AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut

Kangana Ranaut

ಕಂಗನಾ ರಣಾವತ್ ಅವರರು ನಟನೆಯಿಂದ ಹಾಗೂ ವಿವಾದಗಳಿಂದ ಸದಾ ಸುದ್ದಿ ಆಗುವ ನಟಿ. ಪರದೆಯ ಮೇಲೆ ಮತ್ತು ಪರದೆಯ ಹೊರಗೆ ಸದಾ ಚರ್ಚೆಯಲ್ಲಿ ಇರುತ್ತಾರೆ. ಅವರು ದಿಟ್ಟತನಕ್ಕೆ ಹೆಸರುವಾಸಿಯಾಗಿದ್ದಾರೆ. 1987ರ ಮಾರ್ಚ್ 23ರಂದು ಹಿಮಾಚಲ ಪ್ರದೇಶದಲ್ಲಿ ಕಂಗನಾ ಜನಿಸಿದರು. ಅವರು 2006ರಲ್ಲಿ ‘ಗ್ಯಾಂಗ್‌ಸ್ಟರ್’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು. ಮೊದಲ ಸಿನಿಮಾದಲ್ಲೇ ಗೆಲುವು ಸಿಕ್ಕಿತು. ಈ ಚಿತ್ರಕ್ಕಾಗಿ ಅವರಿಗೆ ಫಿಲ್ಮ್‌ಫೇರ್ ಪ್ರಶಸ್ತಿ ಸಿಕ್ಕಿತು. ಕಂಗನಾ ಅವರು ‘ಕ್ವೀನ್’, ‘ತನು ವೆಡ್ಸ್ ಮನು’, ‘ಫ್ಯಾಶನ್’ ಅಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕಂಗನಾ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳತ್ತಾರೆ. ಅವರು ನಿರ್ದೇಶಕಿ ಹಾಗೂ ನಿರ್ಮಾಪಕಿ ಕೂಡ ಹೌದು. ಸಾಕಷ್ಟು ವಿವಾದಗಳನ್ನು ಕೂಡ ಕಂಗನಾ ಮಾಡಿಕೊಂಡಿದ್ದಾರೆ.

ಇನ್ನೂ ಹೆಚ್ಚು ಓದಿ

‘ಬಿಕಿನಿ, ಒಳಉಡುಪು ಧರಿಸಿ ಸಹೋದರನಿಗೆ ರಾಖಿ ಕಟ್ಟುತ್ತಾರಾ?’: ಕೃತಿ ಸನನ್​ ವಿರುದ್ಧ ಕಂಗನಾ ಗರಂ

ಜಾಹೀರಾತಿನಲ್ಲಿ ಕೃತಿ ಸನನ್ ಅವರು ಧರಿಸಿದ ಬಟ್ಟೆ ಬಗ್ಗೆ ಟೀಕೆ ವ್ಯಕ್ತವಾಗಿದೆ. ಸಹೋದರನಿಗೆ ರಾಖಿ ಕಟ್ಟುವಾಗ ಗ್ಲಾಮರಸ್ ಬಟ್ಟೆ ಧರಿಸಿದ್ದಕ್ಕೆ ನೆಟ್ಟಿಗರು ಕಿಡಿಕಾರುತ್ತಿದ್ದಾರೆ. ನಟಿ ಕಂಗನಾ ರಣಾವತ್ ಕೂಡ ಈ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಅದಕ್ಕೆ ಕೃತಿ ಸನನ್ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಮೂಡಿದೆ.

‘ನನ್ನ ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ’: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಹಾಗೂ ಯೋಗ ಗುರು ಬಾಬಾ ರಾಮ್​ದೇವ್ ನಡುವೆ ಕಿರಿಕ್ ಶುರುವಾಗಿದೆ. ಜೆನ್ ಜಿ ಬಗ್ಗೆ ಕಂಗನಾ ನೀಡಿದ್ದ ಹೇಳಿಕೆಯನ್ನು ಬಾಬಾ ರಾಮ್​ದೇವ್ ತೀವ್ರವಾಗಿ ಖಂಡಿಸಿದ್ದಾರೆ. ಅದರಿಂದ ಗರಂ ಆಗಿರುವ ಕಂಗನಾ ಅವರು ಖಾರದ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಜಂತರ್ ಮಂತರ್ ಪ್ರತಿಭಟನೆಯಲ್ಲಿ ಇದ್ದ ಬಹುತೇಕರು ಜೆನ್ ಜಿ ಅಲ್ಲ’ ಎಂದ ಕಂಗನಾ ರಣಾವತ್

ದೆಹಲಿಯ ಜಂತರ್ ಮಂತರ್​ನಲ್ಲಿ ಪ್ರತಿಭಟನೆ ಮುಗಿದು ಬಹಳ ದಿನಗಳೇ ಕಳೆದಿವೆ. ನಟಿ ಕಂಗನಾ ರಣಾವತ್ ಅವರು ಆ ಪ್ರತಿಭಟನೆಯ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ನಡೆದ ಆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರ ಪೈಕಿ ಹೆಚ್ಚಿನವರು ಜೆನ್ ಜಿ ಅಲ್ಲ ಎಂದು ಕಂಗನಾ ಹೇಳಿದ್ದಾರೆ.

