AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ISRO

ISRO

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಭಾರತದ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಯಾಗಿದೆ. ಇಸ್ರೋ ವಿಶ್ವದ ಆರು ಸರ್ಕಾರಿ ಬಾಹ್ಯಾಕಾಶ ಸಂಸ್ಥೆಗಳಲ್ಲಿ ಒಂದಾಗಿದೆ, ಅದು ಸಂಪೂರ್ಣ ಉಡಾವಣಾ ಸಾಮರ್ಥ್ಯಗಳನ್ನು ಹೊಂದಿದೆ. ಇದು ಬಾಹ್ಯಾಕಾಶ ಇಲಾಖೆಯ ಪ್ರಾಥಮಿಕ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗವಾಗಿ ಕಾರ್ಯನಿರ್ವಹಿಸುತ್ತದೆ, ಇದನ್ನು ಭಾರತದ ಪ್ರಧಾನ ಮಂತ್ರಿಯವರು ನೇರವಾಗಿ ಮೇಲ್ವಿಚಾರಣೆ ಮಾಡುತ್ತಾರೆ ಮತ್ತು ಇಸ್ರೋ ಅಧ್ಯಕ್ಷರು ಬಾಹ್ಯಾಕಾಶ ಇಲಾಖೆಯ ಕಾರ್ಯನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಾರೆ. ಬಾಹ್ಯಾಕಾಶ-ಆಧಾರಿತ ಕಾರ್ಯಾಚರಣೆಗಳು, ಬಾಹ್ಯಾಕಾಶ ಪರಿಶೋಧನೆ, ಅಂತರಾಷ್ಟ್ರೀಯ ಬಾಹ್ಯಾಕಾಶ ಸಹಕಾರ ಮತ್ತು ಸಂಬಂಧಿತ ತಂತ್ರಜ್ಞಾನಗಳ ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಗಳನ್ನು ನಿರ್ವಹಿಸಲು ಇಸ್ರೋ ಪ್ರಾಥಮಿಕವಾಗಿ ಜವಾಬ್ದಾರಿ ತೆಗೆದುಕೊಳ್ಳುತ್ತದೆ. ಇದು ಸಂಪೂರ್ಣ ಉಡಾವಣಾ ಸಾಮರ್ಥ್ಯಗಳನ್ನು ಹೊಂದಿದೆ, ಕ್ರಯೋಜೆನಿಕ್ ಎಂಜಿನ್‌ಗಳನ್ನು ನಿಯೋಜಿಸಬಹುದು, ಭೂಮ್ಯತೀತ ಕಾರ್ಯಾಚರಣೆಗಳನ್ನು ಪ್ರಾರಂಭಿಸಬಹುದು ಮತ್ತು ಕೃತಕ ಉಪಗ್ರಹಗಳ ದೊಡ್ಡ ಫ್ಲೀಟ್ ಅನ್ನು ನಿರ್ವಹಿಸಬಹುದು.

ಇನ್ನೂ ಹೆಚ್ಚು ಓದಿ

Spy Satellites: ಬೆಂಗಳೂರಿನ ಕಂಪನಿಗಳಿಂದ ಸ್ಪೈ ಸೆಟಿಲೈಟ್​​ಗಳ ತಯಾರಿಕೆ; ಪಾಕಿಸ್ತಾನದ ಮೇಲೆ ಹದ್ದಿನಗಣ್ಣಿಡಲು ಬಳಕೆ

Spy satellites constellation from India: ಭಾರತದ ಮೂರು ಕಂಪನಿಗಳು ಮಹತ್ವದ ಸರ್ವೇಲೆನ್ಸ್ ಸೆಟಿಲೈಟ್​​​ಗಳನ್ನು ತಯಾರಿಸುವ ಜವಾಬ್ದಾರಿ ಪಡೆದಿವೆ. ಹೈದರಾಬಾದ್​​ನ ಅನಂತ್ ಟೆಕ್ನಾಲಜೀಸ್, ಬೆಂಗಳೂರಿನ ಸೆಂಟಮ್ ಎಲೆಕ್ಟ್ರಾನಿಕ್ಸ್ ಮತ್ತು ಆಲ್ಫ ಡಿಸೈನ್ ಟೆಕ್ನಾಲಜೀಸ್ ಸಂಸ್ಥೆಗಳಿಂದ ಸ್ಪೈ ಸೆಟಿಲೈಟ್ ತಯಾರಿಕೆ ನಡೆಯುತ್ತಿದೆ. 2028ಕ್ಕೆ ಉಪಗ್ರಹ ತಯಾರಿಸಿಕೊಡಬೇಕಿತ್ತು. ಈ ಡೆಡ್​​ಲೈನ್ ಅನ್ನು 2026ಕ್ಕೆ ಮೊಟಕುಗೊಳಿಸಲಾಗಿದೆ.

