JDS
ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.
ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ಹೆಚ್.ವೈ.ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಈ ಕ್ಷೇತ್ರಗಳು ತೆರವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳಲ್ಲಿಯೂ ಟಕೆಟ್ ಆಕಾಂಕ್ಷಿಗಳ ಕಾದಾಟ ಜೋರಾಗಿದೆ. ಈ ನಡುವೆಯೇ ಉಪ ಚುನಾವಣೆಯ ದಿನಾಂಕ ಘೋಷಣೆಯಾಗಿರೋದು, ಬೈ ಎಲೆಕ್ಷನ್ ಅಖಾಡವನ್ನು ಮತ್ತಷ್ಟು ರಂಗೇರಿಸಿದೆ.
- Prasanna Hegde
- Updated on: Mar 15, 2026
- 5:09 pm
ಮಂಡ್ಯದಲ್ಲಿ ಮುಂದುವರಿದ ಜೆಡಿಎಸ್-ಬಿಜೆಪಿ ಮೈತ್ರಿ ಮುನಿಸು; ಜೆಡಿಎಸ್ ಫ್ಲೆಕ್ಸ್ಗಳಲ್ಲಿ ಬಿಜೆಪಿ ನಾಯಕರ ಫೋಟೋಗೆ ಇಲ್ಲ ಸ್ಥಾನ!
ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಮುನಿಸು ಮುಂದುವರಿದಿದೆ. ಇತ್ತೀಚೆಗೆ ನಡೆದ ‘ಖೇಲೋ ಇಂಡಿಯಾ ವೈಬ್ರೆಂಟ್ ಮಂಡ್ಯ’ ಕಾರ್ಯಕ್ರಮವು ಮೈತ್ರಿ ಪಕ್ಷಗಳ ನಡುವಿನ ಬಿರುಕನ್ನು ಮತ್ತಷ್ಟು ಎತ್ತಿ ತೋರಿಸಿದೆ. ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಾಕಲಾಗಿದ್ದ ಜೆಡಿಎಸ್ ಫ್ಲೆಕ್ಸ್ಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಫೋಟೋ ಹೊರತುಪಡಿಸಿ ರಾಜ್ಯ ಬಿಜೆಪಿ ನಾಯಕರ ಯಾವುದೇ ಫೋಟೋಗಳನ್ನು ಹಾಕಿರಲಿಲ್ಲ.
- Dileep CP
- Updated on: Mar 15, 2026
- 11:38 am
ಮೈತ್ರಿ ಪಕ್ಷಗಳ ನಡುವೆ ಲಯ ತಪ್ಪಿದ ತಾಳ ಮೇಳ: ನಾಯಕರ ನಡುವೆ ಇಲ್ವಂತೆ ಸಮನ್ವಯತೆ!
ಬಿಜೆಪಿ-ಜೆಡಿಎಸ್ ಮೈತ್ರಿಕೂಟದಲ್ಲಿ ಸಮನ್ವಯದ ಕೊರತೆ ಮತ್ತೆ ಸದ್ದು ಮಾಡಿದೆ. ಬಜೆಟ್ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ಬಗ್ಗೆ ಮೊದಲೇ ಮಾಹಿತಿ ಇಲ್ಲದ ಕಾರಣ ಜೆಡಿಎಸ್ ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ನಡುವೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಕುಮಾರಸ್ವಾಮಿ ಅವರೇ ನಮ್ಮ ಸಿಎಂ ಅಭ್ಯರ್ಥಿ ಎಂದು ಹೇಳಿದ್ದು, ಬಿಜೆಪಿ ಜೊತೆಗೆ ನಮ್ಮದು 'ಒನ್ ಸೈಡ್ ಲವ್' ಎಂದು ಅಭಿಪ್ರಾಯಪಟ್ಟಿದ್ದಾರೆ. ಮೈತ್ರಿ ನಾಯಕರ ನಡುವಿನ ಮುನಿಸು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ.
