AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thalapathy Vijay

Thalapathy Vijay

Thalapathy Vijay – ದಳಪತಿ ವಿಜಯ್ ತಮಿಳು ಚಿತ್ರರಂಗದಲ್ಲಿ ಮೂರು ದಶಕಗಳ ಕಾಲ ಸ್ಟಾರ್ ನಟನಾಗಿ ಮೆರೆದು, ಕೋಟ್ಯಂತರ ಅಭಿಮಾನಿಗಳ ಪ್ರೀತಿಗೆ ಪಾತ್ರರಾದವರು. ಆಕ್ಷನ್ ಮತ್ತು ಸಾಮಾಜಿಕ ಸಂದೇಶದ ಸಿನಿಮಾಗಳ ಮೂಲಕ ಮುಂಚೂಣಿಗೆ ಬಂದ ಅವರು, ‘ತಮಿಳಗ ವೆಟ್ರಿ ಕಳಗಂ’ ರಾಜಕೀಯ ಪಕ್ಷವನ್ನು ಸ್ಥಾಪಿಸಿ ರಾಜಕೀಯ ರಂಗಕ್ಕೆ ಕಾಲಿಟ್ಟರು. ತದನಂತರ ನಡೆದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದರು. ತಮ್ಮ ಅದ್ಭುತ ನಟನಾ ಪಯಣಕ್ಕೆ ತೆರೆ ಎಳೆಯುವ ಅವರ ಕೊನೆಯ ಚಿತ್ರ ‘ಜನ ನಾಯಗನ್’ ಜುಲೈ 23ರಂದು ಬಿಡುಗಡೆಯಾಗಿದೆ.

ಇನ್ನೂ ಹೆಚ್ಚು ಓದಿ
Follow us:

ಎಂಜಿಆರ್​​ To ದಳಪತಿ ವಿಜಯ್: ಸಿಎಂ ಕುರ್ಚಿಯಲ್ಲಿ ಕುಳಿತ ಬಳಿಕ ಪ್ರೇಕ್ಷಕರ ಮುಂದೆ ಬಂದ ನಾಯಕರು

ದಕ್ಷಿಣ ಭಾರತದ ಚಿತ್ರರಂಗ ಮತ್ತು ರಾಜಕೀಯಕ್ಕೆ ದಶಕಗಳ ಕಾಲದ ಅವಿನಾಭಾವ ಸಂಬಂಧವಿದೆ. 2026ರಲ್ಲಿ ದಳಪತಿ ವಿಜಯ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಅವರ ಕೊನೆಯ ಚಿತ್ರ 'ಜನ ನಾಯಗನ್' ಜುಲೈ 23ರಂದು ತೆರೆಗೆ ಬರುತ್ತಿದೆ. ವಿಜಯ್ ಹಾದಿಯಲ್ಲೇ ಈ ಹಿಂದೆ ಮುಖ್ಯಮಂತ್ರಿ ಪಟ್ಟಕ್ಕೇರಿದ ಎಂ.ಜಿ.ಆರ್, ಎನ್‌ಟಿಆರ್ ಮತ್ತು ಜಯಲಲಿತಾ ಅವರ ಜೀವನದಲ್ಲೂ ಸಿಎಂ ಆದ ಬಳಿಕ ಸಿನಿಮಾಗಳು ರಿಲೀಸ್ ಆದ ಸ್ವಾರಸ್ಯಕರ ಇತಿಹಾಸ ಇಲ್ಲಿದೆ.

‘ಜನ ನಾಯಗನ್’ ಟಿಕೆಟ್ ಲೂಟಿ: ಹೊಸೂರಿನಲ್ಲಿ 180, ಬೆಂಗಳೂರಿನಲ್ಲಿ 1500

Jana Nayagan movie: ಸಿನಿಮಾದ ಟಿಕೆಟ್​​ಗಳ ಮುಂಗಡ ಬುಕಿಂಗ್ ಆರಂಭವಾಗಿ ಕೆಲ ದಿನಗಳಾಗಿದ್ದು, ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಟಿಕೆಟ್​​ಗಳು ಮುಂಗಡವಾಗಿ ಸೋಲ್ಡ್ ಔಟ್ ಆಗಿವೆ. ಆದರೆ ಬೆಂಗಳೂರಿನಲ್ಲಿ ‘ಜನ ನಾಯಗನ್’ ಸಿನಿಮಾದ ಪ್ರೀಮಿಯರ್ ಶೋ ಟಿಕೆಟ್​​ಗಳನ್ನು ಭಾರಿ ಮೊತ್ತಕ್ಕೆ ಮಾರಾಟ ಮಾಡಲಾಗುತ್ತಿದೆ. ಆದರೆ ಅದೇ ಬೇರೆ ನಗರಗಳಲ್ಲಿ ಇದೇ ಸಿನಿಮಾದ ಟಿಕೆಟ್ ಬೆಲೆ ಅತ್ಯಂತ ಕಡಿಮೆ ಇದೆ. ‘ಜನ ನಾಯಗನ್’ ಸಿನಿಮಾವನ್ನು ಬೆಂಗಳೂರಿನ ಬದಲು ಹತ್ತಿರದ ಬೇರೆ ನಗರಗಳಲ್ಲಿ ನೋಡಿದರೆ ಅಭಿಮಾನಿಗಳಿಗೆ ಹಣ ಉಳಿತಾಯ ಆಗಲಿದೆ.

