AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS

JDS

ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.

ಇನ್ನೂ ಹೆಚ್ಚು ಓದಿ

ಬಿಜೆಪಿ ಕಾರ್ಯಕಾರಿಣಿ ಸಭೆ: ಸರ್ಕಾರದ ವಿರುದ್ಧ 6 ನಿರ್ಣಯ, ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ತೀರ್ಮಾನ

ಮುಂಬರುವ ಚುನಾವಣೆಗಳನ್ನ ಗೆಲ್ಲೋದಕ್ಕೆ ಕಮಲ ಪಡೆ ರಣತಂತ್ರ ಹೆಣೆಯುತ್ತಿದೆ. ಪಕ್ಷದಲ್ಲಿನ ಒಂದಿಷ್ಟು ಗೊಂದಲಕ್ಕೆ ಬ್ರೇಕ್ ಹಾಕಿ ಪಕ್ಷ ಸಂಘಟನೆ, ಮುಂದಿನ ಹಾದಿ, ಆಡಳಿತ ಪಕ್ಷದ ವಿರುದ್ದ ನಡೆಸಬೇಕಾದ ಹೋರಾಟದ ಬಗ್ಗೆ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮಹತ್ವದ ನಿರ್ಧಾರಗಳನ್ನ ತೆಗೆದುಕೊಳ್ಳಲಾಯ್ತು. ಹಾಗಾದ್ರೆ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಯಾರೆಲ್ಲಾ ಭಾಗಿಯಾಗಿದ್ರು, ಏನೆಲ್ಲಾ ನಿರ್ಧಾರಗಳನ್ನ ತೆಗೆದುಕೊಳ್ಳಲಾಯ್ತು ಎನ್ನುವ ಮಾಹಿತಿ ಇಲ್ಲಿದೆ.

BJP-JDS ಮೈತ್ರಿ ಗೊಂದಲಕ್ಕೆ ಶೀಘ್ರವೇ ಇತಿಶ್ರೀ: ಸಮನ್ವಯ ಸಭೆಗೆ ನಾಯಕರ ನಿರ್ಧಾರ

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರಿನಲ್ಲಿ ಸಮನ್ವಯ ಸಭೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಸೇರಿದಂತೆ ಮೈತ್ರಿ ವಿಚಾರದಲ್ಲಿ ಉಂಟಾಗಿರುವ ಗೊಂದಲಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶ. ಕುಮಾರಸ್ವಾಮಿ, ಆರ್. ಅಶೋಕ್, ಬಿ.ವೈ. ವಿಜಯೇಂದ್ರರಂತಹ ಪ್ರಮುಖ ನಾಯಕರ ನೇತೃತ್ವದಲ್ಲಿ ಮೀಟಿಂಗ್​​ ನಡೆಯಲಿದೆ ಎನ್ನಲಾಗಿದೆ.

  • Sunil MH
  • Updated on: Feb 19, 2026
  • 11:58 am

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ಮತ್ತೊಂದು ಶಾಕ್

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣರಿಗೆ ಮತ್ತೆ ಹಿನ್ನಡೆಯಾಗಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಲ್ಲಿಸಿದ್ದ 'ಬಿ' ರಿಪೋರ್ಟ್ ಅನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ತಿರಸ್ಕರಿಸಿತ್ತು. ಜೊತೆಗೆ ಮರು ತನಿಖೆಗೆ ಕೋರ್ಟ್‌ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೋರ್ಟ್​, ಸೂರಜ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟಿದೆ.

ದೋಸ್ತಿ ನಾಯಕರ ನಡುವೆ ದಂಗಲ್​: ಜಿಬಿಎ ಎಲೆಕ್ಷನ್​​ಗೆ ಜೆಡಿಎಸ್ ಪ್ರತ್ಯೇಕ ಸ್ಪರ್ಧೆ?; ಕುತೂಹಲ ಮೂಡಿಸಿದ ಹೆಚ್​​ಡಿಕೆ ನಡೆ