- Sunil MH
- Updated on: Mar 8, 2026
- 9:59 am
ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್ಗೆ ಸೇರಿಸಿಕೊಂಡ ಕುಮಾರಣ್ಣ: ಭುಗಿಲೆದ್ದ ಅಸಮಾಧಾನ
ಭಾರೀ ವಿರೋಧದ ನಡುವೆಯೂ ಸ್ವಾಭಿಮಾನ ಜನತಾ ಪಕ್ಷದ ಮುಖಂಡ ಇದೀಗ ಮಿತ್ರ ಪಕ್ಷ ಜೆಡಿಎಸ್ (JDS) ಸರ್ಪಡೆಯಾಗಿದ್ದಾರೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡಿದ್ದ ನಾಯಕ ಇದೀಗ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಇದ್ದರೂ ಸಹ ಬಂಡಾಯ ನಾಯಕ, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
- Ramesh B Jawalagera
- Updated on: Mar 5, 2026
- 6:27 pm
ಹಾಲು-ಜೇನಿನ ಸಂಬಂಧ ಎಂದ ಸಿಎಂ: ಕುಚಿಕು ಗೆಳೆಯನಿಗಾಗಿ ತ್ಯಾಗ ಪ್ರದರ್ಶಿಸಿ ಎಂದು ಕುಮಾರಣ್ಣ ಕೌಂಟರ್
ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ನಿನ್ನೆಯಷ್ಟೇ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂತಹದೊಂದು ಬಾಂಬ್ ಸಿಡಿಸಿದ್ದರು. ಈ ಆರೋಪಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಲವು ನಾಯಕರು ತಿರುಗೇಟು ಕೊಟ್ಟಿದ್ದಾರೆ. ಇದೀಗ ಮತ್ತೆ ಕುಮಾರಸ್ವಾಮಿ ಅವರು ಪ್ರತಿಕ್ರಿಯಸಿ,ಕುಂಬಳಕಾಯಿ ಕಳ್ಳ ಅಂದ್ರೆ ನಾನೆ ನಾನೆ ಅಂತ ಹೆಗಲು ಮುಟ್ಟಿಕೊಂಡ್ರೆ ಏನು ಮಾಡ್ಲಿ ಎಂದು ಸಿಎಂಗೆ ಕೌಂಟರ್ ಕೊಟ್ಟಿದ್ದಾರೆ.
- Ramesh B Jawalagera
- Updated on: Mar 3, 2026
- 10:24 pm
ರಾಜ್ಯ ರಾಜಕಾರಣದಲ್ಲಿ ಫೋನ್ ಟ್ಯಾಪಿಂಗ್ ಬಿರುಗಾಳಿ: ವಿಪಕ್ಷಗಳ ಮೇಲೆ ಮುಗಿಬಿದ್ದ ಕಾಂಗ್ರೆಸ್
ಫೋನ್ ಟ್ಯಾಪಿಂಗ್ ಆರೋಪಕ್ಕೂ ಹಾಗೂ ರಾಜಕಾರಣಕ್ಕೂ ನಂಟು ಹೊಸದೇನಲ್ಲ. ಈ ಹಿಂದಿನ ಹಲವು ಸರ್ಕಾರಗಳಲ್ಲೂ ಆರೋಪ ಕೇಳಿ ಬಂದಿತ್ತು. ಇಂತಹ ಆರೋಪ ಪ್ರತ್ಯಾರೋಪ ಆಡಳಿತ ಮತ್ತು ವಿಪಕ್ಷಗಳ ನಡುವೆ ಕೇಳಿಬರೋದು ಕಾಮನ್. ಆದ್ರೆ ರಾಜ್ಯ ಕಾಂಗ್ರೆಸ್ ನಲ್ಲಿ ಸ್ವಪಕ್ಷ ನಾಯಕರ ಫೋನ್ ಕದ್ದಾಲಿಕೆ ಮಾಡಲಾಗ್ತಿದೆ ಅಂತ ವಿಪಕ್ಷಗಳು ಹೊಸ ಬಾಂಬ್ ಸಿಡಿಸಿರೋದೀಗ ರಾಜಕೀಯ ಚದುರಂಗದಲ್ಲಿ ಮಾತಿನ ಸಮರಕ್ಕೆ ಕಾರಣವಾಗಿದೆ.
