AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR

Jr NTR

ಜೂನಿಯರ್ ಎನ್​ಟಿಆರ್​, ನಂದಮೂರಿ ತಾರಕ ರಾಮರಾವ್ ಎಂದೂ ಕರೆಯಲ್ಪಡುವ ಇವರು, ತೆಲುಗು ಚಿತ್ರರಂಗದ ಜನಪ್ರಿಯ ನಟ. ಜೂನಿಯರ್ ಎನ್​ಟಿಆರ್​ ಜನಿಸಿದ್ದು 1983ರ ಮೇ 20ರಂದು. ಹೈದರಾಬಾದ್‌ನಲ್ಲಿ ಜನಿಸಿದ ಅವರು ಫಿಲ್ಮಿ ಹಿನ್ನೆಲೆ ಕುಟುಂಬದಿಂದ ಬಂದವರು. ಜೂನಿಯರ್ ಎನ್‌ಟಿಆರ್ ಬಾಲ ಕಲಾವಿದನಾಗಿ ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದರು. ನಂತರ ಹೀರೋ ಪಾತ್ರಗಳಲ್ಲಿನ ಬಹುಮುಖ ಅಭಿನಯಕ್ಕಾಗಿ ಅಪಾರ ಮನ್ನಣೆಯನ್ನು ಗಳಿಸಿದರು. ಅವರ ಖಾತೆಯಲ್ಲಿ ಅನೇಕ ಹಿಟ್​ ಸಿನಿಮಾಗಳಿವೆ. ಅವರು ನಟಿಸಿದ ‘ಆರ್​ಆರ್​ಆರ್​’ ಸಿನಿಮಾ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿತು. ಆ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿತು. ಆ ಮೂಲಕ ಜೂನಿಯರ್​ ಎನ್​ಟಿಆರ್​ ಹೆಸರು ಇನ್ನಷ್ಟು ಫೇಮಸ್​ ಆಯಿತು. ನಟನೆ ಮಾತ್ರವಲ್ಲದೇ ಡ್ಯಾನ್ಸ್​ನಲ್ಲಿಯೂ ಅವರ ಪ್ರತಿಭೆ ಅಪಾರ. ಇನ್ನು, ಕೆಲವು ಟಿವಿ ಶೋಗಳನ್ನು ಕೂಡ ಅವರು ನಡೆಸಿಕೊಟ್ಟಿದ್ದಾರೆ. ಕನ್ನಡವನ್ನು ಅವರು ಚೆನ್ನಾಗಿ ಮಾತನಾಡಬಲ್ಲರು. ಅವರ ತಾಯಿ ಶಾಲಿನಿ, ಕರ್ನಾಟಕದ ಕುಂದಾಪುರದವರು.

ಇನ್ನೂ ಹೆಚ್ಚು ಓದಿ

ಯುದ್ಧದಿಂದ ಜೋರ್ಡನ್​ ಅಲ್ಲಿ ‘NTR-Neel’ ಚಿತ್ರಕ್ಕೆ ತೊಂದರೆ? ಸಹಾಯಕ್ಕೆ ಬಂದ್ರಂತೆ ಟ್ರಂಪ್

ಪ್ರಶಾಂತ್ ನೀಲ್ ನಿರ್ದೇಶನದ, ಜೂನಿಯರ್ NTR ನಟನೆಯ ಬಹು ನಿರೀಕ್ಷಿತ ಚಿತ್ರದ ಕುರಿತು ಛಾಯಾಗ್ರಾಹಕ ಭುವನ್ ಗೌಡ ಹೊಸ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಜೋರ್ಡನ್‌ನಲ್ಲಿ ಚಿತ್ರೀಕರಣ ನಡೆಸಿದ್ದಾಗಿ ಅವರು ದೃಢಪಡಿಸಿದ್ದಾರೆ. 'ಡ್ರ್ಯಾಗನ್' ಎಂಬ ಟೈಟಲ್‌ಗೆ ಭುವನ್ ಆಕ್ಷೇಪಿಸದೇ ಇರುವುದು, ಅದೇ ಚಿತ್ರದ ಶೀರ್ಷಿಕೆಯಾಗಿರಬಹುದು ಎಂಬ ಕುತೂಹಲ ಮೂಡಿಸಿದೆ.

