AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS

JDS

ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.

ಇನ್ನೂ ಹೆಚ್ಚು ಓದಿ

ಸಿಎಂ ಆಗುವ ಮುನ್ನವೇ ಡಿಕೆಶಿ ತಂತ್ರಗಾರಿಕೆ: ರಾಜಕೀಯ ಬದ್ಧವೈರಿಗಳ ಭೇಟಿ ಹಿಂದಿನ ಲೆಕ್ಕಾಚಾರವೇನು?

ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಅಧಿಕಾರ ಸ್ವೀಕಾರ ಮುನ್ನ ಡಿಕೆ ಶಿವಕುಮಾರ್ ಅವರು ರಾಜ್ಯದ ಇಬ್ಬರು ಪ್ರಭಾವಿ ಜಾತಿ ಸಮುದಾಯಗಳ ಪ್ರಶ್ನಾತೀತ ನಾಯಕರನ್ನು ಭೇಟಿ ಮಾಡಿದ್ದಾರೆ. ಈ ಮೂಲಕ ಇಡೀ ರಾಜ್ಯಕ್ಕೆ ಅತ್ಯಂತ ಸ್ಪಷ್ಟ ಹಾಗೂ ಪ್ರಬಲ ಸಂದೇಶ ರವಾನಿಸಿದ್ದಾರೆ. ಜೊತೆಗೆ ಇಬ್ಬರು ನಾಯಕರಿಗೆ ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

  • Sunil MH
  • Updated on: Jun 3, 2026
  • 2:59 pm

ಕ್ಷೇತ್ರ ತ್ಯಾಗಕ್ಕೆ ಸುಮಲತಾಗೆ ಸಿಗುತ್ತಾ ಪ್ರತಿಫಲ? ಕುತೂಹಲ ಮೂಡಿಸಿದ ಬಿಜೆಪಿ ಹೈಕಮಾಂಡ್ ನಡೆ

ಕರ್ನಾಟದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಎದುರಾಗಿದ್ದು, ಇದೇ ಜೂನ್ 18ರಂದು ಚುನಾವಣೆ ನಡೆಯಲಿದೆ. ಆದ್ರೆ, ಈ ನಾಲ್ಕು ಸ್ಥಾನಗಳ ಪೈಕಿ 3 ಕಾಂಗ್ರೆಸ್ ಇನ್ನುಳಿದ ಒಂದು ಸ್ಥಾನಕ್ಕೆ ಮೈತ್ರಿ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ನಡೆವೆ ತೀವ್ರ ಪೈಪೋಟಿ ಶುರುವಾಗಿದ್ದು, ಮಾಜಿ ಪ್ರಧಾನಿ ಎಚ್​​​ಡಿ ದೇವೇಗೌಡರನ್ನೇ ಮುಂದುವರಿಸಬೇಕೆಂದು ಜೆಡಿಎಸ್ ಪಟ್ಟು ಹಿಡಿದಿದೆ. ಇನ್ನೊಂದೆಡೆ ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಬೇರೆದೊಂದು ಹೆಸರು ಶಿಫಾರಸ್ಸು ಮಾಡಿದೆ. ಈ ಎಲ್ಲಾ ಬೆಳವಣಿಗಳ ನಡುವೆ ಸುಮಲತಾ ಅಂಬರೀಶ್ ಅವರ ಹೆಸರು ಮುನ್ನಲೆಗೆ ಬಂದಿದೆ.

ದೇವೇಗೌಡ, ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ರೆ ಕತ್ತರಿಸುತ್ತೇವೆ: ಚಲುವರಾಯಸ್ವಾಮಿಗೆ ಸುರೇಶ್ ಗೌಡ ಎಚ್ಚರಿಕೆ

