೋಫಿ ಎತ್ತಿಹಿಡಿದಿರುವ ಆರ್​ಸಿಬಿ ತಂಡ ಹಾಲಿ ಚಾಂಪಿಯನ್ ಆಗಿ 19ನೇ ಆವೃತ್ತಿಗೆ ಕಾಲಿಡಲಿದೆ.

ಇನ್ನೂ ಹೆಚ್ಚು ಓದಿ

IPL 2026: ಡೆಲ್ಲಿ ತಂಡದ ನಾಯಕತ್ವದಿಂದ ಅಕ್ಷರ್​ ಪಟೇಲ್​ ಔಟ್; ಕನ್ನಡಿಗನಿಗೆ ನಾಯಕತ್ವ ಪಟ್ಟ

Delhi Capitals IPL 2026: ಡೆಲ್ಲಿ ಕ್ಯಾಪಿಟಲ್ಸ್ 2026ರ ಐಪಿಎಲ್‌ಗೆ ನಾಯಕತ್ವ ಬದಲಾವಣೆ ಮಾಡುತ್ತಿದೆ. ಅಕ್ಷರ್ ಪಟೇಲ್ ಬದಲು ಕೆಎಲ್ ರಾಹುಲ್ ನಾಯಕರಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಚ್ಚರಿಯೆಂದರೆ, ಡಿಸಿ ನಾಯಕತ್ವ ಕಳೆದುಕೊಂಡ ಅಕ್ಷರ್, ಐಸಿಸಿ ಟಿ20 ವಿಶ್ವಕಪ್ 2026ಕ್ಕೆ ಟೀಂ ಇಂಡಿಯಾದ ಉಪನಾಯಕರಾಗಿ ಬಡ್ತಿ ಪಡೆದಿದ್ದಾರೆ. ಅವರ ಸ್ಥಿರ ಪ್ರದರ್ಶನದಿಂದಾಗಿ ಬಿಸಿಸಿಐ ಈ ನಿರ್ಧಾರ ಕೈಗೊಂಡಿದೆ.

IPL 2026: ಈ ಆಟಗಾರನನ್ನು ಖರೀದಿಸಿದ್ದೇ ಕೆಎಲ್ ರಾಹುಲ್​ಗಾಗಿ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 19ನೇ ಸೀಸನ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಜೋಡಿ ಬದಲಾಗುವುದು ಖಚಿತ. ಏಕೆಂದರೆ ಕಳೆದ ಬಾರಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಜೇಕ್ ಫ್ರೇಸರ್ ಮೆಕ್ ಗುರ್ಕ್ ಅವರನ್ನು ಡಿಸಿ ಫ್ರಾಂಚೈಸಿ ತಂಡದಿಂದ ಕೈ ಬಿಟ್ಟಿದೆ. ಹೀಗಾಗಿ ಕೆಎಲ್ ರಾಹುಲ್ ಹಾಗೂ ಬೆನ್ ಡಕೆಟ್ ಇನಿಂಗ್ಸ್ ಆರಂಭಿಸುವ ಸಾಧ್ಯತೆಯಿದೆ.

NZ vs WI: ಐಪಿಎಲ್​ನಲ್ಲಿ ಹರಾಜಾಗದ ಆಟಗಾರ ಒಂದೇ ಪಂದ್ಯದಲ್ಲಿ 327 ರನ್ ಚಚ್ಚಿದ

Devon Conway's Record-Breaking Test Century: ಐಪಿಎಲ್ 2026 ಹರಾಜಿನಲ್ಲಿ ಮಾರಾಟವಾಗದ ಡೆವೊನ್ ಕಾನ್ವೇ, ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಒಂದೇ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ದ್ವಿಶತಕ (227) ಮತ್ತು ಶತಕ (100) ಗಳಿಸಿ ಒಟ್ಟು 327 ರನ್ ಬಾರಿಸಿದ್ದಾರೆ. ಈ ಮೂಲಕ ನ್ಯೂಜಿಲೆಂಡ್ ಪರ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಆಗಿ ಇತಿಹಾಸ ನಿರ್ಮಿಸಿ, ಐಪಿಎಲ್ ಫ್ರಾಂಚೈಸಿಗಳಿಗೆ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ಆರ್​ಸಿಬಿ ಸೇರಿದಂತೆ ಈ 3 ಐಪಿಎಲ್ ತಂಡಗಳ ಆಟಗಾರರಿಗಿಲ್ಲ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ

2026 T20 World Cup India squad: 2026ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಅಜಿತ್ ಅಗರ್ಕರ್ ಸಮಿತಿ ಆಯ್ಕೆ ಮಾಡಿದ 15 ಸದಸ್ಯರ ತಂಡದಲ್ಲಿ ಮುಂಬೈ ಇಂಡಿಯನ್ಸ್‌ನ 4 ಆಟಗಾರರು ಸೇರಿದಂತೆ ಏಳು ಐಪಿಎಲ್ ತಂಡಗಳ ಆಟಗಾರರಿಗೆ ಸ್ಥಾನ ಸಿಕ್ಕಿದೆ. ಆದರೆ, ಆರ್‌ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳಿಂದ ಒಬ್ಬರೂ ಆಯ್ಕೆಯಾಗಿಲ್ಲ. ಈ ಬಾರಿ ಭಾರತವೇ ಚಾಂಪಿಯನ್ ಆಗುವ ವಿಶ್ವಾಸವಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್: ಈ ಷರತ್ತುಗಳನ್ನು ಪಾಲಿಸಲೇಬೇಕು!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಮತ್ತು ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದೆ. ಗೃಹ ಇಲಾಖೆ ಸೂಚನೆ ಮೇರೆಗೆ ಬೆಂಗಳೂರು ಪೊಲೀಸರು 17 ಅಂಶಗಳ ಮಾರ್ಗಸೂಚಿ ಹೊರಡಿಸಿದ್ದಾರೆ. ಪ್ರವೇಶ ದ್ವಾರ ಸುಧಾರಣೆ, ಪಾರ್ಕಿಂಗ್ ವ್ಯವಸ್ಥೆ, ಪ್ರೇಕ್ಷಕರ ಸಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಸೇರಿದಂತೆ ಹಲವು ಬದಲಾವಣೆಗಳನ್ನು ಕಡ್ಡಾಯಗೊಳಿಸಲಾಗಿದೆ. ಮಾರ್ಚ್‌ ವೇಳೆಗೆ ಸಿವಿಲ್ ಕಾಮಗಾರಿಗಳು ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ಐಪಿಎಲ್ ನಡೆಯೋದು ಪಕ್ಕಾ ಆಗಿದೆ.

  • Kiran HV
  • Updated on: Dec 19, 2025
  • 11:27 am

ಮೂಲ ಬೆಲೆ 30 ಲಕ್ಷ, ಖರೀದಿಯಾಗಿದ್ದು ಕೋಟಿಗೆ! ಅನ್‌ಕ್ಯಾಪ್ಡ್ ಆಟಗಾರರ ಬದುಕು ಬದಲಿಸಿದ ಐಪಿಎಲ್

IPL 2026 Mini Auction: ಐಪಿಎಲ್ 2026 ರ ಮಿನಿ ಹರಾಜು ಹಲವು ಅಚ್ಚರಿಗಳಿಗೆ ಸಾಕ್ಷಿಯಾಗಿದೆ. ಮೂಲಬೆಲೆ ಹೊಂದಿದ್ದ ಅನ್‌ಕ್ಯಾಪ್ಡ್ ಆಟಗಾರರು ಕೋಟಿ ಕೋಟಿ ಮೊತ್ತಕ್ಕೆ ಹರಾಜಾಗಿ ರಾತ್ರೋರಾತ್ರಿ ಕೋಟ್ಯಾಧಿಪತಿಗಳಾದರು. ಚೆನ್ನೈ ಸೂಪರ್ ಕಿಂಗ್ಸ್ ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮಾ ಅವರಂತಹ ಅನ್‌ಕ್ಯಾಪ್ಡ್ ಆಟಗಾರರಿಗೆ ಭಾರಿ ಮೊತ್ತ ನೀಡಿ ಇತಿಹಾಸ ನಿರ್ಮಿಸಿತು.

IPL 2026: ಇಬ್ಬರು ವಿಕೆಟ್​ಕೀಪರ್​ಗಳನ್ನು ಖರೀದಿಸಿದ ಸಿಎಸ್​ಕೆ; ಐಪಿಎಲ್‌ನಲ್ಲಿ ಧೋನಿ ಯುಗಾಂತ್ಯ?

