Jr NTR
ಜೂನಿಯರ್ ಎನ್ಟಿಆರ್, ನಂದಮೂರಿ ತಾರಕ ರಾಮರಾವ್ ಎಂದೂ ಕರೆಯಲ್ಪಡುವ ಇವರು, ತೆಲುಗು ಚಿತ್ರರಂಗದ ಜನಪ್ರಿಯ ನಟ. ಜೂನಿಯರ್ ಎನ್ಟಿಆರ್ ಜನಿಸಿದ್ದು 1983ರ ಮೇ 20ರಂದು. ಹೈದರಾಬಾದ್ನಲ್ಲಿ ಜನಿಸಿದ ಅವರು ಫಿಲ್ಮಿ ಹಿನ್ನೆಲೆ ಕುಟುಂಬದಿಂದ ಬಂದವರು. ಜೂನಿಯರ್ ಎನ್ಟಿಆರ್ ಬಾಲ ಕಲಾವಿದನಾಗಿ ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದರು. ನಂತರ ಹೀರೋ ಪಾತ್ರಗಳಲ್ಲಿನ ಬಹುಮುಖ ಅಭಿನಯಕ್ಕಾಗಿ ಅಪಾರ ಮನ್ನಣೆಯನ್ನು ಗಳಿಸಿದರು. ಅವರ ಖಾತೆಯಲ್ಲಿ ಅನೇಕ ಹಿಟ್ ಸಿನಿಮಾಗಳಿವೆ. ಅವರು ನಟಿಸಿದ ‘ಆರ್ಆರ್ಆರ್’ ಸಿನಿಮಾ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿತು. ಆ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿತು. ಆ ಮೂಲಕ ಜೂನಿಯರ್ ಎನ್ಟಿಆರ್ ಹೆಸರು ಇನ್ನಷ್ಟು ಫೇಮಸ್ ಆಯಿತು. ನಟನೆ ಮಾತ್ರವಲ್ಲದೇ ಡ್ಯಾನ್ಸ್ನಲ್ಲಿಯೂ ಅವರ ಪ್ರತಿಭೆ ಅಪಾರ. ಇನ್ನು, ಕೆಲವು ಟಿವಿ ಶೋಗಳನ್ನು ಕೂಡ ಅವರು ನಡೆಸಿಕೊಟ್ಟಿದ್ದಾರೆ. ಕನ್ನಡವನ್ನು ಅವರು ಚೆನ್ನಾಗಿ ಮಾತನಾಡಬಲ್ಲರು. ಅವರ ತಾಯಿ ಶಾಲಿನಿ, ಕರ್ನಾಟಕದ ಕುಂದಾಪುರದವರು.
ಇನ್ನೂ ಹೆಚ್ಚು ಓದಿಪ್ರಶಾಂತ್ ನೀಲ್ ಸಿನಿಮಾಗೆ ನಾಯಕಿಯಾದ ಆಲಿಯಾ ಭಟ್ ? ಮತ್ತೆ ದಕ್ಷಿಣಕ್ಕೆ ಎಂಟ್ರಿ
ಬಾಲಿವುಡ್ ಬೆಡಗಿ ಆಲಿಯಾ ಭಟ್ ಟಾಲಿವುಡ್ನಲ್ಲಿ ಬೃಹತ್ ಪ್ರಾಜೆಕ್ಟ್ಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್ಟಿಆರ್ ಜೋಡಿಯ 'ಡ್ರ್ಯಾಗನ್' ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿರುವ ಇವರು, ಪ್ರಭಾಸ್ ನಟನೆಯ 'ಕಲ್ಕಿ 2' ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ .
- Rajesh Duggumane
- Updated on: Sep 4, 2026
- 8:35 am
‘ಡ್ರ್ಯಾಗನ್’ ಸಿನಿಮಾದಲ್ಲಿ ಎನ್ಟಿಆರ್ ಜೊತೆ ಶಾಹಿದ್ ಕಪೂರ್, ಆಲಿಯಾ ಭಟ್?
ನಿರ್ದೇಶಕ ಪ್ರಶಾಂತ್ ನೀಲ್ ಅವರಿಗೆ ತೆಲುಗು ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಈಗ ಅವರು ಜೂನಿಯರ್ ಎನ್ಟಿಆರ್ ಜೊತೆ ‘ಡ್ರ್ಯಾಗನ್’ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾಗೆ ಬಾಲಿವುಡ್ ಸ್ಟಾರ್ ಕಲಾವಿದರ ಸೇರ್ಪಡೆ ಆಗುತ್ತಿದೆ. ಈ ಬಗ್ಗೆ ಟಾಲಿವುಡ್ ಅಂಗಳದಲ್ಲಿ ಸುದ್ದಿ ಕೇಳಿಬರುತ್ತಿದೆ.
