AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO

ISRO

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಭಾರತದ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯಾಗಿದೆ. ಇಸ್ರೋ ವಿಶ್ವದ ಆರು ಸರ್ಕಾರಿ ಬಾಹ್ಯಾಕಾಶ ಸಂಸ್ಥೆಗಳಲ್ಲಿ ಒಂದಾಗಿದೆ, ಅದು ಸಂಪೂರ್ಣ ಉಡಾವಣಾ ಸಾಮರ್ಥ್ಯಗಳನ್ನು ಹೊಂದಿದೆ. ಇದು ಬಾಹ್ಯಾಕಾಶ ಇಲಾಖೆಯ ಪ್ರಾಥಮಿಕ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗವಾಗಿ ಕಾರ್ಯನಿರ್ವಹಿಸುತ್ತದೆ, ಇದನ್ನು ಭಾರತದ ಪ್ರಧಾನ ಮಂತ್ರಿಯವರು ನೇರವಾಗಿ ಮೇಲ್ವಿಚಾರಣೆ ಮಾಡುತ್ತಾರೆ ಮತ್ತು ಇಸ್ರೋ ಅಧ್ಯಕ್ಷರು ಬಾಹ್ಯಾಕಾಶ ಇಲಾಖೆಯ ಕಾರ್ಯನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಾರೆ. ಬಾಹ್ಯಾಕಾಶ-ಆಧಾರಿತ ಕಾರ್ಯಾಚರಣೆಗಳು, ಬಾಹ್ಯಾಕಾಶ ಪರಿಶೋಧನೆ, ಅಂತರಾಷ್ಟ್ರೀಯ ಬಾಹ್ಯಾಕಾಶ ಸಹಕಾರ ಮತ್ತು ಸಂಬಂಧಿತ ತಂತ್ರಜ್ಞಾನಗಳ ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸಲು ಇಸ್ರೋ ಪ್ರಾಥಮಿಕವಾಗಿ ಜವಾಬ್ದಾರಿ ತೆಗೆದುಕೊಳ್ಳುತ್ತದೆ. ಇದು ಸಂಪೂರ್ಣ ಉಡಾವಣಾ ಸಾಮರ್ಥ್ಯಗಳನ್ನು ಹೊಂದಿದೆ, ಕ್ರಯೋಜೆನಿಕ್ ಎಂಜಿನ್‌ಗಳನ್ನು ನಿಯೋಜಿಸಬಹುದು, ಭೂಮ್ಯತೀತ ಕಾರ್ಯಾಚರಣೆಗಳನ್ನು ಪ್ರಾರಂಭಿಸಬಹುದು ಮತ್ತು ಕೃತಕ ಉಪಗ್ರಹಗಳ ದೊಡ್ಡ ಫ್ಲೀಟ್ ಅನ್ನು ನಿರ್ವಹಿಸಬಹುದು.

ಇನ್ನೂ ಹೆಚ್ಚು ಓದಿ

ಜನವರಿಯಲ್ಲಿ ಭಾರತದ ಗಗನಯಾನ ಮಿಷನ್; ಮಾನವ ಬದಲು ವ್ಯೋಮಿತ್ರ ಪ್ರಯಾಣ

Gaganyaan mission of India: 2027ಕ್ಕೆ ಬಾಹ್ಯಾಕಾಶಕ್ಕೆ ಮಾನವರನ್ನು ಕಳುಹಿಸುವ ಗುರಿ ಹೊಂದಿರುವ ಭಾರತ, ಇದಕ್ಕೆ ಮುನ್ನ ಮೂರು ಮಾನವರಹಿತ ಸ್ಪೇಸ್ ಮಿಷನ್ ಕೈಗೊಳ್ಳಲಿದೆ. ಅದರ ಮೊದಲ ಮಿಷನ್ 2025ರೊಳಗೆ ಆರಂಭವಾಗಿತ್ತು. ಇದು ವಿಳಂಬವಾಗಲಿದ್ದು, 2026ರ ಜನವರಿಗೆ ಚಾಲನೆಗೊಳ್ಳಲಿದೆ. ಮೂರು ಮಾನವರಹಿತ ಮಿಷನ್ ಪೂರ್ಣಗೊಂಡ ಬಳಿಕ ಮಾನವ ಸಹಿತ ಮಿಷನ್ ಅನ್ನು ಇಸ್ರೋ ಕೈಗೊಳ್ಳಿದೆ,

