AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR

Jr NTR

ಜೂನಿಯರ್ ಎನ್​ಟಿಆರ್​, ನಂದಮೂರಿ ತಾರಕ ರಾಮರಾವ್ ಎಂದೂ ಕರೆಯಲ್ಪಡುವ ಇವರು, ತೆಲುಗು ಚಿತ್ರರಂಗದ ಜನಪ್ರಿಯ ನಟ. ಜೂನಿಯರ್ ಎನ್​ಟಿಆರ್​ ಜನಿಸಿದ್ದು 1983ರ ಮೇ 20ರಂದು. ಹೈದರಾಬಾದ್‌ನಲ್ಲಿ ಜನಿಸಿದ ಅವರು ಫಿಲ್ಮಿ ಹಿನ್ನೆಲೆ ಕುಟುಂಬದಿಂದ ಬಂದವರು. ಜೂನಿಯರ್ ಎನ್‌ಟಿಆರ್ ಬಾಲ ಕಲಾವಿದನಾಗಿ ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದರು. ನಂತರ ಹೀರೋ ಪಾತ್ರಗಳಲ್ಲಿನ ಬಹುಮುಖ ಅಭಿನಯಕ್ಕಾಗಿ ಅಪಾರ ಮನ್ನಣೆಯನ್ನು ಗಳಿಸಿದರು. ಅವರ ಖಾತೆಯಲ್ಲಿ ಅನೇಕ ಹಿಟ್​ ಸಿನಿಮಾಗಳಿವೆ. ಅವರು ನಟಿಸಿದ ‘ಆರ್​ಆರ್​ಆರ್​’ ಸಿನಿಮಾ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿತು. ಆ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿತು. ಆ ಮೂಲಕ ಜೂನಿಯರ್​ ಎನ್​ಟಿಆರ್​ ಹೆಸರು ಇನ್ನಷ್ಟು ಫೇಮಸ್​ ಆಯಿತು. ನಟನೆ ಮಾತ್ರವಲ್ಲದೇ ಡ್ಯಾನ್ಸ್​ನಲ್ಲಿಯೂ ಅವರ ಪ್ರತಿಭೆ ಅಪಾರ. ಇನ್ನು, ಕೆಲವು ಟಿವಿ ಶೋಗಳನ್ನು ಕೂಡ ಅವರು ನಡೆಸಿಕೊಟ್ಟಿದ್ದಾರೆ. ಕನ್ನಡವನ್ನು ಅವರು ಚೆನ್ನಾಗಿ ಮಾತನಾಡಬಲ್ಲರು. ಅವರ ತಾಯಿ ಶಾಲಿನಿ, ಕರ್ನಾಟಕದ ಕುಂದಾಪುರದವರು.

ಇನ್ನೂ ಹೆಚ್ಚು ಓದಿ

ಅಂದು ಬಿಕಿನಿ, ಇಂದು ಗನ್; ‘ವಾರ್ 2’ ಸಿನಿಮಾದಲ್ಲಿ ಕಿಯಾರಾ ಹೊಸ ಅವತಾರ

ಭಾರಿ ನಿರೀಕ್ಷೆ ಸೃಷ್ಟಿ ಮಾಡಿರುವ ‘ವಾರ್ 2’ ಸಿನಿಮಾದ ಬಿಡುಗಡೆಗೆ 50 ದಿನ ಬಾಕಿ ಇದೆ. ಈಗಲೇ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಲಾಗಿದೆ. ಹೊಸ ಪೋಸ್ಟರ್ ರಿಲೀಸ್ ಆಗಿದೆ. ಹೃತಿಕ್ ರೋಷನ್, ಕಿಯಾರಾ ಅಡ್ವಾಣಿ, ಜೂನಿಯರ್ ಎನ್​ಟಿಆರ್ ಅವರ ಈ ಪೋಸ್ಟರ್​ಗಳು ವೈರಲ್ ಆಗುತ್ತಿವೆ.

ರುಕ್ಮಿಣಿ ವಸಂತ್ ಶರ್ಟ್​ ಮೇಲೆ ಟೈಗರ್ ಚಿತ್ರ; ಇದರ ಹಿಂದಿದೆ ದೊಡ್ಡ ರಹಸ್ಯ

ರುಕ್ಮಿಣಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈ ಫೋಟೋಗಳು ವೈರ್ ಆಗುತ್ತವೆ. ಈಗ ರುಕ್ಮಿಣಿ ವಸಂತ್ ಅವರ ಹುಲಿ ಚಿತ್ರದ ಶರ್ಟ್ ಧರಿಸಿರುವ ಫೋಟೋ ವೈರಲ್ ಆಗಿದೆ. ಇದಕ್ಕೆ ಒಂದು ವಿಶೇಷ ಕಾರಣ ಇದೆ ಎಂದು ಅನೇಕರು ಊಹಿಸಿದ್ದಾರೆ.

