AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR

Jr NTR

ಜೂನಿಯರ್ ಎನ್​ಟಿಆರ್​, ನಂದಮೂರಿ ತಾರಕ ರಾಮರಾವ್ ಎಂದೂ ಕರೆಯಲ್ಪಡುವ ಇವರು, ತೆಲುಗು ಚಿತ್ರರಂಗದ ಜನಪ್ರಿಯ ನಟ. ಜೂನಿಯರ್ ಎನ್​ಟಿಆರ್​ ಜನಿಸಿದ್ದು 1983ರ ಮೇ 20ರಂದು. ಹೈದರಾಬಾದ್‌ನಲ್ಲಿ ಜನಿಸಿದ ಅವರು ಫಿಲ್ಮಿ ಹಿನ್ನೆಲೆ ಕುಟುಂಬದಿಂದ ಬಂದವರು. ಜೂನಿಯರ್ ಎನ್‌ಟಿಆರ್ ಬಾಲ ಕಲಾವಿದನಾಗಿ ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದರು. ನಂತರ ಹೀರೋ ಪಾತ್ರಗಳಲ್ಲಿನ ಬಹುಮುಖ ಅಭಿನಯಕ್ಕಾಗಿ ಅಪಾರ ಮನ್ನಣೆಯನ್ನು ಗಳಿಸಿದರು. ಅವರ ಖಾತೆಯಲ್ಲಿ ಅನೇಕ ಹಿಟ್​ ಸಿನಿಮಾಗಳಿವೆ. ಅವರು ನಟಿಸಿದ ‘ಆರ್​ಆರ್​ಆರ್​’ ಸಿನಿಮಾ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿತು. ಆ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿತು. ಆ ಮೂಲಕ ಜೂನಿಯರ್​ ಎನ್​ಟಿಆರ್​ ಹೆಸರು ಇನ್ನಷ್ಟು ಫೇಮಸ್​ ಆಯಿತು. ನಟನೆ ಮಾತ್ರವಲ್ಲದೇ ಡ್ಯಾನ್ಸ್​ನಲ್ಲಿಯೂ ಅವರ ಪ್ರತಿಭೆ ಅಪಾರ. ಇನ್ನು, ಕೆಲವು ಟಿವಿ ಶೋಗಳನ್ನು ಕೂಡ ಅವರು ನಡೆಸಿಕೊಟ್ಟಿದ್ದಾರೆ. ಕನ್ನಡವನ್ನು ಅವರು ಚೆನ್ನಾಗಿ ಮಾತನಾಡಬಲ್ಲರು. ಅವರ ತಾಯಿ ಶಾಲಿನಿ, ಕರ್ನಾಟಕದ ಕುಂದಾಪುರದವರು.

ಇನ್ನೂ ಹೆಚ್ಚು ಓದಿ

ಮೊದಲ ದಿನ ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡಲಿದೆ ‘ವಾರ್ 2’ ಸಿನಿಮಾ?

ಅಂದಾಜು 400 ಕೋಟಿ ರೂಪಾಯಿ ಬಜೆಟ್​​ನಲ್ಲಿ ‘ವಾರ್ 2’ ಸಿನಿಮಾ ನಿರ್ಮಾಣ ಆಗಿದೆ. ಟ್ರೇಲರ್​ನಲ್ಲಿ ಅದ್ದೂರಿತನ ಕಾಣಿಸಿದೆ. ಅಭಿಮಾನಿಗಳಿಗೆ ಭಾರಿ ನಿರೀಕ್ಷೆ ಇದೆ. ಮೊದಲ ದಿನ ಈ ಸಿನಿಮಾಗೆ ಎಷ್ಟು ಕೋಟಿ ರೂಪಾಯಿ ಕಮಾಯಿ ಆಗಲಿದೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಿದೆ.

‘ವಾರ್ 2’ ಅಖಾಡಕ್ಕೆ ಬಾಬಿ ಡಿಯೋಲ್ ಎಂಟ್ರಿ; ಮುಖ್ಯ ವಿಲನ್ ಇವರೇನಾ?

