AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jr NTR

Jr NTR

ಜೂನಿಯರ್ ಎನ್​ಟಿಆರ್​, ನಂದಮೂರಿ ತಾರಕ ರಾಮರಾವ್ ಎಂದೂ ಕರೆಯಲ್ಪಡುವ ಇವರು, ತೆಲುಗು ಚಿತ್ರರಂಗದ ಜನಪ್ರಿಯ ನಟ. ಜೂನಿಯರ್ ಎನ್​ಟಿಆರ್​ ಜನಿಸಿದ್ದು 1983ರ ಮೇ 20ರಂದು. ಹೈದರಾಬಾದ್‌ನಲ್ಲಿ ಜನಿಸಿದ ಅವರು ಫಿಲ್ಮಿ ಹಿನ್ನೆಲೆ ಕುಟುಂಬದಿಂದ ಬಂದವರು. ಜೂನಿಯರ್ ಎನ್‌ಟಿಆರ್ ಬಾಲ ಕಲಾವಿದನಾಗಿ ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದರು. ನಂತರ ಹೀರೋ ಪಾತ್ರಗಳಲ್ಲಿನ ಬಹುಮುಖ ಅಭಿನಯಕ್ಕಾಗಿ ಅಪಾರ ಮನ್ನಣೆಯನ್ನು ಗಳಿಸಿದರು. ಅವರ ಖಾತೆಯಲ್ಲಿ ಅನೇಕ ಹಿಟ್​ ಸಿನಿಮಾಗಳಿವೆ. ಅವರು ನಟಿಸಿದ ‘ಆರ್​ಆರ್​ಆರ್​’ ಸಿನಿಮಾ ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿತು. ಆ ಸಿನಿಮಾದ ‘ನಾಟು ನಾಟು..’ ಹಾಡಿಗೆ ಆಸ್ಕರ್​ ಪ್ರಶಸ್ತಿ ಸಿಕ್ಕಿತು. ಆ ಮೂಲಕ ಜೂನಿಯರ್​ ಎನ್​ಟಿಆರ್​ ಹೆಸರು ಇನ್ನಷ್ಟು ಫೇಮಸ್​ ಆಯಿತು. ನಟನೆ ಮಾತ್ರವಲ್ಲದೇ ಡ್ಯಾನ್ಸ್​ನಲ್ಲಿಯೂ ಅವರ ಪ್ರತಿಭೆ ಅಪಾರ. ಇನ್ನು, ಕೆಲವು ಟಿವಿ ಶೋಗಳನ್ನು ಕೂಡ ಅವರು ನಡೆಸಿಕೊಟ್ಟಿದ್ದಾರೆ. ಕನ್ನಡವನ್ನು ಅವರು ಚೆನ್ನಾಗಿ ಮಾತನಾಡಬಲ್ಲರು. ಅವರ ತಾಯಿ ಶಾಲಿನಿ, ಕರ್ನಾಟಕದ ಕುಂದಾಪುರದವರು.

ಇನ್ನೂ ಹೆಚ್ಚು ಓದಿ

ಪ್ರಶಾಂತ್ ನೀಲ್-ಜೂನಿಯರ್ ಎನ್​ಟಿಆರ್ ಚಿತ್ರಕ್ಕೆ ರಿಲೀಸ್ ದಿನಾಂಕ ಫಿಕ್ಸ್

ಪ್ರಶಾಂತ್ ನೀಲ್ ಮತ್ತು ಜೂನಿಯರ್ ಎನ್‌ಟಿಆರ್ ಅವರ ಮುಂಬರುವ ಚಿತ್ರದ ಬಿಡುಗಡೆ ದಿನಾಂಕ ರಿವೀಲ್ ಆಗಿದೆ. ಹಲವು ವರ್ಷಗಳ ಕಾಯುವಿಕೆಯ ನಂತರ, ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಇಲ್ಲದಿದ್ದರೂ, #NTRNeel ಎಂಬ ಹೆಸರಿನಲ್ಲಿ ಚರ್ಚೆಯಾಗುತ್ತಿದೆ. 'ಡ್ರ್ಯಾಗನ್' ಎಂಬ ಇಂಗ್ಲಿಷ್ ಶೀರ್ಷಿಕೆಯೂ ಸಹ ಕೇಳಿಬಂದಿದೆ.

