Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS

JDS

ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.

ಇನ್ನೂ ಹೆಚ್ಚು ಓದಿ

ಜೆಡಿಎಸ್ ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ! ಜೆಡಿಎಸ್ ಕಚೇರಿಗೆ ಲಾರಿ ಕಳಿಸಿ ಅಣುಕು ಪ್ರದರ್ಶನ

ಕರ್ನಾಟಕವನ್ನು ಪ್ರತಿಭಟನೆಗಳ ರಾಜ್ಯವೆಂದು ಕರೆಯಲು ಅಭ್ಯಂತರವಿಲ್ಲ ಎನಿಸುತ್ತದೆ. ರಾಜ್ಯದ ಎಲ್ಲ ಪ್ರಮುಖ ರಾಜಕೀಯ ಪಕ್ಷಗಳು ಪ್ರತಿಭಟನೆ ಮಾಡುತ್ತಿವೆ. ಬೆಲೆಯೇರಿಕೆ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದರೆ ಈ ಎರಡೂ ಪಕ್ಷಗಳ ವಿರುದ್ಧ ಕಾಂಗ್ರೆಸ್ ಪ್ರದರ್ಶನಗಳನ್ನು ನಡೆಸುತ್ತಿದೆ!

ಬಿಜೆಪಿ ಜೊತೆ ವಿಲೀನಗೊಳ್ಳುವ ಚಾನ್ಸೇ ಇಲ್ಲ, ಅವರೊಂದಿಗೆ ಕೇವಲ ಮೈತ್ರಿ ಮಾತ್ರ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಒಂದು ಸೌಹಾರ್ದಯುತವಾದ ಸಂಬಂಧವನ್ನು ಕಾಯ್ದುಕೊಂಡಿದೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ತನ್ನ ಶಕ್ತಿಯನ್ನು ಬಿಜೆಪಿಗೆ ಧಾರೆಯೆರೆದಿದೆ ಮತ್ತು ಬಿಜೆಪಿ ಒಂದು ರಾಷ್ಟ್ರೀಯ ಪಕ್ಷವಾಗಿ ತಮಗೆ ಸಹಾಯ ಮಾಡಿದೆ, ಎರಡು ಪಕ್ಷಗಳ ನಡುವೆ ಮೈತ್ರಿ ಏರ್ಪಟ್ಟ ದಿನದಿಂದ ಅರೋಗ್ಯಕರ ಬಾಂಧವ್ಯ ಇದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಸರ್ಕಾರಿ ಜಮೀನು ಒತ್ತುವರಿ ಆರೋಪ: ಕುಮಾರಸ್ವಾಮಿಗೆ ಬಿಗ್​ ಶಾಕ್ ಕೊಟ್ಟ ಸರ್ಕಾರ!

ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ನಡುವಿನ ಸಂಘರ್ಷ ಮುಂದುವರೆದಿದೆ. ಈ ಕೇತಗಾನಹಳ್ಳಿ‌ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲವಂತದ ಕ್ರಮಕೈಗೊಳ್ಳುವುದಿಲ್ಲವೆಂಬ ಮುಚ್ಚಳಿಕೆಯನ್ನು ಇದೀಗ ಸರ್ಕಾರ ಹಿಂಪಡೆದುಕೊಂಡಿದೆ. ಈ ಮೂಲಕ ಕುಮಾರಸ್ವಾಮಿಗೆ ಶಾಕ್ ಕೊಟ್ಟಿದೆ.

ಜೆಡಿಎಸ್​ನೊಂದಿಗೆ ಭಿನ್ನಾಭಿಪ್ರಾಯವಿಲ್ಲ, ಕುಮಾರಸ್ವಾಮಿಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ: ಆರ್ ಅಶೋಕ

ಎರಡೂ ಪಕ್ಷಗಳ ಒಂದು ಸಮನ್ವಯ ಸಮಿತಿ ರಚಿಸಬೇಕೆಂದು ನಿಖಿಲ್ ಕುಮಾರಸ್ವಾಮಿ ಹೇಳುತ್ತಾರೆ ಮತ್ತು ಹಿರಿಯ ಬಿಜೆಪಿ ನಾಯಕ ಡಿವಿ ಸದಾನಂದಗೌಡ ಸಹ ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಿಗೆ ಪ್ರತಿಭಟನೆ ಮಾಡಬೇಕಾ ಅಥವಾ ಪ್ರತ್ಯೇಕವಾಗಿ ಮಾಡಬೇಕಾ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಣಯಿಸುತ್ತೇವೆ ಎಂದು ಅಶೋಕ ಹೇಳಿದರು.