ಹಿರಿಯ ನಟನನ್ನು ನರಿಗೆ ಹೋಲಿಸಿದ ನಟಿ ಕಂಗನಾ ರನೌತ್

Kangana Ranaut controversy: ನಟಿ ಕಂಗನಾ ರನೌತ್ ಅವರು ಬಾಲಿವುಡ್​​ನ ಹಿರಿಯ ನಟರೋರ್ವರನ್ನು ನರಿಗೆ ಹೋಲಿಸಿದ್ದಾರೆ. ಕನ್ನಡದ ಸಿನಿಮಾಗಳಲ್ಲೂ ನಟಿಸಿರುವ ಬಾಲಿವುಡ್​​ನ ಹಿರಿಯ ನಟ ನಸಿರುದ್ಧೀನ್ ಶಾ ಅವರ ಹೇಳಿಕೆಯೊಂದನ್ನು ಕಂಗನಾ ತೀವ್ರವಾಗಿ ಖಂಡಿಸಿದ್ದು, ನಸೀರುದ್ಧೀನ್ ಅವರನ್ನು ನರಿಗೆ ಹೋಲಿಕೆ ಮಾಡಿದ್ದಾರೆ.

‘ಜನರೇಷನ್ ಗಟಾರ್’ ಎಂದಿದ್ದ ಕಂಗನಾ ಈಗ ಯೂ ಟರ್ನ್; ‘ಜೆನ್ ಜಿ ಭಾರತದ ಶಕ್ತಿ’ ಎಂದ ನಟಿ

ನಟಿ ಕಂಗನಾ ರಣಾವತ್ ಅವರು ಈ ಮೊದಲು ಜೆನ್ ಜಿ ಯುವಜನತೆ ಬಗ್ಗೆ ನೀಡಿದ್ದ ಹೇಳಿಕೆಗಳು ತೀವ್ರ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದವು. ಇದೀಗ ಕಂಗನಾ ರಣಾವತ್ ಅವರು ತಮ್ಮ ಹೇಳಿಕೆಯಿಂದ ಹಿಂದೆ ಸರಿದು, ಯುವ ಪೀಳಿಗೆಯನ್ನು ಕೊಂಡಾಡಿರುವುದು ಮತ್ತೆ ಸುದ್ದಿಯಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

ಉದಯನಿಧಿ ಸ್ಟಾಲಿನ್‌ ಬಂಧಿಸಿದ್ದು ಉತ್ತಮ ನಿರ್ಧಾರ: ಖಡಕ್ ಆಗಿ ಹೇಳಿದ ಕಂಗನಾ ರಣಾವತ್‌

ನಟಿ ತ್ರಿಷಾ ಕೃಷ್ಣನ್‌ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದನ್ನು ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಬೆಂಬಲಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ನಾನು ಸಂಘಿ ಆಗಬೇಕು’: ವಿಡಿಯೋ ನೋಡಿ ಟ್ರೋಲ್‌ ಮಾಡಿದವರಿಗೆ ಕಂಗನಾ ತಿರುಗೇಟು

ನಟಿ ಕಂಗನಾ ರಣಾವತ್ ಅವರು ಒಂದರ ಮೇಲೊಂದು ಹೇಳಿಕೆಗಳನ್ನು ನೀಡುತ್ತಾ ಸುದ್ದಿಯಾಗುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯ ರೀತಿಯನ್ನು ಟೀಕಿಸುವುದರಿಂದ ಆರಂಭವಾದ ಅವರ ವಿವಾದ ಈಗ ಇನ್ನೊಂದು ಹಂತಕ್ಕೆ ಏರಿದೆ. ‘ನಾನು ಸಂಘಿ ಆಗಬೇಕು’ ಎಂದು ಕಂಗನಾ ರಣಾವತ್ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಸೋನಾಕ್ಷಿ ಸಿನ್ಹಾ ವಿರುದ್ಧ ಕಿಡಿಕಾರಿದ ಕಂಗನಾ ರಣಾವತ್; ಖಾರದ ಮಾತುಗಳಲ್ಲಿ ಟೀಕೆ

ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ ನಟಿಯೊಬ್ಬರ ವಿರುದ್ಧ ಕಂಗನಾ ರಣಾವತ್ ಗರಂ ಆಗಿದ್ದಾರೆ. ಹೆಸರು ಹೇಳದೆಯೇ ಕಟುವಾಗಿ ಟೀಕೆ ಮಾಡಿದ್ದಾರೆ. ಆದರೆ ಅವರು ಟೀಕಿಸಿರುವುದು ಸೋನಾಕ್ಷಿ ಸಿನ್ಹಾ ಅವರನ್ನು ಎಂದು ನೆಟ್ಟಿಗರು ಊಹಿಸಿದ್ದಾರೆ. ಈ ಟೀಕೆಗೆ ಸೋನಾಕ್ಷಿ ಹೇಗೆ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬ ಕುತೂಹಲ ಸೃಷ್ಟಿ ಆಗಿದೆ.