Spy Satellites: ಶತ್ರುಗಳ ಮೇಲೆ ಕಣ್ಣಿಡಲು 52 ಸ್ಪೈ ಸೆಟಿಲೈಟ್​​ಗಳ ನಿಯೋಜನೆಗೆ ಭಾರತ ನಿರ್ಧಾರ

India to launch 52 spy satellites over 5 years: ಭಾರತ ಮುಂದಿನ 5 ವರ್ಷದಲ್ಲಿ 52 ಸ್ಪೈ ಉಪಗ್ರಹಗಳನ್ನು ಆಗಸಕ್ಕೆ ಕಳುಹಿಸಲು ಯೋಜಿಸಿದೆ. ಖಾಸಗಿ ಸಹಭಾಗಿತ್ವದಲ್ಲಿ ಈ ಕಾರ್ಯ ನಡೆಯಲಿದೆ. ಅಮೆರಿಕ, ಚೀನಾ ಮತ್ತು ರಷ್ಯಾ ನಂತರ ಭಾರತವೇ ಅತಿಹೆಚ್ಚು ಸ್ಪೈ ಸೆಟಿಲೈಟ್ಸ್ ಹೊಂದಿದಂತಾಗುತ್ತದೆ. ಈ 52 ಉಪಗ್ರಹಗಳಲ್ಲಿ ಇಸ್ರೋ ಅರ್ಧದಷ್ಟನ್ನು ತಯಾರಿಸಲಿದೆ. ಉಳಿದವನ್ನು ಖಾಸಗಿ ಕಂಪನಿಗಳು ನಿರ್ಮಿಸಬಹುದು.

Dharmendra Pradhan: ಕಸ್ತೂರಿರಂಗನ್ ಭಾರತದ ಅನರ್ಘ್ಯ ಮುತ್ತು: ಧರ್ಮೇಂದ್ರ ಪ್ರಧಾನ್

Dharmendra Pradhan tribute to Kasturirangan: ದಿವಂಗತ ಕಸ್ತೂರಿರಂಗನ್ ತನಗೆ ಮೆಂಟರ್​​ಗೀಂತ ಹೆಚ್ಚಿನವರಾಗಿದ್ದು. ದಾರಿ ತೋರಿಸುವ ಬೆಳಕಾಗಿದ್ದರು ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕಸ್ತೂರಿರಂಗನ್ ಅವರಿಗೆ ಗೌರವಾರ್ಪಣೆ ಸಲ್ಲಿಸಿದ ಧರ್ಮೇಂದ್ರ ಪ್ರಧಾನ್, ಮಾಜಿ ಇಸ್ರೋ ಅಧ್ಯಕ್ಷರನ್ನು ಭಾರತದ ಅನರ್ಘ್ಯ ಮುತ್ತು ಎಂದು ಬಣ್ಣಿಸಿದ್ದಾರೆ.

ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್​ಗೆ ಪ್ರಧಾನಿ ಮೋದಿ ಭಾವುಕ ಪತ್ರ

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿದ್ದ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಬರುವಿಕೆಗಾಗಿ ಇಡೀ ಜಗತ್ತೇ ಉಸಿರು ಬಿಗಿ ಹಿಡಿದು ಕಾಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಭಾರತದ ಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಪತ್ರ ಬರೆದಿದ್ದಾರೆ. ‘‘ನೀವು ಸಾವಿರಾರು ಮೈಲುಗಳಷ್ಟು ದೂರವಿದ್ದರೂ ಸದಾ ನಮ್ಮ ಹೃದಯಕ್ಕೆ ಹತ್ತಿರವಾಗಿರುತ್ತೀರಿ’’ ಎಂದು ಮೋದಿ ಪತ್ರದಲ್ಲಿ ಬರೆದಿದ್ದಾರೆ.

