AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut

Kangana Ranaut

ಕಂಗನಾ ರಣಾವತ್ ಅವರರು ನಟನೆಯಿಂದ ಹಾಗೂ ವಿವಾದಗಳಿಂದ ಸದಾ ಸುದ್ದಿ ಆಗುವ ನಟಿ. ಪರದೆಯ ಮೇಲೆ ಮತ್ತು ಪರದೆಯ ಹೊರಗೆ ಸದಾ ಚರ್ಚೆಯಲ್ಲಿ ಇರುತ್ತಾರೆ. ಅವರು ದಿಟ್ಟತನಕ್ಕೆ ಹೆಸರುವಾಸಿಯಾಗಿದ್ದಾರೆ. 1987ರ ಮಾರ್ಚ್ 23ರಂದು ಹಿಮಾಚಲ ಪ್ರದೇಶದಲ್ಲಿ ಕಂಗನಾ ಜನಿಸಿದರು. ಅವರು 2006ರಲ್ಲಿ ‘ಗ್ಯಾಂಗ್‌ಸ್ಟರ್’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು. ಮೊದಲ ಸಿನಿಮಾದಲ್ಲೇ ಗೆಲುವು ಸಿಕ್ಕಿತು. ಈ ಚಿತ್ರಕ್ಕಾಗಿ ಅವರಿಗೆ ಫಿಲ್ಮ್‌ಫೇರ್ ಪ್ರಶಸ್ತಿ ಸಿಕ್ಕಿತು. ಕಂಗನಾ ಅವರು ‘ಕ್ವೀನ್’, ‘ತನು ವೆಡ್ಸ್ ಮನು’, ‘ಫ್ಯಾಶನ್’ ಅಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕಂಗನಾ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳತ್ತಾರೆ. ಅವರು ನಿರ್ದೇಶಕಿ ಹಾಗೂ ನಿರ್ಮಾಪಕಿ ಕೂಡ ಹೌದು. ಸಾಕಷ್ಟು ವಿವಾದಗಳನ್ನು ಕೂಡ ಕಂಗನಾ ಮಾಡಿಕೊಂಡಿದ್ದಾರೆ.

ಇನ್ನೂ ಹೆಚ್ಚು ಓದಿ

ಲಿಪ್‌ಲಾಕ್ ದೃಶ್ಯದಲ್ಲಿ ಸಹ ಕಲಾವಿದನಿಗೆ ಗಾಯ ಮಾಡಿದರಾ ಕಂಗನಾ?

2014ರ 'ರಿವಾಲ್ವರ್ ರಾಣಿ' ಚಿತ್ರದ ಕಂಗನಾ-ವೀರ್ ದಾಸ್ ಲಿಪ್ ಲಾಕ್ ದೃಶ್ಯದ ಬಗ್ಗೆ ಹಳೆಯ ವದಂತಿ ಮತ್ತೆ ವೈರಲ್ ಆಗಿದೆ. ಶೂಟಿಂಗ್ ವೇಳೆ ಕಂಗನಾ ವೀರ್ ದಾಸ್ ತುಟಿಗೆ ಕಚ್ಚಿ ಗಾಯಗೊಳಿಸಿದ್ದರು ಎಂಬ ಆರೋಪವನ್ನು ನಟ ವೀರ್ ದಾಸ್ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಕಂಗನಾ ವೃತ್ತಿಪರರು ಎಂದು ಹೇಳಿ, ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಂಗನಾ ಧನ್ಯವಾದ ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸತ್ಯ ಈಗ ಸ್ಪಷ್ಟವಾಗಿದೆ.

ಕಂಗನಾಗೆ ತೀವ್ರ ನಿರಾಶೆ; ಮೊದಲ ವಾರದಲ್ಲಿ ‘ಭಾರತ್ ಭಾಗ್ಯ ವಿಧಾತ’ ಗಳಿಕೆ ಕೇವಲ 6 ಕೋಟಿ ರೂ.

‘ಭಾರತ್ ಭಾಗ್ಯ ವಿಧಾತ’ ಸಿನಿಮಾದಲ್ಲಿ ಉತ್ತಮವಾದ ಕಥಾವಸ್ತು ಇದೆ ಎಂಬ ಕಾರಣಕ್ಕೆ ಈ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಯಿತು. ಹಾಗಿದ್ದರೂ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯುವಲ್ಲಿ ಈ ಚಿತ್ರ ವಿಫಲವಾಗಿದೆ. ಈ ಮೂಲಕ ನಟಿ ಕಂಗನಾ ರಣಾವತ್ ಅವರ ಫ್ಲಾಪ್ ಸಿನಿಮಾಗಳ ಪಟ್ಟಿಗೆ ಈ ಚಿತ್ರ ಕೂಡ ಸೇರ್ಪಡೆ ಆಗಿದೆ.