ಡಿಕೆ ಶಿವಕುಮಾರ್​ ಸಿಎಂ ಆಗುತ್ತಿರುವುದರಿಂದ ದೇವೇಗೌಡರ ಕುಟುಂಬಕ್ಕೆ ಸೂತಕ ಎಂದಿರುವ ಸಚಿವ ಚಲುವರಾಯಸ್ವಾಮಿ ಹೇಳಿಕೆ ಸದ್ಯ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಜೆಡಿಎಸ್​ ನಾಯಕರು ಕೆಂಡಾಮಂಡಲರಾಗಿದ್ದಾರೆ. ಅದರಲ್ಲೂ ಜೆಡಿಎಸ್​ನ ಮಾಜಿ ಶಾಸಕ ಸುರೇಶ್ ಗೌಡ ಸಚಿವ ಚಲುವರಾಯಸ್ವಾಮಿ ವಿರುದ್ಧ ನೇರ ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟ, ಮತದಾನ, ರಿಸಲ್ಟ್ ಯಾವಾಗ? ಇಲ್ಲಿದೆ ವಿವರ

Karnataka MLC Elections 2026: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್‌ ನ 7 ಸದಸ್ಯ ಸ್ಥಾನಕ್ಕೆ ನಡೆಯುವ ವಿಧಾನಪರಿಷತ್ ಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಿಧಾನಪರಿಷತ್‌ ನ ದ್ವೈವಾರ್ಷಿಕ ಚುನಾವಣೆಯ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಕ್ಷಿ ಅವರು ಅಧಿಸೂಚನೆ ಪ್ರಕಟಿಸಿದ್ದು, ಇಂದಿನಿಂದ ಜೂನ್ 8ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ.

1956ರಿಂದ ರಾಜ್ಯದಲ್ಲಿ ಪೂರ್ಣಾವಧಿ ಸಿಎಂ ಆಗಿದ್ದು ಕೇವಲ ಮೂವರು!: ಉಳಿದವರದ್ದೆಲ್ಲ ಅಲ್ಪಾವಧಿ ಅಧಿಕಾರ

ಕರ್ನಾಟಕ ಸಿಎಂ ರಾಜೀನಾಮೆ ಬೆನ್ನಲ್ಲೇ ರಾಜ್ಯ ರಾಜಕೀಯದ ಇತಿಹಾಸ ಮತ್ತೆ ಮುಂಚೂಣಿಗೆ ಬಂದಿದೆ. 1956ರಿಂದ ಇಂದಿನವರೆಗೆ ಕೇವಲ ಮೂವರಷ್ಟೇ ಪೂರ್ಣಾವಧಿ ಸಿಎಂ ಆಗಿದ್ದು, ಆ ಪೈಕಿ ಸಿದ್ದರಾಮಯ್ಯ ಕೂಡ ಒಬ್ಬರು. ಉಳಿದಂತೆ ಕರ್ನಾಟಕ ಕಂಡ ಎಲ್ಲ ಸಿಎಂಗಳು ಅಲ್ಪಾವಧಿಯ ಅಧಿಕಾರ ನಡೆಸಿದ್ದು, ಯಾಕಾಗಿ ಅವರು ಅಧಿಕಾರ ಕಳೆದುಕೊಂಡಿದ್ದರು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆಗೆ ಮುಹೂರ್ತ ನಿಗದಿ: ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್​​

Karnataka MLC Election 2026: ಕರ್ನಾಟಕ ವಿಧಾನಪರಿಷತ್‌ನ ಕಾಂಗ್ರೆಸ್‌ನ 3, ಬಿಜೆಪಿಯ 3 ಹಾಗೂ ಜೆಡಿಎಸ್‌ನ ಓರ್ವ ಸದಸ್ಯರ ಅವಧಿ ಜೂನ್ 26ಕ್ಕೆ ಮುಕ್ತಾಯಗೊಳ್ಳಲಿರುವ ಹಿನ್ನೆಲೆ ತೆರವಾಗಲಿರುವ ಈ 7 ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟಗೊಂಡಿದೆ. ಜೂನ್​​ 18ರಂದು ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ. ಆಡಳಿತಾರೂಢ ಕಾಂಗ್ರೆಸ್​​ ಸದಸ್ಯರ ಬಲವನ್ನು ಹೆಚ್ಚಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದರೆ, ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​​ ತಲಾ 1 ಸ್ಥಾಣ ಕಳೆದುಕೊಳ್ಳುವ ಆತಂಕದಲ್ಲಿವೆ.

