JDS
ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.
ಜೆಡಿಎಸ್ ಪಕ್ಷದ ಚಿಹ್ನೆಗೆ ಹೊಸ ಟಚ್? ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಜೆಡಿಎಸ್ ಪಕ್ಷವು ತನ್ನ ತೆನೆ ಹೊತ್ತ ಮಹಿಳೆ ಚಿಹ್ನೆಗೆ ಚಕ್ರದ ಗುರುತನ್ನು ಸೇರಿಸಲು ಚಿಂತನೆ ನಡೆಸಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸಲಹೆ ನೀಡಿದ್ದಾರೆ. ಪಕ್ಷಕ್ಕೆ ಸಕಾರಾತ್ಮಕ ಶಕ್ತಿ ಹಾಗೂ ಚಟುವಟಿಕೆ ಹೆಚ್ಚಿಸುವ ನಂಬಿಕೆಯಲ್ಲಿ ಈ ಬದಲಾವಣೆ ಮಾಡಲಾಗುತ್ತಿದೆ. ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲು ಜೆಡಿಎಸ್ ಮುಂದಾಗಿದೆ.
- Gangadhar Saboji
- Updated on: Jan 10, 2026
- 2:59 pm
ರಾಜ್ಯ ರಾಜಕಾರಣದ ಮೇಲೆ ಕಣ್ಣು: ಹೇಗಿದೆ ಗೊತ್ತಾ ನಿಖಿಲ್, ಪ್ರತಾಪ್, ಸುಮಲತಾ ಪ್ಲ್ಯಾನ್?
2028ರ ವಿಧಾನಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ, ಪ್ರತಾಪ್ ಸಿಂಹ ಮತ್ತು ಸುಮಲತಾ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ನಿಖಿಲ್ ಮಂಡ್ಯ ಅಥವಾ ಮದ್ದೂರಿನಿಂದ ಸ್ಪರ್ಧಿಸಲು ಯೋಜಿಸುತ್ತಿದ್ದರೆ, ಪ್ರತಾಪ್ ಮೈಸೂರಿನ ಚಾಮರಾಜ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ. ಸುಮಲತಾ ಕೂಡ ರಾಜ್ಯ ರಾಜಕಾರಣ ಪ್ರವೇಶಿಸುವ ಇರಾದೆ ಹೊಂದಿದ್ದು, ತಮ್ಮ ಭವಿಷ್ಯದ ರಾಜಕೀಯ ತಂತ್ರಗಳ ಬಗ್ಗೆ ಪಕ್ಷದ ನಾಯಕರೊಂದಿಗೆ ಚರ್ಚಿಸೋದಾಗಿ ತಿಳಿಸಿದ್ದಾರೆ.
- Prasanna Hegde
- Updated on: Jan 9, 2026
- 1:14 pm
ಸ್ಥಳೀಯ ಸಂಸ್ಥೆ ಚುನಾವಣೆ: JDS ಜೊತೆ ಮೈತ್ರಿಗೆ ಮಂಡ್ಯದಲ್ಲಿ ಬಿಜೆಪಿಗರ ಅಪಸ್ವರ
ಮಂಡ್ಯ ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಾಗಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಬಿಜೆಪಿ ನಾಯಕರಿಂದ ವಿರೋಧ ವ್ಯಕ್ತವಾಗಿದೆ. ಮಾಜಿ ಸಂಸದೆ ಸುಮಲತಾ ಮತ್ತು ಕೆ.ಸಿ. ನಾರಾಯಣ ಗೌಡ ಸೇರಿದಂತೆ ಜಿಲ್ಲೆಯ ಮುಖಂಡರು ರಾಜ್ಯ ನಾಯಕರ ಬಳಿ ಈ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವತಂತ್ರವಾಗಿ ಬಿಜೆಪಿ ಸ್ಪರ್ಧಿಸಬೇಕೆಂದು ಆಗ್ರಹಿಸಿದ್ದಾರೆ.
- Kiran Haniyadka
- Updated on: Jan 7, 2026
- 12:38 pm
ಕೇಂದ್ರ ಸಚಿವ ಕುಮಾರಸ್ವಾಮಿಗೆ ಶಾಸಕ ಗಣಿಗ ರವಿಕುಮಾರ್ ಸವಾಲು: ಕಾರಣ ಏನು?