ಜೂ. ಎನ್​ಟಿಆರ್ ಹೇಳಿರೋ ಈ ಹೋಟೆಲ್​ಗಳಲ್ಲಿ ಬಿರಿಯಾನಿ ಟ್ರೈ ಮಾಡಿ

ಜೂನಿಯರ್ ಎನ್‌ಟಿಆರ್ ಅವರು ತಮ್ಮ ನೆಚ್ಚಿನ ಹೈದರಾಬಾದ್ ಮತ್ತು ತೆಲಂಗಾಣದ ಹೋಟೆಲ್‌ಗಳನ್ನು ಹಂಚಿಕೊಂಡಿದ್ದಾರೆ. ಶಾದಾಬ್, ಸಾಂಪ್ರದಾಯಿಕ ಆಂಧ್ರಾ ಫುಡ್ ಸ್ಪೈಸ್ ವೆನ್ಯೂ ಮತ್ತು ಕಾಕತೀಯ ಮೆಸ್‌ಗಳನ್ನು ಅವರು ಶಿಫಾರಸು ಮಾಡಿದ್ದಾರೆ. ಅವರು ಬಿರಿಯಾನಿ ಮತ್ತು ತೆಲಂಗಾಣದ ಸ್ಪೈಸ್‌ಗಳನ್ನು ರುಚಿ ನೋಡಲು ಸಲಹೆ ನೀಡಿದ್ದಾರೆ. ಈ ಹೋಟೆಲ್‌ಗಳು ರುಚಿಕರವಾದ ಆಹಾರವನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ.

ಜೂನಿಯರ್​ ಎನ್​ಟಿಆರ್​, ಪ್ರಶಾಂತ್ ನೀಲ್ ಫ್ಯಾನ್ಸ್ ಪಾಲಿಗೆ ಏ.22 ವಿಶೇಷ ದಿನ; ಸಿಕ್ತು ಅಪ್​ಡೇಟ್

ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​ಟಿಆರ್​ ಅವರು ಸಿನಿಮಾ ಅನೌನ್ಸ್ ಮಾಡಿ ಬಹಳ ಸಮಯ ಕಳೆದಿದೆ. ಇದರ ಶೂಟಿಂಗ್ ಕೂಡ ನಡೆಯುತ್ತಿದೆ. ಆದರೆ ಜೂನಿಯರ್​ ಎನ್​ಟಿಆರ್ ಅವರು ಇನ್ನೂ ಶೂಟಿಂಗ್ ಸೆಟ್​ಗೆ ಬಂದಿಲ್ಲ. ಹಾಗಾದರೆ ಅವರು ಚಿತ್ರೀಕರಣಕ್ಕೆ ಬರುವುದು ಯಾವಾಗ? ಈ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

JR.NTR ‘ದೇವರ 2’ ಚಿತ್ರದ ಶೂಟ್​ಗೆ ರೆಡಿ ಆಯ್ತು ಕುಮಟಾ; ಸಿದ್ಧವಾಗ್ತಿದೆ ಬೃಹತ್ ಸೆಟ್​

ಜೂನಿಯರ್ ಎನ್​ಟಿಆರ್ ನಟನೆಯ 'ದೇವರ 2' ಚಿತ್ರದ ಚಿತ್ರೀಕರಣ ಕರ್ನಾಟಕದ ಕುಮಟಾದಲ್ಲಿ ಆರಂಭವಾಗಲಿದೆ. ಬೃಹತ್ ಸೆಟ್ ನಿರ್ಮಾಣ ಕಾರ್ಯ ಪೂರ್ಣಗೊಳ್ಳುತ್ತಿದ್ದು, ಸಮುದ್ರ ತೀರದಲ್ಲಿ ಚಿತ್ರೀಕರಣ ನಡೆಯಲಿದೆ. ಮೊದಲು ಶ್ರೀಲಂಕಾದಲ್ಲಿ ಚಿತ್ರೀಕರಣದ ಯೋಜನೆ ಇತ್ತು. ಕನ್ನಡ ಕಲಾವಿದರಿಗೂ ಅವಕಾಶ ದೊರೆಯಲಿದೆ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ.

