JDS
ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.
ಇನ್ನೂ ಹೆಚ್ಚು ಓದಿಟಾರ್ಗೆಟ್ ಯಾರು? ದೇಶವೇ ಅಲ್ಲೋಲ ಕಲ್ಲೋಲ ಆಗೋ ದಾಖಲೆ ಏನು? ಇಲ್ಲಿದೆ ವಿವರ
ಅಮೆರಿಕಾಕ್ಕೆ ಹೋಗುವ ಮುನ್ನವೇ ಕರ್ನಾಟಕ ಮಾತ್ರವಲ್ಲ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯ ಹೇಳುತ್ತೇನೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ. ಇದೀಗ ವಿದೇಶ ಪ್ರವಾಸದಿಂದ ಕುಮಾರಸ್ವಾಮಿ ವಾಪಾಸ್ ಆಗಿದ್ದು, ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯವನ್ನು ಯಾವಾಗ ಹೇಳುತ್ತಾರೆ ಎನ್ನುವ ಚರ್ಚೆ ಶುರುವಾಗಿದೆ. ಸೋಮವಾರ ಅಥವಾ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಕೆಲವೊಂದಿಷ್ಟು ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ ಎನ್ನುವುದು ಮೂಲಗಳಿಂದ ತಿಳಿದುಬಂದಿದೆ. ಹೀಗಾಗಿ ಎಲ್ಲರ ಚಿತ್ತ ಕುಮಾರಸ್ವಾಮಿಯವರ ಸುದ್ದಿಗೋಷ್ಠಿಯತ್ತ ನೆಟ್ಟಿದ್ದು, ಯಾರಿಗೆ ಸಂಬಂಧಿಸಿದ ಯಾವೆಲ್ಲಾ ದಾಖಲೆಗಳನ್ನು ಬಿಡುಗಡೆ ಮಾಡುತ್ತಾರೆ ಎನ್ನುವುದು ಕುತೂಹಲ ಮೂಡಿಸಿದೆ.
- Sunil MH
- Updated on: Sep 13, 2026
- 5:25 pm
ಹಾಸನ ಸಂಸದ ಶ್ರೇಯಸ್ ಪಟೇಲ್,-ಶಾಸಕ ಎ.ಮಂಜು ನಡುವೆ ತಿಕ್ಕಾಟ: ಅಧಿಕಾರಿಗಳಿಗೆ ಸಂಕಟ!
ಹಾಸನ ಸಂಸದ ಶ್ರೇಯಸ್ ಪಟೇಲ್ ಮತ್ತು ಶಾಸಕ ಎ. ಮಂಜು ನಡುವಿನ ರಾಜಕೀಯ ತಿಕ್ಕಾಟ ತೀವ್ರಗೊಂಡಿದ್ದು, ನಿಯಮ ಉಲ್ಲಂಘಿಸಿ ಸಭೆ ನಡೆಸಿದ್ದಾರೆಂದು ಆರೋಪಿಸಿ ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳ ವಿರುದ್ಧ ಶಾಸಕರು ಹಕ್ಕುಚ್ಯುತಿ ದೂರು ನೀಡಿದ್ದಾರೆ. ಆದರೆ ಶಾಸಕರ ನಡೆ ಖಂಡಿಸಿರುವ ಸಂಸದರು, ಇದೇ ರೀತಿ ಮುಂದುವರಿದರೆ ತಾನು ಕೂಡ ಲೋಕಸಭಾ ಸ್ಪೀಕರ್ಗೆ ದೂರು ನೀಡಬೇಕಾಗುತ್ತೆ ಎಂದು ಎಚ್ಚರಿಸಿದ್ದಾರೆ.
