Thalapathy Vijay
Thalapathy Vijay – ದಳಪತಿ ವಿಜಯ್ ತಮಿಳು ಚಿತ್ರರಂಗದಲ್ಲಿ ಮೂರು ದಶಕಗಳ ಕಾಲ ಸ್ಟಾರ್ ನಟನಾಗಿ ಮೆರೆದು, ಕೋಟ್ಯಂತರ ಅಭಿಮಾನಿಗಳ ಪ್ರೀತಿಗೆ ಪಾತ್ರರಾದವರು. ಆಕ್ಷನ್ ಮತ್ತು ಸಾಮಾಜಿಕ ಸಂದೇಶದ ಸಿನಿಮಾಗಳ ಮೂಲಕ ಮುಂಚೂಣಿಗೆ ಬಂದ ಅವರು, ‘ತಮಿಳಗ ವೆಟ್ರಿ ಕಳಗಂ’ ರಾಜಕೀಯ ಪಕ್ಷವನ್ನು ಸ್ಥಾಪಿಸಿ ರಾಜಕೀಯ ರಂಗಕ್ಕೆ ಕಾಲಿಟ್ಟರು. ತದನಂತರ ನಡೆದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದರು. ತಮ್ಮ ಅದ್ಭುತ ನಟನಾ ಪಯಣಕ್ಕೆ ತೆರೆ ಎಳೆಯುವ ಅವರ ಕೊನೆಯ ಚಿತ್ರ ‘ಜನ ನಾಯಗನ್’ ಜುಲೈ 23ರಂದು ಬಿಡುಗಡೆಯಾಗಿದೆ.
ಇನ್ನೂ ಹೆಚ್ಚು ಓದಿತಮಿಳುನಾಡು ವಿಧಾನಸಭೆಯಲ್ಲಿ ನೀಟ್ ವಿರುದ್ಧ ನಿರ್ಣಯ; ಸರ್ಕಾರಕ್ಕೆ ಹೆಚ್ಚಿನ ವಿಪಕ್ಷಗಳ ಬೆಂಬಲ; ಬಿಜೆಪಿಯಿಂದ ಸಭಾತ್ಯಾಗ
Tamil Nadu Assembly Passes Resolution Against NEET, BJP Stages Walkout: ತಮಿಳುನಾಡಿನಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಅನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಲು ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡನೆಯಾಗಿದೆ. ಸಿಎಂ ವಿಜಯ್ ನೇತೃತ್ವದ ಸರ್ಕಾರದ ಈ ನಿರ್ಣಯವನ್ನು ಡಿಎಂಕೆ, ಎಡಿಎಂಕೆ, ಪಿಎಂಕೆ ಇತ್ಯಾದಿ ಹೆಚ್ಚಿನ ವಿಪಕ್ಷಗಳು ಬಂಬಲಿಸಿವೆ. ಬಿಜೆಪಿ ಈ ನಿರ್ಣಯ ವಿರೋಧಿಸಿ ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡಿದೆ.
- Vijaya Sarathy SN
- Updated on: Aug 11, 2026
- 1:50 pm
ಸಿನಿಮಾ ಆಪ್ತರಿಗೆ ಸಾಲು ಸಾಲು ಸರ್ಕಾರಿ ಹುದ್ದೆ; ಸಿಎಂ ವಿಜಯ್ ನಿರ್ಧಾರಕ್ಕೆ ಭಾರಿ ಚರ್ಚೆ
ತಮಿಳುನಾಡು ಸರ್ಕಾರವು 'ಗೋಟ್' ಸಿನಿಮಾ ನಿರ್ಮಾಪಕಿ ಅರ್ಚನಾ ಕಲ್ಪತಿ ಅವರನ್ನು ದೇವಾಲಯಗಳ ಧರ್ಮದರ್ಶಿ ಆಯ್ಕೆ ಸಮಿತಿಗೆ ನೇಮಕ ಮಾಡಿದೆ. ಈ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಪ್ರಾರಂಭವಾಗಿದ್ದು, ಸಿಎಂ ವಿಜಯ್ ಅವರು ಚಿತ್ರರಂಗದ ಆಪ್ತರಿಗೆ ಸಾಲು ಸಾಲು ಸರ್ಕಾರಿ ಹುದ್ದೆ ನೀಡುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ.
