AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JDS

JDS

ಕರ್ನಾಟಕದ ಒಕ್ಕಲಿಗ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಪಕ್ಷದ ಭದ್ರಕೋಟೆ ಉಳಿದಿದೆ. ಭಾರತದ ರಾಜಕೀಯ ಸಂಕೀರ್ಣತೆಗಳು ಮತ್ತು ವೈವಿಧ್ಯತೆಗಳನ್ನು ಪ್ರತಿಬಿಂಬಿಸುವ ಕರ್ನಾಟಕದ ಪ್ರಮುಖ ರಾಜಕೀಯ ಪಕ್ಷವಾಗಿ, ಜೆಡಿಎಸ್ ತನ್ನ ನಿರ್ಣಾಯಕ ಪಾತ್ರವನ್ನು ಮುಂದುವರೆಸಿದೆ.

ಇನ್ನೂ ಹೆಚ್ಚು ಓದಿ

ಜೈಲುಪಾಲಾಗಿರುವ ಪುತ್ರ ಪ್ರಜ್ವಲ್ ಗಾಗಿ ತಂದೆ ರೇವಣ್ಣ ವಿಶೇಷ ಪೂಜೆ

ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಮೇಲುಕೋಟೆಯಲ್ಲಿ ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಅದ್ದೂರಿಯಾಗಿ ಜರುಗಿತು. ಈ ಭವ್ಯ ಉತ್ಸವವನ್ನು ಕಣ್ತುಂಬಿಕೊಳ್ಳಲು ಸಹಸ್ರಾರು ಭಕ್ತರು ನೆರೆದಿದ್ದರು. ವೈರಮುಡಿ ಬ್ರಹ್ಮೋತ್ಸವದ ಪ್ರಮುಖ ಆಕರ್ಷಣೆಯೆಂದರೆ ಶ್ರೀದೇವಿ ಮತ್ತು ಭೂದೇವಿ ಸಮೇತ ಚಲುವನಾರಾಯಣಸ್ವಾಮಿಯು ರತ್ನಖಚಿತ ವೈರಮುಡಿ ಕಿರೀಟವನ್ನು ಧರಿಸಿ ಭಕ್ತರಿಗೆ ದರ್ಶನ ನೀಡುವುದು. ಈ ವೈರಮುಡಿ ಕಿರೀಟವನ್ನು ದೇವರಿಗೆ ಧಾರಣೆ ಮಾಡುವ ಆ ಕ್ಷಣವು ಅತಿ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ವಿಶಿಷ್ಟ ಸಂದರ್ಭವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು ಮೇಲುಕೋಟೆಗೆ ಆಗಮಿಸಿದ್ದರು. ಇನ್ನು ಅತ್ಯಾಚಾರ ಪ್ರಕಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರವಾಗಿ ತಂದೆ ಎಚ್​​ಡಿ ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ರೇವಣ್ಣ ಹಾಗೂ ಪುತ್ರ ಸೂರಜ್ ವೈರಮುಡಿ ಬ್ರಹ್ಮೋತ್ಸವದಲ್ಲಿ ಪ್ರಜ್ವಲ್ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು. ಈ ಮೂಲಕ ಆದಷ್ಟು ಬೇಗ ಜೈಲಿನಿಂದ ಆಚೆ ಬರಲಿ ಎಂದು ಬೇಡಿಕೊಂಡರು.

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ಶಾಸಕನ​​ ಆಕ್ರೋಶ

ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಪ್ರಕರಣದ ತನಿಖೆಯನ್ನು ದಿಕ್ಕು ತಪ್ಪಿಸಲು ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಚಾರ್ಜ್‌ಶೀಟ್‌ನಲ್ಲಿ ಸೇರಿಸಲಾಗಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಭಾವಿಗಳ ಹೆಸರುಗಳನ್ನು ಕೈಬಿಟ್ಟಿರುವುದನ್ನು ಅವರು ಪ್ರಶ್ನಿಸಿದ್ದಾರೆ. ನ್ಯಾಯಸಮ್ಮತ ತನಿಖೆ ಹಾಗೂ ಪಕ್ಷದ ಕಾರ್ಯಕರ್ತರ ರಕ್ಷಣೆಗೆ ಕಾನೂನು ಹೋರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು

ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಂಚಿಕೆ (Prajwal Revanna Pend rive Case) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ಹಾಸನದ ಸಿವಿಲ್‌ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ. ಬರೋಬ್ಬರಿ 13 ಸಾವಿರಕ್ಕೂ ಅಧಿಕ ಪುಟಗಳಿದ್ದು, ಬಿಜೆಪಿ ಮುಖಂಡ ದೇವರಾಜೇಗೌಡ ಸೇರಿ 39 ಮಂದಿಯ ವಿರುದ್ಧ ಆರೋಪ ದೃಢಪಡಿಸಿ ಸಾಕ್ಷಿ ಒದಗಿಸಲಾಗಿದೆ. ಇನ್ನು ಎಸ್​​ಐಟಿ ತನಿಖೆಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ.