ಜೂ. ಎನ್​ಟಿಆರ್​, ಪ್ರಶಾಂತ್ ನೀಲ್ ಸಿನಿಮಾ ಶೂಟಿಂಗ್; ಮೊದಲ ದಿನವೇ 2 ಸಾವಿರ ಜನರು ಭಾಗಿ

ಹೈದರಾಬಾದ್​ನಲ್ಲಿ ಬರೋಬ್ಬರಿ 2 ಸಾವಿರ ಜೂನಿಯರ್ ಆರ್ಟಿಸ್ಟ್​ಗಳ​ ಜೊತೆ ನಿರ್ದೇಶಕ ಪ್ರಶಾಂತ್ ನೀಲ್ ಅವರು ಚಿತ್ರೀಕರಣ ಶುರು ಮಾಡಿದ್ದಾರೆ. 2ನೇ ಹಂತದ ಶೂಟಿಂಗ್​ನಲ್ಲಿ ನಟ ಜೂ. ಎನ್​ಟಿಆರ್​ ಅವರು ಭಾಗಿಯಾಗಲಿದ್ದಾರೆ. ‘ಮೈತ್ರಿ ಮೂವೀ ಮೇಕರ್ಸ್​’ ಸಂಸ್ಥೆ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ.

ಪ್ರಶಾಂತ್ ನೀಲ್-ಜೂನಿಯರ್ ಎನ್​ಟಿಆರ್​ ಸಿನಿಮಾ ಶೂಟಿಂಗ್ ಯಾವಾಗ? ಇಲ್ಲಿದೆ ಅಪ್​ಡೇಟ್

‘ಕೆಜಿಎಫ್​ 2’ ನಿರ್ದೇಶಕ ಪ್ರಶಾಂತ್ ನೀಲ್ ಅವರು ಪ್ರಭಾಸ್ ಜೊತೆ ‘ಸಲಾರ್’ ಸಿನಿಮಾ ಮಾಡಿ ಗೆಲುವು ಕಂಡರು. ಈಗ ಅವರು ಜೂನಿಯರ್​ ಎನ್​ಟಿಆರ್​ ಜೊತೆ ಸಿನಿಮಾ ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಸಿನಿಮಾದ ಶೂಟಿಂಗ್ ಯಾವಾಗ ಶುರು ಆಗಲಿದೆ ಎಂಬ ಕುರಿತು ಒಂದು ಹೊಸ ನ್ಯೂಸ್ ಕೇಳಿಬಂದಿದೆ.

ಅಲ್ಲು ಅರ್ಜುನ್ ವಿವಾದ ತಣ್ಣಗಾಗುವ ಮೊದಲೇ ದೊಡ್ಡ ನಿರ್ಧಾರ ತೆಗೆದುಕೊಂಡ ಜೂನಿಯರ್ ಎನ್​ಟಿಆರ್

‘ಪುಷ್ಪ 2’ ಪ್ರೀಮಿಯರ್‌ನಲ್ಲಿ ನಡೆದ ದುರ್ಘಟನೆಯ ನಂತರ, ತೆಲುಗು ಚಿತ್ರರಂಗದಲ್ಲಿ ಅಭಿಮಾನಿಗಳನ್ನು ಭೇಟಿ ಮಾಡುವುದು ದೊಡ್ಡ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ, ಜೂನಿಯರ್ ಎನ್​ಟಿಆರ್ ಅವರು ಅಭಿಮಾನಿಗಳನ್ನು ಭೇಟಿ ಮಾಡಲು ಯೋಜನೆ ರೂಪಿಸಿದ್ದಾರೆ. ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಸೂಕ್ತ ಅನುಮತಿ ಪಡೆದ ನಂತರವೇ ಈ ಭೇಟಿ ನಡೆಯಲಿದೆ.