ಜೂ. ಎನ್​ಟಿಆರ್​, ಪ್ರಶಾಂತ್ ನೀಲ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಐಟಂ ಡ್ಯಾನ್ಸ್?

ಪ್ರಶಾಂತ್ ನೀಲ್ ಅವರ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಜೂನಿಯರ್ ಎನ್​ಟಿಆರ್​ ನಟಿಸುತ್ತಿದ್ದಾರೆ. ಇದೇ ಸಿನಿಮಾದ ಐಟಂ ಸಾಂಗ್ ಬಗ್ಗೆ ಒಂದು ಸ್ಪೆಷಲ್ ಗಾಸಿಪ್ ಹರಿದಾಡುತ್ತಿದೆ. ರಶ್ಮಿಕಾ ಮಂದಣ್ಣ ಅವರಿಗೆ ಈ ಚಿತ್ರತಂಡದಿಂದ ಆಫರ್​ ನೀಡಲಾಗಿದೆಯಂತೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿರುವ ಈ ಸಿನಿಮಾಗೆ ಬಿರುಸಿನಿಂದ ಶೂಟಿಂಗ್ ನಡೆಯುತ್ತಿದೆ.

ದಕ್ಷಿಣದವರ ಟ್ರೋಲ್​ಗೆ ಎಚ್ಚೆತ್ತುಕೊಂಡ ‘ವಾರ್ 2’ ಸಿನಿಮಾ; ಡ್ಯಾಮೇಜ್ ಕಂಟ್ರೋಲ್​ಗೆ ಹೊಸ ತಂತ್ರ

‘ವಾರ್ 2’ ಸಿನಿಮಾದ ಟೀಸರ್ ಬಿಡುಗಡೆಯಾಗಿ ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಎಫ್ಎಕ್ಸ್ ಗುಣಮಟ್ಟ ಮತ್ತು ಜೂನಿಯರ್ ಎನ್ಟಿಆರ್ ಅವರ ಪಾತ್ರದ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಯಶ್ ರಾಜ್ ಫಿಲ್ಮ್ಸ್ ಈ ಟೀಕೆಗಳನ್ನು ಗಮನಿಸಿ, ಸಿನಿಮಾ ಬಿಡುಗಡೆಗೂ ಮುನ್ನ ಸುಧಾರಣೆಗಳನ್ನು ಮಾಡುವ ಯೋಚನೆಯಲ್ಲಿದೆ.

ಹೃತಿಕ್ ರೋಷನ್ ಎದುರು ಮಂಕಾದ ಜೂ. ಎನ್​ಟಿಆರ್​; ‘ವಾರ್ 2’ ಟೀಸರ್ ನೋಡಿ ಫ್ಯಾನ್ಸ್​ಗೆ ಬೇಸರ

ಜೂನಿಯರ್ ಎನ್​ಟಿಆರ್​ ಅವರ ಜನ್ಮದಿನದ ಪ್ರಯುಕ್ತ ‘ವಾರ್​ 2’ ಸಿನಿಮಾದ ಟೀಸರ್ ರಿಲೀಸ್ ಮಾಡಲಾಗಿದೆ. ಇದನ್ನು ನೋಡಿ ಫ್ಯಾನ್ಸ್ ಬೇಸರ ಮಾಡಿಕೊಂಡಿದ್ದಾರೆ. ಬೇಸರಕ್ಕೆ ಹಲವು ಕಾರಣಗಳು ಇವೆ. ಈ ಸಿನಿಮಾದಲ್ಲಿ ಹೃತಿಕ್ ರೋಷನ್ ಎದುರು ಜೂನಿಯರ್ ಎನ್​ಟಿಆರ್ ಅವರು ನೆಗೆಟಿವ್ ಪಾತ್ರ ಮಾಡಿದ್ದಾರೆ.

ವಿಲನ್ ಪಾತ್ರದ ಮೂಲಕ ಜೂ.ಎನ್​ಟಿಆರ್ ಎಂಟ್ರಿ; ಗಮನ ಸೆಳೆದ ‘ವಾರ್ 2’ ಟೀಸರ್

War 2 Movie Teaser: ‘ವಾರ್’ ಸಿನಿಮಾ 2019ರಲ್ಲಿ ರಿಲೀಸ್ ಆಗಿ ಗಮನ ಸೆಳೆಯಿತು. ಇದರ ಮುಂದುವರಿದ ಭಾಗವಾಗಿ ‘ವಾರ್ 2’ ಚಿತ್ರ ಮೂಡಿ ಬಂದಿದೆ. ಈ ಸಿನಿಮಾದ ಟೀಸರ್ ಜೂನಿಯರ್ ಎನ್​ಟಿಆರ್ ಬರ್ತ್​ಡೇ ಪ್ರಯುಕ್ತ ರಿಲೀಸ್ ಆಗಿದೆ. ಈ ಟೀಸರ್ ಪಾಸಿಟಿವ್ ರೆಸ್ಪಾನ್ಸ್​​ನ ಪಡೆದುಕೊಳ್ಳುತ್ತಾ ಇದೆ.