ಕಾಂಗ್ರೆಸ್​​ ಜೊತೆಗಿನ ಮದುವೆ ಹಿಂಸಾತ್ಮಕವಾಗಿದ್ದರಿಂದ ವಿಚ್ಚೇದನ: ಖರ್ಗೆ ಹೇಳಿಕೆಗೆ ದೇವೇಗೌಡರ ಕೌಂಟರ್​

ಮಲ್ಲಿಕಾರ್ಜುನ ಖರ್ಗೆಯವರ ಹಾಸ್ಯಭರಿತ ಹೇಳಿಕೆಗೆ ದೇವೇಗೌಡರು ಪ್ರತ್ಯುತ್ತರ ನೀಡಿದ್ದಾರೆ. ಪ್ರಧಾನಿ ಮೋದಿ ಜೊತೆ ಮದುವೆಯಾಗಿದ್ದಾರೆಂಬ ಖರ್ಗೆ ಮಾತುಗಳಿಗೆ ಉತ್ತರಿಸಿರುವ ಅವರು, ಹೆಚ್ಚು ಸ್ಥಿರವಾದ ಮೈತ್ರಿ ಹುಡುಕುವುದನ್ನು ಹೊರತುಪಡಿಸಿ ಬೇರೆ ಆಯ್ಕೆ ಇರಲಿಲ್ಲ. ಕಾಂಗ್ರೆಸ್ ಜೊತೆಗಿನ ಸಂಬಂಧವು ಬಲವಂತದ, ಹಿಂಸಾತ್ಮಕ ಮದುವೆಯಾಗಿದ್ದರಿಂದ ವಿಚ್ಛೇದನ ಪಡೆಯಬೇಕಾಯಿತು ಎಂದು ಸ್ಪಷ್ಟಪಡಿಸಿದ್ದಾರೆ. 

ಗ್ರಾಮಾಂತರ ಪ್ರದೇಶದಲ್ಲಿ ಮನೆಗಳ ಮೇಲೆ ಹಾಕಿದ ಜಾಹೀರಾತಿಗೂ ತೆರಿಗೆ!: ವಿಪಕ್ಷಗಳಿಂದ ತೀವ್ರ ವಿರೋಧ

ಖಾಸಗಿ ಜಾಗಗಳ ಮೇಲಿನ ಜಾಹೀರಾತುಗಳಿಗೆ ತೆರಿಗೆ ವಿಧಿಸುವ ಕರ್ನಾಟಕ ಮುನ್ಸಿಪಾಲಿಟಿ ತಿದ್ದುಪಡಿ ವಿಧೇಯಕ 2026, ವಿಧಾನಪರಿಷತ್‌ನಲ್ಲಿ ಅಂಗೀಕಾರಗೊಂಡಿದೆ. ಖಾಸಗಿ ಆಸ್ತಿಗಳ ಮೇಲಿನ ಜಾಹೀರಾತುಗಳಿಗೆ ತೆರಿಗೆ ವಿಧಿಸುವುದಕ್ಕೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು ಜನಸಾಮಾನ್ಯರಿಗೆ ಹೊರೆಯಾಗಲಿದೆ ಎಂದಿವೆ. ಆದರೆ, ನಗರಾಭಿವೃದ್ಧಿ ಸಚಿವರು ಆದಾಯ ಸಂಗ್ರಹಕ್ಕೆ ಅನಿವಾರ್ಯ, ತೆರಿಗೆ ಹೊರೆ ಭರಿಸಬೇಕಿರೋದು ಕಂಪನಿಗಳು ಎಂದು ಸಮರ್ಥಿಸಿಕೊಂಡಿದ್ದಾರೆ.