‘ವಾರ್ 2’ ಸಿನಿಮಾದಲ್ಲಿ ಶಾರುಖ್ ಖಾನ್, ಸಲ್ಮಾನ್ ಖಾನ್ ಅತಿಥಿ ಪಾತ್ರ ಮಾಡಿರಬಹುದು ಎಂಬ ಊಹೆ ಇತ್ತು. ಆದರೆ ಅದು ನಿಜವಲ್ಲ ಎನ್ನುತ್ತಿವೆ ಮೂಲಗಳು. ಬದಲಿಗೆ, ನಟ ಬಾಬಿ ಡಿಯೋಲ್ ಅವರ ಎಂಟ್ರಿ ಆಗಿದೆ. ಆ ಮೂಲಕ ಪಾತ್ರವರ್ಗ ಹಿರಿದಾಗಿದೆ. ‘ವಾರ್ 2’ ಸಿನಿಮಾ ಆಗಸ್ಟ್ 14ಕ್ಕೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

ಹೃತಿಕ್ ಜೊತೆ ಹೋಲಿಕೆ ಮಾಡಬೇಡಿ: ಅಭಿಮಾನಿಗಳಿಗೆ ಜ್ಯೂನಿಯರ್ ಎನ್​ಟಿಆರ್​ ಸಲಹೆ

ಇಬ್ಬರು ಸ್ಟಾರ್ ಹೀರೋಗಳು ಒಂದೇ ಸಿನಿಮಾದಲ್ಲಿ ನಟಿಸಿದಾಗ ಅಭಿಮಾನಿಗಳು ಹೋಲಿಕೆ ಮಾಡುತ್ತಾರೆ. ಇದರಿಂದ ಫ್ಯಾನ್ಸ್ ವಾರ್ ಶುರುವಾಗುತ್ತದೆ. ಆ ರೀತಿ ಆಗದಿರಲಿ ಎಂದು ಜೂನಿಯರ್ ಎನ್​ಟಿಆರ್ ಕಿವಿಮಾತು ಹೇಳಿದ್ದಾರೆ. ‘ವಾರ್ 2’ ಸಿನಿಮಾದಲ್ಲಿ ನಟಿಸಿರುವ ಹೃತಿಕ್ ರೋಷನ್ ಜೊತೆ ತಮ್ಮನ್ನು ಹೋಲಿಸಬಾರದು ಎಂದು ಅವರು ಹೇಳಿದ್ದಾರೆ.

‘ವಾರ್ 2’ Vs ‘ಕೂಲಿ’: ಬುಕ್​ ಮೈ ಶೋನಲ್ಲಿ ಯಾರಿಗೆ ಹೆಚ್ಚಿದೆ ಬೆಂಬಲ?

ಎರಡು ಬಹುನಿರೀಕ್ಷಿತ ಸಿನಿಮಾಗಳು ಒಂದೇ ದಿನ ಬಿಡುಗಡೆ ಆದರೆ ಪ್ರೇಕ್ಷಕರಿಗೆ ಗೊಂದಲ ಸಹಜ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ‘ಕೂಲಿ’ ಮತ್ತು ‘ವಾರ್ 2’ ಚಿತ್ರಗಳು ಆಗಸ್ಟ್ 14ರಂದು ತೆರೆಕಾಣುತ್ತಿವೆ. ಹಾಗಾಗಿ ಈ ವಾರ ಸಿನಿಪ್ರಿಯರಿಗೆ ಮನರಂಜನೆಯ ಹಬ್ಬ ಆಗಲಿದೆ. ಅಭಿಮಾನಿಗಳು ಮುಗಿಬಿದ್ದು ಟಿಕೆಟ್ ಬುಕಿಂಗ್ ಮಾಡುತ್ತಿದ್ದಾರೆ.

