JDS
ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.
ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ಜೆಡಿಎಸ್ ದೂರು: ಆರೋಪವೇನು?
ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕಾರ, ರೈತರ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡದಿರುವುದು ಮತ್ತು ಕೋಗಿಲು ಲೇಔಟ್ನಲ್ಲಿ ಮನೆಗಳ ತೆರವು ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಕುಮಾರಸ್ವಾಮಿಯವರ ಹಿಂದಿನ ಆಡಳಿತವನ್ನು ಸ್ಮರಿಸಿದ ಜೆಡಿಎಸ್, ಪ್ರಸ್ತುತ ಸರ್ಕಾರದ ನೀತಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.
- Sunil MH
- Updated on: Dec 31, 2025
- 3:55 pm
ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್
ಬೆಂಗಳೂರಿನ ಕೋಗಿಲು ಕ್ರಾಸ್ ಅಕ್ರಮ ಶೆಡ್ ತೆರವು ಹಾಗೂ ನಂತರ ಕೇರಳಿಗರಿಗೆ ಮನೆ ನೀಡುವ ರಾಜ್ಯ ಸರ್ಕಾರದ ನಿರ್ಧಾರ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಸರ್ಕಾರ ನಡೆದಿರುವುದನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ಸಿದ್ದರಾಮಯ್ಯರನ್ನು ‘ಕೇರಳಿಗರ ಚೇಟಾ’ ಎಂದು ಜರೆದಿದ್ದು, ಕೇರಳಕ್ಕಾಗಿ ಮಾಡಿದ ಕೆಲಸಗಳ ಪಟ್ಟಿ ಮಾಡಿದೆ.
- Ganapathi Sharma
- Updated on: Dec 30, 2025
- 2:45 pm
ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣಗೆ ಬಿಗ್ ರಿಲೀಫ್
ಮಾಜಿ ಸಚಿವ, ಹಾಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಇಂದು ದೊಡ್ಡ ರಿಲೀಫ್ ನೀಡಿದೆ. ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಐಪಿಸಿ ಸೆಕ್ಷನ್ 354ಎ ಅಡಿಯ ಆರೋಪದ ಕೇಸ್ ಪರಿಗಣನೆಗೆ ಕೋರ್ಟ್ ನಿರಾಕರಿಸಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ರೇವಣ್ಣ ಇದೀಗ ಕೋರ್ಟ್ ಆದೇಶದಿಂದ ನಿರಾಳರಾಗಿದ್ದಾರೆ. ಹಾಗಾದ್ರೆ, ಕೋರ್ಟ್ ಕೈಬಿಟ್ಟ ಸೆಕ್ಷನ್ ಯಾವುದು? ಏನು ಅಪರಾಧ, ಏನು ಶಿಕ್ಷೆ ಎನ್ನುವ ವಿವರ ಇಲ್ಲಿದೆ.
- Ramesha M
- Updated on: Dec 29, 2025
- 7:39 pm
ಬಿಜೆಪಿಯೊಂದಿಗೆ ಮೈತ್ರಿ ಕಡಿತದ ಹಿಂದಿದೆ ದೇವೇಗೌಡ್ರ ರಾಜಕೀಯ ಲೆಕ್ಕಾಚಾರ, ವಿಜಯೇಂದ್ರ ಹೇಳಿದ್ದೇನು?
ಹೆಚ್ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (B.Y.Vijayendra), ಸ್ವಂತ ಬಲದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹುದು. 130-140 ಸ್ಥಾನಗಳೊಂದಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಅಂತೇಳುವ ಮೂಲಕ ವಿಧಾನಸಭೆ ಮೈತ್ರಿಯನ್ನ ತಳ್ಳಿಹಾಕಿದ್ದಾರೆ. ಇದು ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.
- Ramesh B Jawalagera
- Updated on: Dec 27, 2025
- 3:30 pm
ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚಾಗ್ತಿದೆಯಾ ಗೊಂದಲ? ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದ ದೇವೇಗೌಡ
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಬೆಳವಣಿಗೆಗಳು ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಹೆಚ್ಚಾಗಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿವೆ.
- Ganapathi Sharma
- Updated on: Dec 27, 2025
- 9:49 am
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಎಲ್ಲಿಗೆ ಹೋದ್ರೂ ತಪ್ಪುತ್ತಿಲ್ಲ ಸಂಕಷ್ಟ!
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಇನ್ನಿಲ್ಲದ ಕಾನೂನು ಹೋರಾಟ ನಡೆಸಿದ್ದಾರೆ. ಆದ್ರೆ, ಎಲ್ಲೂ ಹೋದರೂ ಸಹ ಪ್ರಜ್ವಲ್ಗೆ ಸಂಕಷ್ಟ ಮಾತ್ರ ತಪ್ಪುತ್ತಿಲ್ಲ. ಇದೀಗ ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ.
- Ramesh B Jawalagera
- Updated on: Dec 11, 2025
- 9:55 pm
ಭಗವದ್ಗೀತೆಯಿಂದ ಹೊಟ್ಟೆ ತುಂಬಲ್ಲವೆಂದು ಅಂದು ಹೇಳಿದ್ದೇಕೆ? ಹೆಚ್ಡಿ ಕುಮಾರಸ್ವಾಮಿ ಸ್ಪಷ್ಟನೆ
ಸಚಿವ ಹೆಚ್.ಸಿ. ಮಹದೇವಪ್ಪ ಅವರು ಭಗವದ್ಗೀತೆ ಕುರಿತು ಮಾಡಿದ್ದ ಟೀಕೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಭಗವದ್ಗೀತೆ ಸತ್ಯದ ಜ್ಞಾನ ಸಂಪಾದನೆಗೆ ಸರ್ವೋತ್ಕೃಷ್ಟ ಗ್ರಂಥ ಎಂದು ನಾನು ಇಂದು ಭಾವಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮಹದೇವಪ್ಪಗೆ ಕುಮಾರಸ್ವಾಮಿ ನೀಡಿರುವ ತಿರುಗೇಟು ಇಲ್ಲಿದೆ.