ದೇವೇಗೌಡರು ನಮ್ಮನ್ನು ಪ್ರೇಮಿಸಿದರು, ಮೋದಿ ಜತೆ ಮದುವೆಯಾದರು! ಮಲ್ಲಿಕಾರ್ಜುನ ಖರ್ಗೆ ಹೀಗಂದಾಗ ಮೋದಿ ರಿಯಾಕ್ಷನ್ ಹೇಗಿತ್ತು ನೋಡಿ

ರಾಜ್ಯಸಭೆಯಲ್ಲಿ ನಿವೃತ್ತ ಸದಸ್ಯರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ರಾಜಕೀಯ ಮೈತ್ರಿಯ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಸ್ಯಭರಿತವಾಗಿ ಮಾತನಾಡಿದ್ದು ಗಮನ ಸೆಳೆಯಿತು. ‘ದೇವೇಗೌಡರು ನಮ್ಮನ್ನು ಪ್ರೀತಿಸಿದರು, ಆದರೆ ಮೋದಿ ಜತೆ ವಿವಾಹವಾದರು’ ಎಂಬ ಖರ್ಗೆಯವರ ಹೇಳಿಕೆಗೆ ಸದನ ನಗೆಗಡಲಲ್ಲಿ ತೇಲಿತು. ಖರ್ಗೆ ಹೇಳಿಕೆ, ಅದಕ್ಕೆ ಪ್ರಧಾನಿ ಮೋದಿ ಪ್ರತಿಕ್ರಿಯೆ ಹೇಗಿತ್ತು ಎಂಬ ವಿಡಿಯೋ ಹಾಗೂ ಮಾಹಿತಿ ಇಲ್ಲಿದೆ.

ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣ: ಎಸ್​ಐಟಿ ಚಾರ್ಜ್​ಶೀಟ್ ಸಲ್ಲಿಸಿದ ಎಸ್​ಐಟಿ, ಸ್ಫೋಟಕ ಅಂಶ ಬಯಲು

ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್​ಐಟಿ 13,712 ಪುಟಗಳ ಬೃಹತ್ ಚಾರ್ಜ್‌ಶೀಟ್ ಸಲ್ಲಿಸಿದೆ. ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರೂ ಇದರಲ್ಲಿದ್ದಾರೆ! ಚಾರ್ಜ್​ಶೀಟ್​ನಲ್ಲಿ ಹಲವು ಅಚ್ಚರಿಯ ಸಂಗತಿಗಳು ಬಯಲಾಗಿದ್ದು, ಆ ಕುರಿತ ವಿವರ ಇಲ್ಲಿದೆ.

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಮಹೂರ್ತ ಫಿಕ್ಸ್​​: ಮತದಾನ, ಫಲಿತಾಂಶ ಯಾವಾಗ?; ಇಲ್ಲಿದೆ ಮಾಹಿತಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜ್ಯದ ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಗಳ ವಿಧಾನ ಸಭೆ ಉಪಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ಹೆಚ್​.ವೈ.ಮೇಟಿ ಮತ್ತು ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ಈ ಕ್ಷೇತ್ರಗಳು ತೆರವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್​​ ಎರಡೂ ಪಕ್ಷಗಳಲ್ಲಿಯೂ ಟಕೆಟ್​​ ಆಕಾಂಕ್ಷಿಗಳ ಕಾದಾಟ ಜೋರಾಗಿದೆ. ಈ ನಡುವೆಯೇ ಉಪ ಚುನಾವಣೆಯ ದಿನಾಂಕ ಘೋಷಣೆಯಾಗಿರೋದು, ಬೈ ಎಲೆಕ್ಷನ್​​ ಅಖಾಡವನ್ನು ಮತ್ತಷ್ಟು ರಂಗೇರಿಸಿದೆ.

ಮಂಡ್ಯದಲ್ಲಿ ಮುಂದುವರಿದ ಜೆಡಿಎಸ್-ಬಿಜೆಪಿ ಮೈತ್ರಿ ಮುನಿಸು; ಜೆಡಿಎಸ್ ಫ್ಲೆಕ್ಸ್​ಗಳಲ್ಲಿ ಬಿಜೆಪಿ ನಾಯಕರ ಫೋಟೋಗೆ ಇಲ್ಲ ಸ್ಥಾನ!

ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಮುನಿಸು ಮುಂದುವರಿದಿದೆ. ಇತ್ತೀಚೆಗೆ ನಡೆದ ‘ಖೇಲೋ ಇಂಡಿಯಾ ವೈಬ್ರೆಂಟ್ ಮಂಡ್ಯ’ ಕಾರ್ಯಕ್ರಮವು ಮೈತ್ರಿ ಪಕ್ಷಗಳ ನಡುವಿನ ಬಿರುಕನ್ನು ಮತ್ತಷ್ಟು ಎತ್ತಿ ತೋರಿಸಿದೆ. ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಾಕಲಾಗಿದ್ದ ಜೆಡಿಎಸ್ ಫ್ಲೆಕ್ಸ್​ಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಫೋಟೋ ಹೊರತುಪಡಿಸಿ ರಾಜ್ಯ ಬಿಜೆಪಿ ನಾಯಕರ ಯಾವುದೇ ಫೋಟೋಗಳನ್ನು ಹಾಕಿರಲಿಲ್ಲ.