ಭಾರತದ ಅತ್ಯಂತ ತೂಕದ ಉಪಗ್ರಹ ಹೊತ್ತು ಯಶಸ್ವಿಯಾಗಿ ನಭಕ್ಕೆ ಹಾರಿದ ಇಸ್ರೋ ‘ಬಾಹುಬಲಿ’ ರಾಕೆಟ್

ISRO's Bahubali rocket LVM3 lifts heaviest satellite: ಇಸ್ರೋ ನಿರ್ಮಿತ ಎಲ್​ವಿಎಂ3 ಎಂ4 ರಾಕೆಟ್ ಇಂದು ಭಾನುವಾರ (ನ. 2) 4,410 ಕಿಲೋ ತೂಕದ ಸಿಎಂಎಸ್-03 ಉಪಗ್ರಹವನ್ನು ನಭಕ್ಕೆ ಹೊತ್ತೊಯ್ದಿದೆ. ಸಿಎಂಎಸ್-03 ಭಾರತದಲ್ಲಿ ಉಡಾವಣೆಯಾದ ಅತ್ಯಂತ ಭಾರದ ಉಪಗ್ರಹ ಎನಿಸಿದೆ. ಎಲ್​ವಿಎಂ3 ರಾಕೆಟ್ ಇಸ್ರೋ ನಿರ್ಮಿತವಾಗಿದ್ದು, ಇದು ಹಿಂದೆ ಚಂದ್ರಯಾನ-3 ಮಿಷನ್​ನಲ್ಲಿ ಬಳಕೆಯಾಗಿತ್ತು.

ತವರಿಗೆ ಮರಳಿದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾಗೆ ಸಿಎಂ ಯೋಗಿ ಆದಿತ್ಯನಾಥ್ ಸನ್ಮಾನ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿ ಆಕ್ಸಿಯಂ ಮಿಷನ್ ಅನ್ನು ಯಶಸ್ವಿಗೊಳಿಸಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ತಮ್ಮ ತವರು ಲಕ್ನೋಗೆ ಆಗಮಿಸಿದ್ದಾರೆ. ಈ ವೇಳೆ ಲಕ್ನೋದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರನ್ನು ಸನ್ಮಾನಿಸಿದರು. ಇದಕ್ಕೂ ಮೊದಲು ತೆರೆದ ವಾಹನದಲ್ಲಿ ಶುಭಾಂಶು ಮೆರವಣಿಗೆ ನಡೆಸಿದರು. ಅವರನ್ನು ಸ್ವಾಗತಿಸಲು ಸಾವಿರಾರು ಜನರು ಸೇರಿದ್ದರು.

ನಮ್ಮದೇ ಬಾಹ್ಯಾಕಾಶ ನಿಲ್ದಾಣ ಹೊಂದುತ್ತೇವೆ; ರಾಷ್ಟ್ರೀಯ ಬಾಹ್ಯಾಕಾಶ ದಿನದಂದು ಪ್ರಧಾನಿ ಮೋದಿ ವಿಶ್ವಾಸ

ಇಂದು ರಾಷ್ಟ್ರೀಯ ಬಾಹ್ಯಾಕಾಶ ದಿನ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಕಾರ್ಯಾಚರಣೆಯ ಯಶಸ್ಸನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ. ಭಾರತ ದೇಶವು ಶೀಘ್ರದಲ್ಲೇ ಗಗನಯಾತ್ರಿಗಳ ತಂಡವನ್ನು ನಿರ್ಮಿಸಲಿದೆ, ನಾವು ನಮ್ಮದೇ ಆದ ಬಾಹ್ಯಾಕಾಶ ನಿಲ್ದಾಣವನ್ನು ಹೊಂದುತ್ತೇವೆ ಎಂದು ಘೋಷಿಸಿದ್ದಾರೆ.

