AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS

JDS

ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.

ಇನ್ನೂ ಹೆಚ್ಚು ಓದಿ

ಬೆಳಗಾವಿ ಅಧಿವೇಶನಕ್ಕೆ ಸುವರ್ಣಸೌಧ ಸಜ್ಜು: 12 ಸಾವಿರ ಸಿಬ್ಬಂದಿ, 3 ಸಾವಿರ ರೂಮ್​ಗಳು ಬುಕ್

ಡಿಸೆಂಬರ್ 8ರಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಇಡೀ ಸರ್ಕಾರವೇ ಬೆಳಗಾವಿಯಲ್ಲಿರಲಿದ್ದು, ಅಚ್ಚುಕಟ್ಟಾಗಿ ಅಧಿವೇಶನ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ. ದೆಹಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಬಿಗಿ ಬಂದೋಬಸ್ತ್ ಸಹ ಮಾಡಲಾಗಿದೆ.

ರೇವಣ್ಣ, ರೇವಣ್ಣನ ಮಕ್ಕಳೇ ಆಡಳಿತ ಮಾಡಬೇಕು ಅಂತೇನಿಲ್ಲ: ಬಿಜೆಪಿ ಮುಖಂಡ ಕಿಡಿ

ಪ್ರಜ್ವಲ್​​ ಇಲ್ಲ ಅಂದರೆ ಮತ್ತೊಬ್ಬ ನಾಯಕ ಬರುತ್ತಾರೆ. ರೇವಣ್ಣ, ರೇವಣ್ಣನ ಕುಟುಂಬ ಇಲ್ಲದೆ ಹೋದರೂ ಹಾಸನ ಜಿಲ್ಲೆ ಅಭಿವೃದ್ಧಿ ಆಗುತ್ತೆ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿದ್ದಾರೆ. ಹೈಕೋರ್ಟ್​ನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿ ವಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಮಾತನಾಡಿದರು.

ಕಾಂಗ್ರೆಸ್​​​ನಲ್ಲಿ ಸಹಿ ಸಂಗ್ರಹ: ನಾಟಿ ಕೋಳಿ ರುಚಿ ಸವಿದರೂ ಕುರ್ಚಿ ಕಾಳಗ ಶಾಂತವಾಗಿಲ್ವಾ?

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ನಡೆದ ಮುಸುಕಿನ ಗುದ್ದಾಟ ಸದ್ಯಕ್ಕೆ ಶಾಂತವಾದಂತಿದೆ. ಪರಸ್ಪರ ಒಬ್ಬರ ಮನೆಗೆ ಒಬ್ಬರು ಹೋಗಿ ಬ್ರೇಕ್ ಫಾಸ್ಟ್​​ ಮೀಟಿಂಗ್ ಮಾಡುವ ಮೂಲಕ ಗೊಂದಲ ಬಗೆರಿಸಿಕೊಂಡಿದ್ದಾರೆ. ಆದರೂ ಬೂದಿಮುಚ್ಚಿದ ಕೆಂಡದಂತಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸಹಿ ಸಂಗ್ರಹದ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ್​ ರೇವಣ್ಣಗೆ ಶಾಕ್ ಕೊಟ್ಟ ಕೋರ್ಟ್

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆಯೊಡ್ಡಿದ ಆರೋಪ ಎದುರಿಸುತ್ತಿರುವ ಸೂರಜ್ ರೇವಣ್ಣಗೆ ಬಿಗ್ ಶಾಕ್ ಕೊಟ್ಟಿದೆ. ಸೂರಜ್ ರೇವಣ್ಣ ವಿರುದ್ಧದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಸಲ್ಲಿಸಿದ್ದ 'ಬಿ' ರಿಪೋರ್ಟ್​ ವರದಿಯನ್ನು ತಿರಿಸ್ಕರಿಸಿದೆ. ಅಲ್ಲದೇ ತನಿಖೆ ಮುಂದುವರಿಕೆಗೆ ಆದೇಶಿಸಿದೆ. ಇದರಿಂದ ಸೂರಜ್ ರೇವಣ್ಣ ಮತ್ತೆ ಸಂಕಷ್ಟ ಎದುರಾಗಿದೆ.

ಮುಂದಿನ‌ ಆರೇಳು ತಿಂಗಳಲ್ಲಿ ನಿರೀಕ್ಷಿಸದ ತೀರ್ಮಾನಗಳು ಆಗಬಹುದು: ಭವಿಷ್ಯ ನುಡಿದ ಹೆಚ್​ಡಿ ಕುಮಾರಸ್ವಾಮಿ

ಮುಂದಿನ ಆರು ಏಳು ತಿಂಗಳಲ್ಲಿ ಕರ್ನಾಟಕದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​​ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಜನತೆ ಈಗಾಗಲೇ ಬೇಸತ್ತಿದ್ದು, ಸರ್ಕಾರವನ್ನು ಕಿತ್ತೊಗೆಯಲು ಕಾಯುತ್ತಿದ್ದಾರೆ ಎಂದರು.