- Anil Kalkere
- Updated on: Mar 3, 2026
- 5:29 pm
ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿ ಕಾರಣ: ಕದಲೂರು ಉದಯ್ ಸ್ಫೋಟಕ ಆರೋಪ
ಕಾಂಗ್ರೆಸ್ ಶಾಸಕ ಕದಲೂರು ಉದಯ್ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿ ಕಾರಣ ಎಂದು ಉದಯ್ ಹೇಳಿದ್ದಾರೆ. ಮಂಡ್ಯಕ್ಕೆ ಕೈಗಾರಿಕೆ ತರುವಂತೆ ಸವಾಲು ಹಾಕಿದ್ದು, ಇದು ಮಂಡ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.
- Dileep CP
- Updated on: Mar 3, 2026
- 12:03 pm
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿಕೆ
ಇರಾನ್- ಇಸ್ರೇಲ್ ಪರಸ್ಪರ ದಾಳಿಯಿಂದಾಗಿ (Iran Israel War) ಮಧ್ಯ ಪ್ರಾಚ್ಯದಲ್ಲಿ ಯುದ್ಧ ಕಾಮೋರ್ಡ ಆವರಿಸಿದೆ. ಇದರಿಂದ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗರು ಅಲ್ಲೇ ಸಿಲುಕಿಕೊಂಡು ಪರದಾಡುತ್ತಿದ್ದಾರೆ. ಏಕಾಏಕಿ ವಿಮಾನಗಳು ಕ್ಯಾನ್ಸಲ್ ಆಗಿದ್ದರಿಂದ ಕುವೈತ್, ದುಬೈ, ಅಬುದಾಬಿ ಸೇರಿದಂತೆ ಇತರೆ ಮಧ್ಯ ಪ್ರಾಚ್ಯ ದೇಶಗಳಲ್ಲಿ ಕನ್ನಡಿಗರು ಸಿಲುಕಿದ್ದು, ಇವರ ರಕ್ಷಣೆಗೆ ರಾಜ್ಯ ಸರ್ಕಾರದವೂ ಸಹ ಇನ್ನಿಲ್ಲದ ಕಸರತ್ತು ನಡೆಸಿದೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತನಾಡಿ, ಯುದ್ಧ ನಿಲ್ಲುವವರೆಗೂ ಅಲ್ಲಿಂದ ಎಲ್ಲರನ್ನೂ ಕರೆಸುವುದು ಕಷ್ಟ ಎಂದಿದ್ದಾರೆ.
- Ram
- Updated on: Mar 2, 2026
- 2:57 pm
ವಿಜಯಪುರ: ಜೆಡಿಎಸ್ ಕಾರ್ಯಕ್ರಮಕ್ಕೆ ಪಿಸ್ತೂಲ್ ಇಟ್ಟುಕೊಂಡ ಬಂದ ಕಾರ್ಯಕರ್ತ, ವಿಡಿಯೋ ವೈರಲ್
ಜೆಡಿಎಸ್ ಕಾರ್ಯಕರ್ತನೊಬ್ಬ ವಿಜಯಪುರದಲ್ಲಿ ಶುಕ್ರವಾರ ನಡೆದ ಜೆಡಿಎಸ್ ಬೆಳ್ಳಿಹಬ್ಬ ಕಾರ್ಯಕ್ರಮಕ್ಕೆ ಪಿಸ್ತೂಲ್ ಸೊಂಟದಲ್ಲಿಟ್ಟುಕೊಂಡು ಬಂದ ಘಟನೆ ನಡೆದಿದೆ. ಅಸಲಿಗೆ ಅದು ಪರವಾನಗಿ ಹೊಂದಿದ್ದ ಪಿಸ್ತೂಲ್ ಆಗಿತ್ತು. ಆದರೂ ಭದ್ರತೆಯ ಕಾರಣಕ್ಕೆ ಪೊಲೀಸರು ಆತನನ್ನು ಹೊರ ಕಳುಹಿಸಿದ್ದಾರೆ. ಸದ್ಯ, ಆತನ ವಿಡಿಯೋ ವೈರಲ್ ಆಗುತ್ತಿದ್ದು, ಇಲ್ಲಿದೆ ನೋಡಿ.
