JDS
ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.
ದೇವೇಗೌಡರ ಭೇಟಿ ಬಳಿಕ ಜಿಟಿಡಿ ಸ್ಫೋಟಕ ಹೇಳಿಕೆ: ಎಲ್ಲಾ ಅಂತೆ-ಕಂತೆಗಳಿಗೆ ತೆರೆ!
ಎಚ್ಡಿ ಕುಮಾರಸ್ವಾಮಿಯೊಂದಿಗಿನ ಮನಸ್ತಾಪದಿಂದ ಜೆಡಿಎಸ್ ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದಿದ್ದ ಜಿಟಿ ದೇವೇಗೌಡ ಅವರು ಏಕಾಏಕಿ ಎಚ್ಡಿ ದೇವೇಗೌಡ ಅವರನ್ನ ಭೇಟಿ ಮಾಡಿದ್ದಾರೆ. ಕೋರ್ ಕಮಿಟಿಯಿಂದ ಗೇಟ್ ಪಾಸ್ ನೀಡಿದ ಬಳಿಕ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಸುದ್ದಿ ಮಧ್ಯೆ ಜಿಟಿಡಿ, ದೇವೇಗೌಡ್ರನ್ನ ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ. ಇನ್ನು ಬಹುದಿನಗಳ ನಂತರ ದೇವೇಗೌಡರ ಭೇಟಿ ಬಳಿಕ ಜಿಟಿಡಿ ತಮ್ಮ ಮುಂದಿನ ರಾಜಕೀಯ ನಿಲುವು ಸ್ಪಷ್ಟಪಡಿಸಿದ್ದಾರೆ.
- Ramesh B Jawalagera
- Updated on: May 15, 2026
- 7:41 pm
ತಂದೆ ಬಗ್ಗೆ ಹೆಚ್ಡಿಕೆ ಹೇಳಿಕೆಯಿಂದ ನೋವಾಗಿದೆ ಎಂದ ಸಚಿವ ಡಿ. ಸುಧಾಕರ್ ಪುತ್ರನಿಗೆ JDS ಕೌಂಟರ್
ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಳಿದ್ದ ಪ್ರಶ್ನೆಗಳು ರಾಜಕೀಯ ವಿವಾದಕ್ಕೆ ಕಾರಣವಾಗಿವೆ. "ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಆರೋಗ್ಯ ಮುಚ್ಚಿಟ್ಟಿದ್ದಾರೆಯೇ?" ಎಂಬ ಹೆಚ್ಡಿಕೆ ಹೇಳಿಕೆಗೆ ಸುಧಾಕರ್ ಪುತ್ರ ನೋವು ವ್ಯಕ್ತಪಡಿಸಿದ್ದರು. ಆದರೆ, ಈ ವಿಡಿಯೋ ಸ್ಕ್ರಿಪ್ಟೆಡ್ ಎಂದ ಜೆಡಿಎಸ್, ಸುಧಾಕರ್ ಆರೋಗ್ಯದ ಬಗ್ಗೆ ಕಾಂಗ್ರೆಸ್ ಸರ್ಕಾರದ ರಹಸ್ಯವನ್ನು ಪ್ರಶ್ನಿಸಿದೆ.
- Prasanna Hegde
- Updated on: Apr 29, 2026
- 4:14 pm
ಕಲಬುರಗಿ ಮಕ್ಕಳ ಅಪಹಾಸ್ಯವೇಕೆ? ವಿಪಕ್ಷಗಳಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
ಪ್ರಸಕ್ತ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಕಳೆದ ವರ್ಷ 80.04ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ ಈ ವರ್ಷ ಶೇ.94.01ರಷ್ಟು ಫಲಿತಾಂಶದೊಂದಿಗೆ ಶೇ.14ರಷ್ಟು ಫಲಿತಾಂಶ ಪ್ರಮಾಣ ಹೆಚ್ಚಳವಾಗಿದೆ. ಇನ್ನು ಕಲಬುರಗಿ ಕೊನೆ ಸ್ಥಾನದಲ್ಲಿದ್ದು, ಇದು ರಾಜಕೀಯ ವಾಗ್ಯುದ್ಧ ಕಾರಣವಾಗಿದೆ. ವಿಪಕ್ಷಗಳ ಟೀಕೆ, ವ್ಯಂಗ್ಯಗಳಿಗೆ ಖರ್ಗೆ ಕೌಂಟರ್ ಕೊಟ್ಟಿದ್ದಾರೆ.
- Dattatraya Patil
- Updated on: Apr 23, 2026
- 8:43 pm
ಈಗಾಗಲೇ ಅನುಭವಿಸಿದ್ದೇನೆ: ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ
ಸಚಿವ ಜಮೀರ್ ಅಹ್ಮದ್ ಖಾನ್ ಜೆಡಿಎಸ್ಗೆ ವಾಪಸಾಗುತ್ತಾರೆ ಎಂಬ ಊಹಾಪೋಹಗಳನ್ನ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಅದೆಲ್ಲವೂ ಗಾಳಿ ಸುದ್ದಿ ಎಂದು ಹೇಳುವ ಮೂಲಕ ಎಲ್ಲಾ ಅಂತೆ ಕಂತೆಗಳಿಗೆ ತೆರೆ ಎಳೆದಿದ್ದಾರೆ. ಅಲ್ಲದೇ ಅಧಿಕಾರಕ್ಕಾಗಿ ಅಂತಹ ಜನರನ್ನು ಸೇರಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.
- Ramesh B Jawalagera
- Updated on: Apr 23, 2026
- 4:51 pm
ಮೇಕೆದಾಟು ಯೋಜನೆಗೆ ಅಡ್ಡಗಾಲು: ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿ
ಮೇಕೆದಾಟು ಯೋಜನೆ ತಡೆ ಬಗ್ಗೆ ಡಿಎಂಕೆ ಪ್ರಣಾಳಿಕೆ ಕುರಿತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಕನ್ನಡಿಗರಿಗೆ ಸುಳ್ಳು ಭರವಸೆ ನೀಡಿ ವಂಚಿಸುವುದೇ ಕಾಂಗ್ರೆಸ್ ಅಜೆಂಡಾ ಎಂದು ಆರೋಪಿಸಿರುವ ಜಾತ್ಯಾತೀತ ಜನತಾದಳ, ತಮಿಳುನಾಡಿಗೆ ಹೋಗಿ ಡಿಎಂಕೆ ಪರ ಪ್ರಚಾರ ಮಾಡಿದ ಕಾಂಗ್ರೆಸ್ ನಾಯಕರ ನಡೆಯನ್ನು ಪ್ರಶ್ನಿಸಿದ್ದಾರೆ.
- Prasanna Hegde
- Updated on: Apr 21, 2026
- 2:41 pm
ದೇವೇಗೌಡ್ರಿಗೆ ರಾಜ್ಯ ಸರ್ಕಾರ ನೀಡಿದ 1.25 ಕೋಟಿ ರೂ. ಬೆಲೆಯ ಕಾರು ಯಾವುದು? ವಿಶೇಷತೆಗಳೇನು?
ಕರ್ನಾಟಕ ಕಾಂಗ್ರೆಸ್ ಸರ್ಕಾರವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಐಷಾರಾಮಿ ಕಾರು ಖರೀದಿಸಿಕೊಟ್ಟಿದೆ. ಕಳೆದ ವರ್ಷವೇ ಈ ಪ್ರಕ್ರಿಯೆ ನಡೆದಿದ್ದು, ಇತ್ತೀಚೆಗೆ ಮಂಡಿಸಲಾದ ಪೂರಕ ಅಂದಾಜುಗಳ ಮೂರನೇ ಹಾಗೂ ಅಂತಿಮ ಕಂತಿನಲ್ಲಿ ಈ ಕುರಿತಾದ ಅಧಿಕೃತ ಮಾಹಿತಿಯನ್ನು ಒದಗಿಸಲಾಗಿದೆ. ಹಾಗಾದ್ರೆ, ದೇವೇಗೌಡ್ರಿಗೆ ರಾಜ್ಯ ಸರ್ಕಾರ ಏಕೆ ಕಾರು ನೀಡಿದ್ದು, ಯಾವುದು ಅದು? ವಿಶೇಷತೆಗಳೇನು ಎನ್ನುವ ಡಿಟೇಲ್ಸ್ ಇಲ್ಲಿದೆ.
- Ramesh B Jawalagera
- Updated on: Apr 20, 2026
- 9:08 pm
ಯಾದಗಿರಿ-ಮೈಸೂರು ದುರ್ಘಟನೆ: ಪರಿಹಾರ ತಾರತಮ್ಯದ ಬಗ್ಗೆ ಸಿಎಂ ವಿರುದ್ಧ ಜೆಡಿಎಸ್ ಶಾಸಕ ಆಕ್ರೋಶ
ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಲ್ಲಿ ತಾರತಮ್ಯ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಪತ್ರ ಬರೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲ್ಯಾಣ ಕರ್ನಾಟಕದ ಜನರ ಬಗ್ಗೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದಿರುವ ಶಾಸಕ, ತಕ್ಷಣ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
- Sunil MH
- Updated on: Apr 20, 2026
- 7:13 pm
ಸಚಿವ ಜಮೀರ್ ಮತ್ತೆ ಜೆಡಿಎಸ್ ಸೇರ್ತಾರೆ ಎನ್ನುವ ಚರ್ಚೆ ಬಗ್ಗೆ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ
ಕುಮಾರಸ್ವಾಮಿ ಅವರೇ ಪ್ರತಿಕ್ರಿಯಿಸಿ, ಯಾರೂ ಸಂಪರ್ಕಿಸಿಲ್ಲ. ಸಂಪರ್ಕಿಸಿದರೆ ಪಕ್ಷದ ಹಿರಿಯರೊಂದಿಗೆ ಚರ್ಚಿಸುವೆ ಎಂಬ ಹೇಳಿಕೆ ರಾಜಕೀಯದಲ್ಲಿ ಕುತೂಹಲ ಹುಟ್ಟುಹಾಕಿತ್ತು. ಆದ್ರೆ, ಇದೀಗ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದು, ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲ್ಲ. ಇಂತಹ ಸಂದರ್ಭಗಳನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲ. ಜೆಡಿಎಸ್ ಜೊತೆಗೆ ಯಾರೂ ಸಂಪರ್ಕ ಸಾಧಿಸಿಲ್ಲ ಎಂದಿದ್ದಾರೆ. ಹಿಂದೆ ಮಾಡಿದ ತಪ್ಪುಗಳನ್ನು ಮತ್ತೆ ಮಾಡಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಅವರನ್ನ ಸೇರಿಸಿಕೊಳ್ಳುವುದಿಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
- Ramesh B Jawalagera
- Updated on: Apr 19, 2026
- 2:10 pm
ಮೇ 5ರ ನಂತರ ಕರ್ನಾಟಕ ರಾಜಕೀಯದಲ್ಲಿ ಏನೇನಾಗುತ್ತೆ ನೀವೇ ನೋಡಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ವಿಸ್ತರಣೆಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್ ಕಾಂಗ್ರೆಸ್ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹೌದು...ಟಿಕೆಟ್ ವಿಚಾರವಾಗಿ ಶುರುವಾದ ಅಸಮಧಾನ ಇದೀಗ ನಾಯಕರ ತಲೆದಂಡದವರೆಗೂ ಬಂದು ನಿಂತಿದೆ. ಅಷ್ಟೇ ಅಲ್ಲದೇ ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶದ ಬಗ್ಗೆಯೂ ಕಾಂಗ್ರೆಸ್ನಲ್ಲಿ ಆತಂಕ ಮೂಡಿಸಿದೆ. ಇದರ ಮಧ್ಯೆ ಇದೀಗ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
- Ramesh B Jawalagera
- Updated on: Apr 19, 2026
- 1:49 pm
ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷ: ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ; ಬೆಳ್ಳಿಹಬ್ಬದ ಮೂಲಕ ಜಿಬಿಎ ಚುನಾವಣೆಗೆ ರಣಕಹಳೆ
ಪ್ರಾದೇಶಿಕ ಪಕ್ಷ ಜೆಡಿಎಸ್ ಅಸ್ಥಿತ್ವಕ್ಕೆ ಬಂದು 25 ವರ್ಷವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಕೊಮ್ಮಗಟದಲ್ಲಿ ಬೃಹತ್ ಸಮಾವೇಶ ಮಾಡಲಾಗಿದ್ದು, ಆ ಮೂಲಕ ದಳಪತಿಗಳು ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದಾರೆ. ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರನ್ನ ಸೇರಿಸಿ ಜಿಬಿಎ ಚುನಾವಣೆಗೆ ದಳಪತಿಗಳು ರಾಷ್ಟ್ರೀಯ ಪಕ್ಷಗಳಿಗಿಂತ ಮುಂಚಿತವಾಗಿ ರಣ ಕಹಳೆ ಊದಿದ್ದಾರೆ.