- Manjunath KB
- Updated on: Sep 11, 2026
- 6:03 pm
ದೇವೇಗೌಡ್ರು ಬೇಕಿದ್ರೆ ಕೋರ್ಟ್ಗೆ ಹೋಗಲಿ, ಉಪವಾಸ ಮಾಡ್ಲಿ: ನೈಸ್ʼ ಪತ್ರಕ್ಕೆ ಡಿಕೆಶಿ ತಿರುಗೇಟು
ಬೆಂಗಳೂರಿನ ನೈಸ್ ರಸ್ತೆ ಟೋಲ್ ವಿಚಾರವಾಗಿ ರಾಜಕೀಯ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ನಡೆದಿವೆ. ಯಾರು ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಬೇಡಿ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕರೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರು ಟೋಲ್ ಕಟ್ಟಲು ಹಿಂದೇಟು ಹಾಕುತ್ತಿದ್ದು, ಇದರಿಂದ ಟೋಲ್ ಸಿಬ್ಬಂದಿ ಜನರ ನಡುವೆ ಗಲಾಟೆಗಳು ನಡೆಯುತ್ತಿವೆ. ಇದರ ಮಧ್ಯೆ ಇದೀಗ ಎಂಟ್ರಿ ಕೊಟ್ಟಿರುವ ದೇವೇಗೌಡ್ರಿಗೆ ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
- Naveen Kumar
- Updated on: Sep 7, 2026
- 7:24 pm
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಕುಳಿತು ಶಾಸಕ ಶರಣಗೌಡ ಪ್ರತಿಭಟನೆ! ರೈತರ ಸಂಕಷ್ಟಕ್ಕೆ ಸ್ಪಂದಿಸಲು ಆಗ್ರಹ
ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಿದರು. ಗುರುಮಠಕಲ್ ಮತ್ತು ಯಾದಗಿರಿ ಪ್ರದೇಶಗಳನ್ನು ಬರಪೀಡಿತ ಎಂದು ಘೋಷಿಸದಿರುವ ಸರ್ಕಾರದ ನಿರ್ಧಾರದ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದರು. ರೈತರು ತೀವ್ರ ಸಂಕಷ್ಟದಲ್ಲಿದ್ದು, ಬರಗಾಲದಿಂದ ಸಾಯುತ್ತಿದ್ದಾರೆ ಎಂದು ಶರಣಗೌಡ ಪ್ರತಿಪಾದಿಸಿದರು.
- Sunil MH
- Updated on: Sep 7, 2026
- 12:09 pm
ಕೆಪಿಎಸ್ಸಿ ಹಗರಣ: ಆರೋಪಿ ಬಸವರಾಜ ಕನ್ನಾಳೆ ಬಗ್ಗೆ ಸ್ಫೋಟ ಅಂಶ ಬಿಚ್ಚಿಟ್ಟ ಈಶ್ವರ್ ಖಂಡ್ರೆ ವಿರುದ್ಧದ ಸ್ಪರ್ಧೆಗೆ ಮುಂದಾಗಿದ್ರಾ?
ಕೆಪಿಎಸ್ಸಿ ಪಶು ವೈದ್ಯರ ನೇಮಕಾತಿಯಲ್ಲಿ ಹಗರಣ ಪ್ರಕರಣದ ಆರೋಪಿ ಬಸವರಾಜ ಕನ್ನಾಳೆ ಭಾಲ್ಕಿಯ ಬಿಜೆಪಿ ಕಾರ್ಯಕರ್ತ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು. ನನ್ನ ವಿರುದ್ಧ ಬಿಜೆಪಿಯಿಂದ ಸ್ಪರ್ಧೆಗೆ ಬಸವರಾಜ ಕನ್ನಾಳೆ ಸಿದ್ಧತೆ ನಡೆಸಿದ್ದ. ಬಿಜೆಪಿಯವರ ಶಿಫಾರಸಿನಿಂದ ಸಿಂಡಿಕೇಟ್ ಸದಸ್ಯನಾಗಿದ್ದೇನೆ ಎಂದಿದ್ದ. ರಾಜ್ಯಪಾಲರು ಯಾವ ಮಾನದಂಡದಲ್ಲಿ ಆತನನ್ನು ನೇಮಿಸಿದರು? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಬಸವರಾಜ ಕನ್ನಾಳೆ ನನ್ನ ಕಚೇರಿಗೆ ಬಂದು ಆಶೀರ್ವಾದ ಕೇಳಿದ್ದರು ಎಂದು ಆತನ ಜೊತೆಗಿನ ಫೋಟೋ ವೈರಲ್ ಬಗ್ಗೆ ಸ್ಪಷ್ಟಪಡಿಸಿದರು.
- Kiran Haniyadka
- Updated on: Sep 4, 2026
- 5:32 pm
ಕೆಪಿಎಸ್ಸಿ ಹಗರಣ: ಪ್ರಿಯಾಂಕ್ ಖರ್ಗೆ RDPR ಮಂತ್ರಿಯಾಗಿದ್ದಾಗ ಏನೇನಾಯ್ತು ಅಂತ ಎಳೆ ಎಳೆಯಾಗಿ ಬಿಚ್ಚಿಟ್ಟ ಕುಮಾರಸ್ವಾಮಿ
ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದ್ದು, ಐಎಎಸ್ ಅಧಿಕಾರಿ ಹಾಗೂ ಮಧ್ಯವರ್ತಿಯನ್ನ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದೆ. ಇದರ ಮಧ್ಯೆ ಕೆಪಿಎಸ್ಸಿ ಹಗರಣ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಆರ್ಡಿಪಿಆರ್ ಮಂತ್ರಿಯಾಗಿದ್ದಾಗ ಏನೆಲ್ಲಾ ಆಯ್ತು ಎನ್ನುವುದನ್ನು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
- Sunil MH
- Updated on: Sep 2, 2026
- 5:32 pm
ಬಳ್ಳಾರಿ ಪಾದಯಾತ್ರೆಗೆ ಬಿಜೆಪಿಯಲ್ಲೇ ಅಪಸ್ವರ: ಇನ್ನೊಂದೆಡೆ ಕಡ್ಡಿ ಮುರಿಂತೆ ಹೇಳಿದ ಕುಮಾರಸ್ವಾಮಿ
ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಬಿಜೆಪಿಯ ಆಗ್ರಹದಂತೆ ನಾಗೇಂದ್ರ ಸಚಿವ ಸ್ಥಾನವನ್ನು ತೊರೆದಿದ್ದಾರೆ. ಇದರೊಂದಿಗೆ ವಿಕ್ಷದ ಬೇಡಿಕೆ ಈಡೇರಿದೆ. ಆದರೂ ಬಳ್ಳಾರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಕ್ಷದಲ್ಲೇ ಪರ ವಿರೋಧದ ಮಾತುಗಳು ಕೇಳಿಬರುತ್ತಿವೆ. ಬಿಜೆಪಿ ಹಿರಿಯರ ಅಪಸ್ವರದ ನಡುವೆಯೂ ಪಾದಯಾತ್ರೆಗೆ ವಿಜಯೇಂದ್ರ ಸಿದ್ಧತೆ ನಡೆಸಿದ್ದಾರೆ. ಇದಕ್ಕೆ ಮಿತ್ರ ಪಕ್ಷದ ನಾಯಕ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
- Ramesh B Jawalagera
- Updated on: Aug 30, 2026
- 4:37 pm
‘ದೇಶವೇ ಅಲ್ಲೋಲ ಕಲ್ಲೋಲ ಆಗುವ ವಿಷಯ ಹೇಳುತ್ತೇನೆ’: ಸ್ಫೋಟಕ ಹೇಳಿಕೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಅಮೆರಿಕ ಪ್ರವಾಸದಿಂದ ಬಂದ ನಂತರ ದೇಶವೇ ಅಲ್ಲೋಲ ಕಲ್ಲೋಲವಾಗುವ ಮಹತ್ವದ ದಾಖಲೆ ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಇದೇ ವೇಳೆ ಸದನದಲ್ಲಿ KPSC ಅಕ್ರಮದ ಬಗ್ಗೆ ಸಿಎಂ ಉತ್ತರಿಸಿದ್ದ ದಾಖಲೆ ಬಿಡುಗಡೆ ಮಾಡಿದ ಹೆಚ್ಡಿಕೆ, ನೀವು ಯಾರನ್ನು ಕಾಪಾಡಲು ಮುಂದಾಗಿದ್ದೀರಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
- Sunil MH
- Updated on: Aug 30, 2026
- 2:11 pm
ಶಾಸಕರಿಗೆ ಕೆಲಸ ಮಾಡ್ತಿದ್ದೀಯಾ, ಜನರಿಗೆ ಮಾಡ್ತಿದ್ದೀಯಾ? ಮಹಿಳಾ ಅಧಿಕಾರಿ ವಿರುದ್ಧ ಹೆಚ್ಡಿ ಕುಮಾರಸ್ವಾಮಿ ಕೆಂಡ
Mandya News: ಮಂಡ್ಯದಲ್ಲಿ ನಡೆದ ದಿಶಾ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗರಂ ಆದರು. ಕೇಂದ್ರ ಸರ್ಕಾರದ ಯೋಜನೆ ಕಾಮಗಾರಿಗಳ ಪ್ರಗತಿ ಮಾಹಿತಿ ನೀಡದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ಜೊತೆಗೆ ಬರದ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರಿಗೆ ಸಾಲ ವಸೂಲಾತಿಗೆ ಒತ್ತಡ ಹೇರಬಾರದು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದ್ದಾರೆ.
