Kangana Ranaut
ಕಂಗನಾ ರಣಾವತ್ ಅವರರು ನಟನೆಯಿಂದ ಹಾಗೂ ವಿವಾದಗಳಿಂದ ಸದಾ ಸುದ್ದಿ ಆಗುವ ನಟಿ. ಪರದೆಯ ಮೇಲೆ ಮತ್ತು ಪರದೆಯ ಹೊರಗೆ ಸದಾ ಚರ್ಚೆಯಲ್ಲಿ ಇರುತ್ತಾರೆ. ಅವರು ದಿಟ್ಟತನಕ್ಕೆ ಹೆಸರುವಾಸಿಯಾಗಿದ್ದಾರೆ. 1987ರ ಮಾರ್ಚ್ 23ರಂದು ಹಿಮಾಚಲ ಪ್ರದೇಶದಲ್ಲಿ ಕಂಗನಾ ಜನಿಸಿದರು. ಅವರು 2006ರಲ್ಲಿ ‘ಗ್ಯಾಂಗ್ಸ್ಟರ್’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು. ಮೊದಲ ಸಿನಿಮಾದಲ್ಲೇ ಗೆಲುವು ಸಿಕ್ಕಿತು. ಈ ಚಿತ್ರಕ್ಕಾಗಿ ಅವರಿಗೆ ಫಿಲ್ಮ್ಫೇರ್ ಪ್ರಶಸ್ತಿ ಸಿಕ್ಕಿತು. ಕಂಗನಾ ಅವರು ‘ಕ್ವೀನ್’, ‘ತನು ವೆಡ್ಸ್ ಮನು’, ‘ಫ್ಯಾಶನ್’ ಅಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕಂಗನಾ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳತ್ತಾರೆ. ಅವರು ನಿರ್ದೇಶಕಿ ಹಾಗೂ ನಿರ್ಮಾಪಕಿ ಕೂಡ ಹೌದು. ಸಾಕಷ್ಟು ವಿವಾದಗಳನ್ನು ಕೂಡ ಕಂಗನಾ ಮಾಡಿಕೊಂಡಿದ್ದಾರೆ.
26/11 ಮುಂಬೈ ಉಗ್ರರ ದಾಳಿ ನಡೆದಾಗ ಪಾರ್ಟಿ ಮಾಡುತ್ತಿದ್ದ ನಟಿ ಕಂಗನಾ ರಣಾವತ್
‘26/11 ಉಗ್ರರ ದಾಳಿ ನಡೆದ ದಿನ ನೀವು ಎಲ್ಲಿದ್ರಿ?’ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಕಂಗನಾ ರಣಾವತ್ ಉತ್ತರಿಸಿದ್ದಾರೆ. ಮುಂಬೈನಲ್ಲಿ ನಡೆದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಅವರು ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಉಗ್ರರ ದಾಳಿಯನ್ನು ಆಧರಿಸಿದ ಸಿನಿಮಾದಲ್ಲಿ ಕಂಗನಾ ಅವರು ನಟಿಸಿದ್ದು, ಈಗ ಆ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.
- Madan Kumar
- Updated on: Jun 3, 2026
- 10:37 pm
ಮತ್ತೊಂದು ರಾಷ್ಟ್ರ ಪ್ರಶಸ್ತಿ ಗ್ಯಾರಂಟಿ; ಕಂಗನಾ ಹೊಸ ಸಿನಿಮಾ ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ
26/11 ಮುಂಬೈ ದಾಳಿಯ ಘಟನೆಯನ್ನು ಆಧರಿಸಿ ‘ಭಾರತ್ ಭಾಗ್ಯ ವಿಧಾತ’ ಸಿನಿಮಾ ಮಾಡಲಾಗಿದೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ. ನಟಿ ಕಂಗನಾ ರಣಾವತ್ ಅವರು ಈ ಸಿನಿಮಾದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಿಂದ ಕಂಗನಾ ಅವರಿಗೆ ಮತ್ತೊಂದು ರಾಷ್ಟ್ರ ಪ್ರಶಸ್ತಿ ಸಿಗಲಿದೆ ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ.