- Shreelaxmi H
- Updated on: Aug 11, 2026
- 8:09 am
ವಿಜಯ್-ಸಂಗೀತಾ ಪ್ರೇಮಕಥೆ; ಅಭಿಮಾನಿಯಿಂದ ಪತ್ನಿಯಾದ ಕಥೆ
ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ 'ದಳಪತಿ' ವಿಜಯ್ ಮತ್ತು ಪತ್ನಿ ಸಂಗೀತಾ ವಿಚ್ಛೇದನ ಅರ್ಜಿಯನ್ನು ಹಿಂತೆಗೆದುಕೊಳ್ಳುವ ಮೂಲಕ ಮತ್ತೆ ಒಂದಾಗಿದ್ದಾರೆ. ಲಂಡನ್ನಲ್ಲಿರುವ ಅಭಿಮಾನಿ ಭಾರತಕ್ಕೆ ಬಂದು ವಿಜಯ್ ಅವರ ಮನೆಗೆ ತೆರಳಿ, ಕುಟುಂಬದ ಸಮ್ಮತಿಯೊಂದಿಗೆ ವಿವಾಹವಾದ ಈ ದಂಪತಿಯ ಅಪರೂಪದ ಪ್ರೇಮಕಥೆ ಈಗ ಎಲ್ಲರ ಗಮನ ಸೆಳೆಯುತ್ತಿದೆ.
- Shreelaxmi H
- Updated on: Aug 8, 2026
- 11:02 am
ವಿಚ್ಛೇದನ ಅರ್ಜಿ ಹಿಂಪಡೆದ ಸಿಎಂ ವಿಜಯ್ ಪತ್ನಿ ಸಂಗೀತಾ; ಪ್ರಕರಣ ರದ್ದುಗೊಳಿಸಿದ ಕೋರ್ಟ್
ಸಿಎಂ ಜೋಸೆಫ್ ವಿಜಯ್ ಹಾಗೂ ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ ನಡುವಿನ ದಾಂಪತ್ಯ ಕಲಹಕ್ಕೆ ತೆರೆಬಿದ್ದಿದೆ. ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದಲ್ಲಿ ಈ ಮೊದಲು ಸಲ್ಲಿಸಿದ್ದ ಅರ್ಜಿಯನ್ನು ಸಂಗೀತಾ ಅವರು ಹಿಂಪಡೆದಿದ್ದಾರೆ. ಆದರೆ ಈ ಬಗ್ಗೆ ಅವರು ಸಾರ್ವಜನಿಕವಾಗಿ ಸದ್ಯಕ್ಕೆ ಯಾವುದೇ ಹೇಳಿಕೆ ನೀಡಿಲ್ಲ.
- Madan Kumar
- Updated on: Aug 7, 2026
- 5:01 pm
ಕಾವೇರಿ ವಿವಾದ: ಕರ್ನಾಟಕ ಸಿಎಂ ಭೇಟಿ ವಿಚಾರವಾಗಿ ಕೊನೆಗೂ ಮೌನ ಮುರಿದ ತಮಿಳುನಾಡು ಸಿಎಂ ವಿಜಯ್
ಕಾವೇರಿ ವಿವಾದದ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರಿಸುವುದಾಗಿ ತಮಿಳುನಾಡು ಸಿಎಂ ವಿಜಯ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಆದರೆ ಸಕಾರಾತ್ಮಕ ಫಲಿತಾಂಶದ ನಿರೀಕ್ಷೆಯಲ್ಲಿ ಕರ್ನಾಟಕದೊಂದಿಗೆ ಮಾತುಕತೆ ನಡೆಸುವ ಉದ್ದೇಶದಿಂದ ಬೆಂಗಳೂರಿಗೆ ಭೇಟಿ ನೀಡುವ ಆಲೋಚನೆ ಹೊಂದಿದ್ದಾಗಿಯೂ ತಿಳಿಸಿದ್ದಾರೆ. ಇದರೊಂದಿಗೆ, ಕರ್ನಾಟಕ ಸಿಎಂ ಜತೆಗಿನ ಮಾತುಕತೆ ವಿಚಾರವಾಗಿ ಅವರು ಮೊದಲ ಬಾರಿಗೆ ಮೌನಮುರಿದಂತಾಗಿದೆ.