- Madan Kumar
- Updated on: Sep 3, 2026
- 6:43 pm
ನಟ ಜೂನಿಯರ್ ಎನ್ಟಿಆರ್ ಮುದ್ದಿನ ನಾಯಿ ‘ಬಘೀರಾ’ ನಿಧನ; ಸೋಶಿಯಲ್ ಮೀಡಿಯಾದಲ್ಲಿ ಭಾವುಕ ಪೋಸ್ಟ್
ಆರ್ಆರ್ಆರ್ ನಟ ಜೂನಿಯರ್ ಎನ್ಟಿಆರ್ ಅವರ ಪ್ರೀತಿಯ ಸಾಕುನಾಯಿ ‘ಬಘೀರಾ’ ನಿಧನವಾಗಿದೆ. ನಾಲ್ಕು ವರ್ಷ ತಮಗೆ ಸಾಥ್ ನೀಡಿದ್ದ ಬಘೀರಾನ ಅಗಲಿಕೆಯಿಂದ ತೀವ್ರ ಭಾವುಕರಾಗಿರುವ ಎನ್ಟಿಆರ್, ಇನ್ಸ್ಟಾಗ್ರಾಮ್ನಲ್ಲಿ ಭಾವನಾತ್ಮಕ ಸಾಲುಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಹೆಗಲ ಶಸ್ತ್ರಚಿಕಿತ್ಸೆಗೊಳಗಾಗಿದ್ದ ಎನ್ಟಿಆರ್ ಅವರಿಗೆ ಈಗ ನಾಯಿಯ ಅಗಲಿಕೆ ತೀವ್ರ ಬೇಸರ ತಂದಿದೆ.
- Shreelaxmi H
- Updated on: Aug 20, 2026
- 8:09 am
ಭುಜದ ಶಸ್ತ್ರಚಿಕಿತ್ಸೆ ಮುಕ್ತಾಯ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ಜೂನಿಯರ್ ಎನ್ಟಿಆರ್
ನಟ ಜೂನಿಯರ್ ಎನ್ಟಿಆರ್ ಅವರು ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸರ್ಜರಿ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಮರುದಿನವೇ ಅವರು ಡಿಸ್ಚಾರ್ಜ್ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಎನ್ಟಿಆರ್ ಅವರ ಹೊಸ ಫೋಟೋ ವೈರಲ್ ಆಗಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಹಾರೈಸಿದ್ದಾರೆ.
- Madan Kumar
- Updated on: Aug 13, 2026
- 10:56 pm
ಜೂನಿಯರ್ ಎನ್ಟಿಆರ್ ಭುಜದ ಶಸ್ತ್ರಚಿಕಿತ್ಸೆ ಯಶಸ್ವಿ; ಸ್ವತಃ ಅಪ್ಡೇಟ್ ನೀಡಿದ ನಟ
ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್ಟಿಆರ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿ ಆಗಿದೆ. ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಭುಜದ ಸರ್ಜರಿ ಮಾಡಲಾಗಿದೆ. ಶಸ್ತ್ರಚಿಕಿತ್ಸೆ ಮುಗಿದ ಬಳಿಕ ಸ್ವತಃ ಜೂನಿಯರ್ ಎನ್ಟಿಆರ್ ಅವರು ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.
- Madan Kumar
- Updated on: Aug 12, 2026
- 9:49 pm
ಹೈದರಾಬಾದ್ನಲ್ಲಿ ಜೂ. ಎನ್ಟಿಆರ್ ಭುಜದ ಶಸ್ತ್ರಚಿಕಿತ್ಸೆ: ಕಿಮ್ಸ್ ಆಸ್ಪತ್ರೆಗೆ ದಾಖಲು
ಕೆಲವೇ ದಿನಗಳ ಹಿಂದೆ ಖ್ಯಾತ ನಟ ಜೂನಿಯರ್ ಎನ್ಟಿಆರ್ ಅವರು ಸಿನಿಮಾದ ಚಿತ್ರೀಕರಣದ ವೇಳೆ ಪೆಟ್ಟು ಮಾಡಿಕೊಂಡಿದ್ದರು. ಈಗ ಅವರಿಗೆ ಶಸ್ತ್ರಚಿಕಿತ್ಸೆ ಮಾಡುವುದು ಅನಿವಾರ್ಯ ಆಗಿದೆ. ಭುಜದ ಸರ್ಜರಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಅವರ ತಂಡ ಮಾಹಿತಿ ಹಂಚಿಕೊಂಡಿದೆ.
