AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut

Kangana Ranaut

ಕಂಗನಾ ರಣಾವತ್ ಅವರರು ನಟನೆಯಿಂದ ಹಾಗೂ ವಿವಾದಗಳಿಂದ ಸದಾ ಸುದ್ದಿ ಆಗುವ ನಟಿ. ಪರದೆಯ ಮೇಲೆ ಮತ್ತು ಪರದೆಯ ಹೊರಗೆ ಸದಾ ಚರ್ಚೆಯಲ್ಲಿ ಇರುತ್ತಾರೆ. ಅವರು ದಿಟ್ಟತನಕ್ಕೆ ಹೆಸರುವಾಸಿಯಾಗಿದ್ದಾರೆ. 1987ರ ಮಾರ್ಚ್ 23ರಂದು ಹಿಮಾಚಲ ಪ್ರದೇಶದಲ್ಲಿ ಕಂಗನಾ ಜನಿಸಿದರು. ಅವರು 2006ರಲ್ಲಿ ‘ಗ್ಯಾಂಗ್‌ಸ್ಟರ್’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು. ಮೊದಲ ಸಿನಿಮಾದಲ್ಲೇ ಗೆಲುವು ಸಿಕ್ಕಿತು. ಈ ಚಿತ್ರಕ್ಕಾಗಿ ಅವರಿಗೆ ಫಿಲ್ಮ್‌ಫೇರ್ ಪ್ರಶಸ್ತಿ ಸಿಕ್ಕಿತು. ಕಂಗನಾ ಅವರು ‘ಕ್ವೀನ್’, ‘ತನು ವೆಡ್ಸ್ ಮನು’, ‘ಫ್ಯಾಶನ್’ ಅಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕಂಗನಾ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳತ್ತಾರೆ. ಅವರು ನಿರ್ದೇಶಕಿ ಹಾಗೂ ನಿರ್ಮಾಪಕಿ ಕೂಡ ಹೌದು. ಸಾಕಷ್ಟು ವಿವಾದಗಳನ್ನು ಕೂಡ ಕಂಗನಾ ಮಾಡಿಕೊಂಡಿದ್ದಾರೆ.

ಇನ್ನೂ ಹೆಚ್ಚು ಓದಿ

‘ನನಗೆ ಮದುವೆ ಆಗಿಲ್ಲ ಅಂತ ಯಾರು ಹೇಳಿದ್ದು?’; ಕಂಗನಾ ರಣಾವತ್

Kangana Ranaut Marriage: ಇತ್ತೀಚಿನ ಸಂದರ್ಶನದಲ್ಲಿ, ನಟಿ ಕಂಗನಾ ರನೌತ್ ಅವರು ಮದುವೆ ಮತ್ತು ಲಿವ್-ಇನ್ ಸಂಬಂಧಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮದುವೆಯಾಗಲು ತಮಗೆ ಇನ್ನೂ ಸಮಯವಿದೆ ಎಂದು ಹೇಳಿದ ಅವರು, ಲಿವ್-ಇನ್ ಸಂಬಂಧಗಳು ಮಹಿಳೆಯರಿಗೆ ಅಪಾಯಕಾರಿ ಎಂದು ನಂಬುತ್ತಾರೆ ಎಂದು ಹೇಳಿದ್ದಾರೆ.

ಈಗ ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಪ್ರವಾಹ ಸಂತ್ರಸ್ತೆಯ ಪ್ರಶ್ನೆಗೆ ಮಳೆಯಲ್ಲೂ ಬೆವರಿದ ಕಂಗನಾ ರಣಾವತ್

ಭಾರೀ ಪ್ರವಾಹಕ್ಕೆ ಒಳಗಾಗಿರುವ ಹಿಮಾಚಲ ಪ್ರದೇಶದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಇಲ್ಲಿನ ಮಂಡಿ ಸಂಸದೆಯಾಗಿರುವ ಕಂಗನಾ ರಣಾವತ್ ಇಷ್ಟು ದಿನಗಳಾದ ನಂತರ ಇಂದು ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಮಂಡಿಗೆ ಭೇಟಿ ನೀಡುವಲ್ಲಿ ವಿಳಂಬವಾಗಿದ್ದಕ್ಕಾಗಿ ಕಾಂಗ್ರೆಸ್ ಕೂಡ ಬಿಜೆಪಿ ಸಂಸದೆ ಕಂಗನಾರನ್ನು ಟೀಕಿಸಿತ್ತು. ಅದಕ್ಕೆ ಕಂಗನಾ ಕೂಡ ಉತ್ತರ ನೀಡಿದ್ದರು.

