JDS
ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.
ಕುಮಾರಸ್ವಾಮಿ ಪತ್ನಿ ಹೆಸರಿನಲ್ಲಿ 100 ಎಕರೆ ಜಾಗ ಆರೋಪ: ಎಂ.ಬಿ. ಪಾಟೀಲ್ ವಿರುದ್ಧ ಮಾನಹಾನಿ ಮೊಕದ್ದಮೆ ಎಚ್ಚರಿಕೆ ಕೊಟ್ಟ ನಿಖಿಲ್
Bengaluru Suddi: ಬಿಡದಿ ಭೂಮಿ ವಿವಾದ ತಾರಕಕ್ಕೇರಿದ್ದು, ಪೋಸ್ಟರ್ ಸಮರ ಆರಂಭವಾಗಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದವರ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಕಾರಿದ್ದಾರೆ. ಕುಮಾರಸ್ವಾಮಿ ಪತ್ನಿಯ ಹೆಸರಿನಲ್ಲಿ 100 ಎಕರೆ ಜಾಗವಿದೆ ಎಂಬ ಎಂಬಿ ಪಾಟೀಲ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಆರೋಪ ಸಾಬೀತುಪಡಿಸ ಬೇಕು ಅಥವಾ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಇಲ್ಲವಾದರೆ ಮಾನಹಾನಿ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
- Sunil MH
- Updated on: Jun 24, 2026
- 11:25 am
ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಗೊತ್ತಾ?
ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಬಿಜೆಪಿ ತೊರೆದು ವಾಪಸ್ ಮಾತೃಪಕ್ಷ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇಂದು (ಜೂನ್ 21) ಬೆಂಗಳೂರಿನಲ್ಲಿ ಕೇಂದ್ರ ಸಚಿವ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಜೆಡಿಎಸ್ ಸೇರ್ಪಡೆಯಾದರು. 2013ರಲ್ಲಿ ಜೆಡಿಎಸ್ನಿಂದಲೇ ರಾಜಕೀಯ ಪ್ರವೇಶಿಸಿದ್ದ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಬಳಿಕ ನಡೆದ ಕೆಲ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ಬಿಎಸ್ಪಿ ಸೇರ್ಪಡೆಯಾಗಿದ್ದರು. ಇದೀಗ ಅಂತಿಮವಾಗಿ ವಾಪಸ್ ಜೆಡಿಎಸ್ ಮನೆ ಸೇರಿಕೊಂಡಿದ್ದಾರೆ.
- Ramesh B Jawalagera
- Updated on: Jun 21, 2026
- 4:19 pm
ಅಂತಾರಾಷ್ಟ್ರೀಯ ಯೋಗ ದಿನ: ಮಂಡ್ಯದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಯೋಗಾಭ್ಯಾಸ
ಮಂಡ್ಯದ ಪಿಇಟಿ ಆವರಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಸಾರ್ವಜನಿಕರೊಂದಿಗೆ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಕಪಾಲಭಾತಿ ಮತ್ತು ಅನುಲೋಮ-ವಿಲೋಮ ಪ್ರಾಣಾಯಾಮ ಸೇರಿದಂತೆ ವಿವಿಧ ಯೋಗಾಸನಗಳನ್ನು ಈ ವೇಳೆ ಪ್ರದರ್ಶಿಸಲಾಯಿತು.
- Dileep CP
- Updated on: Jun 21, 2026
- 9:17 am
ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ? ಹೆಚ್ಡಿ ಕುಮಾರಸ್ವಾಮಿ ಏನಂದರು ನೋಡಿ
ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಬಿರುಕು ಬಿಡಲಿದೆ ಎಂಬ ವದಂತಿಯನ್ನು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಯಾವುದೇ ಕಾರಣಕ್ಕೂ ನಮ್ಮ ಮೈತ್ರಿ ಮುರಿಯುವುದಿಲ್ಲ. ಅಭ್ಯರ್ಥಿ ನಿಲ್ಲಿಸುವ ಮುನ್ನವೇ ಬಿಜೆಪಿ ವರಿಷ್ಠರೊಂದಿಗೆ ಚರ್ಚಿಸಿದ್ದು, ಅಡ್ಡಮತದಾನದ ಕುರಿತು ಸಿಟಿ ರವಿ ನೇತೃತ್ವದ ತಂಡ ಪರಿಶೀಲಿಸುತ್ತಿದೆ ಎಂದರು.
- Ganapathi Sharma
- Updated on: Jun 20, 2026
- 2:39 pm
Bidadi Township Project: ಬಿಡದಿ ರೈತರಿಗೆ ಪ್ರತಿ ಎಕರೆಗೆ 2.3 ಕೋಟಿ ರೂ. ಪರಿಹಾರ! ಚೆಕ್ ವಿತರಣೆ ಶುರು
ಒಂದೆಡೆ ಬಿಡದಿ ಟೌನ್ಶಿಪ್ ವಿರೋಧಿಸಿ ರೈತರು ಹೋರಾಟ ಮಾಡುತ್ತಿದ್ದಾರೆ. ಮತ್ತೊಂದೆಡೆ ಭೂಸ್ವಾಧೀನಕ್ಕೆ ಒಪ್ಪಿರುವ ರೈತರಿಗೆ ಸರ್ಕಾರ ಪರಿಹಾರದ ಹಣ ನೀಡಲು ಶುರು ಮಾಡಿದೆ. ಹತ್ತು ಮಂದಿ ರೈತರಿಗೆ ಶುಕ್ರವಾರ ಚೆಕ್ ವಿತರಣೆ ಮಾಡಲಾಗಿದೆ. ಈ ಮೂಲಕ ಬಿಜೆಪಿ-ಜೆಡಿಎಸ್ ನಾಯಕರಿಗೆ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ ಸವಾಲು ಹಾಕಿದ್ದಾರೆ.
- Prashantha B
- Updated on: Jun 20, 2026
- 6:53 am
ಪರಿಷತ್ ಚುನಾವಣೆ: ಜೆಡಿಎಸ್ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ; ಇಲ್ಲಿದೆ ಮಾಹಿತಿ
ಕರ್ನಾಟಕ ಎಂಎಲ್ಸಿ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಜೆಡಿಎಸ್ ಪಕ್ಷಕ್ಕೆ ದೊಡ್ಡ ಆಘಾತ ನೀಡಿದೆ. ನಾಲ್ಕರಿಂದ ಐದು ಶಾಸಕರು ಕ್ರಾಸ್ ವೋಟಿಂಗ್ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಆಂತರಿಕ ಗುಂಪುಗಾರಿಕೆ, ನಾಯಕತ್ವದ ಕೊರತೆ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿಯ ಅಸಮಾಧಾನ ಇದಕ್ಕೆ ಕಾರಣ ಎನ್ನಲಾಗಿದ್ದು, ಕಾಂಗ್ರೆಸ್ ಪಕ್ಷ ಇದರ ಲಾಭ ಪಡೆದಿದೆ ಎಂದು ಹೇಳಲಾಗಿದೆ.
- Prasanna Hegde
- Updated on: Jun 19, 2026
- 4:25 pm
ಅಡ್ಡಮತದಾನ: ಜೆಡಿಎಸ್, ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ, ಹೈಕಮಾಂಡ್ ಬುಲಾವ್, ತಲೆದಂಡವಾಗುತ್ತಾ?
ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ನಿನ್ನೆಯಷ್ಟೇ ಹೊರಬಿದ್ದಿದೆ. ಕಾಂಗ್ರೆಸ್ ನಾಯಕರು ಗೆಲುವಿನ ನಗೆ ಬೀರಿದ್ರೆ ಬಿಜೆಪಿ, ಜೆಡಿಎಸ್ ಮೈತ್ರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಒಗ್ಗಟ್ಟು ಪ್ರದರ್ಶಿಸಬೇಕಿದ್ದ ವಿಪಕ್ಷಗಳ ಶಾಸಕರು ಮೈತ್ರಿಗೆ ಕೈಕೊಟ್ಟಿದ್ದಾರೆ. ಈ ಕುರಿತು ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಲ್ಲಿ ಮಹತ್ವರ ರಾಜಕೀಯ ಬೆಳೆವಣಿಗಳು ನಡೆಯುತ್ತಿವೆ. ಇದರ ಮಧ್ಯೆ ಬಿಜೆಪಿ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ.
- Ramesh B Jawalagera
- Updated on: Jun 19, 2026
- 6:26 pm
ಬಗರ್ ಹುಕುಂ ಹಗರಣ: ಜೆಡಿಎಸ್ ಮಾಜಿ ಶಾಸಕ ಸಿಐಡಿ ವಶಕ್ಕೆ
ಹಾಸನ ಜಿಲ್ಲೆ ಬೇಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಬಗರ್ ಹುಕುಂ ಭೂಮಿ ಮಂಜೂರಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ (CID) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಗರ್ ಹುಕ್ಕುಂ ಸಮಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸರ್ಕಾರಿ ಜಮೀನುಗಳನ್ನು ನಿಯಮಬಾಹಿರವಾಗಿ ಮಂಜೂರು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ದಾಖಲಿಸಿದ್ದ ದೂರಿನ ಮೇರೆಗೆ ಸಿಐಡಿ ಅಧಿಕಾರಿಗಳು ಲಿಂಗೇಶ್ ಅವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
- Manjunath KB
- Updated on: Jun 19, 2026
- 2:56 pm
ಶುರುವಾಯ್ತಾ ಮೈತ್ರಿ ಕುಸ್ತಿ? ಹೆಚ್ಡಿ ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಸುಮಲತಾ ಅಂಬರೀಶ್ಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ ಕುರಿತು ಜೆಡಿಎಸ್ ನಾಯಕ ಹೆಚ್.ಡಿ. ರೇವಣ್ಣ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಇದು ಪಕ್ಷದ ಆಂತರಿಕ ವಿಚಾರ ಎಂದ ಅಶೋಕ್, ಯಾರಿಗೂ ಭರವಸೆ ನೀಡಿರಲಿಲ್ಲ, ರಾಜ್ಯಸಭಾ ಟಿಕೆಟ್ ಕಾರ್ಯಕರ್ತರಿಗೆ ನೀಡಲಾಗಿದೆ ಎಂದರು. ರೇವಣ್ಣ ಅಥವಾ ಬೇರೆಯವರಿಗೆ ಈ ಕುರಿತು ಮಾತನಾಡುವ ಅಧಿಕಾರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
- Ganapathi Sharma
- Updated on: Jun 19, 2026
- 2:35 pm
ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ಗೆ ಸೋಲು: ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಮೇಲ್ಮನೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯ ಸೋಲಿನ ನಂತರ ಹೆಚ್ಡಿ ಕುಮಾರಸ್ವಾಮಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಅಡ್ಡ ಮತದಾನ ನಡೆಯುತ್ತದೆ ಎಂದು ಮೊದಲೇ ತಿಳಿದಿತ್ತು, ಅತಿಯಾದ ನಂಬಿಕೆ ಆಘಾತ ತಂದಿದೆ ಎಂದರು. ಯುವಕರಿಗೆ ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವ ನಿರ್ಧಾರವನ್ನು ಘೋಷಿಸಿದ್ದು, ಪಕ್ಷದ ಅಂತಿಮ ನಿರ್ಧಾರಗಳು ತಮ್ಮದೇ ಆಗಿರುತ್ತವೆ ಎಂದು ಸ್ಪಷ್ಟಪಡಿಸಿದರು.
- Ganapathi Sharma
- Updated on: Jun 19, 2026
- 9:37 am
ಸಂಪೂರ್ಣ ತಲೆಕೆಳಗಾದ ಲೆಕ್ಕಾಚಾರ: ದಳಪತಿಗಳಿಗೆ ಭರ್ಜರಿ ಶಾಕ್ ಕೊಟ್ಟ ಪರಿಷತ್ ಚುನಾವಣೆ ಫಲಿತಾಂಶ
ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಕೇವಲ 14 ಮತಗಳನ್ನು ಪಡೆದು ಭಾರಿ ಮುಖಭಂಗ ಅನುಭವಿಸಿದ್ದು, ಸ್ವಪಕ್ಷದ ಶಾಸಕರ ಕ್ರಾಸ್ ವೋಟಿಂಗ್ ಹಾಗೂ ಕೊನೆಯ ಕ್ಷಣದ ಬಿಜೆಪಿಯ ನಡೆ ದಳಪತಿಗಳ ಲೆಕ್ಕಾಚಾರವನ್ನು ಸಂಪೂರ್ಣ ಉಲ್ಟಾ ಮಾಡಿದೆ. ಒಂದರಿಂದ ಎರಡು ಅಡ್ಡ ಮತದಾನ ಆಗಬಹುದೆಂಬ ನಿರೀಕ್ಷೆಯಲ್ಲಿದ್ದ ದಳಪತಿಗಳಿಗೆ ಫಲಿತಾಂಶ ಭರ್ಜರಿ ಶಾಕ್ ಕೊಟ್ಟಿದೆ.
- Prasanna Hegde
- Updated on: Jun 18, 2026
- 9:10 pm
ಪರಿಷತ್ ಚುನಾವಣೆ ಫಲಿತಾಂಶ: ಕಾಂಗ್ರೆಸ್ನ ಐವರು, ಬಿಜೆಪಿಯ ಇಬ್ಬರ ಗೆಲುವು, ಸೋಲುಂಡ ಜೆಡಿಎಸ್ನ ಗೋವಿಂದರಾಜು
ಕರ್ನಾಟಕ ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ನ ಐದೂ ಅಭ್ಯರ್ಥಿಗಳು ಮತ್ತು ಬಿಜೆಪಿಯ ಇಬ್ಬರು ಗೆಲುವು ಸಾಧಿಸಿದ್ದಾರೆ. ಮೈತ್ರಿ ಪಕ್ಷಗಳ ಕ್ರಾಸ್ ವೋಟಿಂಗ್ನಿಂದಾಗಿ ಜೆಡಿಎಸ್ನ ಏಕೈಕ ಅಭ್ಯರ್ಥಿ ಗೋವಿಂದರಾಜು ಪರಾಭವಗೊಂಡಿದ್ದಾರೆ. ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ. ನಂಬರ್ ಸರಿಯಾಗಿ ಬರೆಯದಿದ್ದಕ್ಕೆ 1 ಮತವನ್ನು ತಿರಸ್ಕರಿಸಲಾಗಿದೆ.
- Prasanna Hegde
- Updated on: Jun 18, 2026
- 7:12 pm