MS Dhoni retirement: ಕಳೆದ ಎರಡು ಆವೃತ್ತಿಗಳಲ್ಲಿ ಕಳಪೆ ಪ್ರದರ್ಶನದ ನಂತರ, CSK 2026ರ ಐಪಿಎಲ್‌ಗಾಗಿ ಬಲಿಷ್ಠ ತಂಡವನ್ನು ಕಟ್ಟಿದೆ. ಸಂಜು ಸ್ಯಾಮ್ಸನ್, ಪ್ರಶಾಂತ್ ವೀರ್ ಮತ್ತು ಕಾರ್ತಿಕ್ ಶರ್ಮಾ ಅವರನ್ನು ಸೇರಿಸಿಕೊಂಡಿದೆ. ಇಬ್ಬರು ವಿಕೆಟ್ ಕೀಪರ್‌ಗಳ ಆಗಮನವು ಧೋನಿಯ ನಿವೃತ್ತಿ ವದಂತಿಗಳಿಗೆ ಪುಷ್ಟಿ ನೀಡಿದೆ. ರಾಬಿನ್ ಉತ್ತಪ್ಪ ಕೂಡ ಇದು ಧೋನಿಯ ಕೊನೆಯ ಐಪಿಎಲ್ ಸೀಸನ್ ಆಗಿರಬಹುದು ಎಂದು ಹೇಳಿದ್ದು, ಹೊಸ ವಿಕೆಟ್ ಕೀಪರ್‌ಗೆ ದಾರಿ ಮಾಡಿಕೊಡಬಹುದು.

IPL 2026: ‘ನನಗೆ ಹೊಸ ಜೀವನ ಸಿಕ್ಕಿದೆ’; ಸಿಎಸ್​ಕೆಗೆ ಧನ್ಯವಾದ ತಿಳಿಸಿದ ಸರ್ಫರಾಜ್ ಖಾನ್

Sarfaraz Khan IPL Comeback: ದೇಶಿ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗದೆ ನಿರಾಸೆಗೊಂಡಿದ್ದ ಸರ್ಫರಾಜ್ ಖಾನ್‌ಗೆ ಐಪಿಎಲ್ ಹರಾಜಿನಲ್ಲಿ ಆರಂಭದಲ್ಲಿ ಆಘಾತ ಎದುರಾಗಿತ್ತು. ಆದರೆ, ಅಂತಿಮವಾಗಿ ಸಿಎಸ್‌ಕೆ ಫ್ರಾಂಚೈಸಿ ಅವರನ್ನು ಖರೀದಿಸುವ ಮೂಲಕ ಐಪಿಎಲ್ ವೃತ್ತಿಜೀವನಕ್ಕೆ ಹೊಸ ತಿರುವು ನೀಡಿದೆ. ಎರಡು ವರ್ಷಗಳ ನಂತರ ಸರ್ಫರಾಜ್ ಐಪಿಎಲ್‌ನಲ್ಲಿ ಕಣಕ್ಕಿಳಿಯಲಿದ್ದಾರೆ. ತಮ್ಮ ಕಮ್‌ಬ್ಯಾಕ್‌ಗೆ ಸಿಎಸ್‌ಕೆ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ.

IPL 2026: ಆರ್​ಸಿಬಿ ಫ್ಯಾನ್ಸ್​ಗೆ ಸಿಹಿ ಸುದ್ದಿ; ಚಿನ್ನಸ್ವಾಮಿಯಲ್ಲಿ ಐಪಿಎಲ್ 2026 ರ ಉದ್ಘಾಟನಾ ಪಂದ್ಯ

IPL 2026 Opening Ceremony: ಜೂನ್ 4ರ ದುರ್ಘಟನೆಯ ಬಳಿಕ ಸ್ಥಗಿತಗೊಂಡಿದ್ದ ಬೆಂಗಳೂರು ಕ್ರಿಕೆಟ್‌ಗೆ ಶುಭ ಸುದ್ದಿ ಸಿಕ್ಕಿದೆ. ವೆಂಕಟೇಶ್ ಪ್ರಸಾದ್ ಕೆಎಸ್‌ಸಿಎ ಅಧ್ಯಕ್ಷರಾದ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಚಟುವಟಿಕೆಗಳು ಪುನರಾರಂಭಗೊಂಡಿವೆ. 2026ರ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸಲು ಬಿಸಿಸಿಐ ಆಸಕ್ತಿ ತೋರಿಸಿದೆ. ಅಂತರರಾಷ್ಟ್ರೀಯ ಪಂದ್ಯಗಳೂ ನಡೆಯಲಿವೆ. ರಾಜ್ಯ ಸರ್ಕಾರದ ಜೊತೆ ಸಭೆ ನಂತರ ಅಂತಿಮ ನಿರ್ಧಾರ ಪ್ರಕಟವಾಗಲಿದೆ.