‘ವಾರ್ 2’ ಹೊಸ ಹಾಡಿನಲ್ಲಿ ಧೂಳೆಬ್ಬಿಸಿದ ಜೂ. ಎನ್​ಟಿಆರ್, ಹೃತಿಕ್ ರೋಷನ್

‘ವಾರ್ 2’ ಸಿನಿಮಾದ ‘ಜನಾಬ್-ಏ-ಆಲಿ’ ಹಾಡಿನ ಪ್ರೋಮೋ ಬಿಡುಗಡೆ ಆಗಿದೆ. ಇದು ಭರ್ಜರಿ ಡ್ಯಾನ್ಸ್ ನಂಬರ್. ಪರಸ್ಪರ ಪೈಪೋಟಿ ನೀಡುವ ರೀತಿಯಲ್ಲಿ ಜೂನಿಯರ್ ಎನ್​​ಟಿಆರ್​ ಹಾಗೂ ಹೃತಿಕ್ ರೋಷನ್ ಡ್ಯಾನ್ಸ್ ಮಾಡಿದ್ದಾರೆ. ಈಗ ಬರೀ ಪ್ರೋಮೋ ಬಂದಿದೆ. ಪೂರ್ತಿ ಹಾಡು ನೋಡಬೇಕು ಎಂದರೆ ಅಭಿಮಾನಿಗಳು ಚಿತ್ರಮಂದಿರಕ್ಕೆ ಬರಬೇಕು.

ಜೂ. ಎನ್​ಟಿಆರ್​ಗೆ ಸಿದ್ಧತೆಯೇ ಬೇಡ; ಡ್ಯಾನ್ಸ್ ಸ್ಟೆಪ್ ನೋಡಿ ದಂಗಾದ ಹೃತಿಕ್

'ವಾರ್ 2' ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಅವರ ಅದ್ಭುತ ನೃತ್ಯ ಪ್ರತಿಭೆಗೆ ಹೃತಿಕ್ ರೋಷನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೃತಿಕ್ ರೋಷನ್, ಜೂನಿಯರ್ ಎನ್ಟಿಆರ್ ಅವರನ್ನು ಪ್ರತಿಭಾನ್ವಿತ ನಟ ಮತ್ತು ಅಸಾಧಾರಣ ಡ್ಯಾನ್ಸರ್ ಎಂದು ಹೊಗಳಿದ್ದಾರೆ. ರಿಹರ್ಸಲ್ ಇಲ್ಲದೆ ಅದ್ಭುತ ನೃತ್ಯ ಮಾಡುವ ಜೂನಿಯರ್ ಎನ್ಟಿಆರ್ ಅವರನ್ನು ನೋಡಿ ತಾನು ಬೆರಗಾಗಿದ್ದೇನೆ ಎಂದು ಹೃತಿಕ್ ಹೇಳಿದ್ದಾರೆ.

‘ವಾರ್ 2’ ಚಿತ್ರಕ್ಕಿಂತಲೂ ‘ಕೂಲಿ’ ಸಿನಿಮಾದ್ದೇ ಮೇಲುಗೈ; ಇದು ರಜನಿಕಾಂತ್ ಹವಾ

ಒಂದೆಡೆ ಲೋಕೇಶ್ ಕನಗರಾಜ್ ನಿರ್ದೇಶನದ ‘ಕೂಲಿ’, ಇನ್ನೊಂದೆಡೆ ಅಯಾನ್ ಮುಖರ್ಜಿ ನಿರ್ದೇಶನದ ‘ವಾರ್ 2’. ಆಗಸ್ಟ್ 14ರಂದು ಈ ಎರಡು ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಹಾಗಾಗಿ ಪೈಪೋಟಿ ಸಖತ್ ಹೆಚ್ಚಾಗಿದೆ. ಅಮೆರಿಕದಲ್ಲಿ ‘ವಾರ್ 2’ ಚಿತ್ರಕ್ಕಿಂತಲೂ ‘ಕೂಲಿ’ ಸಿನಿಮಾಗೆ ಜನರು ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ.