ಪ್ರವಾಹಪೀಡಿತರಿಗೆ ಪರಿಹಾರ ನೀಡಲು ನಾನು ಸಚಿವೆಯಲ್ಲ; ವಿವಾದಕ್ಕೀಡಾದ ಸಂಸದೆ ಕಂಗನಾ ರಣಾವತ್

ಹಿಮಾಚಲ ಪ್ರದೇಶದಲ್ಲಿ ಕಳೆದ 2 ವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ಪ್ರವಾಹದಿಂದ ಜನರು ತತ್ತರಿಸಿದ್ದಾರೆ. ಭೂಕುಸಿತ, ಪ್ರವಾಹದಿಂದ ಹಿಮಾಚಲದ ಜನರು ಕಂಗಾಲಾಗಿದ್ದಾರೆ. ಆದರೆ, ಇಲ್ಲಿನ ಮಂಡಿ ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರಣಾವತ್ ಇಲ್ಲಿಯವರೆಗೂ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಭಾನುವಾರ ಅವರು ಮಂಡಿಗೆ ಭೇಟಿ ನೀಡಿದಾಗ ಪ್ರವಾಹಪೀಡಿತರಿಗೆ ಪರಿಹಾರ ನೀಡುವ ಕುರಿತು ಪ್ರಶ್ನಿಸಿದ್ದಾಗ ಉಡಾಫೆಯ ಉತ್ತರ ನೀಡುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಕಂಗನಾಗೆ ಇರುವ ಕೆಟ್ಟ ಬುದ್ಧಿಯನ್ನು ಎಳೆಎಳೆಯಾಗಿ ವಿವರಿಸಿದ ನಟಿ ಕುನಿಕಾ

ನಟಿ ಕಂಗನಾ ರಣಾವತ್ ಅವರನ್ನು ಅನೇಕರು ವಿರೋಧಿಸುತ್ತಾರೆ. ಅಂಥವರ ಪೈಕಿ ಕುನಿಕಾ ಸದಾನಂದ್ ಕೂಡ ಇದ್ದಾರೆ. ಕಂಗನಾ ಅವರನ್ನು ಕಂಡರೆ ತಮಗೆ ಯಾಕೆ ಆಗುವುದಿಲ್ಲ ಎಂದು ಕುನಿಕಾ ತಿಳಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಕುನಿಕಾ ಸದಾನಂದ್ ಅವರು ಕಂಗನಾ ಬಗ್ಗೆ ಹಲವು ಟೀಕೆಗಳನ್ನು ಮಾಡಿದ್ದಾರೆ.

‘ವಯಸ್ಸಾಗುವುದು ಕೂಡ ಒಂದು ಸಂತೋಷ’; ಕಂಗನಾಗೆ ಇಲ್ಲ ಬಿಳಿ ಕೂದಲ ಬಗ್ಗೆ ಚಿಂತೆ

Kangana Ranaut: ಕಂಗನಾ ರಣಾವತ್ ತಮ್ಮ ವಯಸ್ಸು ಮತ್ತು ಬಿಳಿ ಕೂದಲಿನ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರೆ. ವಯಸ್ಸಾಗುವುದು ಸಂತೋಷ ಎಂದು ಹೇಳಿದ್ದಾರೆ. ಬಾಲಿವುಡ್‌ನಲ್ಲಿ ವಯಸ್ಸಾದ ನಟಿಯರಿಗೆ ಅವಕಾಶ ಕಡಿಮೆ ಎಂಬುದು ಗೊತ್ತು. ಆದರೆ, ರಾಜಕೀಯದಲ್ಲಿ ವಯಸ್ಸು ಗೌರವಕ್ಕೆ ಪಾತ್ರ ಎಂದು ಅವರು ನಂಬುತ್ತಾರೆ.

‘ಪಾಕಿಗಳು ರಕ್ತಸಿಕ್ತ ಜಿರಳೆಗಳು, ಭೂಪಟದಿಂದಲೇ ಇಲ್ಲದಂತೆ ಮಾಡಬೇಕು’; ಕಂಗನಾ ರಣಾವತ್

ಕಂಗನಾ ರಣಾವತ್ ಅವರು ಇತ್ತೀಚಿನ ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನವನ್ನು ಭಯೋತ್ಪಾದಕರ ಊರು ಎಂದು ಕರೆದ ಅವರು, ಅದನ್ನು ವಿಶ್ವ ನಕ್ಷೆಯಿಂದ ಅಳಿಸಿಹಾಕಬೇಕೆಂದು ಆಗ್ರಹಿಸಿದ್ದಾರೆ. ಭಾರತದ S-400 ಮಿಸೈಲ್ ರಕ್ಷಣಾ ವ್ಯವಸ್ಥೆಯನ್ನು ಶ್ಲಾಘಿಸಿ, ಪಾಕಿಸ್ತಾನದ ಡ್ರೋನ್ ದಾಳಿಗಳನ್ನು ಹತ್ತಿಕ್ಕಿದ್ದಕ್ಕೆ ಅಭಿನಂದಿಸಿದ್ದಾರೆ.