ಸತ್ಯ ಮುಚ್ಚಿಡಲು ಆಗಲ್ಲ: ಮೈತ್ರಿ ಸರ್ಕಾರ ಪತನದ ಗುಟ್ಟು ಬಿಚ್ಚಿಟ್ಟ ಹೆಚ್​ಡಿ ದೇವೇಗೌಡ

ಹೆಚ್​​ಡಿ. ದೇವೇಗೌಡ ಮೈತ್ರಿ ಸರ್ಕಾರ ಪತನದ ಹಿಂದಿನ ಸತ್ಯವನ್ನು ಬಹಿರಂಗಪಡಿಸಿದ್ದು, ಸತ್ಯಕ್ಕೆ ಬೆಲೆ ಇದೆ. ಮುಚ್ಚಿಡಲು ಸಾಧ್ಯವಿಲ್ಲ ಎಂದಿದ್ದಾರೆ. ಹೆಚ್​.ಡಿ. ಕುಮಾರಸ್ವಾಮಿಯವರ ಜನಪರ ಕಾರ್ಯಕ್ರಮಗಳನ್ನು ಸ್ಮರಿಸಿದ ಅವರು, ಎರಡು ಬಾರಿ ಮುಖ್ಯಮಂತ್ರಿಯಾದ ಅನುಭವವುಳ್ಳ ಅವರ ನಾಯಕತ್ವದಲ್ಲಿ ಜೆಡಿಎಸ್ ಮತ್ತೆ ತಲೆ ಎತ್ತಿ ನಿಲ್ಲಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್​​ ರಾಜ್ಯಾಧ್ಯಕ್ಷರ ಬದಲಾವಣೆ: ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅಧಿಕೃತ ಘೋಷಣೆ

ಜೆಡಿಎಸ್‌ ಪಕ್ಷವು ಅಸ್ತಿತ್ವಕ್ಕೆ ಬಂದು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ರಜತ ಮಹೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ . ಅದರಂತೆ ನಾಳೆ (ನವೆಂಬರ್ 21) ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲೇ ಜೆಡಿಎಸ್​​ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರಸ್ವಾಮಿ ಹೆಸರು​ ಘೋಷಣೆ ಮಾಡುವ ಸಾಧ್ಯತೆಗಳಿವೆ.

ಮಾಲೂರು ಅಸೆಂಬ್ಲಿ ಕ್ಷೇತ್ರದ ಮರು ಮತ ಎಣಿಕೆಗೆ ಕ್ಷಣಗಣನೆ: ಎಲ್ಲಿ, ಯಾವಾಗ, ಎಷ್ಟು ಗಂಟೆಗೆ?

ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮರುಎಣಿಕೆ ಕಾರ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮರುಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ಮರು ಎಣಿಕೆ ಕಾರ್ಯದ ಫಲಿತಾಂಶ ಏನಾಗುತ್ತದೆ ಎನ್ನುವ ಕುತೂಹಲ ಕೋಲಾರದತ್ತ ತಿರುಗಿ ನೋಡುವಂತೆ ಮಾಡಿದೆ. ಇನ್ನು ಈಗಾಗಲೇ ಗೆದ್ದ ಹಾಗೂ ಸೋತ ಅಭ್ಯರ್ಥಿಗಳಲ್ಲಿ ಢವಢವ ಶುರುವಾಗಿದೆ. ಹಾಗಾದ್ರೆ, ಮಾಲೂರು ಅಸೆಂಬ್ಲಿ ಕ್ಷೇತ್ರದ ಮರು ಮತ ಎಣಿಕೆ ಎಲ್ಲಿ, ಯಾವಾಗ, ಎಷ್ಟು ಗಂಟೆಗೆ? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಜೆಡಿಎಸ್ 25ರ ಸಂಭ್ರಮದಲೇ ಜಿಟಿ ದೇವೇಗೌಡಗೆ ಶಾಕ್ ಕೊಟ್ಟ ಕುಮಾರಸ್ವಾಮಿ

ಜಾತ್ಯತೀತ ಜನತಾದಳ ಪಕ್ಷ (ಜೆಡಿಎಸ್) 25 ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ದಳಪತಿಗಳು ರಾಜ್ಯಾದ್ಯಂತ ಬೆಳ್ಳಿ ಹಬ್ಬ ಕಾರ್ಯಕ್ರಮ ಮಾಡಲು ತೀರ್ಮಾನಿಸಿದ್ದಾರೆ. ಈ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ , ಕೇಂದ್ರ ಸಚಿವರೂ ಆಗಿರುವ ಎಚ್​ ಡಿ ಕುಮಾರಸ್ವಾಮಿ ಅವರು ನಾಯಕರು ಸಭೆ ಮಾಡಿದ್ದಾರೆ. ಇದೇ ವೇಳೆ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಕೋರ್ ಕಮಿಟಿ ಪುನರ್ ರಚನೆ ಮಾಡಿದ್ದು, ಕೋರ್ ಕಮಿಟಿಯ ಅಧ್ಯಕ್ಷ ಸ್ಥಾನದಿಂದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡಗೆ ಕೊಕ್ ನೀಡಲಾಗಿದೆ.

ಜೆಡಿಎಸ್​​ನಿಂದ ರಾಜ್ಯಾದ್ಯಂತ ಬೆಳ್ಳಿ ಹಬ್ಬ ಆಚರಣೆ: ಕುಮಾರಸ್ವಾಮಿ ಹೇಳಿದ್ದಿಷ್ಟು

ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿ ಹಬ್ಬ ಕಾರ್ಯಕ್ರಮ ಮಾಡಲು ದಳಪತಿಗಳು ನಿರ್ಧರಿಸಿದ್ದಾರೆ. ನವೆಂಬರ್ 22ರಂದು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆಯಲಿದ್ದು, ನಂತರ ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಕಾರ್ಯಕ್ರಮ ನಡೆಯಲಿದೆ ಎಂದು ಜೆಡಿಎಸ್ ರಾಜಾಧ್ಯಕ್ಷ, ಕೇಂದ್ರ ಸಚಿವ ಎಚ್​​ ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಏನೆಲ್ಲಾ ಹೇಳಿದ್ದಾರೆ ನೋಡಿ.

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