JDS
ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.
‘ಬೆಂಗಳೂರಿಗರಿಗೆ ಬಸ್ಸುಗಳು ಬೇಡವೇ?’: ಇ-ಬಸ್ ವಿಳಂಬ ನೀತಿ ವಿರುದ್ಧ ಜೆಡಿಎಸ್ ಕೆಂಡಾಮಂಡಲ!
ಕೇಂದ್ರ ಸರ್ಕಾರದ 'ಪಿಎಂ ಇ-ಡ್ರೈವ್' ಯೋಜನೆಯಡಿ ಬೆಂಗಳೂರಿಗೆ ಮಂಜೂರಾಗಿರುವ 4,500 ಎಲೆಕ್ಟ್ರಿಕ್ ಬಸ್ಗಳ ಜಾರಿಗೆ ಕ್ಯಾಬಿನೆಟ್ ಅನುಮೋದನೆ ನೀಡದ ಕಾಂಗ್ರೆಸ್ ಸರ್ಕಾರದ ವಿಳಂಬ ನೀತಿಯನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ವಾರ್ಷಿಕ 1,000 ಕೋಟಿ ರೂ. ನಷ್ಟದ ಭೀತಿಯಿಂದ ಸರ್ಕಾರ ಹಿಂದೇಟು ಹಾಕುತ್ತಿದ್ದರೆ, ಇತ್ತ ಜೆಡಿಎಸ್ ಸರ್ಕಾರದ ಆಡಳಿತ ವೈಫಲ್ಯದ ವಿರುದ್ಧ ಎಕ್ಸ್ ಖಾತೆಯಲ್ಲಿ ವಾಗ್ದಾಳಿ ನಡೆಸಿದೆ.
- Sunil MH
- Updated on: Jul 12, 2026
- 11:39 am
BJP-JDS ನಡುವೆ ಸಮನ್ವಯ ಸಮಿತಿ ರಚನೆಗೆ ನಿರ್ಧಾರ: ರಾಜ್ಯ ಸರ್ಕಾರದ ವಿರುದ್ಧದ ಜಂಟಿ ಹೋರಾಟಕ್ಕೂ ತೀರ್ಮಾನ
Karnataka Politics: ರಾಜ್ಯ ಸರ್ಕಾರದ ವಿರುದ್ಧದ ಜಂಟಿ ಹೋರಾಟ ಹಾಗೂ ಮೈತ್ರಿ ಗಟ್ಟಿಗೊಳಿಸಲು ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆಗೆ ನಿರ್ಧಾರ ಕೈಗೊಂಡಿವೆ. ಶೀಘ್ರದಲ್ಲೇ 6 ಸದಸ್ಯರ ಅಧಿಕೃತ ಸಮಿತಿ ಘೋಷಣೆಯಾಗಲಿದೆ ಎನ್ನಲಾಗಿದ್ದು, ಬೈ ಎಲೆಕ್ಷನ್ ಮತ್ತು ಪರಿಷತ್ ಚುನಾವಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಬಿಜೆಪಿ ಮತ್ತು ಜೆಡಿಎಎಸ್ನ ರಾಜ್ಯಾಧ್ಯಕ್ಷರು ಚರ್ಚೆ ನಡೆಸಿದ್ದಾರೆ.
- Kiran Haniyadka
- Updated on: Jul 10, 2026
- 8:36 pm
ಸಂಸದರ ಆಹ್ವಾನಿಸದೇ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ: ಹೆಚ್.ಡಿ. ರೇವಣ್ಣ ವಿರುದ್ಧ ಸಿಡಿದ ಕಾಂಗ್ರೆಸಿಗರು
ಹೊಳೆನರಸೀಪುರದ ದೊಡ್ಡಕುಂಚೇವು ಗ್ರಾಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡವನ್ನು ಸಂಸದ ಶ್ರೇಯಸ್ ಪಟೇಲ್ ಅವರಿಗೆ ಆಹ್ವಾನ ನೀಡದೆ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಉದ್ಘಾಟಿಸಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಭಾರಿ ಗಲಾಟೆಗೆ ಕಾರಣವಾಗಿದೆ. ರೇವಣ್ಣ ನಡೆಗೆ ಸಂಸದ ಶ್ರೇಯಸ್ ಪಟೇಲ್ ಆಕ್ರೋಶ ವ್ಯಕ್ತಪಡಿಸಿರುವ ಸಂಸದರು, ಹಿರಿಯ ಶಾಸಕರಾಗಿ ಅವರಿಗೆ ಉದಾರ ಭಾವನೆ ಇರಬೇಕಿತ್ತು. ನಮಗೆ ಮಾರ್ಗದರ್ಶನ ಮಾಡಿ ಜೊತೆಯಲ್ಲಿ ಕರೆದೊಯ್ಯುವ ಕೆಲಸ ಮಾಡಬೇಕಿತ್ತು. ಆದರೆ ಅವರೇ ಕಾನೂನು ಗಾಳಿಗೆ ತೂರಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Manjunath KB
- Updated on: Jul 10, 2026
- 4:55 pm
ಉಪ ಚುನಾವಣೆ ಘೋಷಣೆಗೂ ಮುನ್ನವೇ ಹಿರಿಯೂರು ಕ್ಷೇತ್ರದ ಮೇಲೆ ದಳಪತಿಗಳ ಕಣ್ಣು: ತೆರೆಮರೆಯಲ್ಲಿ ಹೆಚ್ಡಿಕೆ ತಂತ್ರಗಾರಿಕೆ