- Madan Kumar
- Updated on: Jun 2, 2026
- 8:50 pm
ಕಂಗನಾ ರಣಾವತ್ ನಟನೆಯ ‘ಭಾರತ್ ಭಾಗ್ಯ ವಿಧಾತಾ’ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ
ಕಳೆದ ಕೆಲವು ವರ್ಷಗಳಿಂದ ನಟಿ ಕಂಗನಾ ರಣಾವತ್ ಅವರಿಗೆ ಬಾಲಿವುಡ್ನಲ್ಲಿ ಸರಿಯಾದ ಯಶಸ್ಸು ಸಿಕ್ಕಿಲ್ಲ. ಅವರು ನಟಿಸಿದ್ದ ‘ಎಮರ್ಜೆನ್ಸಿ’, ‘ತೇಜಸ್’, ‘ಚಂದ್ರಮುಖಿ 2’, ‘ಧಾಕಡ್’ ಮತ್ತು ‘ತಲೈವಿ’ ಸಿನಿಮಾಗಳು ಸೋತವು. ಈಗ ಅವರ ಹೊಸ ಸಿನಿಮಾ ‘ಭಾರತ್ ಭಾಗ್ಯ ವಿಧಾತಾ’ ಬಿಡುಗಡೆಗೆ ಸಿದ್ಧವಾಗಿದೆ.
- Madan Kumar
- Updated on: May 28, 2026
- 5:11 pm
‘ನಾನು ತಾಳಿ ಧರಿಸಿದ್ದು ದೊಡ್ಡ ವಿಷಯ ಅಲ್ಲ’; ಸೀಕ್ರೆಟ್ ಮದುವೆ ವದಂತಿಗೆ ಕಂಗನಾ ಸ್ಪಷ್ಟನೆ
ನಟಿ ಕಂಗನಾ ರಣಾವತ್ ಅವರ ಕೊರಳಿನಲ್ಲಿ ತಾಳಿ ನೋಡಿದ ಎಲ್ಲರಿಗೂ ಅಚ್ಚರಿ ಆಗಿತ್ತು. ಆ ಬಗ್ಗೆ ಸ್ವತಃ ಕಂಗನಾ ಮೌನ ಮುರಿದಿದ್ದಾರೆ. ‘ಇದು ದೊಡ್ಡ ವಿಷಯವೇ ಅಲ್ಲ’ ಎಂದು ಅವರು ಹೇಳಿದ್ದಾರೆ. ಮಂಗಳಸೂತ್ರ ಧರಿಸಿದ್ದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ.
- Madan Kumar
- Updated on: May 22, 2026
- 5:06 pm
ರಹಸ್ಯವಾಗಿ ಮದುವೆಯಾದರೇ ನಟಿ ಕಂಗನಾ ರಣಾವತ್? ವೈರಲ್ ವಿಡಿಯೋದ ಅಸಲಿಯತ್ತೇನು?
ಕಂಗನಾ ರಣಾವತ್ ಅವರ 'ಮದುಮಗಳ' ಲುಕ್ ವೈರಲ್ ಆಗಿದ್ದು, ರಹಸ್ಯ ವಿವಾಹದ ವದಂತಿ ಹಬ್ಬಿತ್ತು. ಆದರೆ, ಈ ವಿಡಿಯೋ 'ಕ್ವೀನ್ 2' ಚಿತ್ರೀಕರಣದ ದೃಶ್ಯವಾಗಿದೆ. 'ಕ್ವೀನ್ ಫಾರೆವರ್' ತಾತ್ಕಾಲಿಕ ಹೆಸರಿನ ಈ ಚಿತ್ರದ ಜೊತೆ, 2008ರ ಮುಂಬೈ ದಾಳಿಯ ಆಧಾರಿತ 'ಭಾರತ್ ಭಾಗ್ಯ ವಿಧಾತಾ' ಚಿತ್ರವೂ ಜೂನ್ನಲ್ಲಿ ತೆರೆಕಾಣಲಿದೆ.
- Shreelaxmi H
- Updated on: May 22, 2026
- 8:15 am
ರಾಹುಲ್ ಗಾಂಧಿಯ ಭಾಷಣವೇ ದೊಡ್ಡ ತಲೆನೋವು; ಕಂಗನಾ ರಣಾವತ್ ಟೀಕೆ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ "ಜಾದೂ" ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ಕಂಗನಾ ರಣಾವತ್ ರಾಹುಲ್ ಗಾಂಧಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ದೊಡ್ಡ "ತಲೆನೋವು" ಎಂದು ಹೇಳಿದ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಬಾಲ್ಯದಲ್ಲಿ ಕಂಡ ಮ್ಯಾಜಿಕ್ ಪ್ರದರ್ಶನದಿಂದಾಗಿ ಅವರು ಬಾಲ್ಯದ ಆಘಾತವನ್ನು ಅನುಭವಿಸುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
- Sushma Chakre
- Updated on: Apr 17, 2026
- 5:22 pm
8 ಗಂಟೆ ಕೆಲಸದ ಶಿಫ್ಟ್ ವಿವಾದ: ದೀಪಿಕಾ ಪಡುಕೋಣೆ ಪರ ನಿಂತ ಕಂಗನಾ ರಣಾವತ್
ನಟಿ ಕಂಗನಾ ರಣಾವತ್ ಅವರು ಸಾಮಾನ್ಯವಾಗಿ ಯಾರನ್ನೂ ಹೊಗಳುವುದಿಲ್ಲ. ಆದರೆ ಈಗ ಅವರು ದೀಪಿಕಾ ಪರವಾಗಿ ನಿಂತಿದ್ದಾರೆ. 8 ಗಂಟೆ ಕೆಲಸದ ಅವಧಿಗೆ ಸಂಬಂಧಿಸಿದಂತೆ ಶುರುವಾದ ವಿವಾದದ ಬಗ್ಗೆ ಕಂಗನಾ ರಣಾವತ್ ಅವರು ತಮ್ಮ ನಿಲುವು ಏನು ಎಂಬುದನ್ನು ತಿಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..