ಕಂಗನಾ ರಣಾವತ್‌ಗೆ ಶಾಕ್: ‘ಭಾರತ ಭಾಗ್ಯ ವಿಧಾತಾ’ ಚಿತ್ರಕ್ಕೆ ಭಾರಿ ನಷ್ಟದ ಭೀತಿ

ಕಂಗನಾ ರಣಾವತ್ ನಟನೆಯ 'ಭಾರತ್ ಭಾಗ್ಯ ವಿಧಾತಾ' ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಹೀನಾಯ ಸೋಲು ಕಂಡಿದೆ. 60 ಕೋಟಿ ಬಜೆಟ್‌ನಲ್ಲಿ ನಿರ್ಮಿಸಿದ ಸಿನಿಮಾ ಕೇವಲ 4 ಕೋಟಿ ಗಳಿಸಿದ್ದು, ನಿರ್ಮಾಪಕರಿಗೆ 45-50 ಕೋಟಿ ನಷ್ಟದ ಭೀತಿ ಎದುರಾಗಿದೆ. ತೆರಿಗೆ ಮುಕ್ತ ಸ್ಥಾನಮಾನ, 'ಒಂದಕ್ಕೆ ಒಂದು ಉಚಿತ' ಆಫರ್ ಕೂಡ ಪ್ರೇಕ್ಷಕರನ್ನು ಸೆಳೆಯಲು ವಿಫಲವಾಗಿ, ಕಂಗನಾ ಖಾತೆಗೆ ಮತ್ತೊಂದು ವೈಫಲ್ಯ ಸೇರಿಸಿದೆ.

‘ಬಾಲಿವುಡ್‌ನಲ್ಲಿ ಪಾಕಿಸ್ತಾನ ಪ್ರೇಮ ಹೆಚ್ಚಿದೆ’: ರಣವೀರ್ ಸಿಂಗ್ ಪರ ಬ್ಯಾಟ್ ಬೀಸಿದ ಕಂಗನಾ ರಣಾವತ್

ನಟ ರಣವೀರ್ ಸಿಂಗ್ ಅವರನ್ನು ಕೆಲವರು ಟಾರ್ಗೆಟ್ ಮಾಡಿದ್ದಾರೆ. ಅಂಥವರ ಬಗ್ಗೆ ಕಂಗನಾ ರಣಾವತ್ ಮಾತನಾಡಿದ್ದಾರೆ. ‘ಧುರಂಧರ್’ ಸಿನಿಮಾ ಗೆದ್ದ ಬೆನ್ನಲ್ಲೇ ‘ಡಾನ್ 3’ ವಿವಾದ ಇಟ್ಟುಕೊಂಡು ರಣವೀರ್ ಸಿಂಗ್ ಅವರನ್ನು ಬ್ಯಾನ್ ಮಾಡಲು ಪ್ರಯತ್ನಿಸಿದ್ದು ಯಾಕೆ ಎಂಬುದಕ್ಕೆ ಕಂಗನಾ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ರಾಷ್ಟ್ರ ಪ್ರಶಸ್ತಿ ಸಿಕ್ಕ ಬಳಿಕವೂ ನನಗೆ ಕೆಲಸ ಸಿಗಲಿಲ್ಲ: ಸತ್ಯ ತೆರೆದಿಟ್ಟ ಕಂಗನಾ ರಣಾವತ್

ಮಧುರ್ ಭಂಡಾರ್ಕರ್ ನಿರ್ದೇಶನದ ‘ಫ್ಯಾಷನ್’ ಚಿತ್ರದ ನಟನೆಗಾಗಿ ಕಂಗನಾ ರಣಾವತ್ ಅವರಿಗೆ ‘ಅತ್ಯುತ್ತಮ ಪೋಷಕ ನಟಿ’ ರಾಷ್ಟ್ರ ಪ್ರಶಸ್ತಿ ಸಿಕ್ಕಿತ್ತು. ಇದೇ ಚಿತ್ರಕ್ಕಾಗಿ ಪ್ರಿಯಾಂಕಾ ಚೋಪ್ರಾ ಅವರಿಗೆ ‘ಅತ್ಯುತ್ತಮ ನಟಿ’ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ನ್ಯಾಷನಲ್ ಅವಾರ್ಡ್ ಸಿಕ್ಕ ಬಳಿಕವೂ ಕಂಗನಾ ಅವರಿಗೆ ಅವಕಾಶ ಸಿಗುತ್ತಿರಲಿಲ್ಲ.