ಮೈತ್ರಿ ಪಕ್ಷಗಳ ನಡುವೆ ಲಯ ತಪ್ಪಿದ ತಾಳ ಮೇಳ: ನಾಯಕರ ನಡುವೆ ಇಲ್ವಂತೆ ಸಮನ್ವಯತೆ!

ಬಿಜೆಪಿ-ಜೆಡಿಎಸ್ ಮೈತ್ರಿಕೂಟದಲ್ಲಿ ಸಮನ್ವಯದ ಕೊರತೆ ಮತ್ತೆ ಸದ್ದು ಮಾಡಿದೆ. ಬಜೆಟ್ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ಬಗ್ಗೆ ಮೊದಲೇ ಮಾಹಿತಿ ಇಲ್ಲದ ಕಾರಣ ಜೆಡಿಎಸ್ ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ನಡುವೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಕುಮಾರಸ್ವಾಮಿ ಅವರೇ ನಮ್ಮ ಸಿಎಂ ಅಭ್ಯರ್ಥಿ ಎಂದು ಹೇಳಿದ್ದು, ಬಿಜೆಪಿ ಜೊತೆಗೆ ನಮ್ಮದು 'ಒನ್ ಸೈಡ್ ಲವ್' ಎಂದು ಅಭಿಪ್ರಾಯಪಟ್ಟಿದ್ದಾರೆ. ಮೈತ್ರಿ ನಾಯಕರ ನಡುವಿನ ಮುನಿಸು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ.

  • Sunil MH
  • Updated on: Mar 8, 2026
  • 9:59 am

ಮೈತ್ರಿ ಪಕ್ಷದ ವಿರೋಧಿಯನ್ನು ಜೆಡಿಎಸ್​​​ಗೆ ಸೇರಿಸಿಕೊಂಡ ಕುಮಾರಣ್ಣ: ಭುಗಿಲೆದ್ದ ಅಸಮಾಧಾನ

ಭಾರೀ ವಿರೋಧದ ನಡುವೆಯೂ ಸ್ವಾಭಿಮಾನ ಜನತಾ ಪಕ್ಷದ ಮುಖಂಡ ಇದೀಗ ಮಿತ್ರ ಪಕ್ಷ ಜೆಡಿಎಸ್ (JDS)​ ಸರ್ಪಡೆಯಾಗಿದ್ದಾರೆ. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧೆ ಮಾಡಿದ್ದ ನಾಯಕ ಇದೀಗ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಬಿಜೆಪಿಯೊಂದಿಗೆ ಮೈತ್ರಿ ಇದ್ದರೂ ಸಹ ಬಂಡಾಯ ನಾಯಕ, ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಹಾಲು-ಜೇನಿನ ಸಂಬಂಧ ಎಂದ ಸಿಎಂ: ಕುಚಿಕು ಗೆಳೆಯನಿಗಾಗಿ ತ್ಯಾಗ ಪ್ರದರ್ಶಿಸಿ ಎಂದು ಕುಮಾರಣ್ಣ ಕೌಂಟರ್

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಫೋನ್ ಟ್ಯಾಪಿಂಗ್ ಕದನ ಶುರುವಾಗಿದೆ. ನಿನ್ನೆಯಷ್ಟೇ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂತಹದೊಂದು ಬಾಂಬ್ ಸಿಡಿಸಿದ್ದರು. ಈ ಆರೋಪಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಲವು ನಾಯಕರು ತಿರುಗೇಟು ಕೊಟ್ಟಿದ್ದಾರೆ. ಇದೀಗ ಮತ್ತೆ ಕುಮಾರಸ್ವಾಮಿ ಅವರು ಪ್ರತಿಕ್ರಿಯಸಿ,ಕುಂಬಳಕಾಯಿ ಕಳ್ಳ ಅಂದ್ರೆ ನಾನೆ ನಾನೆ ಅಂತ ಹೆಗಲು ಮುಟ್ಟಿಕೊಂಡ್ರೆ ಏನು ಮಾಡ್ಲಿ ಎಂದು ಸಿಎಂಗೆ ಕೌಂಟರ್ ಕೊಟ್ಟಿದ್ದಾರೆ.

ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