ರಾಜ್ಯ ರಾಜಕಾರಣದಲ್ಲಿ ಮತ್ತೆ ಹನಿಟ್ರ್ಯಾಪ್ ಸಂಚಲನ: ಕಾಂಗ್ರೆಸ್ ಶಾಸಕ, ಪುತ್ರನ ಆಡಿಯೋ ರಿಲೀಸ್

ತುಮಕೂರು ಜಿಲ್ಲೆಯ ರಾಜಕೀಯದಲ್ಲಿ ಹನಿಟ್ರ್ಯಾಪ್ ಆರೋಪ ಹೊಸ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಶಾಸಕ ಮತ್ತು ಪುತ್ರನ ವಿರುದ್ಧ ಜೆಡಿಎಸ್ ಮುಖಂಡ ಗಂಭೀರ ಆರೋಪ ಮಾಡಿದ್ದಾರೆ. ತನ್ನ ಚಲನವಲನದ ಮೇಲೆ ಗೂಢಚಾರಿಕೆ ನಡೆಸಲಾಗುತ್ತಿದೆ ಮತ್ತು ಹನಿಟ್ರ್ಯಾಪ್ ಮೂಲಕ ತನ್ನನ್ನು ಕೆಣಕಲು ಯತ್ನಿಸಲಾಗುತ್ತಿದೆ ಎಂದಿದ್ದಾರೆ. ಈ ವಿಚಾರ ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿ ಸೇರಿದ ರಾಜಣ್ಣ: ಹಿರಿಯೂರು ಕ್ಷೇತ್ರದ ಮೇಲೆ ಜೆಡಿಎಸ್ ಕಣ್ಣು, ಉಪಚುನಾವಣೆ ಅಖಾಡಕ್ಕೆ ರಂಗು

ಕಾಂಗ್ರೆಸ್‌ನ (Congress) ಹಿರಿಯ ನಾಯಕ ಹಾಗೂ ಸಚಿವ ಡಿ. ಸುಧಾಕರ್ (D Sudhakar) ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ (Hiriyur By Election) ಎದುರಾಗಿದ್ದು, ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆಗಲೇ ಕ್ಷೇತ್ರದಲ್ಲಿ ಉಪಚುನಾವಣೆಯ ರಾಜಕೀಯ ಕಾವೇರಿದೆ. ಯಾವ ಪಕ್ಷದಲ್ಲಿ ಏನೆಲ್ಲಾ ಬೆಳವಣಿಗೆಗಳು ನಡೆಯುತ್ತಿವೆ? ಎನ್ನುವ ಡಿಟೇಲ್ಸ್ ಇಲ್ಲಿದೆ.

ಜಿಟಿ ದೇವೇಗೌಡಗೆ ಬಿಗ್ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು ಜೆಡಿಎಸ್​​ ಸಮಾವೇಶ

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಸಮಾವೇಶ ಜಿ.ಟಿ. ದೇವೇಗೌಡರನ್ನು ದೂರ ಇಟ್ಟು ಅವರ ಪುತ್ರ ಜಿ.ಟಿ. ಹರೀಶ್ ಗೌಡ ನೇತೃತ್ವದಲ್ಲಿ ನಡೆದಿದೆ. ಎಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಭಾಗವಹಿಸಿದ್ದರೂ, ಜಿ.ಟಿ.ಡಿ. ಹಾಗೂ ಎಚ್.ಡಿ. ರೇವಣ್ಣ ಅವರ ಭಾವಚಿತ್ರಗಳು ಬ್ಯಾನರ್‌ಗಳಿಂದ ಮಾಯವಾಗಿವೆ. ಈ ಬೆಳವಣಿಗೆ ಜೆಡಿಎಸ್‌‌ನಲ್ಲಿ ಆಳವಾಗುತ್ತಿರುವ ಭಿನ್ನಮತವನ್ನು ಸೂಚಿಸುತ್ತದೆ.

  • Ram
  • Updated on: May 17, 2026
  • 3:52 pm

ದೇವೇಗೌಡರ ಭೇಟಿ ಬಳಿಕ ಜಿಟಿಡಿ ಸ್ಫೋಟಕ ಹೇಳಿಕೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ!