26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದ್ದ ನಟಿ ಕಂಗನಾ ರಣಾವತ್

‘26/11 ಉಗ್ರರ ದಾಳಿ ನಡೆದ ದಿನ ನೀವು ಎಲ್ಲಿದ್ರಿ?’ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಕಂಗನಾ ರಣಾವತ್ ಉತ್ತರಿಸಿದ್ದಾರೆ. ಮುಂಬೈನಲ್ಲಿ ನಡೆದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಉಗ್ರರ ದಾಳಿಯನ್ನು ಆಧರಿಸಿದ ಸಿನಿಮಾದಲ್ಲಿ ಕಂಗನಾ ಅವರು ನಟಿಸಿದ್ದು, ಈಗ ಆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.

ಮತ್ತೊಂದು ರಾಷ್ಟ್ರ ಪ್ರಶಸ್ತಿ ಗ್ಯಾರಂಟಿ; ಕಂಗನಾ ಹೊಸ ಸಿನಿಮಾ ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ

26/11 ಮುಂಬೈ ದಾಳಿಯ ಘಟನೆಯನ್ನು ಆಧರಿಸಿ ‘ಭಾರತ್ ಭಾಗ್ಯ ವಿಧಾತ’ ಸಿನಿಮಾ ಮಾಡಲಾಗಿದೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ನಟಿ ಕಂಗನಾ ರಣಾವತ್ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಿಂದ ಕಂಗನಾ ಅವರಿಗೆ ಮತ್ತೊಂದು ರಾಷ್ಟ್ರ ಪ್ರಶಸ್ತಿ ಸಿಗಲಿದೆ ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ.

ಕಂಗನಾ ರಣಾವತ್ ನಟನೆಯ ‘ಭಾರತ್ ಭಾಗ್ಯ ವಿಧಾತಾ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ

ಕಳೆದ ಕೆಲವು ವರ್ಷಗಳಿಂದ ನಟಿ ಕಂಗನಾ ರಣಾವತ್ ಅವರಿಗೆ ಬಾಲಿವುಡ್‌ನಲ್ಲಿ ಸರಿಯಾದ ಯಶಸ್ಸು ಸಿಕ್ಕಿಲ್ಲ. ಅವರು ನಟಿಸಿದ್ದ ‘ಎಮರ್ಜೆನ್ಸಿ’, ‘ತೇಜಸ್’, ‘ಚಂದ್ರಮುಖಿ 2’, ‘ಧಾಕಡ್’ ಮತ್ತು ‘ತಲೈವಿ’ ಸಿನಿಮಾಗಳು ಸೋತವು. ಈಗ ಅವರ ಹೊಸ ಸಿನಿಮಾ ‘ಭಾರತ್ ಭಾಗ್ಯ ವಿಧಾತಾ’ ಬಿಡುಗಡೆಗೆ ಸಿದ್ಧವಾಗಿದೆ.

‘ನಾನು ತಾಳಿ ಧರಿಸಿದ್ದು ದೊಡ್ಡ ವಿಷಯ ಅಲ್ಲ’; ಸೀಕ್ರೆಟ್ ಮದುವೆ ವದಂತಿಗೆ ಕಂಗನಾ ಸ್ಪಷ್ಟನೆ

ನಟಿ ಕಂಗನಾ ರಣಾವತ್ ಅವರ ಕೊರಳಿನಲ್ಲಿ ತಾಳಿ ನೋಡಿದ ಎಲ್ಲರಿಗೂ ಅಚ್ಚರಿ ಆಗಿತ್ತು. ಆ ಬಗ್ಗೆ ಸ್ವತಃ ಕಂಗನಾ ಮೌನ ಮುರಿದಿದ್ದಾರೆ. ‘ಇದು ದೊಡ್ಡ ವಿಷಯವೇ ಅಲ್ಲ’ ಎಂದು ಅವರು ಹೇಳಿದ್ದಾರೆ. ಮಂಗಳಸೂತ್ರ ಧರಿಸಿದ್ದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ.

ರಹಸ್ಯವಾಗಿ ಮದುವೆಯಾದರೇ ನಟಿ ಕಂಗನಾ ರಣಾವತ್? ವೈರಲ್ ವಿಡಿಯೋದ ಅಸಲಿಯತ್ತೇನು?