‘RRR’ ಚಿತ್ರದ ರೀತಿ ‘ವಾರ್ 2’ನಲ್ಲೂ ಇರಲಿದೆ ಭರ್ಜರಿ ಡ್ಯಾನ್ಸ್; ಮತ್ತೊಂದು ಆಸ್ಕರ್ ಮೇಲೆ ಕಣ್ಣು?

‘ವಾರ್ 2’ ಚಿತ್ರದಲ್ಲಿ ಹೃತಿಕ್ ರೋಷನ್ ಮತ್ತು ಜೂನಿಯರ್ ಎನ್​ಟಿಆರ್ ಡ್ಯಾನ್ಸ್ ಇರಲಿದೆ ಎಂಬ ಸುದ್ದಿ ಅಭಿಮಾನಿಗಳಲ್ಲಿ ಉತ್ಸಾಹ ಮೂಡಿಸಿದೆ. ‘ಆರ್‌ಆರ್‌ಆರ್’ ಚಿತ್ರದ ನಾಟು ನಾಟು ಹಾಡಿನ ಯಶಸ್ಸಿನ ನಂತರ, ಜೂನಿಯರ್ ಎನ್​​ಟಿಆರ್ ಅವರ ಡ್ಯಾನ್ಸ್ ಮತ್ತೊಮ್ಮೆ ಗಮನ ಸೆಳೆಯಲಿದೆ .

ಜೂ ಎನ್​ಟಿಆರ್​ ಹೊಸಬ ಎಂಬ ಬಾಲಿವುಡ್ ನಿರ್ಮಾಪಕನ ಬೆವರಿಳಿಸಿದ ಸಿದ್ಧಾರ್ಥ್

Jr NTR: ಬಾಲಿವುಡ್ ಸಿನಿಮಾಗಳನ್ನು ಎಲ್ಲ ರೀತಿಯಲ್ಲಿಯೂ ದಕ್ಷಿಣ ಭಾರತದ ಸಿನಿಮಾಗಳು ಹಿಂದಿಕ್ಕಿವೆ. ಭಾರತೀಯ ಸಿನಿಮಾಗಳು ಎಂದರೆ ಅವು ದಕ್ಷಿಣದ ಸಿನಿಮಾಗಳು ಎಂಬ ಸ್ಥಿತಿ ನಿರ್ಮಾಣವಾಗಿದೆ. ಆದರೂ ಕೆಲವು ಬಾಲಿವುಡ್ ನಿರ್ಮಾಪಕರು ಈಗಲೂ ದಕ್ಷಿಣ ಭಾರತದ ಸಿನಿಮಾಗಳನ್ನು ನಟರನ್ನು ದ್ವಿತೀಯ ದರ್ಜೆ ನಟರಂತೆ ನೋಡುವುದು ಬಿಟ್ಟಿಲ್ಲ.

ಒಟಿಟಿ ಪ್ರಿಯರಿಗೆ ಈ ವಾರ ಬಂಪರ್; ರಿಲೀಸ್ ಆಗ್ತಿವೆ ಹಲವು ಸಿನಿಮಾಗಳು

ಜೂನಿಯರ್ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಗಳಿಕೆ ಮಾಡಿತು. ಈ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದಿದ್ದು ಸಿನಿಮಾ ಕಲೆಕ್ಷನ್ ಕುಗ್ಗಲು ಪ್ರಮುಖ ಕಾರಣ. ಈ ಚಿತ್ರವನ್ನು ಒಟಿಟಿಯಲ್ಲಿ ನೋಡಲು ಅನೇಕರು ಕಾದಿದ್ದಾರೆ. ಅವರಿಗೆ ಗುಡ್​ನ್ಯೂಸ್ ಸಿಕ್ಕಿದೆ.

ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ನಾನು-ರಾಗಿಣಿ ಜೋಡಿ ಅಲ್ಲ: ಎಲ್ಲರ ಎದುರು ಸ್ಪಷ್ಟಪಡಿಸಿದ ಧರ್ಮ ಕೀರ್ತಿರಾಜ್
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಧೋನಿ ಸೇರಿದಂತೆ ಒಂದೇ ಓವರ್​ನಲ್ಲಿ 4 ವಿಕೆಟ್ ಉರುಳಿಸಿದ ಚಾಹಲ್
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’