- Ganapathi Sharma
- Updated on: Dec 8, 2025
- 12:23 pm
Belagavi Session: ಇಂದಿನಿಂದ ಚಳಿಗಾಲದ ಅಧಿವೇಶನ, ಬೆಳಗಾವಿಯಲ್ಲಿ ಬೀಡುಬಿಟ್ಟ ಇಡೀ ಸರ್ಕಾರ, ವಿಪಕ್ಷಗಳು
ಬೆಳಗಾವಿಯಲ್ಲಿ ಕರ್ನಾಟಕದ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದೆ. ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪಗಳೊಂದಿಗೆ ವಿಪಕ್ಷಗಳು ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾಗಿವೆ. ಬಿಜೆಪಿ 20,000 ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಕಾಂಗ್ರೆಸ್ ಕೇಂದ್ರದ ಮೇಲೆ ಆರೋಪ ಹೊರಿಸಿ, ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಳ್ಳಲು ಸಿದ್ಧವಾಗಿದೆ.
- Prasanna Gaonkar
- Updated on: Dec 8, 2025
- 6:49 am
ಶಿಕ್ಷಣದ ಪ್ರತೀ ಹಂತದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆಗೆ ಕುಮಾರಸ್ವಾಮಿ ಮನವಿ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸಕ್ಕೆ ಪುಟಿನ್ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ, ಪುಟಿನ್ ಅವರಿಗೆ ಭಗವದ್ಗೀತೆ ಪುಸ್ತಕವನ್ನು ಉಡುಗೊರೆಯಾಗಿ ನೀಡಿ ಸ್ವಾಗತಕೋರಿದ್ದಾರೆ. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಗೀತೆಯ ಬೋಧನೆಗಳು ಪ್ರಪಂಚದಲ್ಲಿರುವ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ. ಇದರ ನಡುವೆ ಮತ್ತೊಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ, ಭಗವದ್ಗೀತೆಯನ್ನು ಶಾಲಾ ಪಠ್ಯದಲ್ಲಿ ಸೇರ್ಪಡೆ ಮಾಡಬೇಕೆಂದು ಪತ್ರ ಬರೆದಿದ್ದಾರೆ.
- Ramesh B Jawalagera
- Updated on: Dec 5, 2025
- 7:57 pm
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್ಗೆ ಎಂಬಿ ಪಾಟೀಲ್ ಎಚ್ಚರಿಕೆ
ಕರ್ನಾಟಕದಲ್ಲಿ 63 ಪರ್ಸೆಂಟ್ ಭ್ರಷ್ಟಾಚಾರ ಇದೆ ಎಂದು ಉಪಲೋಕಾಯುಕ್ತ ವೀರಪ್ಪ ಹೇಳಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣಸಲ್ಲಿ ಸಂಚಲನ ಮೂಡಿಸಿದ್ದು, ಇದರ ಬೆನ್ನಲ್ಲೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಭಾರೀ ಭ್ರಷ್ಟಾಚಾರವಾಗಿದೆ ಎಂದು ಕೆ ಆರ್ ಪೇಟೆ ಶಾಸಕ ಮಂಜು ಗಂಭೀರ ಆರೋಪ ಮಾಡಿದ್ದಾರೆ. ಸಚಿವರು ಕಿಕ್ ಬ್ಯಾಕ್ ಮಾಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದಕ್ಕೆ ಸಚಿವ ಎಂಪಿ ಪಾಟೀಲ್ ಗರಂ ಆಗಿದ್ದಾರೆ,
- Ramesh B Jawalagera
- Updated on: Dec 5, 2025
- 4:34 pm
ಬೆಳಗಾವಿ ಅಧಿವೇಶನಕ್ಕೆ ಸುವರ್ಣಸೌಧ ಸಜ್ಜು: 12 ಸಾವಿರ ಸಿಬ್ಬಂದಿ, 3 ಸಾವಿರ ರೂಮ್ಗಳು ಬುಕ್
ಡಿಸೆಂಬರ್ 8ರಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಇಡೀ ಸರ್ಕಾರವೇ ಬೆಳಗಾವಿಯಲ್ಲಿರಲಿದ್ದು, ಅಚ್ಚುಕಟ್ಟಾಗಿ ಅಧಿವೇಶನ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ದೆಹಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ.
- Sahadev Mane
- Updated on: Dec 4, 2025
- 6:23 am
ರೇವಣ್ಣ, ರೇವಣ್ಣನ ಮಕ್ಕಳೇ ಆಡಳಿತ ಮಾಡಬೇಕು ಅಂತೇನಿಲ್ಲ: ಬಿಜೆಪಿ ಮುಖಂಡ ಕಿಡಿ
ಪ್ರಜ್ವಲ್ ಇಲ್ಲ ಅಂದರೆ ಮತ್ತೊಬ್ಬ ನಾಯಕ ಬರುತ್ತಾರೆ. ರೇವಣ್ಣ, ರೇವಣ್ಣನ ಕುಟುಂಬ ಇಲ್ಲದೆ ಹೋದರೂ ಹಾಸನ ಜಿಲ್ಲೆ ಅಭಿವೃದ್ಧಿ ಆಗುತ್ತೆ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿದ್ದಾರೆ. ಹೈಕೋರ್ಟ್ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ವಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದರು.
- Manjunath KB
- Updated on: Dec 3, 2025
- 10:34 pm