ಹೋರಾಟಗಳಿಗೆ ಜೆಡಿಎಸ್ ಆಹ್ವಾನಿಸದ ಬಿಜೆಪಿ, ಕ್ರಮೇಣ ಹೆಚ್ಚುತ್ತಿದೆ ಪಕ್ಷಗಳ ನಡುವಿನ ಕಂದರ

ಯಾಕೆ ದೂರ ದೂರ ಅಂತ ಕೇಳಿದರೆ ಎರಡೂ ಪಕ್ಷದ ನಾಯಕರು ಸಮಜಾಯಿಷಿಗಳನ್ನು ನೀಡುತ್ತಾರೆ. ಆದರೆ ಪ್ರಮುಖರು ಏನೇ ಹೇಳಿದರೂ ಪಕ್ಷಗಳ ನಡುವಿನ ಕಂದರ ಹೆಚ್ಚುತ್ತಾ ಸಾಗುತ್ತಿದೆ. ಜೆಡಿಎಸ್ ನಾಯಕರು ಈಗ ಬಹಿರಂಗವಾಗೇ ತಮ್ಮ ಅಸಮಾಧಾನ ಹೊರ ಹಾಕುತ್ತಿದ್ದಾರೆ, ಅದರೆ ಅವರ ಮಾತಿಗಳಿಗೆ ಕ್ಯಾರೆ ಅನ್ನದ ಬಿಜೆಪಿ ನಾಯಕರು ಜೆಡಿಎಸ್ ಗೆ ಆಹ್ವಾನವೀಯದೆ ಇವತ್ತು ಜನಾಕ್ರೋಶ ಯಾತ್ರೆ ಶುರುಮಾಡಿದ್ದಾರೆ.

ಇಂದಿನಿಂದ ಯುದ್ಧ ಆರಂಭ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ತೊಡೆ ತಟ್ಟಿದ ಕುಮಾರಣ್ಣ

ಕೇಂದ್ರ ಸಚಿವ ಕುಮಾರಸ್ವಾಮಿಯವರು ಒತ್ತುವರಿ ಮಾಡಿಕೊಂಡಿದ್ದಾರೆನ್ನಲಾಗುತ್ತಿರುವ ಬಿಡದಿಗೆ ಹತ್ತಿರದ ಕೇತಗಾಹಳ್ಳಿಯಲ್ಲಿರುವ ಸರ್ವೆ ನಂಬರ್ 7, 8, 9, 10, 16, 17 ಮತ್ತು 79ರಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ಸಂಬಂಧ ತಹಶೀಲ್ದಾರ್ ನೋಟಿಸ್​ ವಿರುದ್ಧ ಕುಮಾರಸ್ವಾಮಿ ಕೋರ್ಟ್​ ಮೊರೆ ಹೋಗಿದ್ದಾರೆ. ಇನ್ನು ಈ ವಿಚಾರದಲ್ಲಿ ಇಷ್ಟು ದಿನ ಸೈಲೆಂಟ್ ಆಗಿದ್ದ ಕುಮಾರಸ್ವಾಮಿ ಇದೀಗ ಏಕಾಏಕಿ ವೈಲೆಂಟ್ ಆಗಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಯುದ್ಧ ಘೋಷಣೆ ಮಾಡಿದ್ದಾರೆ.