ಬೆಂಗಳೂರಲ್ಲಿ ಮಾತನಾಡಲು ಬಿಡದ ಫ್ಯಾನ್ಸ್​​ಗೆ ಎಚ್ಚರಿಕೆ ನೀಡಿದ ಜೂ.ಎನ್​ಟಿಆರ್

ಜೂನಿಯರ್ ಎನ್​ಟಿಆರ್ ಬೆಂಗಳೂರಿನ ಕಿಮ್ಸ್ ಆಸ್ಪತ್ರೆ ಹೊಸ ಘಟಕ ಉದ್ಘಾಟನೆಗೆ ಆಗಮಿಸಿದ್ದರು. ವೇದಿಕೆ ಮೇಲೆ ಭಾಷಣ ಮಾಡುವಾಗ ಅಭಿಮಾನಿಗಳು ಜೋರಾಗಿ ಕೂಗಿದ್ದಕ್ಕೆ, ಮೌನ ವಹಿಸುವಂತೆ ಖಡಕ್ ಎಚ್ಚರಿಕೆ ನೀಡಿದರು. ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಗೌರವ ನೀಡುವ ಬಗ್ಗೆ ಮಾತನಾಡಿದ ಜೂ. ಎನ್​ಟಿಆರ್, ಕಿಮ್ಸ್ ಜೊತೆ ತನಗಿರುವ ವೈಯಕ್ತಿಕ ನಂಟನ್ನೂ ಸ್ಮರಿಸಿದರು.

ಬೆಂಗಳೂರಿನಲ್ಲಿ ಜೂ. ಎನ್​ಟಿಆರ್ ನೋಡಲು ಮುಗಿಬಿದ್ದ ಜನ; ಪೊಲೀಸ್ ಲಾಠಿ ಚಾರ್ಜ್

ಟಾಲಿವುಡ್ ನಟ ಜೂನಿಯರ್ ಎನ್​ಟಿಆರ್ ಅವರಿಗೆ ಬೆಂಗಳೂರಿನಲ್ಲೂ ಅಭಿಮಾನಿಗಳು ಇದ್ದಾರೆ. ಇಂದು (ಮಾ.8) ಮಹಾದೇವಪುರದ ಕಿಮ್ಸ್ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ ಎನ್​ಟಿಆರ್ ಅವರನ್ನು ನೋಡಲು ಫ್ಯಾನ್ಸ್ ಮುಗಿಬಿದ್ದರು. ಆಸ್ಪತ್ರೆಯ ಎದುರು ಅಪಾರ ಸಂಖ್ಯೆಯ ಅಭಿಮಾನಿಗಳು ಜಮಾಯಿಸಿದ್ದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..

ಅಂದುಕೊಂಡ ಸಮಯಕ್ಕೆ ಬರಲ್ಲ ನೀಲ್- ಎನ್​ಟಿಆರ್ ಸಿನಿಮಾ?

ಜೂನಿಯರ್ ಎನ್​ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ಸಿನಿಮಾ ನಿರೀಕ್ಷಿತ ದಿನಾಂಕಕ್ಕೆ ತೆರೆ ಕಾಣುವುದು ಕಷ್ಟಕರವಾಗಿದೆ. ಜೂನ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಚಿತ್ರ ಇದೀಗ ದೀಪಾವಳಿ ಅಥವಾ ಕ್ರಿಸ್‌ಮಸ್‌ಗೆ ಮುಂದೂಡಿಕೆಯಾಗುವ ಸಾಧ್ಯತೆಯಿದೆ. ಚಿತ್ರೀಕರಣ ಇನ್ನೂ ಪೂರ್ಣಗೊಂಡಿಲ್ಲ. ಜೋರ್ಡಾನ್‌ನಲ್ಲಿ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದೆ .

ದಕ್ಷಿಣದ ಆ ನಟ ನಟಿಯರನ್ನು ತೆರೆಮೇಲೂ ಕೀಳಾಗಿ ಕಾಣಲು ಇಷ್ಟಪಡಲ್ಲ; ಬಾಲಿವುಡ್ ನಟಿ

ಪೂಜಾ ಬೇಡಿ ಜೂನಿಯರ್ ಎನ್‌ಟಿಆರ್ ಬಗ್ಗೆ ಆಸಕ್ತಿದಾಯಕ ಸಂಗತಿ ಹಂಚಿಕೊಂಡಿದ್ದಾರೆ. 'ಶಕ್ತಿ' ಚಿತ್ರೀಕರಣದ ವೇಳೆ, ಎನ್‌ಟಿಆರ್ ಮಹಿಳೆಯರ ಮೇಲೆ ಕೈ ಎತ್ತಲು ನಿರಾಕರಿಸಿದರು. ಅವರ ಈ ಮಹಿಳಾ ಗೌರವವನ್ನು ಪೂಜಾ ಬೇಡಿ ಶ್ಲಾಘಿಸಿದ್ದಾರೆ. ಇಂದಿನ ಚಿತ್ರರಂಗದಲ್ಲಿ ಇಂತಹ ಮೌಲ್ಯಗಳು ಅಪರೂಪ ಎಂದಿದ್ದಾರೆ.