War 2: ಜೂ. ಎನ್​ಟಿಆರ್​ಗಿಂತಲೂ ಕಡಿಮೆ ಸಂಭಾವನೆ ಪಡೆದ ಹೃತಿಕ್ ರೋಷನ್; ಆದರೆ ಒಂದು ಟ್ವಿಸ್ಟ್

ಟಾಲಿವುಡ್ ನಟ ಜೂನಿಯರ್ ಎನ್​ಟಿಆರ್ ನಟಿಸಿರುವ ಮೊದಲ ಬಾಲಿವುಡ್ ಸಿನಿಮಾ ‘ವಾರ್ 2’. ಈ ಸಿನಿಮಾದಲ್ಲಿ ಅವರ ಜೊತೆ ಸ್ಟಾರ್​ ನಟ ಹೃತಿಕ್ ರೋಷನ್ ಅವರು ತೆರೆ ಹಂಚಿಕೊಂಡಿದ್ದಾರೆ. ಹೃತಿಕ್ ರೋಷನ್ 50 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರೆ, ಜೂ. ಎನ್​ಟಿಆರ್ 70 ಕೋಟಿ ರೂ. ಪಡೆದಿದ್ದಾರೆ.

ಆಗಸದಲ್ಲಿ ‘ವಾರ್ 2’; ಗಾಬರಿಯಾದ ಮೆಲ್ಬರ್ನ್ ಜನತೆ: ವಿಡಿಯೋ ವೈರಲ್

‘ವಾರ್ 2’ ಸಿನಿಮಾದ ಪ್ರಚಾರಕ್ಕಾಗಿ ಅಭಿಮಾನಿಗಳು ಮಾಡಿದ ಕೆಲಸದಿಂದ ಮೆಲ್ಬರ್ನ್ ಜನತೆಗೆ ಗಾಬರಿ ಆಗಿದೆ. ಆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಲ್ಲಿನ ಜನರು ಪೋಸ್ಟ್ ಮಾಡಿದ್ದಾರೆ. ವಿಡಿಯೋಗಳು ವೈರಲ್ ಆಗಿವೆ. ಆಕಾಶದಲ್ಲಿ ಏಕಾಏಕಿ ವಾರ್ ಎಂಬ ಪದ ಕಾಣಿಸಿದರೆ ಪ್ರಜೆಗಳಿಗೆ ಆತಂಕ ಆಗುವುದು ಸಹಜ.

ರಶ್ಮಿಕಾ ಮಂದಣ್ಣ ಸಿನಿಮಾ ಪ್ರಚಾರಕ್ಕೆ ಸಹಾಯ ಮಾಡಲಿದ್ದಾರೆ ಜೂ.ಎನ್​ಟಿಆರ್​-ಹೃತಿಕ್ ರೋಷನ್

ರಶ್ಮಿಕಾ ಮಂದಣ್ಣ ನಟಿಸಿರುವ ಹಾರರ್ ಕಾಮಿಡಿ ಚಿತ್ರ 'ಥಮಾ' ದೀಪಾವಳಿಗೆ ಬಿಡುಗಡೆಯಾಗಲಿದೆ. ಈ ಚಿತ್ರದ ಪ್ರಚಾರಕ್ಕಾಗಿ, ನಿರ್ಮಾಪಕರು ಜೂನಿಯರ್ ಎನ್ಟಿಆರ್ ಮತ್ತು ಹೃತಿಕ್ ರೋಷನ್ ನಟಿಸಿರುವ 'ವಾರ್ 2' ಚಿತ್ರವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ದೊಡ್ಡ ಪ್ರಚಾರ ತಂತ್ರವಾಗಿದ್ದು, 'ಥಮಾ' ಚಿತ್ರದ ಯಶಸ್ಸಿಗೆ ನೆರವಾಗುವ ನಿರೀಕ್ಷೆಯಿದೆ.

ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ಸೋರುತಿಹುದು ಸಾರಿಗೆ ಬಸ್ ಮೇಲ್ಚಾವಣಿ, ಛತ್ರಿ ಹಿಡಿದು ಕುಳಿತ ಪ್ರಯಾಣಿಕ
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ವಿಷ್ಣುವರ್ಧನ್ ಸಮಾಧಿ ಬಗ್ಗೆ ಅಂಬಿ ಮನೆಯಲ್ಲಿ ಸಭೆ ನಡೆದಾಗ ಏನೆಲ್ಲ ಆಯ್ತು?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ
ಕಾಂಗ್ರೆಸ್ ನಾಯಕರಿಗೆ ಸುಧಾಕರ್ ಏಳ್ಗೆ ಸಹಿಸಲಾಗುತ್ತಿಲ್ಲ: ವಿಜಯೇಂದ್ರ