- Dileep CP
- Updated on: Aug 29, 2026
- 8:32 pm
ಪ್ರಿಯಾಂಕ್ ಖರ್ಗೆ ವಿರುದ್ಧ ಕುಮಾರಸ್ವಾಮಿ ಬಿಗ್ ಬಾಂಬ್: ಸಚಿವರ ವಿರುದ್ಧ ಭ್ರಷ್ಟಾಚಾರ ಆರೋಪ!
ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ಹಿಂದೆ ಸಚಿವರಾಗಿದ್ದ ವೇಳೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಅವ್ಯವಹಾರ ನಡೆದಿದೆ. ತರಾತುರಿಯಲ್ಲಿ ಎಇಇಗಳ ನೇಮಕಾತಿ ಸಂಬಂಧ ಸಚಿವರು ರಾಜೀನಾಮೆ ನೀಡಬೇಕು ಎಂದವರು ಆಗ್ರಹಿಸಿದ್ದಾರೆ. ಆದರೆ ತಮ್ಮ ಮೇಲಿನ ಆರೋಪಗಳಿಗೆ ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು ನೀಡಿದ್ದಾರೆ.
- Sunil MH
- Updated on: Aug 28, 2026
- 12:51 pm
ಹೆಚ್.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ?: ಮೋದಿ-ಕೇಂದ್ರ ಸಚಿವರ ಭೇಟಿ ಬೆನ್ನಲ್ಲೇ ಹೆಚ್ಚಿದ ಚರ್ಚೆ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮರಳಿ ರಾಜ್ಯ ರಾಜಕಾರಣಕ್ಕೆ ಆಗಮಿಸುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಅವರು ಸುದೀರ್ಘ ಮಾತುಕತೆ ನಡೆಸಿರೋದು ಇದಕ್ಕೆ ಮತ್ತಷ್ಟು ಇಂಬು ನೀಡುವಂತಿದೆ. ರಾಜ್ಯದಲ್ಲಿ ಎನ್ಡಿಎ ಬಲವರ್ಧನೆ ಜೊತೆಗೆ ಉಭಯ ಪಕ್ಷಗಳ ನಾಯಕರ ನಡುವೆ ಸಮನ್ವಯ ಹೆಚ್ಚಿಸಲು ಜಂಟಿ ಹೋರಾಟಗಳ ಬಗ್ಗೆ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
- Sunil MH
- Updated on: Aug 28, 2026
- 12:05 pm
ಕೊನೆಗೂ ಕಾರ್ಯಕರ್ತರ ಆಸೆ ಈಡೇರಿತು: ರಾಮನಗರ ಕ್ಷೇತ್ರವನ್ನ ಮತ್ತೆ ಪಡೆಯಲು ದಳಪತಿಗಳ ಪ್ಲ್ಯಾನ್
ರಾಮನಗರ ವಿಧಾನಸಭಾ ಕ್ಷೇತ್ರ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ರಾಜಕೀಯ ಜನ್ಮ ನೀಡಿದ ಕ್ಷೇತ್ರ. ಕೆಲ ವರ್ಷಗಳ ಕೆಳಗೆ ಜೆಡಿಎಸ್ ಪ್ರಾಬಲ್ಯವಿದ್ದ ಕ್ಷೇತ್ರ. ಆದರೆ ಇದೀಗ ಕಾಂಗ್ರೆಸ್ ತೆಕ್ಕೆಯಲ್ಲಿದೆ. ಹೀಗಾಗಿ ಕ್ಷೇತ್ರವನ್ನ ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ದಳಪತಿಗಳು ಮುಂದಾಗಿದ್ದಾರೆ. ಇದಕ್ಕೊಂದು ದಳಪತಿಗಳು ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷಗಳು ಇವೆ. ಆಗಲೇ ಕುಮಾರಸ್ವಾಮಿ ರಣತಂತ್ರ ಹೆಣೆದಿದ್ದಾರೆ.
- Prashantha B
- Updated on: Aug 27, 2026
- 9:29 pm