- Madan Kumar
- Updated on: Aug 11, 2026
- 10:56 pm
ಒಟ್ಟಿಗೆ ನಾಲ್ಕು ಸ್ಟಾರ್ ನಟರಿಗೆ ಇಂಜೂರಿ; ಆತಂಕ್ಕೆ ಒಳಗಾದ ಟಾಲಿವುಡ್ ಫ್ಯಾನ್ಸ್
ಟಾಲಿವುಡ್ನ ಖ್ಯಾತ ನಟರಾದ ಎನ್ಟಿಆರ್, ರಾಮ್ ಚರಣ್, ಬಾಲಕೃಷ್ಣ ಮತ್ತು ಪವನ್ ಕಲ್ಯಾಣ್ ಸಾಲು ಸಾಲಾಗಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ನೆಚ್ಚಿನ ತಾರೆಯರ ಆರೋಗ್ಯದ ಏರುಪೇರಿನಿಂದ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಈ ಘಟನೆಗಳು ಸಿನಿಮಾ ಸೆಟ್ಗಳಲ್ಲಿನ ಸುರಕ್ಷತಾ ಕ್ರಮಗಳ ಜಾಗೃತಿಗೆ ಎಚ್ಚರಿಕೆಯ ಗಂಟೆಯಾಗಿವೆ.
- Rajesh Duggumane
- Updated on: Jul 28, 2026
- 1:35 pm
‘ಡ್ರ್ಯಾಗನ್’ ಶೂಟಿಂಗ್ ವೇಳೆ ಜೂ. ಎನ್ಟಿಆರ್ ಭುಜಕ್ಕೆ ಗಾಯ; 2 ತಿಂಗಳು ವಿಶ್ರಾಂತಿ ಅಗತ್ಯ
ಪ್ರಶಾಂತ್ ನೀಲ್ ನಿರ್ದೇಶನ ಮಾಡುತ್ತಿರುವ ‘ಡ್ರ್ಯಾಗನ್’ ಸಿನಿಮಾದ ಶೂಟಿಂಗ್ ವೇಳೆ ಖ್ಯಾತ ನಟ ಜೂನಿಯರ್ ಎನ್ಟಿಆರ್ ಅವರಿಗೆ ಪೆಟ್ಟಾಗಿದೆ. ಇದರಿಂದಾಗಿ ಅವರು ಸುಮಾರು 2 ತಿಂಗಳು ವಿಶ್ರಾಂತಿ ಪಡೆಯಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ಪೂರ್ತಿ ವಿವರ..
- Madan Kumar
- Updated on: Jul 27, 2026
- 10:41 pm
ಜೂನಿಯರ್ ಎನ್ಟಿಆರ್ ಸಿಎಂ ಆಗೋದು ಯಾವಾಗ? ಅವರಿಂದ ಸಿಕ್ಕ ಉತ್ತರ ಏನು?
ಹಳೇ ಸಂದರ್ಶನವೊಂದರಲ್ಲಿ ಜೂನಿಯರ್ ಎನ್ಟಿಆರ್ ತಮ್ಮ ರಾಜಕೀಯ ಆಕಾಂಕ್ಷೆಗಳು ಹಾಗೂ ಸಿಎಂ ಆಗುವ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಆಗಲು ಕೇವಲ ಆಸೆ ಇದ್ದರೆ ಸಾಲದು, ಅದಕ್ಕೆ ತಕ್ಕ ಅನುಭವ ಮತ್ತು ಮುತ್ಸದ್ದಿತನ ಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ. ಇದೇ ವೇಳೆ ತಮ್ಮ ಚಿಕ್ಕಪ್ಪ ನಂದಮೂರಿ ಬಾಲಕೃಷ್ಣ ಮೇಲಿನ ಪ್ರೀತಿ ಹಾಗೂ ತೆಲುಗು ದೇಶಂ ಪಕ್ಷದ (TDP) ಬಗೆಗಿನ ನಿಷ್ಠೆಯನ್ನು ಅವರು ಬಿಚ್ಚಿಟ್ಟಿದ್ದಾರೆ.