ಬಾಹ್ಯಾಕಾಶದಿಂದ ಮರಳಿದ ಶುಭಾಂಶು ಶುಕ್ಲಾ ರಾಮ, ನಾನು ಲಕ್ಷ್ಮಣ; ಭಾರತದ ಗಗನಯಾತ್ರಿ ಪ್ರಶಾಂತ್ ನಾಯರ್ ಸಂವಾದ

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿ ಐತಿಹಾಸಿಕ ಕಾರ್ಯಾಚರಣೆಯನ್ನು ನಡೆಸಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಭಾರತದ ಇನ್ನೋರ್ವ ಗಗನಯಾತ್ರಿ ಪ್ರಶಾಂತ್ ನಾಯರ್ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ್ದಾರೆ. ಇಸ್ರೋ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾರತದ ಈ ಇಬ್ಬರು ಗಗನಯಾತ್ರಿಗಳು ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಡಿಸೆಂಬರ್‌ನಲ್ಲಿ ಇಸ್ರೋದಿಂದ ಮೊದಲ ಗಗನಯಾನ ಪರೀಕ್ಷಾ ಮಿಷನ್ ಪ್ರಾರಂಭ

ಇಸ್ರೋ ಡಿಸೆಂಬರ್‌ನಲ್ಲಿ ಮೊದಲ ಗಗನಯಾನ ಪರೀಕ್ಷಾ ಮಿಷನ್ ಅನ್ನು ಪ್ರಾರಂಭಿಸಲಿದೆ. ಭಾರತದ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಾಚರಣೆಯಾದ ಗಗನಯಾನ-2025 ಕುರಿತು ಇಸ್ರೋ ಇಂದು ಪತ್ರಿಕಾಗೋಷ್ಠಿ ನಡೆಸಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ವಹಿಸಿದ್ದರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈ ಡಿಸೆಂಬರ್‌ನಲ್ಲಿ ತನ್ನ ಮೊದಲ ಗಗನಯಾನ ಪರೀಕ್ಷಾ ಕಾರ್ಯಾಚರಣೆಯನ್ನು ಪ್ರಾರಂಭಿಸಲು ಸಿದ್ಧವಾಗಿದೆ ಎಂದು ಇಸ್ರೋ ಮುಖ್ಯಸ್ಥ ವಿ. ನಾರಾಯಣನ್ ದೃಢಪಡಿಸಿದರು. ಈ ವೇಳೆ ಅಮೆರಿಕದಿಂದ ಭಾರತಕ್ಕೆ ಮರಳಿದ ಭಾರತದ ಗಗನಯಾತ್ರಿಗಳು ಮಾಧ್ಯಮಗಳ ಜೊತೆ ಸಂವಾದ ನಡೆಸಿದ್ದಾರೆ.

ಆಗಸಕ್ಕೆ ನಿಸಾರ್ ಸೆಟಿಲೈಟ್ ಹಾರಿಸಿದ ಭಾರತದ ರಾಕೆಟ್; ಇದು ಎರಡು ರಾಡಾರ್ ಫ್ರೀಕ್ವೆನ್ಸಿ ಬಳಸುವ ವಿಶ್ವದ ಮೊದಲ ಉಪಗ್ರಹ

Successful launch of NISAR satellite built by ISRO and NASA: ಭಾರತದ ಇಸ್ರೋ ಮತ್ತು ಅಮೆರಿಕದ ನಾಸಾ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸಿದ ನಿಸಾರ್ ಸೆಟಿಲೈಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಇಸ್ರೋ ನಿರ್ಮಿತ ಜಿಎಸ್​ಎಲ್​ವಿ ಎಫ್-16 ರಾಕೆಟ್ ಮೂಲಕ ಜುಲೈ 30, ಬುಧವಾರ ಸಂಜೆ ಇದರ ಉಡ್ಡಯನ ಮಾಡಲಾಗಿದೆ. ಆಪ್ಟಿಕಲ್ ಕ್ಯಾಮರಾ ಬದಲು ಎರಡು ರಾಡಾರ್ ಕಣ್ಣುಗಳನ್ನು ಬಳಸಿ ತಯಾರಿಸಲಾದ ವಿಶ್ವದ ಮೊದಲ ಸೆಟಿಲೈಟ್ ಇದು.