  • Sunil MH
  • Updated on: Apr 5, 2025
  • 1:21 pm

ಮಹಿಳೆ ಅಪಹರಣ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಹೈಕೋರ್ಟ್

ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ವಿಡಿಯೋದಲ್ಲಿರುವ ಸಂತ್ರಸ್ತ ಮಹಿಳೆಯನ್ನು ಭವಾನಿ ರೇವಣ್ಣ ಅವರು ಅಪಹರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಲಾಗಿತ್ತು. ಇದೀಗ, ಈ ಷರತ್ತನ್ನು ಹೈಕೋರ್ಟ್​ ಸಡಿಲಿಸಿ, ಹೊಸ ಷರತ್ತನ್ನು ವಿಧಿಸಿದೆ. ಹಾಕಿದ್ದರೆ ಏನದು ಷರತ್ತು? ಹೊಸ ಷರತ್ತು ಏನು? ಇಲ್ಲಿದೆ ವಿವರ.

ಅತ್ಯಾಚಾರ ಪ್ರಕರಣ: ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್!

Prajwal Revanna assault Case:: ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ ರಾಜ್ಯ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲೂ ಭಾರೀ ಸದ್ದು ಮಾಡಿದ್ದು, ಇದೀಗ ಈ ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್​ ಬಿಗ್ ಶಾಕ್ ಕೊಟ್ಟಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತಿರಸ್ಕರಿಸಿದೆ.

ಜೆಡಿಎಸ್ ನಾಯಕರು ಬಿಜೆಪಿ ಆಹ್ವಾನ ನೀಡದೆ ಹತ್ತಾರು ಪ್ರತಿಭಟನೆಗಳನ್ನು ಮಾಡಿದ್ದಾರೆ: ಆರ್ ಅಶೋಕ

ವಿಧಾನ ಸಭೆಯಲ್ಲಿ ಬಜೆಟ್ ಮೇಲೆ ಭಾಷಣ ಮಾಡುವಾಗಲೇ ತಾನು ಮುಂದೆ ಮಾರಿಹಬ್ಬ ಕಾದೈತೆ ಅಂತ ಹೇಳಿದ್ದೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಜನರಿಗೆ ನೀಡಿದ ಭರವಸೆ ಏನು? ಈಗ ಮಾಡುತ್ತಿರೋದೇನು? ಬರೀ ಮೋಸ. ಡೀಸೆಲ್ ಬೆಲೆ ಹೆಚ್ಚಿಸುವುದರಿಂದ ಇತರ ಹತ್ತಾರು ಸಾಮಗ್ರಿಗಳ ಬೆಲೆ ಕೂಡ ಹೆಚ್ಚಾಗುತ್ತದೆ ಎಂದು ಅಶೋಕ ಹೇಳಿದರು.

ಎಚ್ಡಿಕೆಗೆ ಸುಪ್ರೀಂ ಕೋರ್ಟ್‌ನಿಂದ ತಾತ್ಕಾಲಿಕ ರಕ್ಷಣೆ; ಹೈಕೋರ್ಟ್‌ಗೆ ಮೇಲ್ಮನವಿಗೆ ಅವಕಾಶ

ರಾಮನಗರದ ಬಿಡದಿಯ ಕೇತಗಾನಹಳ್ಳಿ‌ ಬಳಿ ಸರ್ಕಾರಿ ಜಮೀನು ಒತ್ತುವರಿ ತೆರವು ಸಂಬಂಧ ಕುಮಾರಸ್ವಾಮಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋಡಿ ಸಲ್ಲಿಸಿದ್ದು, ಈ ಸಂಬಂಧ ಸುಪ್ರೀಂಕೋರ್ಟ್​ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥಪಡಿಸಿದೆ. ಸಮಾಜ ಪರಿವರ್ತನಾ ಸಮುದಾಯ ನ್ಯಾಯಾಂಗ ನಿಂದನೆ ಅರ್ಜಿಗೆ ತಡೆ ಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ಇತ್ಯಾರ್ಥಗೊಳಿಸಿ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಲು ಸೂಚಿಸಿದೆ.

ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ಲಿಂಗಾಯತ ಸಚಿವರು ಜಾತಿ ಗಣತಿ ಬಗ್ಗೆ ಸಮುದಾಯದವರೊಂದಿಗೆ ಚರ್ಚಿಸಿಲ್ಲ: ಶಾಸಕ
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?