ಜೂನಿಯರ್ ಎನ್​ಟಿಆರ್ ಕನ್ನಡ ಪ್ರೇಮಕ್ಕೆ ಈ ವ್ಯಕ್ತಿಯೇ ಕಾರಣ

Jr. NTR's Kannada Love: ಜೂನಿಯರ್ ಎನ್​ಟಿಆರ್ ಅವರು ತೆಲುಗು ನಟರಾಗಿದ್ದರೂ ಕನ್ನಡದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದಾರೆ. ಅವರ ತಾಯಿ ಕುಂದಾಪುರದವರು. ಪುನೀತ್ ರಾಜಕುಮಾರ್ ಜೊತೆ ಅವರ ನಿಕಟ ಸಂಬಂಧವಿದೆ. ಕನ್ನಡ ಚಿತ್ರಗಳಿಗೆ ಡಬ್ ಮಾಡುವುದು, ಕನ್ನಡ ಹಾಡು ಹಾಡುವುದು ಮತ್ತು ಕನ್ನಡದಲ್ಲಿ ಸಂದರ್ಶನ ನೀಡುವುದು ಇವರ ಕನ್ನಡ ಪ್ರೀತಿಗೆ ಸಾಕ್ಷಿ.

ಜೂ.ಎನ್​ಟಿಆರ್ ಎಷ್ಟು ಶ್ರೀಮಂತ ಅನ್ನೋದು ಗೊತ್ತಾ? ಇಲ್ಲಿದೆ ಆಸ್ತಿ ವಿವರ

Jr NTR Birthday: ಜೂನಿಯರ್ ಎನ್​ಟಿಆರ್ ಅವರು ಟಾಲಿವುಡ್​ನ ಶ್ರೀಮಂತ ನಟರಲ್ಲಿ ಒಬ್ಬರು. ಐಷಾರಾಮಿ ಮನೆ, ದುಬಾರಿ ಕಾರುಗಳು ಮತ್ತು ವಾಚ್‌ಗಳು ಅವರ ಬಳಿ ಇವೆ. ಅವರು ಸಿನಿಮಾ ಜಾಹೀರಾತು ಒಪ್ಪಂದಗಳು ಮತ್ತು ಹೂಡಿಕೆಗಳಿಂದ ಅವರ ಸಂಪತ್ತು ಬೆಳವಣಿಗೆ ಕಾಣುತ್ತಿದೆ. ಅವರು ಕೆಲವು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ.

ಜೂನಿಯರ್ ಎನ್​ಟಿಆರ್​ಗೆ ‘9999’ ಸಂಖ್ಯೆ ಮೇಲೆ ಇದೆ ವಿಶೇಷ ಪ್ರೀತಿ; ಕಾರಣ ಏನು?

JR NTR Birthday: ಜೂನಿಯರ್ NTR ಅವರಿಗೆ ಇಂದು ಜನ್ಮದಿನ. ಅವರ ಅಪರೂಪದ ವಾಹನ ಸಂಖ್ಯೆ 9999, ಅವರ ಐಷಾರಾಮಿ ಕಾರುಗಳ ಸಂಗ್ರಹ, ಮತ್ತು ಅವರ ಕುಟುಂಬದ ಪರಂಪರೆಯ ಬಗ್ಗೆ ಇಲ್ಲಿ ನಾವು ಹೇಳುತ್ತಿದ್ದೇವೆ. ಜೂನಿಯರ್ ಎನ್​ಟಿಆರ್ ಒಡೆತನದ ಎಲ್ಲಾ ಕಾರುಗಳ ಮೇಲೆ 9999 ಸಂಖ್ಯೆಯನ್ನು ನೀವು ಕಾಣಬಹುದು.

ಜೂ. ಎನ್​ಟಿಆರ್​ ಜನ್ಮದಿನಕ್ಕೆ ಪ್ರಶಾಂತ್‌ ನೀಲ್‌ ಚಿತ್ರದಿಂದ ಇಲ್ಲ ಯಾವುದೇ ಅಪ್​ಡೇಟ್

ಟಾಲಿವುಡ್ ನಟ ಜೂನಿಯರ್​ ಎನ್​ಟಿಆರ್​ ಅವರು ಮೇ 20ರಂದು ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಆದರೆ ನಿರ್ದೇಶಕ ಪ್ರಶಾಂತ್ ನೀಲ್ ಜತೆಗಿನ ಸಿನಿಮಾ ತಂಡದಿಂದ ಗ್ಲಿಂಪ್ಸ್ ಬಿಡುಗಡೆ ಆಗುವುದಿಲ್ಲ. ಈ ವಿಚಾರವನ್ನು ಸ್ವತಃ ನಿರ್ಮಾಣ ಸಂಸ್ಥೆ ಕಡೆಯಿಂದಲೇ ಸ್ಪಷ್ಟಪಡಿಸಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