‘ವಾರ್ 2’ ಸೋತ ಬಳಿಕ ಮತ್ತೊಮ್ಮೆ ಬಾಲಿವುಡ್ ಕದ ತಟ್ಟಿದ ಜೂನಿಯರ್ ಎನ್​ಟಿಆರ್?

ಆರ್‌ಆರ್‌ಆರ್ ನಂತರ ಜೂನಿಯರ್ ಎನ್‌ಟಿಆರ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. 'ವಾರ್ 2' ಚಿತ್ರದ ನಂತರ, ಅವರು ಶಾರುಖ್ ಖಾನ್ ಜೊತೆ 'ಪಠಾಣ್ 2' ನಲ್ಲಿ ನಟಿಸಲಿದ್ದಾರೆ ಎಂಬ ವದಂತಿಗಳು ಹಬ್ಬಿವೆ.ಎನ್‌ಟಿಆರ್ ಅವರ 'ವಾರ್ 2' ಪಾತ್ರ 'ಪಠಾಣ್ 2' ನಲ್ಲೂ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಅಂತಿಮ ನಿರ್ಧಾರ ಇನ್ನೂ ಸ್ಪಷ್ಟವಾಗಿಲ್ಲ.

ನಿಂಗಿದೆ ಮಾರಿಹಬ್ಬ; ಮಹೇಶ್ ಬಾಬುಗೆ ಮೊದಲೇ ಎಚ್ಚರಿಸಿದ್ದ ಜೂ.ಎನ್​ಟಿಆರ್

ರಾಜಮೌಳಿ ಅವರ ಪರಿಪೂರ್ಣತೆಯ ಬಗ್ಗೆ ಜೂನಿಯರ್ ಎನ್​ಟಿಆರ್ ಮಹೇಶ್ ಬಾಬು ಅವರಿಗೆ ಎಚ್ಚರಿಕೆ ನೀಡಿದ್ದಾರೆ. 'RRR' ಸಮಯದಲ್ಲಿ ಅನುಭವಿಸಿದ ಸವಾಲುಗಳನ್ನು ನೆನಪಿಸಿಕೊಂಡ NTR, ರಾಜಮೌಳಿ ಜೊತೆ ಕೆಲಸ ಮಾಡುವುದು ಸುಲಭವಲ್ಲ ಎಂದು ಹೇಳಿದ್ದರು. 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ಇದೇ ಸವಾಲುಗಳನ್ನು ಎದುರಿಸುವ ನಿರೀಕ್ಷೆಯಿದೆ.

ಎನ್​​ಟಿಆರ್​-ನೀಲ್ ಸಿನಿಮಾ ನಿಂತಿದೆ ಎಂದವರಿಗೆ ರವಿ ಬಸ್ರೂರು ಕೊಟ್ಟರು ಉತ್ತರ

ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್​ಟಿಆರ್ ಸಿನಿಮಾ ನಿಂತಿದೆ ಎಂಬ ವದಂತಿಗಳಿಗೆ ಸಂಗೀತ ನಿರ್ದೇಶಕ ರವಿ ಬಸ್ರೂರು ತೆರೆ ಎಳೆದಿದ್ದಾರೆ. ಚಿತ್ರದ ಕೆಲಸಗಳು ಪ್ರಗತಿಯಲ್ಲಿವೆ ಎಂದು ಖಚಿತಪಡಿಸಿದ್ದಾರೆ. ಕೆಜಿಎಫ್‌ಗಿಂತ ಭಿನ್ನವಾದ, ಹೊಸ ರೀತಿಯ ಸಂಗೀತವನ್ನು ಈ ಚಿತ್ರ ಹೊಂದಿರಲಿದೆ ಎಂದು ರವಿ ಬಸ್ರೂರು ತಿಳಿಸಿದ್ದಾರೆ.