ಶಾಸಕ ಗಣಿಗ ರವಿಕುಮಾರ್ ಅವರು ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರಿಗೆ ಸವಾಲು ಹಾಕಿದ್ದಾರೆ. ಜಿಲ್ಲೆಯಲ್ಲಿ 100 ಎಕರೆ ಜಾಗ ಲಭ್ಯವಿದ್ದು, ಕೈಗಾರಿಕೆಗಳನ್ನು ತರುವಂತೆ ಮನವಿ ಮಾಡಿದ್ದಾರೆ. ರಾಜಕೀಯ ಕಲಹ ಬಿಟ್ಟು ಮಂಡ್ಯದ ಯುವಕರಿಗೆ ಉದ್ಯೋಗ ಸೃಷ್ಟಿಗೆ ಸಹಕರಿಸುವಂತೆ ಅವರು ಕರೆ ನೀಡಿದ್ದಾರೆ.
- Dileep CP
- Updated on: Jan 6, 2026
- 11:14 am
ಬಳ್ಳಾರಿ ಗಲಭೆ ಬಗ್ಗೆ ಹೆಚ್ಡಿಕೆ ಹೊಸ ಬಾಂಬ್: ಪೋಸ್ಟ್ ಮಾರ್ಟಮ್ ಸತ್ಯ ಬಿಚ್ಚಿಟ್ಟ ಕೇಂದ್ರ ಸಚಿವ
ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣದಲ್ಲಿ ಕೇಂದ್ರ ಸಚಿವ ಹಚ್ಡಿ ಕುಮಾರಸ್ವಾಮಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ಫೋಟಕ ಆರೋಪ ಮಾಡಿದ್ದು, ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಎರಡು ಬಾರಿ ಮರಣೋತ್ತರ ಪರೀಕ್ಷೆ, ಅಧಿಕಾರಿಗಳ ಅಮಾನತು, ಪರಿಹಾರದ ಮೂಲದ ಬಗ್ಗೆ ಪ್ರಶ್ನಿಸಿದ್ದಾರೆ. ಅಲ್ಲದೆ, ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ.
- Sunil MH
- Updated on: Jan 8, 2026
- 6:24 am
ಸರ್ಕಾರದ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ಗೆ ಜೆಡಿಎಸ್ ದೂರು: ಆರೋಪವೇನು?
ದ್ವೇಷ ಭಾಷಣ ಮಸೂದೆಯನ್ನು ಚರ್ಚೆಯಿಲ್ಲದೆ ಅಂಗೀಕಾರ, ರೈತರ ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡದಿರುವುದು ಮತ್ತು ಕೋಗಿಲು ಲೇಔಟ್ನಲ್ಲಿ ಮನೆಗಳ ತೆರವು ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. ಕುಮಾರಸ್ವಾಮಿಯವರ ಹಿಂದಿನ ಆಡಳಿತವನ್ನು ಸ್ಮರಿಸಿದ ಜೆಡಿಎಸ್, ಪ್ರಸ್ತುತ ಸರ್ಕಾರದ ನೀತಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.
- Sunil MH
- Updated on: Dec 31, 2025
- 3:55 pm
ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್
ಬೆಂಗಳೂರಿನ ಕೋಗಿಲು ಕ್ರಾಸ್ ಅಕ್ರಮ ಶೆಡ್ ತೆರವು ಹಾಗೂ ನಂತರ ಕೇರಳಿಗರಿಗೆ ಮನೆ ನೀಡುವ ರಾಜ್ಯ ಸರ್ಕಾರದ ನಿರ್ಧಾರ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಸರ್ಕಾರ ನಡೆದಿರುವುದನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ಸಿದ್ದರಾಮಯ್ಯರನ್ನು ‘ಕೇರಳಿಗರ ಚೇಟಾ’ ಎಂದು ಜರೆದಿದ್ದು, ಕೇರಳಕ್ಕಾಗಿ ಮಾಡಿದ ಕೆಲಸಗಳ ಪಟ್ಟಿ ಮಾಡಿದೆ.