Hiriyur Byelection update: ಡಿ. ಸುಧಾಕರ್ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜಕೀಯ ಕಣ ಸಜ್ಜಾಗುತ್ತಿದೆ. ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಜೆಡಿಎಸ್ ತೆರೆಮರೆಯ ಕಸರತ್ತು ಆರಂಭಿಸಿದ್ದು, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮೈತ್ರಿ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಇದರೊಂದಿಗೆ, ಉಪಚುನಾವಣೆ ಘೋಷಣೆಗೂ ಮುನ್ನವೇ ಕಸರತ್ತು ಜೋರಾದಂತಾಗಿದೆ.
- Sunil MH
- Updated on: Jul 10, 2026
- 8:39 am
ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಉಗ್ರಪ್ಪ ನೇತೃತ್ವದ ನಿಯೋಗ: ಕಾರಣ ಇಲ್ಲಿದೆ
SC ST OBC Reservation: ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ನೇತೃತ್ವದ ನಿಯೋಗವು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿತು. ಈ ಸಂದರ್ಭದಲ್ಲಿ ಎಸ್.ಸಿ., ಎಸ್.ಟಿ., ಓ.ಬಿ.ಸಿ. ಮೀಸಲಾತಿ ಕುರಿತು ಪ್ರಮುಖ ಚರ್ಚೆಗಳು ನಡೆದವು.
- Sunil MH
- Updated on: Jul 8, 2026
- 9:31 pm
ಪ್ರದೀಪ್ ಈಶ್ವರ್ ವಿರುದ್ಧ ಘೋಷಣೆ ಕೂಗಿ ಚಪ್ಪಲಿ ಎಸೆದ ಪ್ರಕರಣ: ನಾಲ್ವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆಯಾಜ್ಞೆ
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆದ ಪ್ರಕರಣದಲ್ಲಿ ನಾಲ್ವರು ಆರೋಪಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, 800 ಜನರಲ್ಲಿ ಈ ನಾಲ್ವರ ವಿರುದ್ಧ ಕೇಸ್ ದಾಖಲಿಸಿದ್ದೇಕೆ? ಎಂದು ಪೊಲೀಸರನ್ನು ಪ್ರಶ್ನಿಸಿದೆ. ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವ ಕಾರ್ಯಕ್ರಮದ ಬಳಿಕ ಚಿಕ್ಕಬಳ್ಳಾಪುರದಲ್ಲಿ ಜೂನ್ 27ರಂದು ದೊಡ್ಡ ಹೈಡ್ರಾಮಾವೇ ನಡೆದಿತ್ತು. ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್ಐ ಅಮರ್ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಿದ್ದರು.
- Ramesha M
- Updated on: Jul 7, 2026
- 6:41 pm
ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ: ಮುಖ್ಯ ಚುನಾವಣಾ ಆಯುಕ್ತರಿಗೆ ಮೈತ್ರಿ ನಾಯಕರಿಂದ ದೂರು
Voter List Revision: ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ (SIR) ವ್ಯಾಪಕ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಶಿ ನೇತೃತ್ವದ ಮೈತ್ರಿ ನಿಯೋಗವು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದೆ. ಬಳಿಕ ದೆಹಲಿಯಲ್ಲಿಯೇ ಮೈತ್ರಿ ನಾಯಕರು ಸುದ್ದಿಗೋಷ್ಠಿಯನ್ನೂ ನಡೆಸಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡಿದ್ದಾರೆ.