ಕಂಗನಾ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ ಬಂದಿದ್ದು ನಿಜವೇ? ನಟಿಯ ಕಳ್ಳಾಟ ಬಯಲು

ನಟಿ ಕಂಗನಾ ರಣಾವತ್ ಅವರ ಮನೆಗೆ 1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದಿದೆ ಎಂಬುದನ್ನು ತಿಳಿದು ಜನರಿಗೆ ಅಚ್ಚರಿ ಆಗಿತ್ತು. ಆದರೆ ಅದಕ್ಕೆ ಕಾರಣ ಏನು ಎಂಬುದು ಈಗ ಬಹಿರಂಗ ಆಗಿದೆ. ಹಳೇ ಬಾಕಿ ಪಾವತಿ ಮಾಡದೇ ಇರುವ ಕಾರಣದಿಂದ ಕಂಗನಾ ಮನೆಗೆ ಲಕ್ಷಾಂತರ ರೂಪಾಯಿ ಬಿಲ್ ಬಂದಿದೆ. ಆ ಬಗ್ಗೆ ಇಲ್ಲಿದೆ ವಿವರ..

ಕಂಗನಾ ಮನೆಗೆ ಬಂತು 1 ಲಕ್ಷ ರೂಪಾಯಿ ಕರೆಂಟ್ ಬಿಲ್; ಶಾಕ್ ಆದ ನಟಿ

ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಕಂಗನಾ ರಣಾವತ್ ಅವರ ಮನೆ ಇದೆ. ಅಲ್ಲಿ ಅವರು ಸದ್ಯಕ್ಕೆ ವಾಸಿಸುತ್ತಿಲ್ಲ. ಆದರೂ ಆ ಮನೆಗೆ ಬರೋಬ್ಬರಿ ಒಂದು ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದಿದೆ ಎಂಬ ವಿಷಯವನ್ನು ಕಂಗನಾ ಬಹಿರಂಗಪಡಿಸಿದ್ದಾರೆ. ಈ ಮೂಲಕ ಅವರು ರಾಜ್ಯ ಸರ್ಕಾರದ ಕೆಲಸವನ್ನು ಟೀಕಿಸಿದ್ದಾರೆ.

ಡಿಕೆಶಿ ನಟ್ಟು ಬೋಲ್ಟು ಹೇಳಿಕೆ: ಕರ್ನಾಟಕಕ್ಕೆ ಬಂದು ತಿರುಗೇಟು ನೀಡಿದ ಕಂಗನಾ ರಣಾವತ್

ಚಿತ್ರರಂಗದ ಬಗ್ಗೆ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದನ್ನು ನಟಿ ಕಂಗನಾ ರಣಾವತ್ ಕೂಡ ಖಂಡಿಸಿದ್ದಾರೆ. ಚಿತ್ರರಂಗದವರ ನಟ್ಟು ಬೋಲ್ಟು ಟೈಟ್ ಮಾಡುವುದು ತಮಗೆ ಗೊತ್ತು ಎಂದು ಡಿಕೆಶಿ ಹೇಳಿದ್ದರು. ಅದನ್ನು ಅನೇಕ ಸೆಲೆಬ್ರಿಟಿಗಳು ವಿರೋಧಿಸಿದ್ದಾರೆ. ಈಗ ಬಾಲಿವುಡ್ ನಟಿ ಕಂಗನಾ ಕೂಡ ಆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

ಕಾಪು ಮಾರಿಗುಡಿ ದೇವಸ್ಥಾನಕ್ಕೆ ಕಂಗನಾ ಭೇಟಿ; ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗಿ

ಕಾಪು ಕ್ಷೇತ್ರದಲ್ಲಿ ಇರುವ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಬಾಲಿವುಡ್​ ನಟಿ, ಸಂಸದೆ ಕಂಗನಾ ರಣಾವತ್ ಅವರು ಭೇಟಿ ನೀಡಿದ್ದಾರೆ. ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಕಂಗನಾ ಭಾಗಿ ಆಗಿದ್ದಾರೆ. ಮಂಡಿ ಕ್ಷೇತ್ರದ ಸಂಸದೆ ಆಗಿರುವ ಕಂಗನಾ ರಣಾವತ್ ಅವರು ಮಾರಿಯಮ್ಮನ ದರ್ಶನದ ಪಡೆದ ನಂತರ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡರು.