JDS

JDS

ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.

ಇನ್ನೂ ಹೆಚ್ಚು ಓದಿ

ಹುಬ್ಬಳ್ಳಿಯಲ್ಲಿ ಕೋಟ್ಯಾಂತರ ರೂ. ಬೆಲೆಬಾಳುವ ಸ್ಥಳಕ್ಕಾಗಿ 3 ಪಕ್ಷಗಳ ಗುದ್ದಾಟ: ಏನಿದು ವಿವಾದ?

ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗಿನ ಅಧಿಕಾರಕ್ಕಾಗಿ ರಾಜಕೀಯ ಪಕ್ಷಗಳ ನಡುವಿನ ಕಿತ್ತಾಟ ನೋಡಿದ್ದೇವೆ. ಆದ್ರೆ, ಈಗ ಜಾಗಕ್ಕಾಗಿ ಕಾಂಗ್ರೆಸ್, ಜೆಡಿಯು, ಜೆಡಿಎಸ್​ ನಡುವೆ ಗುದ್ದಾಟ ಶುರುವಾಗಿದೆ. ಅದು ಬಹುದೊಡ್ಡ ಬೆಲೆ ಬಾಳುವ ಜಾಗೆ. ಆ ಜಾಗೆಯಲ್ಲಿ ರಾತ್ರಿ ಕಳೆಯುವುದರಲ್ಲಿಯೇ ಬಹುದೊಡ್ಡ ವಿವಾದ ಹುಟ್ಟಿಕೊಂಡಿದೆ. ಬಹುಕೋಟಿ ಬೆಲೆಯ ಜಾಗೆಯ ಮೇಲೆ ಬಹುತೇಕರ ಕಣ್ಣು ನೆಟ್ಟಿದ್ದು, ಮೂರು ರಾಜಕೀಯ ಪಕ್ಷಗಳು ಗುದ್ದಾಟ ನಡೆಸಿವೆ. ಅಷ್ಟಕ್ಕೂ ಯಾವುದು ಆ ಜಾಗ? ಏನಿದು ವಿವಾದ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಕರ್ನಾಟಕದಲ್ಲಿ ದ್ವೇಷ ಭಾಷಣ ಮಾಡಿದ್ರ 3 ವರ್ಷ ಜೈಲು: ಹೊಸ ಬಿಲ್ ತರಲು ಸರ್ಕಾರ ಸಿದ್ಧತೆ!

ಪ್ರಸ್ತುತ ರಾಜಕಾರಣದಲ್ಲಿ ಜಾತಿ, ಧರ್ಮ, ಭಾಷೆ ಸೇರಿ ವಿವಿಧ ವಿಷಯಗಳ ಮೇಲೆ ದ್ವೇಷ ಹರಡುವ ಭಾಷಣದ ಅಬ್ಬರ ಜೋರಾಗಿದೆ. ಆಡಳಿತ ಹಾಗೂ ವಿಪಕ್ಷಗಳು ಒಂದಲ್ಲ ಒಂದು ವಿಚಾರದಲ್ಲಿ ಜಾತಿ, ಧರ್ಮ, ಭಾಷೆಗೆ ತಳಕು ಹಾಕಿಕೊಂಡೇ ಟೀಕಿಸುತ್ತಾರೆ. ಇದಕ್ಕೆ ಕರ್ನಾಟಕ ರಾಜಕಾರಣ ಹೊರತಾಗಿಲ್ಲ. ಕರ್ನಾಟಕ ರಾಜ್ಯ ರಾಜಕಾರಣದಲ್ಲೂ ಸಹ ದ್ವೇಷ ಭಾಷಣ ಹೆಚ್ಚಾಗಿದ್ದು, ಇದೀಗ ಇದಕ್ಕೆ ಕಡಿವಾಣ ಹಾಕಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ.

ಮೂಲೋತ್ಪಾಟನೆ ಮಾಡಲಾಗದ ಮೀಟರ್ ಬಡ್ಡಿ ನಿಯಂತ್ರಣಕ್ಕೆ ಹೊಸ ಕಾನೂನು-ಖುಷಿಯಾಗದ ಜನ

ಮೈಕ್ರೋ ಫೈನಾನ್ಸ್‌ ಕಿರುಕುಳ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಕೆಲವರು ಆತ್ಮಹತ್ಯೆ ಹಾದಿ ಹಿಡಿದರೆಮ ಇನ್ನೂ ಕೆಲವರು ಊರನ್ನೇ ಬಿಟ್ಟು ಓಡಾಡುತ್ತಿದ್ದಾರೆ. ನಮ್ಮ ಸಮಾಜದಲ್ಲಿನ ಕೆಲವು ಕ್ಲಿಷ್ಟಕರ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ತುಂಬಾ ಕಷ್ಟದ ಕೆಲಸ. ಅದರಲ್ಲೂ ಮೀಟರ್ ಬಡ್ಡಿ ಸಮಸ್ಯೆಯಂತ ಕ್ಲಿಷ್ಟ ಸಮಸ್ಯೆಗೆ ಪಕ್ಷಾತೀತವಾಗಿ ಕೆಲಸ ಮಾಡದ ನಮ್ಮ ರಾಜಕೀಯ ವ್ಯವಸ್ಥೆಯಿಂದ ಪರಿಹಾರ ನಿರೀಕ್ಷಿಸುವುದು ತಪ್ಪಾದೀತು.

ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಬುಡಕ್ಕೆ ಮುಡಾ ಹಗರಣ: ಇಡಿ, ಲೋಕಾಯುಕ್ತಕ್ಕೆ ದೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಮುಡಾ ಹಗರಣದ ತನಿಖೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು 14 ಸೈಟ್ ಪಡೆದಿದ್ದಾರೆಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಇದೇ ಹೊತ್ತಲ್ಲೇ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದು, ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ಸಲ್ಲಿಸಿದ್ದಾರೆ. ಮತ್ತೊಂದ್ಕಡೆ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದರ ಮಧ್ಯ ಇದೀಗ ಮುಡಾ ಹಗರಣ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಬುಡಕ್ಕೆ ಬಂದಿದೆ.

  • Ram
  • Updated on: Jan 28, 2025
  • 4:25 pm

ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಆರಂಭಕ್ಕೆ ಶುರುವಾಯ್ತು ಕ್ರೆಡಿಟ್ ವಾರ್: ಅಸಲಿಯತ್ತೇನು ನೋಡಿ

ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪಿಸುವ ಕನಸು ಕೊನೆಗೂ ನನಸಾಗಿದೆ. ಸಿಲಿಕಾನ್ ಸಿಟಿಯಲ್ಲಿ ಯುಎಸ್ ಕಾನ್ಸುಲೇಟ್​​ ತಾತ್ಕಾಲಿಕ ಕಚೇರಿಯನ್ನು ಶುಕ್ರವಾರ ಉದ್ಘಾಟಿಸಲಾಯಿತು. ಇದರ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಮೆರಿಕ ದೂತಾವಾಸ ಕಚೇರಿ ಸ್ಥಾಪನೆ ಸಂಬಂಧ ಕ್ರೆಡಿಟ್ ವಾರ್ ಶುರುವಾಗಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಪೈಪೋಟಿ ಶುರುವಾಗಿದೆ. ಆದರೆ, ಅಸಲಿಯತ್ತೇನು? ಇಲ್ಲಿದೆ ವಿವರ.

ಅಶ್ಲೀಲಕ್ಕೂ ಒಂದು ಮಿತಿ ಇರಬೇಕು, ಇದು ಎಲ್ಲಾ ಮೀರಿದೆ: ಪ್ರಜ್ವಲ್​ಗೆ ಹೈಕೋರ್ಟ್‌ ಚಾಟಿ

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್​ ರೇವಣ್ಣಗೆ ಹೈಕೋರ್ಟ್​​ನಲ್ಲಿ ಹಿನ್ನಡೆಯಾಗಿದೆ. ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. ಅಲ್ಲದೇ ಅಶ್ಲೀಲಕ್ಕೂ ಒಂದು ಮಿತಿ ಇರಬೇಕು ಎಂದು ಕೋರ್ಟ್​ ಚಾಟಿ ಬೀಸಿದೆ.

ಹಾಸನ: ಹೆಚ್​ಡಿ ದೇವೇಗೌಡರ ಆಪ್ತ ಮಾಜಿ ಎಂಎಲ್​ಸಿ ಪಟೇಲ್ ಶಿವರಾಂ ನಿಧನ

ವಿಧಾನ ಪರಿಷತ್ ಸದಸ್ಯ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ, ಹೆಚ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದ, ನಾಲ್ಕು ದಶಕಗಳ ಕಾಲ ಜೆಡಿಎಸ್​ನಲ್ಲಿ ಸಕ್ರಿಯರಾಗಿದ್ದ ಹಾಸನದ ಪ್ರಭಾವಿ ಮುಖಂಡ ಪಟೇಲ್ ಶಿವರಾಂ ನಿಧನರಾದರು. ಹೆಚ್​ಡಿ ದೇವೇಗೌಡರ ಆಪ್ತರೂ ಆಗಿದ್ದ ಶಿವರಾಂ ನಿಧನಕ್ಕೆ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.

11 ಜೆಡಿಎಸ್ ಶಾಸಕರು ಕಾಂಗ್ರೆಸ್​ಗೆ ಹೋಗುತ್ತಾರಾ?; ಅಲ್ಲಗಳೆದ ದೇವೇಗೌಡ; ಪಕ್ಷ ಮುಗಿಸಲು ಯಾರಿಂದಲೂ ಅಸಾಧ್ಯ ಎಂದ ಮಾಜಿ ಪ್ರಧಾನಿ

JDS vs Congress political fight: ಜೆಡಿಎಸ್​ನ ಹನ್ನೊಂದು ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಚನ್ನಗಿರಿಯ ಕೈ ಶಾಸಕ ಶಿವಗಂಗಾ ಬಸವರಾಜ ಹೇಳಿದ್ದಾರೆ. ಈ ವಿಚಾರವು ಜೆಡಿಎಸ್ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ. ಜನವರಿ 12ರಂದು ನಡೆದ ಜೆಡಿಎಸ್ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿದೆ. ಇದೆಲ್ಲವೂ ಸುಳ್ಳು ಎಂದು ಕುಮಾರಸ್ವಾಮಿ ಮತ್ತು ದೇವೇಗೌಡರು ಹೇಳಿದ್ದಾರೆ.