- Ashok Yadalli
- Updated on: Feb 27, 2026
- 2:38 pm
ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ದೇವೇಗೌಡರ ಅಚ್ಚರಿಯ ಹೇಳಿಕೆ: ಜೆಡಿಎಸ್ ಮುಂದಿನ ನಡೆ ಏನು?
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಎನ್ಡಿಎ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಆಕಾಂಕ್ಷೆ ಹೊಂದಿದೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಬೆಂಗಳೂರಿನಲ್ಲಿ ಹೇಳಿದ್ದಾರೆ. ನಾವು ಪ್ರಾದೇಶಿಕ ಪಕ್ಷ, ಬಿಜೆಪಿ ರಾಷ್ಟ್ರೀಯ ಪಕ್ಷ. ಅವರ ತೀರ್ಮಾನಕ್ಕಾಗಿ ಕಾಯುತ್ತಿದ್ದೇವೆ. ಕುಮಾರಸ್ವಾಮಿಯವರು ದೆಹಲಿಯಿಂದ ಕೇಂದ್ರದ ನಾಯಕರೊಂದಿಗೆ ಚರ್ಚಿಸಿ ಬಂದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
- Sunil MH
- Updated on: Feb 25, 2026
- 6:55 pm
ಬಿಜೆಪಿ ಕಾರ್ಯಕಾರಿಣಿ ಸಭೆ: ಸರ್ಕಾರದ ವಿರುದ್ಧ 6 ನಿರ್ಣಯ, ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ತೀರ್ಮಾನ
ಮುಂಬರುವ ಚುನಾವಣೆಗಳನ್ನ ಗೆಲ್ಲೋದಕ್ಕೆ ಕಮಲ ಪಡೆ ರಣತಂತ್ರ ಹೆಣೆಯುತ್ತಿದೆ. ಪಕ್ಷದಲ್ಲಿನ ಒಂದಿಷ್ಟು ಗೊಂದಲಕ್ಕೆ ಬ್ರೇಕ್ ಹಾಕಿ ಪಕ್ಷ ಸಂಘಟನೆ, ಮುಂದಿನ ಹಾದಿ, ಆಡಳಿತ ಪಕ್ಷದ ವಿರುದ್ದ ನಡೆಸಬೇಕಾದ ಹೋರಾಟದ ಬಗ್ಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮಹತ್ವದ ನಿರ್ಧಾರಗಳನ್ನ ತೆಗೆದುಕೊಳ್ಳಲಾಯ್ತು. ಹಾಗಾದ್ರೆ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಯಾರೆಲ್ಲಾ ಭಾಗಿಯಾಗಿದ್ರು, ಏನೆಲ್ಲಾ ನಿರ್ಧಾರಗಳನ್ನ ತೆಗೆದುಕೊಳ್ಳಲಾಯ್ತು ಎನ್ನುವ ಮಾಹಿತಿ ಇಲ್ಲಿದೆ.
- Web contact
- Updated on: Feb 19, 2026
- 10:13 pm
BJP-JDS ಮೈತ್ರಿ ಗೊಂದಲಕ್ಕೆ ಶೀಘ್ರವೇ ಇತಿಶ್ರೀ: ಸಮನ್ವಯ ಸಭೆಗೆ ನಾಯಕರ ನಿರ್ಧಾರ
ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರಿನಲ್ಲಿ ಸಮನ್ವಯ ಸಭೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಮೈತ್ರಿ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶ. ಕುಮಾರಸ್ವಾಮಿ, ಆರ್. ಅಶೋಕ್, ಬಿ.ವೈ. ವಿಜಯೇಂದ್ರರಂತಹ ಪ್ರಮುಖ ನಾಯಕರ ನೇತೃತ್ವದಲ್ಲಿ ಮೀಟಿಂಗ್ ನಡೆಯಲಿದೆ ಎನ್ನಲಾಗಿದೆ.
- Sunil MH
- Updated on: Feb 19, 2026
- 11:58 am