ಸ್ಥಳೀಯ ಸಂಸ್ಥೆ ಚುನಾವಣೆ ಹೊತ್ತಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಮೂಡಿದೆ. ಜಿಬಿಎ ಚುನಾವಣೆಯಲ್ಲಿ ಸೀಟು ಹಂಚಿಕೆ ಬಗ್ಗೆ ಸಮನ್ವಯದ ಕೊರತೆಯಿಂದ 85-100 ವಾರ್ಡ್‌ಗಳಲ್ಲಿ JDS ಪ್ರತ್ಯೇಕವಾಗಿ ಸ್ಪರ್ಧಿಸಲು ಹೆಚ್​.ಡಿ. ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ. ಮತ್ತೊಂದೆಡೆ, 2028ರ ಸಿಎಂ ಸ್ಥಾನಕ್ಕೆ ಮೈತ್ರಿ ನಾಯಕರ ನಡುವೆ ಈಗಲೇ ಆಂತರಿಕ ಪೈಪೋಟಿ ತೀವ್ರಗೊಂಡಿದ್ದು, ಮೈತ್ರಿ ಭವಿಷ್ಯ ಕುರಿತು ಕುತೂಹಲ ಹೆಚ್ಚಿಸಿದೆ.

  • Sunil MH
  • Updated on: Feb 15, 2026
  • 9:27 am

ರಾಜ್ಯಸಭೆಯಲ್ಲಿ ಮತ್ತೆ ಕರ್ನಾಟಕದ ಪರ ಧ್ವನಿ ಎತ್ತಿದ ದೇವೇಗೌಡ್ರು, ಈ ಬಾರಿ ಕೇಳಿದ್ದೇನು?

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-2027ನೇ ಸಾಲಿನ ಕೇಂದ್ರದ ಆಯ-ವ್ಯಯವು ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಪ್ರತಿಪಾದಿಸಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು, ಎರಡು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ. ಇನ್ನು ಕರ್ನಾಟಕದ ಪರ ಏನೆಲ್ಲಾ ಮಾತನಾಡಿದ್ದಾರೆ ಎನ್ನುವ ವಿವರ ಇಲ್ಲಿದೆ.

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲ: ಹೆಚ್​ಡಿಕೆಗೆ ಬಿಜೆಪಿ ಹೈಕಮಾಂಡ್​ನಿಂದ ಸಿಕ್ತು ಅಭಯ!

ಕರ್ನಾಟಕದಲ್ಲಿ ಎನ್‌ಡಿಎ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹೇಳಿಕೆಗಳಿಂದ ರಾಜಕೀಯ ಗೊಂದಲ ಉಂಟಾಗಿದ್ದು, ಇದೀಗ ಹೈಕಮಾಂಡ್ ಅಂಗಳ ತಲುಪಿದೆ. ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಕರ್ನಾಟಕ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಹೆಚ್​ಡಿಕೆ ಮಾತಿಗೆ ಪೂರಕವಾಗಿ ರಾಧಾಮೋಹನ್ ಸ್ಪಂದಿಸಿದ್ದಾರೆ ಎನ್ನಲಾಗಿದೆ.

  • Sunil MH
  • Updated on: Feb 10, 2026
  • 10:59 am

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್

ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಪಕ್ಷದೊಳಗಿನ ಅಸಮಾಧಾನ ಸ್ಫೋಟವಾಗಿದೆ. ಹಾಸನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಜೆಡಿಎಸ್​​ನೊಂದಿಗಿನ ಮೈತ್ರಿ ಬಗ್ಗೆ ಬಹಿರಂಗವಾಗಿಯೇ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಇದೀಗ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪ್ರೀತಂಗೌಡಗೆ ತಿರುಗೇಟು ನೀಡಿದ್ದಾರೆ.

ಜಿ.ಟಿ. ದೇವೇಗೌಡ ವಿರುದ್ಧ ಕುಮಾರಸ್ವಾಮಿ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ!

ಮೈಸೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ನಡೆಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳುವುದನ್ನು ಪ್ರಶ್ನಿಸಿದ ಕುಮಾರಸ್ವಾಮಿ, ಜೆಡಿಎಸ್‌ನಲ್ಲಿ ಇದ್ದುಕೊಂಡು ಹೀಗೆ ಮಾಡುವುದು ನಗೆಪಾಟಲಿಗೀಡಾಗುತ್ತದೆ ಎಂದು ಹೇಳಿದರು. ಒಂದು ನಿಷ್ಠೆ ಮತ್ತು ನಿಯತ್ತು ಇರಬೇಕು ಎಂದು ಜಿಟಿಡಿಗೆ ಅವರು ತಿವಿದಿದ್ದಾರೆ.