Shubhanshu Shukla: ಡ್ರ್ಯಾಗನ್ ಕ್ಯಾಪ್ಸುಲ್​ನಿಂದ ಹೊರಬರುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ

ಆಕ್ಸಿಯಮ್ ಸ್ಪೇಸ್‌ನ ಆಕ್ಸ್ -4 ಕಾರ್ಯಕ್ರಮದ ಭಾಗವಾಗಿದ್ದ 18 ದಿನಗಳ ವಿಸ್ತೃತ ಕಾರ್ಯಾಚರಣೆಯ ನಂತರ ಭಾರತದ ಗಗನಯಾನಿ ಶುಭಾಂಶು ಶುಕ್ಲಾ ಭೂಮಿಗೆ ಮರಳಿದ್ದಾರೆ. ಅವರು ಇಂದು ಮಧ್ಯಾಹ್ನ 3 ಗಂಟೆಗೆ ಭಾರತೀಯ ಕಾಲಮಾನ ಪ್ರಕಾರ ಕ್ಯಾಲಿಫೋರ್ನಿಯಾ ಕರಾವಳಿಯ ಪೆಸಿಫಿಕ್ ಮಹಾಸಾಗರದಲ್ಲಿ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿರುವ ಇತರ ಮೂವರು ಗಗನಯಾತ್ರಿಗಳೊಂದಿಗೆ ಇಳಿದಿದ್ದಾರೆ. ಇದೀಗ ಅವರನ್ನು ಡ್ರ್ಯಾಗನ್ ಕ್ಯಾಪ್ಸುಲ್​ನಿಂದ ಹೊರಗೆ ಕರೆತರಲಾಗಿದೆ.

ಭಾರತದ ಪಾಲಿಗೆ ಐತಿಹಾಸಿಕ ಕ್ಷಣ; ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್

ಐತಿಹಾಸಿಕ ಕ್ಷಣದಲ್ಲಿ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿದ್ದ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಆಕ್ಸಿಯಮ್-4 ಸಿಬ್ಬಂದಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) 18 ದಿನಗಳ ಕಾಲ ಉಳಿದ ನಂತರ ಪೆಸಿಫಿಕ್ ಮಹಾಸಾಗರದಲ್ಲಿ ಭೂಮಿಗೆ ಹಾರಿದ್ದಾರೆ. ಡ್ರ್ಯಾಗನ್ ಕ್ಯಾಪ್ಸುಲ್ ಕೆಳಗೆ ಬೀಳುತ್ತಿದ್ದಂತೆ ಶುಭಾಂಶು ಶುಕ್ಲಾ ISSನಿಂದ ಸುರಕ್ಷಿತವಾಗಿ ಭೂಮಿಗೆ ಮರಳಿದರು. ಕೆಲವೇ ಕ್ಷಣಗಳಲ್ಲಿ ಅವರನ್ನು ಕ್ಯಾಪ್ಸುಲ್​ನಿಂದ ಹೊರಗೆ ಕರೆತರಲಾಗುವುದು.

Space Centre: ಇಸ್ರೋದ ಎರಡನೇ ಅತಿದೊಡ್ಡ ಬಾಹ್ಯಾಕಾಶ ಕೇಂದ್ರ ಗುಜರಾತ್​​ನಲ್ಲಿ ನಿರ್ಮಾಣ

ISRO to build its second largest space station in Gujarat: ಗುಜರಾತ್​​ನ ಡಿಯು ಸಮೀಪ ಇಸ್ರೋದಿಂದ ಮೂರನೇ ಸ್ಪೇಸ್ ಸೆಂಟರ್ ನಿರ್ಮಾಣವಾಗಲಿದೆ. 10,000 ಕೋಟಿ ರೂ ವೆಚ್ಚದಲ್ಲಿ ಸಿದ್ಧವಾಗಲಿರುವ ಇದು ಇಸ್ರೋದ ಎರಡನೇ ಅತಿದೊಡ್ಡ ಬಾಹ್ಯಾಕಾಶ ಕೇಂದ್ರವಾಗಲಿದೆ. ಆಂಧ್ರದ ಶ್ರೀಹರಿಕೋಟಾದಲ್ಲಿ ಅತಿದೊಡ್ಡ ಸ್ಪೇಸ್ ಸೆಂಟರ್ ಇದೆ. ಮತ್ತೊಂದು ಸ್ಪೇಸ್ ಸೆಂಟರ್ ಕೇರಳದ ತಿರುವನಂತಪುರಂನಲ್ಲಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