ಬಿಡುಗಡೆಗೂ ಮುನ್ನ ‘ಜನ ನಾಯಗನ್’ ಚಿತ್ರದಲ್ಲಿ ಬದಲಾವಣೆ: ಟೈಟಲ್ ಕಾರ್ಡ್‌ನಲ್ಲಿ ವಿಜಯ್ ಹೆಸರು ಹೇಗಿದೆ?

‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಿಸಿರುವ ‘ಜನ ನಾಯಗನ್’ ಸಿನಿಮಾ ಜುಲೈ 23ರಂದು ವಿಶ್ವಾದ್ಯಂತ ಸುಮಾರು 8 ಸಾವಿರ ಸ್ಕ್ರೀನ್‌ಗಳಲ್ಲಿ ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ. ನಟ ದಳಪತಿ ವಿಜಯ್ ಅವರು ರಾಜಕೀಯಕ್ಕೆ ಎಂಟ್ರಿ ನೀಡಿದ ಬಳಿಕ ಬಿಡುಗಡೆ ಆಗುತ್ತಿರುವ ಮೊದಲ ಸಿನಿಮಾ ಆದ್ದರಿಂದ ನಿರೀಕ್ಷೆ ಜಾಸ್ತಿ ಇದೆ.

48 ಗಂಟೆಗಳಲ್ಲಿ 15 ಕೋಟಿ ರೂ. ಮುಂಗಡ ಕಲೆಕ್ಷನ್ ಮಾಡಿದ ವಿಜಯ್ ಸಿನಿಮಾ ‘ಜನ ನಾಯಗನ್’

ದೇಶಾದ್ಯಂತ ‘ಜನ ನಾಯಗನ್’ ಸಿನಿಮಾದ ಮೊದಲ ದಿನದ ಪ್ರದರ್ಶನಕ್ಕೆ ಜುಲೈ 21ರ ಹೊತ್ತಿಗೆ 6 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ. ಈ ವರ್ಷದ ಅತಿ ದೊಡ್ಡ ಓಪನಿಂಗ್ ಪಡೆಯುವ ಭಾರತೀಯ ಸಿನಿಮಾಗಳ ಸಾಲಿನಲ್ಲಿ ‘ಜನ ನಾಯಗನ್’ ಕೂಡ ಸೇರ್ಪಡೆ ಆಗಲು ಸಜ್ಜಾಗಿದೆ.

‘ಟಾಕ್ಸಿಕ್’ ಸಿನಿಮಾ ಟಿಕೆಟ್ ಬೆಲೆ ಬಗ್ಗೆ ಅಭಿಮಾನಿಗಳಿಗೆ ಶುರುವಾಗಿದೆ ಭಯ

ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ‘ಜನ ನಾಯಗನ್’ ಚಿತ್ರದ ಸಾವಿರ ರೂಪಾಯಿ ಟಿಕೆಟ್ ಬೆಲೆ ನೋಡಿ ಅಭಿಮಾನಿಗಳು ಶಾಕ್ ಆಗಿದ್ದಾರೆ. ಈಗ ರಾಕಿಂಗ್ ಸ್ಟಾರ್ ಯಶ್ ಅಭಿನಯದ, 500 ಕೋಟಿ ಬಜೆಟ್‌ನ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಟಿಕೆಟ್ ದರವೂ ಗಗನಕ್ಕೇರಬಹುದೇ ಎಂಬ ಭೀತಿ ಎದುರಾಗಿದೆ. ಹಾಗಾಗದಿರಲಿ ಎಂಬುದು ಅಭಿಮಾನಿಗಳ ಕೋರಿಕೆ.