- Ganapathi Sharma
- Updated on: Dec 30, 2025
- 2:45 pm
ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣಗೆ ಬಿಗ್ ರಿಲೀಫ್
ಮಾಜಿ ಸಚಿವ, ಹಾಲಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಇಂದು ದೊಡ್ಡ ರಿಲೀಫ್ ನೀಡಿದೆ. ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ಐಪಿಸಿ ಸೆಕ್ಷನ್ 354ಎ ಅಡಿಯ ಆರೋಪದ ಕೇಸ್ ಪರಿಗಣನೆಗೆ ಕೋರ್ಟ್ ನಿರಾಕರಿಸಿದೆ. ಈ ಹಿಂದೆ ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ರೇವಣ್ಣ ಇದೀಗ ಕೋರ್ಟ್ ಆದೇಶದಿಂದ ನಿರಾಳರಾಗಿದ್ದಾರೆ. ಹಾಗಾದ್ರೆ, ಕೋರ್ಟ್ ಕೈಬಿಟ್ಟ ಸೆಕ್ಷನ್ ಯಾವುದು? ಏನು ಅಪರಾಧ, ಏನು ಶಿಕ್ಷೆ ಎನ್ನುವ ವಿವರ ಇಲ್ಲಿದೆ.
- Ramesha M
- Updated on: Dec 29, 2025
- 7:39 pm
ಬಿಜೆಪಿಯೊಂದಿಗೆ ಮೈತ್ರಿ ಕಡಿತದ ಹಿಂದಿದೆ ದೇವೇಗೌಡ್ರ ರಾಜಕೀಯ ಲೆಕ್ಕಾಚಾರ, ವಿಜಯೇಂದ್ರ ಹೇಳಿದ್ದೇನು?
ಹೆಚ್ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (B.Y.Vijayendra), ಸ್ವಂತ ಬಲದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಒಳಜಗಳ ನೋಡಿದರೆ 2028ಕ್ಕೂ ಮುನ್ನವೇ ವಿಧಾನಸಭಾ ಚುನಾವಣೆ ಬರಬಹುದು. 130-140 ಸ್ಥಾನಗಳೊಂದಿಗೆ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಅಂತೇಳುವ ಮೂಲಕ ವಿಧಾನಸಭೆ ಮೈತ್ರಿಯನ್ನ ತಳ್ಳಿಹಾಕಿದ್ದಾರೆ. ಇದು ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.
- Ramesh B Jawalagera
- Updated on: Dec 27, 2025
- 3:30 pm
ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚಾಗ್ತಿದೆಯಾ ಗೊಂದಲ? ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದ ದೇವೇಗೌಡ
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ವರಿಷ್ಠ ಹೆಚ್ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಬೆಳವಣಿಗೆಗಳು ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಹೆಚ್ಚಾಗಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿವೆ.
- Ganapathi Sharma
- Updated on: Dec 27, 2025
- 9:49 am
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಎಲ್ಲಿಗೆ ಹೋದ್ರೂ ತಪ್ಪುತ್ತಿಲ್ಲ ಸಂಕಷ್ಟ!
ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಇನ್ನಿಲ್ಲದ ಕಾನೂನು ಹೋರಾಟ ನಡೆಸಿದ್ದಾರೆ. ಆದ್ರೆ, ಎಲ್ಲೂ ಹೋದರೂ ಸಹ ಪ್ರಜ್ವಲ್ಗೆ ಸಂಕಷ್ಟ ಮಾತ್ರ ತಪ್ಪುತ್ತಿಲ್ಲ. ಇದೀಗ ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ.
- Ramesh B Jawalagera
- Updated on: Dec 11, 2025
- 9:55 pm
ಭಗವದ್ಗೀತೆಯಿಂದ ಹೊಟ್ಟೆ ತುಂಬಲ್ಲವೆಂದು ಅಂದು ಹೇಳಿದ್ದೇಕೆ? ಹೆಚ್ಡಿ ಕುಮಾರಸ್ವಾಮಿ ಸ್ಪಷ್ಟನೆ
ಸಚಿವ ಹೆಚ್.ಸಿ. ಮಹದೇವಪ್ಪ ಅವರು ಭಗವದ್ಗೀತೆ ಕುರಿತು ಮಾಡಿದ್ದ ಟೀಕೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಭಗವದ್ಗೀತೆ ಸತ್ಯದ ಜ್ಞಾನ ಸಂಪಾದನೆಗೆ ಸರ್ವೋತ್ಕೃಷ್ಟ ಗ್ರಂಥ ಎಂದು ನಾನು ಇಂದು ಭಾವಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಮಹದೇವಪ್ಪಗೆ ಕುಮಾರಸ್ವಾಮಿ ನೀಡಿರುವ ತಿರುಗೇಟು ಇಲ್ಲಿದೆ.
- Ganapathi Sharma
- Updated on: Dec 8, 2025
- 12:23 pm