AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS

JDS

ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.

ಇನ್ನೂ ಹೆಚ್ಚು ಓದಿ

ಮೂರು ದಿನ ಮೊದಲೇ ವಿಧಾನಮಂಡಲ ಅಧಿವೇಶನಕ್ಕೆ ತೆರೆ: ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆ ನಡುವೆಯೇ, ಕರ್ನಾಟಕ ವಿಧಾನಮಂಡಲದ ಮಳೆಗಾಲದ ಅಧಿವೇಶನವನ್ನು ನಿಗದಿತ ಸಮಯಕ್ಕಿಂತ 3 ದಿನ ಮುಂಚಿತವಾಗಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಆ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್​​. ಅಶೋಕ್​​ ವಾಗ್ದಾಳಿ ನಡೆಸಿದ್ದು, ​20-30 ವರ್ಷಗಳಲ್ಲಿ ಮೊದಲ ಬಾರಿ ವಿಪಕ್ಷಗಳಿಗೆ ಹೆದರಿ ಸರ್ಕಾರ ಓಡಿದೆ ಎಂದಿದ್ದಾರೆ.

ಹಾಸನದಲ್ಲಿ ಮತ್ತೆ ಹೆಚ್​​.ಡಿ.ರೇವಣ್ಣ v/s ಜಿಲ್ಲಾಧಿಕಾರಿ: ಗ್ರಾ.ಪಂ.ಗಳ ಚುನಾವಣೆ ಮೀಸಲು ಸಂಬಂಧ ಜಟಾಪಟಿ

ಹಾಸನದ ಗ್ರಾಮ ಪಂಚಾಯತಿ ಚುನಾವಣೆ ಮೀಸಲಾತಿ ನಿಗದಿ ವಿಚಾರದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ನಡುವೆ ತೀವ್ರ ಜಟಾಪಟಿ ನಡೆದಿದ್ದು, ಶಾಸಕರ ನಡೆಗೆ ಕಾಂಗ್ರೆಸ್ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಗ್ರಾಮ ಪಂಚಾಯತಿ ಚುನಾವಣೆಗೆ ಅವೈಜ್ಞಾನಿಕವಾಗಿ ಮೀಸಲಾತಿ ನಿಗದಿ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ನೇತೃತ್ವದಲ್ಲಿ ಹಾಸನದಲ್ಲಿ ಜೆಡಿಎಸ್​​ ಬೃಹತ್​​ ಪ್ರತಿಭಟನೆ ನಡೆಸಿದೆ.

ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಹೋರಾಟ ಮತ್ತಷ್ಟು ತೀವ್ರಗೊಳಿಸಲು ಮೈತ್ರಿಪಡೆ ಸಜ್ಜು

ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಪಡೆ ಹೋರಾಟ ತೀವ್ರಗೊಳಿಸಿದ್ದು, ನಾಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಮತ್ತೊಂದೆಡೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ಆಗ್ರಹಿಸಿ ಪಾದಯಾತ್ರೆಗೆ ನಿರ್ಧರಿಸಿರುವ ಬಿಜೆಪಿಗರು, ಎರಡು ಮಾರ್ಗದ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಸಂಬಂಧ ಆಗಸ್ಟ್ 26ರಂದು ದಿನಾಂಕ ಮತ್ತು ಮಾರ್ಗವನ್ನು ಬಿಜೆಪಿ ಅಂತಿಮ‌ಗೊಳಿಸಲಿದೆ ಎನ್ನಲಾಗಿದೆ.

  • Sunil MH
  • Updated on: Aug 23, 2026
  • 12:14 pm

ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್ ಬಳಸಿದ್ದು ಬಹಿರಂಗವಾಗಿದೆ. ಪೋಷಕರು ಸೇರಿ ಹಲವರೊಂದಿಗೆ ಸಂಪರ್ಕದಲ್ಲಿದ್ದ ಪ್ರಜ್ವಲ್ ಎರಡು ಮೊಬೈಲ್‌ಗಳನ್ನು ಬಳಸಿದ್ದರು. ಪ್ರತಾಪ್ ರಾಯ್ ಮೂಲಕ ನವೀನ್ ಎಂಬಾತ ಮೊಬೈಲ್ ಪೂರೈಸಿದ್ದು, ಆತನ ಬಂಧನವಾಗಿದೆ. ಡಿಐಜಿ ಜಿನೇಂದ್ರ ಗಣಗಾವಿ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದ್ದು, ಜೈಲು ಸಿಬ್ಬಂದಿಗೂ ಸಂಕಷ್ಟ ಎದುರಾಗಿದೆ.