- Ganapathi Sharma
- Updated on: Aug 7, 2026
- 12:23 pm
‘ಯಾವುದಕ್ಕೂ ತಲೆಕೆಡಿಸಿಕೊಳ್ಳದಿರುವುದು ನಮ್ಮ ಕೈಯಲ್ಲೇ ಇದೆ’; ತ್ರಿಷಾ
ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ಹೇಳಿಕೆಯ ನಂತರ ನಟಿ ತ್ರಿಷಾ ಕೃಷ್ಣನ್ ಅವರ ಹಳೆಯ ಸೋಶಿಯಲ್ ಮೀಡಿಯಾ ಪೋಸ್ಟ್ ವೈರಲ್ ಆಗಿದೆ. ಅಭಿಮಾನಿಗಳು ನಟಿಗೆ ಬೆಂಬಲ ಸೂಚಿಸಿದ್ದು, ಮಹಿಳೆಯರ ಗೌರವದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆಗಳು ಆರಂಭವಾಗಿವೆ. ನಟಿಯ ಶಾಂತ ಹಾಗೂ ಧೈರ್ಯದ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
- Rajesh Duggumane
- Updated on: Aug 6, 2026
- 7:04 am
ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಗುವಿಗೆ 1 ಗ್ರಾಂ ಚಿನ್ನದ ಉಂಗುರ!
ತಮಿಳುನಾಡು ಬಜೆಟ್ 2026: ತಮಿಳುನಾಡು ಬಜೆಟ್ ಅನ್ನು ಹಣಕಾಸು ಸಚಿವ ಮಾರಿ ವಿಲ್ಸನ್ ಮಂಡಿಸಿದ್ದು, ಮಹಿಳೆಯರು ಮತ್ತು ಯುವಜನತೆಗೆ ಹಲವಾರು ಕೊಡುಗೆಗಳನ್ನು ಘೋಷಿಸಿದರು. ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸುವ ಮಕ್ಕಳಿಗೆ ಒಂದು ಗ್ರಾಂ ಚಿನ್ನದ ಉಂಗುರ, ಮದುವೆಯಾಗುವ ಹೆಣ್ಣುಮಕ್ಕಳಿಗೆ ಎಂಟು ಗ್ರಾಂ ಚಿನ್ನದ ನಾಣ್ಯ ಮತ್ತು ಸೀರೆ, ಐದು ಮೇಕೆಗಳು ಮತ್ತು ಒಂದು ಹಾಲು ನೀಡುವ ಹಸುವಿನಂತಹ ಯೋಜನೆಗಳನ್ನು ಬಜೆಟ್ ಒಳಗೊಂಡಿದೆ.
- Ganapathi Sharma
- Updated on: Aug 5, 2026
- 2:00 pm
ಉದಯನಿಧಿ ಸ್ಟಾಲಿನ್ ಬಂಧಿಸಿದ್ದು ಉತ್ತಮ ನಿರ್ಧಾರ: ಖಡಕ್ ಆಗಿ ಹೇಳಿದ ಕಂಗನಾ ರಣಾವತ್
ನಟಿ ತ್ರಿಷಾ ಕೃಷ್ಣನ್ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದನ್ನು ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಬೆಂಬಲಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
- Madan Kumar
- Updated on: Aug 4, 2026
- 8:36 pm
ತಮಿಳುನಾಡು ಸಿಎಂ ಪುತ್ರನಿಗೆ ಕನ್ನಡದ ಈ ಸಿನಿಮಾ ಬಲು ಇಷ್ಟವಂತೆ
Jason Vijay movie: ವಿಜಯ್ ಅವರ ಮಗ ಜೇಸನ್ ಈ ಹಿಂದೆ ವಿಜಯ್ ಅವರ ಜೊತೆಗೆ ಕೆಲವು ಸಿನಿಮಾಗಳ ಹಾಡುಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಸ್ವತಂತ್ರ್ಯ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ತಮ್ಮ ಮೊದಲ ಸಿನಿಮಾನಲ್ಲಿ ನಟನೆ ಸಹ ಮಾಡಿದ್ದಾರೆ ವಿಜಯ್ ಪುತ್ರ. ಅಂದಹಾಗೆ ವಿಜಯ್ ಪುತ್ರ ಜೇಸನ್ ಅವರಿಗೆ ಕನ್ನಡದ ಒಂದು ಸಿನಿಮಾ ಬಹಳ ಇಷ್ಟವಂತೆ, ಆ ಬಗ್ಗೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ಮಾತನಾಡಿದ್ದಾರೆ.