ಚಂದ್ರಯಾನ-5 ಯೋಜನೆಗೆ ಕೇಂದ್ರ ಅನುಮೋದನೆ: ಇಸ್ರೋ ಅಧ್ಯಕ್ಷ ನಾರಾಯಣನ್

Chandrayaan-5: ಕೇಂದ್ರ ಸರ್ಕಾರವು ಇಸ್ರೋದ ಮಹತ್ವದ ಯೋಜನೆಗಳಲ್ಲಿ ಒಂದಾದ ಚಂದ್ರಯಾನ-5 ಯೋಜನೆಗೆ ಅನುಮೋದನೆ ನೀಡಿದೆ. ಈ ಕುರಿತು ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಮಾಹಿತಿ ನೀಡಿದ್ದಾರೆ. 25 ಕೆಜಿ ತೂಕದ ರೋವರ್ ‘ಪ್ರಯಾಗ್ಯಾನ್' ಅನ್ನು ಹೊತ್ತ ಚಂದ್ರಯಾನ-3 ಮಿಷನ್‌ಗಿಂತ ಭಿನ್ನವಾಗಿರಲಿದೆ ಎಂದು ಹೇಳಿದ್ದಾರೆ.

ಭಾರತದ ಬಾಹ್ಯಾಕಾಶ ವೈಭವ; 10 ವರ್ಷದಲ್ಲಿ 398 ವಿದೇಶೀ ಸೆಟಿಲೈಟ್​ಗಳ ಉಡಾವಣೆ: ಮೋದಿ ಖುಷಿ

ನವದೆಹಲಿ, ಜನವರಿ 31: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸ್ವಾವಲಂಬನೆ ಸಾಧಿಸಿದೆ. ವಿಶ್ವದ ಹಲವು ರಾಷ್ಟ್ರಗಳ ಸೆಟಿಲೈಟ್​ಗಳನ್ನು ಆಕಾಶಕ್ಕೆ ಕಳುಹಿಸುವ ಕಾರ್ಯದಲ್ಲಿ ಭಾರತ ಮುಂಚೂಣಿಗೆ ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಹಾಗೂ ಇಸ್ರೋದ ಸೆಟಿಲೈಟ್ ಉಡಾವಣೆ ಸಾಮರ್ಥ್ಯದ ಬಗ್ಗೆ ಅಂಕಿ ಅಂಶಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಶ್ರೀಹರಿಕೋಟಾದಲ್ಲಿ ಮೂರನೇ ಉಡಾವಣಾ ವೇದಿಕೆಗೆ ಸಂಪುಟ ಅನುಮೋದನೆ; ಭಾರತದ ಬಾಹ್ಯಾಕಾಶ ಯಾತ್ರೆಗೆ ಉತ್ತೇಜನ

ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮೂರನೇ ಉಡಾವಣಾ ವೇದಿಕೆಗೆ ಭಾರತದ ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಈ ವೇದಿಕೆ ಮುಂದಿನ ಪೀಳಿಗೆಯ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಕ್ರಮಗಳನ್ನು ಉತ್ತೇಜಿಸಲಿದೆ. ಇದು LVM3 ಉಡಾವಣೆಗಳು ಮತ್ತು ಗಗನಯಾನ ಕಾರ್ಯಾಚರಣೆಗಳನ್ನು ಹೆಚ್ಚಿಸುತ್ತದೆ. ಈ ಯೋಜನೆಗೆ 3,985 ಕೋಟಿ ರೂ. ವೆಚ್ಚವಾಗಿದ್ದು, 48 ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಇಸ್ರೋ ತನ್ನ ಬಾಹ್ಯಾಕಾಶ ಡಾಕಿಂಗ್ ಪ್ರಯೋಗದೊಂದಿಗೆ ಉಪಗ್ರಹ ಡಾಕಿಂಗ್ ಅನ್ನು ಸಹ ಯಶಸ್ವಿಯಾಗಿ ಪ್ರದರ್ಶಿಸಿತು.

ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ, ಇಸ್ರೋದಿಂದ ಸ್ಪೇಸ್ ಡಾಕಿಂಗ್ ಪ್ರಯೋಗ ಯಶಸ್ವಿ

Space Docking: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗುರುವಾರ ಬೆಳಗ್ಗೆ ಇತಿಹಾಸ ನಿರ್ಮಿಸಿದೆ. ಇಸ್ರೋ ಎರಡು ಉಪಗ್ರಹಗಳನ್ನು ಬಾಹ್ಯಾಕಾಶದಲ್ಲಿ ಯಶಸ್ವಿಯಾಗಿ ಇರಿಸಿದೆ. ಇದರೊಂದಿಗೆ ಅಮೆರಿಕ, ರಷ್ಯಾ ಮತ್ತು ಚೀನಾ ನಂತರ ಈ ಸಾಧನೆ ಮಾಡಿದ ನಾಲ್ಕನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸ್ಪೇಸ್ ಡಾಕಿಂಗ್ ಪ್ರಯೋಗ (SPADEX) ಅಡಿಯಲ್ಲಿ ಉಪಗ್ರಹಗಳನ್ನು ಯಶಸ್ವಿಯಾಗಿ 'ಡಾಕ್' ಮಾಡಿದೆ.

V Narayanan: ಇಸ್ರೋದ ನೂತನ ಅಧ್ಯಕ್ಷರಾಗಿ ವಿ ನಾರಾಯಣನ್ ನೇಮಕ

ಚಂದ್ರನತ್ತ ಕೊಂಡೊಯ್ದ ಇಸ್ರೋ ದಿನಕ್ಕೊಂದು ಹೊಸ ಪವಾಡವನ್ನೇ ಮಾಡುತ್ತಿದೆ. ಆಕಾಶದಲ್ಲಿ ಇಸ್ರೋ ಮಾಡಿದ ಸಾಹಸಗಳನ್ನು ಜಗತ್ತೇ ಅರಿತಿದೆ. ಅದರ ಮುಖ್ಯಸ್ಥರು ಬದಲಾಗುತ್ತಲೇ ಇರುತ್ತಾರೆ. ಆದರೆ ಯಶಸ್ಸಿನ ವೇಗ ನಿಲ್ಲುವುದಿಲ್ಲ. ಇದೇ ವೇಳೆ ಇಸ್ರೋ ಮುಖ್ಯಸ್ಥರು ಬದಲಾಗಲಿದ್ದಾರೆ. ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರ ಸ್ಥಾನಕ್ಕೆ ವಿ ನಾರಾಯಣನ್ ಅವರನ್ನು ನೇಮಕ ಮಾಡಲಾಗಿದೆ.ವಿ ನಾರಾಯಣನ್ ಅವರು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಜನವರಿ 14 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸ್ಪೇಸ್ ಡಾಕಿಂಗ್ ಆಯ್ತು; 2025ರ ಮೊದಲಾರ್ಧದಲ್ಲಿ ಭಾರತದಿಂದ ಬಾಹ್ಯಾಕಾಶ ಯೋಜನೆಗಳ ಸರಮಾಲೆ

Space missions from India: 2024ರಲ್ಲಿ ಭಾರತದಿಂದ 15 ಬಾಹ್ಯಾಕಾಶ ಮಿಷನ್​ಗಳು ಜಾರಿಯಾಗಿದ್ದವು. ಸ್ಪೇಸ್ ಡಾಕಿಂಗ್ ಪ್ರಯೋಗ ಯಶಸ್ವಿಯಾಗಿತ್ತು. 2025ರಲ್ಲಿ ಕೆಲ ಮಹತ್ವದ ಸ್ಪೇಷ್ ಮಿಷನ್​ಗಳು ನಡೆಯಲಿವೆ. ಮಹಿಳಾ ರೋಬೋವೊಂದನ್ನು ಗಗನಕ್ಕೆ ಕಳುಹಿಸಲಾಗುತ್ತಿದೆ. ವಿಶ್ವದ ಅತ್ಯಂತ ದುಬಾರಿ ಸೆಟಿಲೈಟ್ ಅನ್ನು ಭಾರತದಿಂದ ಲಾಂಚ್ ಮಾಡಲಾಗುತ್ತಿದೆ.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