FIR ಹಾಕಿದ್ರೂ ಬೆದರಬೇಡಿ‌: ನೈಸ್​ ರಸ್ತೆಯಲ್ಲಿ ಟೋಲ್​ ಕಟ್ಟದಂತೆ ಕುಮಾರಸ್ವಾಮಿ ಮತ್ತೆ ಕರೆ

ನೈಸ್ ರಸ್ತೆ ಟೋಲ್ ಪಾವತಿ ವಿಚಾರವಾಗಿ ವಾಹನ ಸವಾರರಲ್ಲಿ ಗೊಂದಲ ಉಂಟಾಗಿದೆ. ವಾಹನ ಸವಾರರು ನೈಸ್ ರಸ್ತೆ ಬಳಕೆಗೆ ಟೋಲ್ ಕಟ್ಟಬೇಡಿ ಎಂದು ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಹೇಳಿದ್ದು, ಇದಾದ ಬಳಿಕ ಜನರು ಟೋಲ್ ಕಟ್ಟಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಟೋಲ್ ಸಿಬ್ಬಂದಿ ಹಾಗೂ ವಾಹನ ಸವಾರರ ನಡುವೆ ನಿತ್ಯ ವಾಗ್ದಾದ , ಗಲಾಟೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಮತ್ತೊಮ್ಮೆ ಕುಮಾರಸ್ವಾಮಿ, ಟೋಲ್ ಕಟ್ಟದಂತೆ ಕರೆ ನೀಡಿದ್ದಾರೆ.

ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕಪ್ಪು ಟೀ ಶರ್ಟ್​​ ಧರಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ

ವಾಲ್ಮೀಕಿ ಹಗರಣದಲ್ಲಿ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಪ್ರತಿಭಟನೆ ತೀವ್ರಗೊಳಿಸಿವೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಕಪ್ಪು ಟೀ-ಶರ್ಟ್ ಧರಿಸಿ ಶಾಸಕರು ವಿಧಾನಸೌಧದತ್ತ ತೆರಳಿದ್ದಾರೆ. ಕಾಂಗ್ರೆಸ್ ಸರಕಾರ ಭ್ರಷ್ಟ ಮಂತ್ರಿಯನ್ನು ರಕ್ಷಿಸುತ್ತಿದೆ ಮತ್ತು ದಲಿತರ ಹಣದ ದುರ್ಬಳಕೆ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ವಿಪಕ್ಷಗಳು ಆರೋಪಿಸಿವೆ.

Freedom Park protest: ಇಂದು ಫ್ರೀಡಂಪಾರ್ಕ್​ನಲ್ಲಿ ಜೆಡಿಎಸ್​ ಪ್ರತಿಭಟನೆ; ಪಾರ್ಕ್ ಸುತ್ತಮುತ್ತ ಸಂಚಾರ ಮಾರ್ಗ ಬದಲಾವಣೆ

ಫ್ರೀಡಂಪಾರ್ಕ್‌ನಲ್ಲಿ ಇಂದು ಜೆಡಿಎಸ್ (JDS) ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಫ್ರೀಡಂಪಾರ್ಕ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಬೆಳಿಗ್ಗೆ 8:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ಸಂಚಾರ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿ ಸಂಚಾರ ಪೊಲೀಸರು ಆದೇಶಿಸಿದ್ದಾರೆ.

ನಾಗೇಂದ್ರ ರಾಜೀನಾಮೆಗೆ ಬಿಜೆಪಿ-ಜೆಡಿಎಸ್ ಪಟ್ಟು: ಸದನದೊಳಗೆ ಗದ್ದಲ, ಜಿಲ್ಲೆಗಳಲ್ಲಿಯೂ ಪ್ರತಿಭಟನೆ ಜೋರು

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣವನ್ನು ಮುಂದಿಟ್ಟುಕೊಂಡು ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಮತ್ತು ಜೆಡಿಎಸ್ ಮತ್ತೆ ಪಟ್ಟು ಹಿಡಿದಿವೆ. ವಿಧಾನಪರಿಷತ್‌ನಲ್ಲಿ ಘೋಷಣೆ, ವಾಕ್ಸಮರ ತೀವ್ರಗೊಂಡರೆ, ವಿಧಾನಸಭೆಯಲ್ಲೂ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಪ್ರತಿಪಕ್ಷ ನಾಯಕರು ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.

ವಿಧಾನಸಭೆ ಅಧಿವೇಶನದಲ್ಲಿ ಇಂದಿನಿಂದ ಅಸಲಿ ಕದನ! ನಾಗೇಂದ್ರ ರಾಜೀನಾಮೆಗೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್

ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ವಾಲ್ಮೀಕಿ ನಿಗಮ ಹಗರಣದ ಆರೋಪಿ ಬಿ. ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿಯಲಿದೆ. ಈ ವಿಚಾರವನ್ನು ಮುಂದಿಟ್ಟುಕೊಂಡು ಸದನದ ಒಳಗೆ ಹಾಗೂ ಹೊರಗೆ ಜೆಡಿಎಸ್‌ನೊಂದಿಗೆ ಸೇರಿ ಪ್ರತಿಭಟನೆ ನಡೆಸಲು ಸಿದ್ಧವಾಗಿದೆ. ಮಹಿಳಾ ಸಚಿವರ ಕೊರತೆ, ಪಿಂಚಣಿ ಸ್ಥಗಿತ ಸೇರಿದಂತೆ ಹಲವು ವಿಷಯಗಳ ಬಗ್ಗೆಯೂ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ.