- Shreelaxmi H
- Updated on: Jul 6, 2026
- 12:07 pm
ಲಾರ್ಡ್ ಮುರುಗನ್ ಕಥೆಯಲ್ಲಿ ಜೂನಿಯರ್ ಎನ್ಟಿಆರ್; ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನ
ಜೂನಿಯರ್ ಎನ್ಟಿಆರ್ ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಕಾಂಬಿನೇಷನ್ನಲ್ಲಿ ಹೊಸ ಪೌರಾಣಿಕ ಚಿತ್ರ ಘೋಷಣೆಯಾಗಿದೆ. ನಂದಮೂರಿ ಕಲ್ಯಾಣ್ ರಾಮ್ ಅವರ 'ಎನ್ಟಿಆರ್ ಆರ್ಟ್ಸ್' ನಿರ್ಮಿಸಲಿರುವ ಈ ಬಹುಕೋಟಿ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡಲಿದ್ದಾರೆ. ಪೋಸ್ಟರ್ ನೋಡಿದರೆ ಇದು ಮುರುಗನ್ ದೇವರ ಕಥೆ ಇರಬಹುದೆಂಬ ಸುಳಿವು ಸಿಕ್ಕಿದೆ. ಎನ್ಟಿಆರ್ ಸದ್ಯ 'ಡ್ರ್ಯಾಗನ್' ಚಿತ್ರದಲ್ಲಿ ಬ್ಯುಸಿ.
- Rajesh Duggumane
- Updated on: Jun 30, 2026
- 6:58 am
ಜೂ. ಎನ್ಟಿಆರ್ ಕೈತಪ್ಪಿದ ದೊಡ್ಡ ಚಿತ್ರ? ತಮಿಳು ನಟ ಸೂರ್ಯನ ಎಂಟ್ರಿ
ನಿರ್ದೇಶಕ ನೆಲ್ಸನ್ ದಿಲೀಪ್ಕುಮಾರ್ ಅವರ 'ಜೈಲರ್ 2' ನಂತರದ ಬಹುನಿರೀಕ್ಷಿತ ಸಿನಿಮಾದ ಬಗ್ಗೆ ಹೊಸ ಚರ್ಚೆ ಶುರುವಾಗಿದೆ. ಆರಂಭದಲ್ಲಿ ಜೂನಿಯರ್ ಎನ್ಟಿಆರ್ ನಾಯಕರಾಗಿ ಕಾಣಿಸಿಕೊಳ್ಳುವ ವದಂತಿಗಳಿದ್ದವು. ಈಗ ಕಾಲಿವುಡ್ ನಟ ಸೂರ್ಯ ಜೂನಿಯರ್ ಎನ್ಟಿಆರ್ ಬದಲಿಗೆ ನಾಯಕರಾಗಿ ನಟಿಸಲಿದ್ದಾರೆ ಎಂಬ ಸುದ್ದಿಯಿದೆ .
- Rajesh Duggumane
- Updated on: Jun 17, 2026
- 10:28 am
‘ಕೆಜಿಎಫ್ 3’ ಸದ್ಯಕ್ಕಿಲ್ಲ, ‘ಡ್ರ್ಯಾಗನ್’ ಬಳಿಕ ‘ಸಲಾರ್ 2’ ಕೆಲಸ ಶುರು; ಪ್ರಶಾಂತ್ ನೀಲ್ ಸ್ಪಷ್ಟನೆ
‘ಕೆಜಿಎಫ್ 3’ ಸಿನಿಮಾ ಯಾವಾಗ ಸೆಟ್ಟೇರಬಹುದು ಎಂದು ಕೇಳುವ ಅಭಿಮಾನಿಗಳಿಗೆ ಕೊಂಚ ನಿರಾಸೆ ಆಗಿದೆ. ಈ ಸಿನಿಮಾ ಬಗ್ಗೆ ಪ್ರಶಾಂತ್ ನೀಲ್ ಅವರು ಸದ್ಯಕ್ಕೆ ಯಾವುದೇ ನಿರ್ಧಾರ ಮಾಡಿಲ್ಲ. ‘ಡ್ರ್ಯಾಗನ್’ ಸಿನಿಮಾ ಕೆಲಸಗಳು ಮುಗಿದ ಬಳಿಕ ಅವರು ‘ಸಲಾರ್ 2’ ಚಿತ್ರದ ಕೆಲಸ ಆರಂಭಿಸಲಿದ್ದಾರೆ.
- Madan Kumar
- Updated on: May 21, 2026
- 8:23 pm