ಕಂಗನಾ ರಣಾವತ್ ಅವರ 'ಮದುಮಗಳ' ಲುಕ್ ವೈರಲ್ ಆಗಿದ್ದು, ರಹಸ್ಯ ವಿವಾಹದ ವದಂತಿ ಹಬ್ಬಿತ್ತು. ಆದರೆ, ಈ ವಿಡಿಯೋ 'ಕ್ವೀನ್ 2' ಚಿತ್ರೀಕರಣದ ದೃಶ್ಯವಾಗಿದೆ. 'ಕ್ವೀನ್ ಫಾರೆವರ್' ತಾತ್ಕಾಲಿಕ ಹೆಸರಿನ ಈ ಚಿತ್ರದ ಜೊತೆ, 2008ರ ಮುಂಬೈ ದಾಳಿಯ ಆಧಾರಿತ 'ಭಾರತ್ ಭಾಗ್ಯ ವಿಧಾತಾ' ಚಿತ್ರವೂ ಜೂನ್‌ನಲ್ಲಿ ತೆರೆಕಾಣಲಿದೆ.

ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ "ಜಾದೂ" ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಕಂಗನಾ ರಣಾವತ್ ರಾಹುಲ್ ಗಾಂಧಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ದೊಡ್ಡ "ತಲೆನೋವು" ಎಂದು ಹೇಳಿದ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಬಾಲ್ಯದಲ್ಲಿ ಕಂಡ ಮ್ಯಾಜಿಕ್ ಪ್ರದರ್ಶನದಿಂದಾಗಿ ಅವರು ಬಾಲ್ಯದ ಆಘಾತವನ್ನು ಅನುಭವಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

8 ಗಂಟೆ ಕೆಲಸದ ಶಿಫ್ಟ್ ವಿವಾದ: ದೀಪಿಕಾ ಪಡುಕೋಣೆ ಪರ ನಿಂತ ಕಂಗನಾ ರಣಾವತ್

ನಟಿ ಕಂಗನಾ ರಣಾವತ್ ಅವರು ಸಾಮಾನ್ಯವಾಗಿ ಯಾರನ್ನೂ ಹೊಗಳುವುದಿಲ್ಲ. ಆದರೆ ಈಗ ಅವರು ದೀಪಿಕಾ ಪರವಾಗಿ ನಿಂತಿದ್ದಾರೆ. 8 ಗಂಟೆ ಕೆಲಸದ ಅವಧಿಗೆ ಸಂಬಂಧಿಸಿದಂತೆ ಶುರುವಾದ ವಿವಾದದ ಬಗ್ಗೆ ಕಂಗನಾ ರಣಾವತ್ ಅವರು ತಮ್ಮ ನಿಲುವು ಏನು ಎಂಬುದನ್ನು ತಿಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ಸಚಿವ ಸ್ಥಾನಕ್ಕಾಗಿ ದೆಹಲಿಗೆ ದೌಡಾಯಿಸಿದ ಆಕಾಂಕ್ಷಿಗಳು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಮೇಷ ಮತ್ತು ವೃಷಭ ರಾಶಿಯವರಿಗೆ ಭಾರಿ ಧನಲಾಭದ ಯೋಗ
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಬಿಕೆ ಹರಿಪ್ರಸಾದ್ ಏನಂದ್ರು ನೋಡಿ​​
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದಿದ್ದು ಹೇಗೆ?
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಚಿಕ್ಕಮಗಳೂರು: 60 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದ ಕಾರ್ಮಿಕನ ರಕ್ಷಣೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಜೊತೆ ಡಿಕೆಶಿ ಸುದೀರ್ಘ ಚರ್ಚೆ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ವೀಕೆಂಡ್‌ನಲ್ಲೂ ನಡೆಯಲಿದೆ ಮತದಾರರ ಪಟ್ಟಿ ಪರಿಷ್ಕರಣೆ ಅಭಿಯಾನ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಸಿಎಂ ವಿಜಯ್​ಗೆ ಶಾಕ್; ಬಿಜೆಪಿಯಿಂದ ಟಿವಿಕೆ ನಾಯಕನ ಲಂಚದ ವಿಡಿಯೋ ಬಿಡುಗಡೆ
ಸಿಎಂ ಸಭೆಗೆ ಗೈರಾದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಸಿಎಂ ಸಭೆಗೆ ಗೈರಾದ ಬಗ್ಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