ಪಾಪ ಜೂನಿಯರ್​ ಎನ್​​ಟಿಆರ್​ಗೆ ಏನಾಯ್ತು? ಲುಕ್ ನೋಡಿ ಫ್ಯಾನ್ಸ್​ಗೆ ಆತಂಕ

ಜೂನಿಯರ್ ಎನ್‌ಟಿಆರ್ ಅವರ ಹೊಸ ತೆಳ್ಳನೆಯ ಲುಕ್ ವೈರಲ್ ಆಗಿದೆ. ಪ್ರಶಾಂತ್ ನೀಲ್ ನಿರ್ದೇಶನದ ‘ಡ್ರ್ಯಾಗನ್’ ಚಿತ್ರಕ್ಕಾಗಿ ಅವರು ತೂಕ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬದಲಾವಣೆ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ನಾಗಾರ್ಜುನ ಅವರ ಚಿತ್ರದ ಪ್ರಚಾರ ವಿಡಿಯೋದಲ್ಲಿ ಅವರ ಹೊಸ ಅವತಾರ ಕಾಣಿಸಿತು.

ಪ್ರಶಾಂತ್ ನೀಲ್ ನಿರ್ದೇಶನದ ಬಗ್ಗೆ ಜೂ.ಎನ್​ಟಿಆರ್ ಅಸಮಾಧಾನ? ಸ್ಕ್ರಿಪ್ಟ್ ಬದಲಿಸಲು ಸೂಚನೆ

ಜೂ. ಎನ್​​ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್‌ನಲ್ಲಿ ಸಿನಿಮಾ ಒಂದು ಮೂಡಿ ಬರುತ್ತಿದೆ.ಈ ಸಿನಿಮಾದ ಶೂಟಿಂಗ್ ಫೂಟೇಜ್ ಬಗ್ಗೆ NTR ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎಂಬ ವದಂತಿಗಳು ಹರಡಿವೆ. ತಮ್ಮ ಹಿಂದಿನ ಸಿನಿಮಾಗಳ ನಂತರ, ಈ ಪ್ರಾಜೆಕ್ಟ್ ಬಗ್ಗೆ NTR ಹೆಚ್ಚಿನ ಕಾಳಜಿ ವಹಿಸುತ್ತಿದ್ದಾರೆ. ಅವರು ಕೆಲವು ಬದಲಾವಣೆಗಳನ್ನು ಸೂಚಿಸಿದ್ದಾರೆ ಎನ್ನಲಾಗಿದೆ.

ನಾನು ಬಾಲ್ಯದಲ್ಲಿ ಕುಂದಾಪುರದ ಬಗ್ಗೆ ಕೇಳಿದ ಕಥೆಯನ್ನು ರಿಷಬ್ ಸಿನಮಾ ಮಾಡಿದ್ದಾರೆ ಎಂದ ಜೂ. ಎನ್​ಟಿಆರ್

ದಸರಾ ಪ್ರಯುಕ್ತ ‘ಕಾಂತಾರ ಚಾಪ್ಟರ್ 1’ ಬಿಡುಗಡೆಗೆ ಸಿದ್ಧವಾಗಿದೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಪ್ರೀಕ್ವೆಲ್ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಜೂ.NTR ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ತಮ್ಮ ಬಾಲ್ಯದ ಕಥೆಗಳನ್ನು ನೆನೆದ ತಾರಕ್, ರಿಷಬ್ ಶೆಟ್ಟಿಯವರ ನಿರ್ದೇಶನ ಮತ್ತು ಪ್ರತಿಭೆಯನ್ನು ಅಪಾರವಾಗಿ ಹೊಗಳಿದರು.

‘ಕಾಂತಾರ: ಚಾಪ್ಟರ್ 1’ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಜೂ. ಎನ್​ಟಿಆರ್ ಅತಿಥಿ

ಹೈದರಾಬಾದ್​​ನಲ್ಲಿ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ದೂರಿಯಾಗಿ ನಡೆಯಲಿದೆ. ತೆಲುಗು ಚಿತ್ರರಂಗದ ಸ್ಟಾರ್ ನಟ ಜೂನಿಯರ್ ಎನ್​ಟಿಆರ್​ ಅವರು ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಈ ಇವೆಂಟ್ ಜರುಗಲಿದೆ. ಆ ಕುರಿತು ಇಲ್ಲಿದೆ ಇನ್ನಷ್ಟು ಮಾಹಿತಿ..

ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