ದಳಪತಿ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ದೊಡ್ಡ ಸೀಕ್ರೆಟ್ ರಿವೀಲ್

ದಳಪತಿ ವಿಜಯ್ ನಟನೆಯ 'ಜನ ನಾಯಗನ್' ಸಿನಿಮಾ ಜುಲೈ 23ಕ್ಕೆ ಬಿಡುಗಡೆಯಾಗಲಿದೆ. ಎಚ್. ವಿನೋದ್ ನಿರ್ದೇಶನದ ಈ ಚಿತ್ರ 'ಭಗವಂತ್ ಕೇಸರಿ'ಯ ತಮಿಳು ರಿಮೇಕ್. ಮೂಲ ಕಥೆಯ ಶೇ. 50 ಮಾತ್ರ ಇರಲಿದ್ದು, ವಿಜಯ್ ಮಹಿಳಾ ಸಬಲೀಕರಣದ ವಿಷಯಕ್ಕೆ ಒತ್ತು ನೀಡಿದ್ದಾರೆ. ಕನ್ನಡದ ಕೆವಿಎನ್ ಸಂಸ್ಥೆ ಬಂಡವಾಳ ಹೂಡಿದೆ. ವಿಜಯ್ ಅವರ ಕೊನೆಯ ಸಿನಿಮಾ ಇದಾಗಿರುವುದರಿಂದ ಭಾರಿ ನಿರೀಕ್ಷೆ ಮೂಡಿಸಿದೆ.

‘ಜನ ನಾಯಗನ್’ ಹೊಸ ಟೀಸರ್ ನೋಡಿ ವಾವ್ ಎಂದ ವಿಜಯ್ ಅಭಿಮಾನಿಗಳು

ದೇಶ-ವಿದೇಶಗಳಲ್ಲಿ ಈಗಾಗಲೇ ‘ಜನ ನಾಯಗನ್’ ಚಿತ್ರದ ಮುಂಗಡ ಟಿಕೆಟ್ ಬುಕಿಂಗ್ ಭರದಿಂದ ಸಾಗುತ್ತಿದ್ದು, ದಳಪತಿ ವಿಜಯ್ ಅವರ ಈ ಅಂತಿಮ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಎಷ್ಟರ ಮಟ್ಟಿಗೆ ಧೂಳೀಪಟ ಮಾಡಲಿದೆ ಎಂಬುದನ್ನು ನೋಡಲು ಇಡೀ ಭಾರತೀಯ ಚಿತ್ರರಂಗ ಕಾಯುತ್ತಿದೆ. ಈಗ ಬಿಡುಗಡೆ ಆಗಿರುವ ಅನೌನ್ಸ್​ಮೆಂಟ್ ಟೀಸರ್​ನಿಂದ ಚಿತ್ರದ ಮೇಲಿನ ಹೈಪ್ ಹೆಚ್ಚಿದೆ.

ಸಿನಿಮಾ ಲೀಕ್ ಆದ ಹೊರತಾಗಿಯೂ ದಾಖಲೆ ಬರೆಯಲು ಸಜ್ಜಾದ ‘ಜನ ನಾಯಗನ್’

ತಮಿಳುನಾಡು ಸಿಎಂ ವಿಜಯ್ ನಟನೆಯ ‘ಜನ ನಾಯಕನ್’ ಸಿನಿಮಾ ಜುಲೈ 23ಕ್ಕೆ ರಿಲೀಸ್ ಆಗಲಿದೆ. ಯಾವುದೇ ಪ್ರಚಾರವಿಲ್ಲದಿದ್ದರೂ ಮುಂಗಡ ಬುಕಿಂಗ್‌ನಲ್ಲಿ ಚಿತ್ರ ದಾಖಲೆ ಬರೆದಿದ್ದು, ಕೇವಲ ಒಂದು ಗಂಟೆಯಲ್ಲಿ 15 ಸಾವಿರ ಟಿಕೆಟ್‌ಗಳು ಮಾರಾಟವಾಗಿವೆ. ಇದು ವಿಜಯ್ ಖ್ಯಾತಿಗೆ ಹಿಡಿದ ಕೈಗನ್ನಡಿ.

ಬೆಂಗಳೂರಿಗರ ಲೂಟಿ ಮಾಡುತ್ತಿರುವ ತಮಿಳು ಸಿನಿಮಾ ‘ಜನ ನಾಯಗನ್’

Jana Naayagan movie ticket price: ವಿಜಯ್ ಅವರ ಅಭಿಮಾನಿಗಳು ‘ಜನನ ನಾಯಗನ್’ ಸಿನಿಮಾ ವೀಕ್ಷಣೆಗೆ ಮುಗಿ ಬೀಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಅಡ್ವಾನ್ಸ್ ಬುಕಿಂಗ್ ಓಪನ್ ಆಗಿದೆ. ಬೇರೆ ನಗರಗಳಲ್ಲಿ ಸಾಧಾರಣವಾಗಿರುವ ಟಿಕೆಟ್ ದರ, ಬೆಂಗಳೂರಿನಲ್ಲಿ ಮಾತ್ರ ಗಗನಕ್ಕೇರಿದೆ. ಆ ಮೂಲಕ ಬೆಂಗಳೂರಿಗರ ಲೂಟಿ ಮಾಡುತ್ತಿದ್ದಾನೆ, ‘ಜನ ನಾಯಕ’.