  • Ram
  • Updated on: Feb 8, 2026
  • 1:50 pm

ಶರಣು ಸಲಗರ ಪತ್ನಿ ಬಗ್ಗೆ ಮಾತಾಡಿದ್ದಕ್ಕೆ ಶಿವಲಿಂಗೇಗೌಡ ವಿಷಾದ: ಇತ್ತ ಶಾಸಕರ ಅಮಾನತಿಗೆ JDS ಆಗ್ರಹ

ಶಾಸಕ ಶಿವಲಿಂಗೇಗೌಡರು ಶರಣು ಸಲಗರ ಪತ್ನಿ ಬಗ್ಗೆ ಮಾತನಾಡಿದ್ದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮನ್ನು 'ಕೊಬ್ಬರಿ ಕಳ್ಳ' ಎಂದು ಪ್ರಚೋದಿಸಿದ್ದರಿಂದ ಪ್ರತಿಕ್ರಿಯಿಸಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಆದರೆ, ಜೆಡಿಎಸ್ ಶಿವಲಿಂಗೇಗೌಡರ ವರ್ತನೆಯನ್ನು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದ್ದು, ಸಂಸದೀಯ ಮೌಲ್ಯಗಳಿಗೆ ಧಕ್ಕೆ ತಂದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗ್ರಹಿಸಿದೆ.

ಮಂಡ್ಯ: ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ, ಜೆಡಿಎಸ್ ಟಿಕೆಟ್ ಫೈಟ್! ನಿಖಿಲ್ ವಿರುದ್ಧ ಕೇಸರಿ ಪಡೆ ಬಹಿರಂಗ ವಾಗ್ದಾಳಿ

ಮಂಡ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗೂ ಮುನ್ನವೇ ಬಿಜೆಪಿ-ಜೆಡಿಎಸ್ ಟಿಕೆಟ್ ಗುದ್ದಾಟ ಶುರುವಾಗಿದೆ. 2028ರ ವಿಧಾನಸಭೆ ಚುನಾವಣೆಗೆ ಕ್ಷೇತ್ರ ಹಂಚಿಕೆ ಕುರಿತು ಈಗಲೇ ಪೈಪೋಟಿ ಶುರುವಾಗಿದ್ದು, ಬಿಜೆಪಿ ನಾಯಕರು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದಾರೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ನಾನು ಜೀವನದ ಕೊನೆಕಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ: ರಾಜ್ಯಸಭೆಯಲ್ಲಿ ಗದ್ಗದಿತರಾದ ದೇವೇಗೌಡ

ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು ಇಂದು ರಾಜ್ಯಸಭೆಯ ಸದನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ರಾಜ್ಯ ಎದುರಿಸುತ್ತಿರುವ ನೀರಾವರಿ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಿದರು. ಕರ್ನಾಟಕವನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಹೆಚ್​​ಡಿ ದೇವೇಗೌಡ ಮಾತಿಗೆ ಇಡೀ ಸದನ ಮೌನವಾಗಿತ್ತು.

ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗರ್- ಶಿವಲಿಂಗೇಗೌಡ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಲಂಚ ಆರೋಪ ಪ್ರಕರಣ ಸಂಬಂಧ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ (BJP And JDS) ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಸಚಿವ ತಿಮ್ಮಾಪುರ ರಾಜೀನಾಮೆ ನೀಡಬೇಕೆಂದು ಧರಣಿ ನಡೆಸಿವೆ. ನಿನ್ನೆ(ಫೆಬ್ರವರಿ 03) ಅಹೋರಾತ್ರಿ ಧರಣಿ ನಡೆಸಿ ತಿಮ್ಮಾಪುರ ರಾಜೀನಾಮೆಗೆ ಪಟ್ಟು ಹಿಡಿದಿದ್ದು, ಇಂದು (ಫೆ.04)  ಸಹ ಪ್ರತಿಭಟನೆ ಮುಂದುವರೆಸಿವೆ. ಈ ವೇಳೆ ಬಿಜೆಪಿ ಶಾಸಕ ಶರಣು ಸಲಗರ್ ಹಾಗೂ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ವೈಯಕ್ತಿಕವಾಗಿ ಬೈದಾಡಿಕೊಂಡಿಕೊಂಡಿರುವ ಪ್ರಸಂಗ ನಡೆದಿದೆ.