ಆಪರೇಷನ್ ಹಸ್ತ ಭೀತಿ..ಜೆಡಿಎಸ್​​ ಫುಲ್​ ಅಲರ್ಟ್​: ರಾಜ್ಯಾಧ್ಯಕ್ಷರ ಆಯ್ಕೆಗೆ ಮುಹೂರ್ತ ಫಿಕ್ಸ್

ಲೋಕಸಭೆ ಚುನಾವಣೆಗೆ ದೋಸ್ತಿ ದೋಸ್ತಿ ಎಂದು ಹೋರಾಡಿದ್ರು. ಅದರಂತೆಯೇ ಲೋಕಸಭೆ ಚುನಾವಣೆಯಲ್ಲೂ ಭರ್ಜರಿ ಗೆಲುವನ್ನೇ ಸಾಧಿಸಿದ್ರು. ಇದೀಗ ಮೈತ್ರಿಯೇ ಜೆಡಿಎಸ್​ಗೆ ಕುತ್ತು ತಂತಾ ಅನ್ನೋ ಅನುಮಾನ ಜೆಡಿಎಸ್​ ನಾಯಕರಲ್ಲೇ ಶುರುವಾಗಿದೆ. ಇದೇ ವಿಚಾರವಾಗಿಯೇ ಜೆಡಿಎಸ್​ ನಾಯಕರಲ್ಲೇ ಭಿನ್ನರಾಗ ಭುಗಿಲೆದ್ದಿದೆ. ಚನ್ನಪಟ್ಟಣದಲ್ಲಿ ನಿಖಿಲ್ ಸೋಲಿನ ಬಳಿಕ ದಳ ಮನೆಯಲ್ಲಿ ತಳಮಳ ಶುರುವಾಗಿದೆ. ಒಂದ್ಕಡೆ ಹೆಚ್​ಡಿಕೆ ವಿರುದ್ಧ ಕೆಲವರು ಅಸಮಾಧಾನ ಹೊರಹಾಕ್ತಿದ್ರೆ, ಜೆಡಿಎಸ್​ ಭಿನ್ನರಾಗವೇ ಆಪರೇಷನ್​ ಹಸ್ತಕ್ಕೆ ಅನುಕೂಲ ಆಯ್ತಾ ಅನ್ನೋ ಚರ್ಚೆ ಹುಟ್ಟುಹಾಕಿದೆ. ಆಪರೇಷನ್ ಹಸ್ತದ ಬಗ್ಗೆ ಮುನ್ಸೂಚನೆ ಸಿಕ್ಕಿರೋ ದಳಪತಿಗಳು ಇದೀಗ ಎಚ್ಚೆತ್ತುಕೊಂಡಿದ್ದು, ಸಭೆಯೂ ನಡೆಸಿದ್ದಾರೆ.

ಸೂರಜ್​ ರೇವಣ್ಣ ಅವಾಚ್ಯ ಶಬ್ದ ಬಳಕೆ: ಪಕ್ಷ ವಿರೋಧಿ ಕೆಲಸ ಮಾಡುವವರು ಸೂ…

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಅಗ್ರಹಾರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಅವರು ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ. ಪಕ್ಷ ವಿರೋಧಿ ಕೆಲಸ ಮಾಡಿದವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ತಮ್ಮ ಹುಟ್ಟುಹಬ್ಬದ ಸಮಾರಂಭದ ಕಾರ್ಯಕ್ರಮದಲ್ಲಿ ಈ ಮಾತುಗಳನ್ನು ಆಡಿದ್ದಾರೆ.

ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ
ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ
ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ
ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ರಾಜ್ಯಾಧ್ಯಕ್ಷ ರೇಸ್​ನಲ್ಲಿ ಸೋಮಣ್ಣ ಇದ್ದಾರಾ? ಸಿದ್ದೇಶ್ವರ್ ಏನಂದ್ರು ನೋಡಿ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಬಿಗ್ ಬಾಸ್​ನಿಂದ 50 ಲಕ್ಷ ಇನ್ನೂ ಬಂದಿಲ್ಲ: ವೇದಿಕೆಯಲ್ಲೇ ಹೇಳಿದ ಹನುಮಂತ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಗುಡ್ಡದ ತುತ್ತ ತುದಿಯಲ್ಲಿ ಕಾಡ್ಗಿಚ್ಚು: ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Weekly Horoscope: ಫೆಬ್ರವರಿ 10 ರಿಂದ 16ರವರೆಗಿನ ವಾರ ಭವಿಷ್ಯ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ
Daily Horoscope: ಈ ರಾಶಿಯವರಿಗೆ ಆರ್ಥಿಕ ವಿಚಾರದಲ್ಲಿ ಕಲಹ ಸಾಧ್ಯತೆ