AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS

JDS

ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.

ಇನ್ನೂ ಹೆಚ್ಚು ಓದಿ

ಮಹಿಳೆಯರ ಮತ ಬೇಕು, ಅಧಿಕಾರ ಕೊಡಲು ಮನಸಿಲ್ಲ: ಸಂಪುಟದಲ್ಲಿ ಸ್ತ್ರೀಯರಿಗೆ ಅವಕಾಶ ಕೊಡದ ಬಗ್ಗೆ ಜೆಡಿಎಸ್ ಆಕ್ರೋಶ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಲ್ಲಿ ಒಬ್ಬರೇ ಒಬ್ಬ ಮಹಿಳಾ ಶಾಸಕಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಗ್ಗೆ ಟೀಕಿಸಿರುವ ಪ್ರತಿಪಕ್ಷ ಜೆಡಿಎಸ್, ಇದು ಮಹಿಳಾ ಸಬಲೀಕರಣಕ್ಕೆ ಮಾಡಿದ ಅವಮಾನ ಎಂದಿದೆ. ಮಾತಿನಲ್ಲಿ ಮಹಿಳಾ ಸಬಲೀಕರಣ ಹೇಳುವ ಕಾಂಗ್ರೆಸ್, ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನೀಡದಿರುವುದು ಸರಿಯಲ್ಲ ಎಂದು ಜೆಡಿಎಸ್ ಎಕ್ಸ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ನಾನು ಕೂಡ ಕಾವೇರಿ ಕಣಿವೆಯಲ್ಲಿ ಹುಟ್ಟಿ ಬೆಳೆದಿದ್ದೇನೆ: ರೈತರಿಗೆ ಡಿಕೆಶಿ ಮಹತ್ವದ ಭರವಸೆ

ಕಾವೇರಿ ನೀರು ಹಂಚಿಕೆ ವಿವಾದ ಹಾಗೂ CWMA ಆದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರಿನ ಗೃಹಕಚೇರಿ 'ಕೃಷ್ಣಾ'ದಲ್ಲಿ ಇಂದು (ಆಗಸ್ಟ್ 02) ಮಹತ್ವದ ಸರ್ವಪಕ್ಷ ಸಭೆ ನಡೆದಿದ್ದು, ಸಭೆಯಲ್ಲಿ ಕಾವೇರಿ ನೀರು ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ವಿಚಾರಗಳ ಬಗ್ಗೆ ಚರ್ಚೆ ಆಗಿದೆ. ಇನ್ನು ಸಭೆ ಬಳಿಕ ಸಿಎಂ ಸುದ್ದಿಗೋಷ್ಠಿ ನಡೆಸಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವ ಡಿಟೇಲ್ಸ್ ಇಲ್ಲಿದೆ.

ಬಿಡದಿ ಟೌನ್‌ಶಿಪ್‌ ವಿರುದ್ಧ ಜೆಡಿಎಸ್‌ ರಣಕಹಳೆ: ದಳಪತಿಗಳ ಪಾದಯಾತ್ರೆಗೆ ಮರುದಿನಾಂಕ ಫಿಕ್ಸ್

ರಾಮನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಪಾದಯಾತ್ರೆಯ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಆಗಸ್ಟ್ 9ರಿಂದ 11ರವರೆಗೆ ಪಾದಯಾತ್ರೆ ಘೋಷಿಸಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ದಿಟ್ಟ ಹೆಜ್ಜೆ ಇಟ್ಟ ಡಿಕೆ ಶಿವಕುಮಾರ್

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕಾವೇರಿ ಜಲಾನಯನ ಪ್ರದೇಶದ ರೈತರ ಹಿತರಕ್ಷಣೆಗೆ ಮುಂದಾಗಿದೆ. ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕಾನೂನು ಹಾಗೂ ರಾಜಕೀಯ ಹೋರಾಟದ ಮುಂದಿನ ಹೆಜ್ಜೆಗಳ ಕುರಿತು ಚರ್ಚಿಸಲು ಸಿಎಂ ಡಿಕೆ ಶಿವಕುಮಾರ್ ಅವರು ಸರ್ವಪಕ್ಷಗಳ ಸಭೆ (All-Party Meeting) ಕರೆದಿದ್ದಾರೆ. ಆಗಸ್ಟ್ 2ರ ಭಾನುವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಸರ್ವಪಕ್ಷ ಸಭೆ ಕರೆದಿದ್ದಾರೆ.