- Manjunatha C
- Updated on: Aug 4, 2026
- 1:49 pm
ವಿಜಯ್ ಪುತ್ರ ಜೇಸನ್ ಸಂಜಯ್ ಬದುಕಿನ ರೋಚಕ ಕಥೆ; ಅಂದು ರಾತ್ರಿ ನಡೆದಿದ್ದೇನು?
ತಮಿಳು ನಟ ವಿಜಯ್ ಪುತ್ರ ಜೇಸನ್ ಸಂಜಯ್ ತಮ್ಮ ನಿರ್ದೇಶನದ ಮೊದಲ ಸಿನಿಮಾ 'ಸಿಗ್ಮಾ' ಬಿಡುಗಡೆಯ ಸಂಭ್ರಮದಲ್ಲಿದ್ದಾರೆ. ಈ ನಡುವೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಮನೆಯವರಿಗೆ ತಿಳಿಸದೆ ರಾತ್ರಿ ಕಾರು ಚಲಾಯಿಸಿಕೊಂಡು ಹೋಗಿ ಪೊಲೀಸರಿಗೆ ದೂರು ನೀಡುವ ಹಂತಕ್ಕೆ ತಲುಪಿದ್ದ ರೋಚಕ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.
- Shreelaxmi H
- Updated on: Aug 3, 2026
- 7:52 am
11 ದಿನ ಕಳೆದರೂ 300 ಕೋಟಿ ರೂಪಾಯಿ ತಲುಪದ ‘ಜನ ನಾಯಗನ್’ ಸಿನಿಮಾ
ದಳಪತಿ ವಿಜಯ್ ಅವರ ಕೊನೆಯ ಸಿನಿಮಾ 'ಜನ ನಾಯಗನ್' ಬಾಕ್ಸ್ ಆಫೀಸ್ನಲ್ಲಿ ಹಿನ್ನಡೆ ಅನುಭವಿಸಿದೆ. 11 ದಿನ ಕಳೆದರೂ ಚಿತ್ರದ ವಿಶ್ವಾದ್ಯಂತ ಗಳಿಕೆ 295.92 ಕೋಟಿ ರೂಪಾಯಿಗೆ ಬಂದು ನಿಂತಿದ್ದು, ₹300 ಕೋಟಿ ಕ್ಲಬ್ ಸೇರುವುದು ಅನುಮಾನವಾಗಿದೆ. ಲಿಯೋ, ಗೋಟ್ ಚಿತ್ರಗಳಿಗೆ ಹೋಲಿಸಿದರೆ ಈ ಕಲೆಕ್ಷನ್ ತೀರಾ ಕಡಿಮೆಯಾಗಿದೆ.
- Rajesh Duggumane
- Updated on: Aug 3, 2026
- 7:36 am
ಕಾವೇರಿ ವಿವಾದ: ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ; ಕಾಂಗ್ರೆಸ್ ಎಂಪಿ ಮಾಣಿಕಂ ಟ್ಯಾಗೋರ್
Cauvery Water Dispute: ತಮಿಳುನಾಡು ಕಾಂಗ್ರೆಸ್ ಸಂಸದ ಮಣಿಕಂ ಟ್ಯಾಗೋರ್ ಕಾವೇರಿ ವಿವಾದ ಕುರಿತು ಮಾತನಾಡಿದ್ದು, ತಮಿಳುನಾಡಿನ ರಾಜಕೀಯ ಪಕ್ಷಗಳ ಕಚ್ಚಾಟ ಹೆಚ್ಚುತ್ತಿರುವುದು ವಿಷಾದ. ಆಂತರಿಕ ರಾಜಕೀಯ ಬದಿಗಿಟ್ಟು, ಕರ್ನಾಟಕ ಮತ್ತು ತಮಿಳುನಾಡು ಸಿಎಂ ನೇರ ಮಾತುಕತೆ ಇದಕ್ಕೆ ಪರಿಹಾರ ಎಂದು ಹೇಳಿದ್ದಾರೆ.
- Harish GR
- Updated on: Aug 2, 2026
- 3:58 pm