- Sunil MH
- Updated on: Apr 11, 2026
- 8:06 pm
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅಚ್ಚರಿ ಮಾತು
ಜೆಡಿಎಸ್ (JDS) ಯುವಕ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರಿಗೆ ಕ್ಷೇತ್ರದ್ದೇ ದೊಡ್ಡ ತಲೆನೋವಾಗಿದೆ. ಕೇವಲ ನಿಖಿಲ್ ಕುಮಾರಸ್ವಾಮಿಗೆ ಮಾತ್ರವಲ್ಲ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲೂ ಕ್ಷೇತ್ರದ ಗೊಂದಲ ಸೃಷ್ಟಿಸಿದೆ. ಯಾಕಂದ್ರೆ ಮಂಡ್ಯ ಲೋಕಸಭೆಯಲ್ಲಿ ಸೋತರು. ರಾಮನಗರ ವಿಧಾನಸಭೆ ಹಾಗೂ ಚನ್ನಪಟ್ಟಣ ಉಪಚುನಾವಣೆಯಲ್ಲೂ ಸಹ ನಿಖಿಲ್ ಪರಾಭವಗೊಂಡಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆನ್ನುವುದೇ ನಿಖಿಲ್ಗೆ ಗೊಂದಲಕ್ಕೀಡು ಮಾಡಿದೆ.
- Sunil MH
- Updated on: Apr 10, 2026
- 4:14 pm
ಸಿದ್ದರಾಮಯ್ಯಗೆ ಹಳೆಯ ದಿನಗಳನ್ನ ನೆನಪಿಸಿ ವ್ಯಂಗ್ಯವಾಡಿದ ಕುಮಾರಸ್ವಾಮಿ
ಸಿದ್ದರಾಮಯ್ಯ (Siddaramaiah) ಜೆಡಿಎಸ್ನಲ್ಲಿದ್ದಾಗ 58 ಸೀಟು ಗೆದ್ದಿದ್ದೆವು ಅಂತಾರೆ. 1999ರಲ್ಲೂ ಅವರು ಅಧ್ಯಕ್ಷರಾಗಿದ್ದರು, ಆಗ ಎಷ್ಟು ಸೀಟು ಗೆದ್ದಿದ್ದರು? ಮಹದೇವಪ್ಪ, ಸಿದ್ದರಾಮಯ್ಯ ಇಬ್ಬರೂ ಮನೆಗೆ ಬಂದು ಕಣ್ಣೀರಿಟ್ಟಿದ್ದರು. ಅವರು ಕಣ್ಣೀರು ಹಾಕುವಾಗ ಅಲ್ಲಿ ಬಕೆಟ್ ಇದ್ದಿದ್ದರೆ ತುಂಬಿಹೋಗುತ್ತಿತ್ತು. ಸಿದ್ದರಾಮಯ್ಯನವರು ಒಮ್ಮೆ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಳ್ಳಲಿ ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ (HD Kumaraswamy) ವ್ಯಂಗ್ಯವಾಡಿದ್ದಾರೆ.
- Ram
- Updated on: Apr 10, 2026
- 2:32 pm