- Mahesha E
- Updated on: Jul 7, 2026
- 4:41 pm
ಬೆಂಗಳೂರಿನಲ್ಲಿ ದಿನಕ್ಕೆ ಎಷ್ಟು HMT ವಾಚ್ ತಯಾರಾಗುತ್ತೆ ಗೊತ್ತಾ? ಮಾಹಿತಿ ನೀಡಿದ ಕುಮಾರಸ್ವಾಮಿ
ಬೆಂಗಳೂರಿನಲ್ಲಿರುವ ಹೆಚ್ಎಂಟಿ ಕಾರ್ಖಾನೆ ಬಗ್ಗೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಪ್ರಸ್ತಾಪ ಮಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಹೆಚ್ ಎಂ ಟಿ ಜಮೀನಿನಲ್ಲಿ ರಿಯಲ್ ಎಸ್ಟೇಟ್ ಮಾಡೋಕೆ ಹೊರಟಿದ್ದಿರಾ? ನಾನು ಆಕಸ್ಮಿಕವಾಗಿ ಕೇಂದ್ರದಲ್ಲಿ ಕೈಗಾರಿಕೆ ಸಚಿವನಾಗಿದ್ದೇನೆ. ನನ್ನಕರ್ತವ್ಯ ನಿರ್ವಹಿಸುತ್ತೇನೆ. ನಾನು ಮಂತ್ರಿ ಆದ ಬಳಿಕ ಹೆಚ್ ಎಂಟಿದು ಶುರು ಮಾಡಿದ್ದಾರೆ. ಹೇಗೆ ನಾಶ ಮಾಡಬೇಕಂತ ಹೊರಟಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- Ramesh B Jawalagera
- Updated on: Jul 6, 2026
- 3:20 pm
ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು
ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಾಯಕರು ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದಾರೆ. ಮನೆ ಮನೆಗೆ ತೆರಳಿ ಮಾಡುವ ಬದಲು ಸಾಮೂಹಿಕವಾಗಿ ಎಸ್ಐಆರ್ ನಡೆಸಲಾಗುತ್ತಿದ್ದು, ನಕಲಿ ದಾಖಲೆ ಸೃಷ್ಟಿಸಿ ಅನರ್ಹರನ್ನು ಸೇರಿಸಲು ಬಿಎಲ್ಒಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
- Sunil MH
- Updated on: Jul 6, 2026
- 11:46 am
ಜಯನಗರದ ಮಸೀದಿ ಒಳಗೆ ಎಸ್ಐಆರ್!: ಸ್ಫೋಟಕ ಆರೋಪ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
Voter List Verification: ಬಿಎಲ್ಒಗಳನ್ನು ದುರ್ಬಳಕೆ ಮಾಡಿಕೊಂಡು ಬೆಂಗಳೂರಿನ ಜಯನಗರದ ಮಸೀದಿ ಒಳಗೆ ಎಸ್ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ರಾಜ್ಯ ಸರ್ಕಾರ ಇಲ್ಲಿ ಷಡ್ಯಂತ್ರ ಮಾಡುತ್ತಿದೆ ಎಂದವರು ದೂರಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಕೂಡ ರಾಮನಗರದ ಚೌಲ್ಟ್ರಿಗಳಲ್ಲಿ ಜನರನ್ನು ಕೂರಿಸಿ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ನಿನ್ನೆಯಷ್ಟೇ ಕಿಡಿ ಕಾರಿದ್ದರು.
- Kiran Haniyadka
- Updated on: Jul 3, 2026
- 11:56 am
ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ, ಬಾಂಗ್ಲಾದೇಶದಿಂದ ಬಂದವರ ಪೋಷಣೆ: ಕುಮಾರಸ್ವಾಮಿ ಗಂಭೀರ ಆರೋಪ
ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಪ್ರಭಾವ ಬೀರಿ ಕಳ್ಳ ಮತದಾರರನ್ನು ಸೃಷ್ಟಿಸುತ್ತಿದೆ. ಬಾಂಗ್ಲಾದೇಶದಿಂದ ಬಂದವರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆಪಾದಿಸಿದ್ದಾರೆ. ರಾಮನಗರದಲ್ಲಿ ಬಿಎಲ್ಓಗಳು ಮನೆ ಮನೆಗೆ ಹೋಗದೆ ಚೌಲ್ಟ್ರಿಗಳಲ್ಲಿ ಪ್ರಕ್ರಿಯೆ ನಡೆಸುತ್ತಿದ್ದು, ತಕ್ಷಣ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದಾರೆ.
- Ganapathi Sharma
- Updated on: Jul 2, 2026
- 5:39 pm
ರಾಮನಗರದಲ್ಲಿ SIR ಪ್ರಕ್ರಿಯೆಯಲ್ಲಿ ಲೋಪ: ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು?
ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ ಕಂಡುಬಂದಿರುವ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕೂಡ ಮಾತನಾಡಿದ್ದು, ಕಳ್ಳ ಮತದಾರರನ್ನ ಒಂದೆಡೆ ಕೂರಿಸಿ ಎಸ್ಐಆರ್ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.
- Sunil MH
- Updated on: Jul 2, 2026
- 4:29 pm