‘ಜನ ನಾಯಗನ್’ ಬಿಡುಗಡೆ ಮುಂಚೆ ತಮಿಳುನಾಡು ಚಿತ್ರಮಂದಿರಗಳಿಗೆ ಎಚ್ಚರಿಕೆ

Jana Nayagan movie: ಸಿಎಂ ವಿಜಯ್ ಅವರ ಕೊನೆಯ ಸಿನಿಮಾ ಇದೆಂದು ಪ್ರಚಾರ ಮಾಡಲಾಗಿದ್ದ ಕಾರಣ, ಭಾರಿ ಸಂಖ್ಯೆಯ ಅಭಿಮಾನಿಗಳು ಸಿನಿಮಾ ನೋಡಲು ಮುಗಿಬೀಳುವ ಸಾಧ್ಯತೆ ಇದೆ. ಹೀಗಾಗಿ ಸಿನಿಮಾ ಬಿಡುಗಡೆಗೆ ಮುಂಚೆ ತಮಿಳುನಾಡಿನ ಚಿತ್ರಮಂದಿರಗಳಿಗೆ ಕೆಲವು ಶಿಸ್ತಿನ ಎಚ್ಚರಿಕೆಗಳನ್ನು ನೀಡಲಾಗಿದೆ.

ಲೀಕ್ ಬಳಿಕ ‘ಜನ ನಾಯಗನ್’ ಚಿತ್ರದಲ್ಲಿ ಭಾರಿ ಬದಲಾವಣೆ: ಪ್ರೇಕ್ಷಕರಿಗೆ ಸಿಗಲಿದೆ ಹೊಸ ಅನುಭವ

ನಟ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಗೆ ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಈ ಸಿನಿಮಾ ಲೀಕ್ ಆಗಿದ್ದರೂ ಕೂಡ ಚಿತ್ರಮಂದಿರದಲ್ಲಿ ಪ್ರೇಕ್ಷಕರು ಬೇರೆಯದೇ ಅನುಭವ ಪಡೆಯಲಿದ್ದಾರೆ ಎಂದು ನಿರ್ಮಾಪಕರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಸಿಎಂ ವಿಜಯ್ ಬಗ್ಗೆ ಮೊದಲ ಬಾರಿ ಮಾತನಾಡಿದ ಪುತ್ರ ಸಂಜಯ್

Thalapathy Vijay son Sanjay: ವಿಜಯ್ ಅವರು ಸಿಎಂ ಆಗುವ ಮುಂಚೆಯೇ ಪತ್ನಿ ಸಂಗೀತಾ ಅವರೊಟ್ಟಿಗೆ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಆ ಸಮಯದಲ್ಲಿ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೆಸರಿನ ಜೊತೆಗಿದ್ದ ‘ವಿಜಯ್’ ಹೆಸರನ್ನು ತೆಗೆದು ಹಾಕಿದ್ದರು. ಆ ಮೂಲಕ ಪರೋಕ್ಷ ಸಿಟ್ಟನ್ನು ತಂದೆಯ ವಿರದ್ಧ ಹೊರ ಹಾಕಿದ್ದರು. ಆದರೆ ಇದೀಗ ಸಂದರ್ಶನವೊಂದರಲ್ಲಿ ಮಾತನಾಡಿರುವ ಜೇಸನ್, ಮೊದಲ ಬಾರಿಗೆ ತಂದೆಯ ಬಗ್ಗೆ ಮಾತನಾಡಿದ್ದಾರೆ.

‘ಟಾಕ್ಸಿಕ್’ ಬಗ್ಗೆ ತೆಲುಗು ನಟ ಕಿರಣ್ ಅಬ್ಬವರಂ ಹೇಳಿದ್ದು ಹೀಗೆ: ವಿಡಿಯೋ
‘ಟಾಕ್ಸಿಕ್’ ಬಗ್ಗೆ ತೆಲುಗು ನಟ ಕಿರಣ್ ಅಬ್ಬವರಂ ಹೇಳಿದ್ದು ಹೀಗೆ: ವಿಡಿಯೋ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