ನೀಟ್​​ ವಿಚಾರವಾಗಿ ರಾಜ್ಯದಲ್ಲಿ ಹೋರಾಟ: ಕಾಂಗ್ರೆಸ್​​ಗೆ 2016ರ ಇತಿಹಾಸ ನೆನಪಿಸಿ ತಿವಿದ ಜೆಡಿಎಸ್​​

NEET Row: ನೀಟ್ (NEET) ಪರೀಕ್ಷೆ ಅಕ್ರಮ ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಹೋರಾಟದ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದ್ದು, 2016ರ ಪಿಯುಸಿ ಕೆಮಿಸ್ಟ್ರಿ ಪ್ರಶ್ನೆ ಪತ್ರಿಕೆ ಸೋರಿಕೆ ಇತಿಹಾಸವನ್ನು ನೆನಪಿಸಿ ವಾಗ್ದಾಳಿ ನಡೆಸಿದೆ. ಸಾಲು ಸಾಲು ಹಗರಣಗಳಾದಾಗ ಬಾಯಿ ಮುಚ್ಚಿಕೊಳ್ಳುವ ಕಾಂಗ್ರೆಸ್‌ ನಾಯಕರಿಗೆ, ಈಗ ಮಾತನಾಡಲು ಯಾವ ನೈತಿಕತೆ ಇದೆ ? ಎಂದೂ ಪ್ರಶ್ನಿಸಿದೆ.

  • Sunil MH
  • Updated on: Jul 23, 2026
  • 2:18 pm

ಅವನನ್ನು ಯಾವಾಗ ಕರ್ಕೊಂಡು ಬರ್ತೀಯಾ ಎಂದು ಕೇಳಿದ್ದರು ಚೆನ್ನಮ್ಮ: ಪರೋಕ್ಷವಾಗಿ ಪ್ರಜ್ವಲ್ ವಿಚಾರ ಪ್ರಸ್ತಾಪಿಸಿದ ಹೆಚ್​ಡಿಕೆ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ತಾಯಿ ಚೆನ್ನಮ್ಮ ಅವರ ಮೂರನೇ ದಿನದ ಹಾಲು ತುಪ್ಪ ಕಾರ್ಯದ ಸಂದರ್ಭ ಭಾವುಕರಾದರು. ಕಳೆದ ಒಂದೂವರೆ ವರ್ಷದಿಂದ ತಾಯಿ ಅನುಭವಿಸಿದ ಹಿಂಸೆ, ಯಾವಾಗ ಕರ್ಕೊಂಡು ಬರ್ತಿಯಪ್ಪ ಎಂಬ ಅವರ ಮಾತುಗಳನ್ನು ನೆನೆದು ಕುಮಾರಸ್ವಾಮಿ ಭಾವುಕರಾದರು. ಸಮಾಧಿ ಸ್ಥಳವನ್ನು ಧಾರ್ಮಿಕ ಮತ್ತು ಸಮಾಜ ಸೇವೆಯ ಕೇಂದ್ರವಾಗಿ ಅಭಿವೃದ್ಧಿಪಡಿಸುವ ಇಂಗಿತ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಬರದ ನಡುವೆ ಕಾಂಗ್ರೆಸ್ ನಾಯಕರ ಜಾಲಿ ಟ್ರಿಪ್​​’: ಸರ್ಕಾರದ ವಿರುದ್ಧ ಮುಗಿಬಿದ್ದ ವಿಪಕ್ಷಗಳು

Karnataka Politics: ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ ಎಂದು ಆರೋಪಿಸಿ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ವಾಗ್ದಾಳಿ ನಡೆಸಿವೆ. ರೈತರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್​​ ಸರ್ಕಾರ ತಕ್ಷಣವೇ ಬರ ಪೀಡಿತ ಪ್ರದೇಶಗಳನ್ನು ಘೋಷಿಸಿ ರೈತರ ಸಾಲ ಮನ್ನಾ ಮಾಡುವುದರ ಜೊತೆಗೆ ಪರಿಹಾರ ನೀಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಿಸುತ್ತಿದ್ದಂತೆಯೇ ಪ್ರತ್ಯಕ್ಷವಾದ ಗರುಡ!

ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಸಮಾಧಿ ಬಳಿ ಅಚ್ಚರಿಯೊಂದು ನಡೆದಿದೆ. ಸಮಾಧಿ ಬಳಿ ಅರ್ಚಕರು ವಿಷ್ಣು ಸಹಸ್ರನಾಮ ಹಾಗೂ ಇತರ ಮಂತ್ರ ಪಠಣ ಮಾಡುತ್ತಿದ್ದಾಗ ಗರುಡವೊಂದು ಹಾರಿ ಬಂದು ಸಮಾಧಿಗೆ ಪ್ರದಕ್ಷಿಣೆ ಹಾಕಿ ಹೋಗಿದೆ.