ಎಚ್​​ಡಿ ಕುಮಾರಸ್ವಾಮಿಯೊಂದಿಗಿನ ಮನಸ್ತಾಪದಿಂದ ಜೆಡಿಎಸ್ ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದ ಜಿಟಿ ದೇವೇಗೌಡ ಅವರು ಏಕಾಏಕಿ ಎಚ್​​ಡಿ ದೇವೇಗೌಡ ಅವರನ್ನ ಭೇಟಿ ಮಾಡಿದ್ದಾರೆ. ಕೋರ್ ಕಮಿಟಿಯಿಂದ ಗೇಟ್ ಪಾಸ್ ನೀಡಿದ ಬಳಿಕ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಮಧ್ಯೆ ಜಿಟಿಡಿ, ದೇವೇಗೌಡ್ರನ್ನ ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ. ಇನ್ನು ಬಹುದಿನಗಳ ನಂತರ ದೇವೇಗೌಡರ ಭೇಟಿ ಬಳಿಕ ಜಿಟಿಡಿ ತಮ್ಮ ಮುಂದಿನ ರಾಜಕೀಯ ನಿಲುವು ಸ್ಪಷ್ಟಪಡಿಸಿದ್ದಾರೆ.

ತಂದೆ ಬಗ್ಗೆ ಹೆಚ್​​ಡಿಕೆ ಹೇಳಿಕೆಯಿಂದ ನೋವಾಗಿದೆ ಎಂದ ಸಚಿವ ಡಿ. ಸುಧಾಕರ್​​ ಪುತ್ರನಿಗೆ JDS ಕೌಂಟರ್​​

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಳಿದ್ದ ಪ್ರಶ್ನೆಗಳು ರಾಜಕೀಯ ವಿವಾದಕ್ಕೆ ಕಾರಣವಾಗಿವೆ. "ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಆರೋಗ್ಯ ಮುಚ್ಚಿಟ್ಟಿದ್ದಾರೆಯೇ?" ಎಂಬ ಹೆಚ್‌ಡಿಕೆ ಹೇಳಿಕೆಗೆ ಸುಧಾಕರ್ ಪುತ್ರ ನೋವು ವ್ಯಕ್ತಪಡಿಸಿದ್ದರು. ಆದರೆ, ಈ ವಿಡಿಯೋ ಸ್ಕ್ರಿಪ್ಟೆಡ್ ಎಂದ ಜೆಡಿಎಸ್, ಸುಧಾಕರ್ ಆರೋಗ್ಯದ ಬಗ್ಗೆ ಕಾಂಗ್ರೆಸ್ ಸರ್ಕಾರದ ರಹಸ್ಯವನ್ನು ಪ್ರಶ್ನಿಸಿದೆ.

ಕಲಬುರಗಿ ಮಕ್ಕಳ ಅಪಹಾಸ್ಯವೇಕೆ? ವಿಪಕ್ಷಗಳಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಪ್ರಸಕ್ತ ಸಾಲಿನ ಕರ್ನಾಟಕ ಎಸ್​​ಎಸ್​ಎಲ್​​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಕಳೆದ ವರ್ಷ 80.04ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ ಈ ವರ್ಷ ಶೇ‌.94.01ರಷ್ಟು ಫಲಿತಾಂಶದೊಂದಿಗೆ ಶೇ.14ರಷ್ಟು ಫಲಿತಾಂಶ ಪ್ರಮಾಣ ಹೆಚ್ಚಳವಾಗಿದೆ. ಇನ್ನು ಕಲಬುರಗಿ ಕೊನೆ ಸ್ಥಾನದಲ್ಲಿದ್ದು, ಇದು ರಾಜಕೀಯ ವಾಗ್ಯುದ್ಧ ಕಾರಣವಾಗಿದೆ. ವಿಪಕ್ಷಗಳ ಟೀಕೆ, ವ್ಯಂಗ್ಯಗಳಿಗೆ ಖರ್ಗೆ ಕೌಂಟರ್ ಕೊಟ್ಟಿದ್ದಾರೆ.