IPL vs PSL: ಐಪಿಎಲ್​ನಲ್ಲಿ ಬಂಪರ್ ಬೆಲೆ; ಪಾಕ್ ಕ್ರಿಕೆಟ್ ಲೀಗ್​ಗೆ ಕೈಕೊಟ್ಟ 11 ಆಟಗಾರರು

IPL vs PSL: 19ನೇ ಐಪಿಎಲ್ ಮಿನಿ ಹರಾಜಿನಲ್ಲಿ 77 ಆಟಗಾರರು ತಂಡ ಸೇರಿದರು. ಮಾರ್ಚ್ 26 ರಿಂದ ಐಪಿಎಲ್ ಆರಂಭ. ಪಿಎಸ್‌ಎಲ್ ಕೂಡ ಅದೇ ಸಮಯದಲ್ಲಿ ನಡೆಯುವುದರಿಂದ, 11 ಪಿಎಸ್‌ಎಲ್ ಆಟಗಾರರು ಐಪಿಎಲ್ ಆಯ್ಕೆ ಮಾಡಿಕೊಂಡಿದ್ದಾರೆ. ಇದರಿಂದ ಪಿಎಸ್‌ಎಲ್‌ಗೆ ನಷ್ಟವಾಗಿದ್ದು, ಐಪಿಎಲ್‌ನತ್ತ ಆಟಗಾರರ ಒಲವು ಸ್ಪಷ್ಟವಾಗಿದೆ. ಹರಾಜಾದ ಆಟಗಾರರು ಪಿಎಸ್‌ಎಲ್‌ನಲ್ಲಿ ಆಡುವುದಿಲ್ಲ.

IPL 2026: RCB ತಂಡದ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ

IPL 2026 RCB Playing XI: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಐಪಿಎಲ್ 2026ರ ಹರಾಜಿಗೂ ಮುನ್ನ 17 ಆಟಗಾರರನ್ನು ರಿಟೈನ್ ಮಾಡಿ ಕೊಂಡಿದ್ದರು. ಇದೀಗ ಮಿನಿ ಹರಾಜಿನ ಮೂಲಕ ಒಟ್ಟು 8 ಆಟಗಾರರನ್ನು ಖರೀದಿಸಿದೆ. ಈ ಮೂಲಕ ಐಪಿಎಲ್ ಸೀಸನ್-19 ಗಾಗಿ 25 ಸದಸ್ಯರ ಬಲಿಷ್ಠ ಬಳಗವನ್ನು ರೂಪಿಸಿದೆ.

IPL 2026: ಏಕೈಕ ಕನ್ನಡಿಗ ಹರಾಜು: ಕರ್ನಾಟಕದ 11 ಆಟಗಾರರು ಅನ್​ಸೋಲ್ಡ್​

IPL 2026 Unsold Players List: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ಕ್ಕಾಗಿ ನಡೆದ ಮಿನಿ ಹರಾಜಿನಲ್ಲಿ ಬರೋಬ್ಬರಿ 292 ಆಟಗಾರರು ಅನ್​ಸೋಲ್ಡ್ ಆಗಿದ್ದಾರೆ. ಅಂದರೆ 369 ಆಟಗಾರರಲ್ಲಿ 10 ಫ್ರಾಂಚೈಸಿಗಳು 77 ಆಟಗಾರರನ್ನು ಖರೀದಿಸಿದ್ದಾರೆ. ಇನ್ನು ಅನ್​ಸೋಲ್ಡ್ ಆದ ಆಟಗಾರರ ಪಟ್ಟಿಯಲ್ಲಿ ಕರ್ನಾಟಕದ 11 ಆಟಗಾರರು ಕೂಡ ಇದ್ದಾರೆ. 

ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