ಮತ್ತೊಂದು ಸ್ವರೂಪ ಪಡೆದ ಬಿಡದಿ ಟೌನ್​​ಶಿಪ್ ವಿವಾದ: ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ

ಬಿಡದಿ ಟೌನ್ ಶಿಪ್ ಯೋಜನೆ ಪರ ವಿರೋಧದ ರಾಜಕೀಯ ಹೋರಾಟ ಮತ್ತೊಂದು ಹಂತ ತಲುಪಿದ್ದು, ಇದೀಗ ರಾಜಕೀಯ ನಾಯಕರು ಪರಸ್ಪರ ವೈಯಕ್ತಿಯಕವಾಗಿ ಆರೋಪ ಪ್ರತ್ಯಾರೋಪಕ್ಕಿಳಿದಿದ್ದಾರೆ. ಹೌದು...ಸಿಎಂ ಡಿಕೆ ಶಿವಕುಮಾರ್ ವಿರುದ್ಧ ಭಷ್ಟ್ರಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕಾಂಗ್ರೆಸ್ ಶಾಸಕ ಹೆಚ್​​​​ಸಿ ಬಾಲಕೃಷ್ಣ, ಡಿಎಲ್ಎಫ್ ಗೆ ಟೆಂಡರ್ ಡೀಲ್ ಬಗ್ಗೆ ಪ್ರಸ್ತಾಪಿಸಿ ಕೌಂಟರ್ ಕೊಟ್ಟಿದ್ದಾರೆ.

ದೋಸ್ತಿಯಲ್ಲಿ ಕುಸ್ತಿ: ಬಿಜೆಪಿ ನಾಯಕರ ಚರ್ಚೆಗೂ ಮುನ್ನವೇ ಪ್ರತ್ಯೇಕ ಪಾದಯಾತ್ರೆ ಘೋಷಿಸಿದ ಜೆಡಿಎಸ್

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಗಟ್ಟಿಗೊಳಿಸಲು ಕಮಲ ವರಿಷ್ಠರು ಪ್ಲ್ಯಾನ್ ಮಾಡುತ್ತಿದ್ದಾರೆ. ಮೈತ್ರಿ ಗೊಂದಲದ ಹಿನ್ನೆಲೆಯಲ್ಲಿ ಸರಿದಾರಿಗೆ ತರಲು ದೆಹಲಿ ನಾಯಕರೇ ಎಂಟ್ರಿ ಕೊಟ್ಟಿದ್ದು, ಶೀಘ್ರದಲ್ಲಿ ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿಯನ್ನು ರಚನೆ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ.ಇದರ ಮಧ್ಯೆ ಉಭಯ ಪಕ್ಷಗಳ ನಾಯಕರ ನಡುವೆ ಸಮನ್ವಯತೆಯ ಕೊರತೆ ಇದೆ. ಇದೀಗ ಬಿಡದಿ ಟೌನ್​​​ಶಿಪ್ ವಿರೋಧಿ ಪಾದಯಾತ್ರೆಯಲ್ಲೂ ಸಹ ದೋಸ್ತಿಗಳ ನಡುವೆ ಗೊಂದಲ ಏರ್ಪಟ್ಟಿದೆ

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಈಗ ಹೇಗಿದೆ? ಮಣಿಪಾಲ್ ಆಸ್ಪತ್ರೆಯ ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ

HD Deve Gowda wife Chennamma Health update: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯದಲ್ಲಿ ನಿನ್ನೆಗಿಂತ ಇಂದು ಸುಧಾರಣೆ ಕಂಡುಬಂದಿದ್ದು, ಉಸಿರಾಟದ ತೊಂದರೆ ಶೇ 20ರಿಂದ 30ರಷ್ಟು ಹತೋಟಿಗೆ ಬಂದಿದೆ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ವೈದ್ಯರ ಹೇಳಿಕೆಯ ವಿಡಿಯೋ ಇಲ್ಲಿದೆ.

  • Sunil MH
  • Updated on: Jul 18, 2026
  • 11:19 am

ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ

HD Deve Gowda Wife Chennamma health update: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಇಂದು ಬೆಳಗ್ಗೆ ಆರೋಗ್ಯ ಬುಲೆಟಿನ್ ಬಿಡುಗಡೆ ಮಾಡುವ ಸಾಧ್ಯತೆಯಿದೆ.

  • Sunil MH
  • Updated on: Jul 18, 2026
  • 8:11 am