ಬೆಂಕಿಗೆ ತುಪ್ಪ ಸುರಿಯಬೇಡಿ: ಹೃತಿಕ್ ರೋಷನ್ ವಿರುದ್ಧ ಕಿಡಿಕಾರಿದ ಕಂಗನಾ ರಣಾವತ್

ಕಂಗನಾ ರಣಾವತ್ ಮತ್ತು ಹೃತಿಕ್ ರೋಷನ್ ನಡುವಿನ ಕಿರಿಕ್ ಇಂದು ನಿನ್ನೆಯದಲ್ಲ. ಹತ್ತು ವರ್ಷಗಳ ಹಳೆಯ ಜಗಳ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಕಂಗನಾ ವಿರುದ್ಧ ಜೆನ್​ ಜಿ ಯುವಜನತೆ ತಿರುಗಿ ಬಿದ್ದಿದ್ದಾರೆ. ಅದಕ್ಕೆ ಪರೋಕ್ಷವಾಗಿ ಹೃತಿಕ್ ರೋಷನ್ ಪ್ರೋತ್ಸಾಹ ನೀಡಿದ್ದಾರೆ. ಅದು ಕಂಗನಾ ಕೋಪಕ್ಕೆ ಕಾರಣ ಆಗಿದೆ.

‘ಬೇರೆಯವರ ಮಕ್ಕಳನ್ನು ಹಾದಿ ತಪ್ಪಿಸಿದರೆ, ನಿಮ್ಮ ಮಕ್ಕಳಿಗೂ ಅದೇ ಪರಿಸ್ಥಿತಿ ಬರುತ್ತದೆ’; ಕಂಗನಾ ರಣಾವತ್

ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ತಮ್ಮ ಸಿನಿಮಾ ಪಾತ್ರಗಳನ್ನು ಬಳಸಿ ಟ್ರೋಲ್ ಮಾಡಿದವರಿಗೆ ಸೋಶಿಯಲ್ ಮೀಡಿಯಾದಲ್ಲಿ ಕಠಿಣ ಪ್ರತಿಕ್ರಿಯೆ ನೀಡಿದ್ದಾರೆ. ಸಿನಿಮಾದ ಕಾಲ್ಪನಿಕ ಪಾತ್ರಗಳನ್ನು ನೈಜ ಜೀವನಕ್ಕೆ ಹೋಲಿಸಿ ಇಂದಿನ ಮುಗ್ಧ ಯುವ ಪೀಳಿಗೆಯನ್ನು ಹಾದಿ ತಪ್ಪಿಸುವ ಕೆಲಸ ಮಾಡಬೇಡಿ ಎಂದು ಟ್ರೋಲಿಗರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸೀತೆಯ ವೇಷದಲ್ಲಿ ಜೆನ್ ಜಿ ಮಂದಿಗೆ ಆಶೀರ್ವಾದ ಮಾಡಿದ ನಟಿ, ಸಂಸದೆ ಕಂಗನಾ ರಣಾವತ್

ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಸೀತೆ ಪಾತ್ರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಈ ನಡುವೆಯೇ ಕಂಗನಾ ರಣಾವತ್ ಅವರು ತಮ್ಮ ಹಳೆಯ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋ ಮೂಲಕ ಅವರು ಜೆನ್ ಜಿ ಯುವ ಜನತೆಯ ಕಾಲೆಳೆದಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಜೆನ್ ಜಿ ಪ್ರತಿಭಟನಾಕಾರರ ಬೆಂಬಲಕ್ಕೆ ನಿಂತ ವಿಶಾಲ್ ದದ್ಲಾನಿ: ಕಂಗನಾ ಮಾತಿಗೆ ತಿರುಗೇಟು

ನಟಿ ಕಂಗನಾ ರಣಾವತ್ ಅವರು ಜೆನ್ ಜಿ ಯುವಕ-ಯುವತಿಯರ ಪ್ರತಿಭಟನೆಯನ್ನು ಖಂಡಿಸಿದ್ದರು. ಆದರೆ ಗಾಯಕ ವಿಶಾಲ್ ದದ್ಲಾನಿ ಅವರು ಜೆನ್ ಜಿಗಳ ಪರ ನಿಂತಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ಆದ ಹಲ್ಲೆಯನ್ನು ವಿಶಾಲ್ ದದ್ಲಾನಿ ಟೀಕಿಸಿದ್ದಾರೆ.

ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಕರಾವಳಿಯಲ್ಲಿ ಇಂದು ಈದ್ ಮಿಲಾದ್: ದ.ಕ, ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಂಗಳ ಗೌರಿ ವ್ರತ, ಪ್ರದೋಷ ದಿನ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
ಆಯಿಲ್ ಟ್ಯಾಂಕರ್ ಪಲ್ಟಿ; ಎಣ್ಣೆ ಹಿಡಿಯಲು ಬಕೆಟ್ ಹಿಡಿದು ನುಗ್ಗಿದ ಜನ!
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
'ರಾಮಾಯಣ' ಚಿತ್ರದ ಪೆನ್ಸಿಲ್ ಆರ್ಟ್
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