Karnataka Assembly Session 2026 Live: ಕರ್ನಾಟಕ ವಿಧಾನಸಭೆ ಅಧಿವೇಶನ ನೇರಪ್ರಸಾರ; ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್.ಪಾಟೀಲ್​ ಆಯ್ಕೆ

ಕರ್ನಾಟಕ ವಿಧಾನಸಭೆ ಅಧಿವೇಶನ 2026 ನೇರಪ್ರಸಾರ: ಕರ್ನಾಟಕ ವಿಧಾನಸಭೆಯಲ್ಲಿ ಹೊಸ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಶುಕ್ರವಾರ ಆರಂಭಗೊಂಡಿತು. ವಿರೋಧ ಪಕ್ಷ ಬಿಜೆಪಿ ಕಲಾಪವನ್ನು ಸಂಪೂರ್ಣವಾಗಿ ಬಹಿಷ್ಕರಿಸಿತು. ಮುಖ್ಯಮಂತ್ರಿಗಳು ರೋಣ ಶಾಸಕ ಜಿ.ಎಸ್. ಪಾಟೀಲ್ ಅವರನ್ನು ಸ್ಪೀಕರ್ ಸ್ಥಾನಕ್ಕೆ ಅಧಿಕೃತವಾಗಿ ಸೂಚಿಸಿದ್ದು, ಉಪಮುಖ್ಯಮಂತ್ರಿಗಳು ಅನುಮೋದಿಸಿದ್ದಾರೆ. ಬಿಜೆಪಿ ಬಹಿಷ್ಕಾರವು ಸದನದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Karnataka Assembly Session 2026 Live: ಹಂಗಾಮಿ ಸ್ಪೀಕರ್ ಟಿ.ಬಿ. ಜಯಚಂದ್ರ ನೇತೃತ್ವದಲ್ಲಿ ಕಲಾಪ ಪ್ರಾರಂಭ

ಕರ್ನಾಟಕ ವಿಧಾನಸಭೆ ಅಧಿವೇಶನ 2026 ನೇರಪ್ರಸಾರ: ಕರ್ನಾಟಕ ರಾಜ್ಯ ವಿಧಾನಮಂಡಲದ ಮಳೆಗಾಲದ ಅಧಿವೇಶನ ಆಗಸ್ಟ್ 13 ರಂದು ಆರಂಭಗೊಂಡಿತು. ವಿಧಾನಸಭೆ ಮತ್ತು ವಿಧಾನಪರಿಷತ್ ಎರಡರಲ್ಲೂ ಪ್ರಮುಖ ಕಲಾಪಗಳು ನಡೆದವು. ಹಂಗಾಮಿ ಸ್ಪೀಕರ್ ಟಿ.ಬಿ. ಜಯಚಂದ್ರ ಕಲಾಪ ಪ್ರಾರಂಭಿಸಿದರು. ಹೊಸ ಸಚಿವರ ಪರಿಚಯದ ಕುರಿತು ವಿಪಕ್ಷ ನಾಯಕ ಆರ್. ಅಶೋಕ್ ಅವರ ಮನವಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೌರವಿಸಿದರು. ಡಾ. ಯತೀಂದ್ರ ಸಿದ್ದರಾಮಯ್ಯ ವಿಧಾನಪರಿಷತ್ ಸಭಾನಾಯಕರಾಗಿ ಕಾರ್ಯಾರಂಭ ಮಾಡಿದರು.

‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’! ಜೆಪಿ ಭವನದ ಗೋಡೆ, ಗೇಟ್​ಗೆ ಪೋಸ್ಟರ್ ಅಂಟಿಸಿ ಹೆಚ್​ಡಿಕೆ ವಿರುದ್ಧ ಕಾಂಗ್ರೆಸ್ ವ್ಯಂಗ್ಯ

ಬಿಡದಿ ಟೌನ್‌ಶಿಪ್ ಯೋಜನೆಯ ವಿರೋಧಿಸಿ ಜೆಡಿಎಸ್ ಪಾದಯಾತ್ರೆ ನಡೆಸುತ್ತಿರುವ ನಡುವೆ, ಕಾಂಗ್ರೆಸ್ ಯುವ ಘಟಕವು ಜೆಪಿ ಭವನದ ಗೋಡೆ ಮತ್ತು ಗೇಟ್‌ಗಳಿಗೆ ಪೋಸ್ಟರ್‌ಗಳನ್ನು ಅಂಟಿಸಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಗುರಿಯಾಗಿಸಿಕೊಂಡು, ‘ಹೊಟ್ಟೆ ಕಿಚ್ಚಿನ ಸುಮಾರ್ ಕೋಳಿ’ ಎಂದು ಲೇವಡಿ ಮಾಡಲಾಗಿದೆ.