- Madan Kumar
- Updated on: Apr 16, 2026
- 9:00 pm
ಕಂಗನಾ ಮಾಡಿದ ‘ಎಮರ್ಜೆನ್ಸಿ’ ಸಿನಿಮಾ 2 ದಿನ ಓಡಲಿಲ್ಲ: ಖಾರವಾಗಿ ಹೇಳಿದ ‘ಧುರಂಧರ್ 2’ ನಟ
‘ಧುರಂಧರ್ 2’ ಸಿನಿಮಾದ ನಟ ರಾಕೇಶ್ ಬೇಡಿ ಅವರು ‘ಎಮರ್ಜೆನ್ಸಿ’ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಕಂಗನಾ ರಣಾವತ್ ಅವರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ಆ ಸಿನಿಮಾ ಅಟ್ಟರ್ ಫ್ಲಾಪ್ ಆಗಿತ್ತು. ಈಗ ರಾಕೇಶ್ ಬೇಡಿ ಅವರು ಆ ಚಿತ್ರದ ಬಗ್ಗೆ ಮಾತನಾಡಲು ಕಾರಣ ಕೂಡ ಇದೆ. ಆ ಕುರಿತು ಮಾಹಿತಿ ಇಲ್ಲಿದೆ.
- Madan Kumar
- Updated on: Mar 20, 2026
- 5:12 pm
ಪ್ರೇಮ್ ಬರೆದ ‘ಕೆಡಿ’ ಸಿನಿಮಾದ ಹಾಡಿನ ಅಶ್ಲೀಲತೆಗೆ ಕಂಗನಾ ರಣಾವತ್ ಆಕ್ರೋಶ
‘ಕೆಡಿ’ ಚಿತ್ರದ ನಿರ್ದೇಶಕ ಪ್ರೇಮ್ ಬರೆದ ಅಶ್ಲೀಲ ಹಾಡು ರಾಷ್ಟ್ರಮಟ್ಟದಲ್ಲಿ ಕುಖ್ಯಾತಿ ಪಡೆದಿದೆ. ನಟಿ, ಸಂಸದೆ ಕಂಗನಾ ರಣಾವತ್ ಕೂಡ ಈ ಹಾಡಿನ ಅಸಭ್ಯ ಸಾಹಿತ್ಯವನ್ನು ಖಂಡಿಸಿದ್ದಾರೆ. ಇಂಥ ಹಾಡುಗಳ ಬಗ್ಗೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುವ ಅಗತ್ಯ ಇದೆ ಎಂದು ಅವರು ಹೇಳಿದ್ದಾರೆ.
- Madan Kumar
- Updated on: Mar 17, 2026
- 10:47 pm
ಎ.ಆರ್. ರೆಹಮಾನ್ ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿ: ಕಂಗನಾ ಆರೋಪ
ಧರ್ಮದ ಕಾರಣದಿಂದ ತಮಗೆ ಹಿಂದಿ ಚಿತ್ರರಂಗದಲ್ಲಿ ಅವಕಾಶ ಕಡಿಮೆ ಆಗಿದೆ ಎಂದು ಎ.ಆರ್. ರೆಹಮಾನ್ ಹೇಳಿದ್ದರು. ಅಲ್ಲದೇ ‘ಛಾವ’ ಸಿನಿಮಾದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಅದಕ್ಕೆ ಕಂಗನಾ ರಣಾವತ್ ತಿರುಗೇಟು ನೀಡಿದ್ದಾರೆ. ಎ.ಆರ್. ರೆಹಮಾನ್ ಅವರನ್ನು ಪೂರ್ವಾಗ್ರಹ ಪೀಡಿತ, ದ್ವೇಷಪೂರಿತ ವ್ಯಕ್ತಿ ಎಂದು ಕಂಗನಾ ಅವರು ಹೇಳಿದ್ದಾರೆ.
- Madan Kumar
- Updated on: Jan 18, 2026
- 10:29 am
‘ನನಗೆ ಮದುವೆ ಆಗಿಲ್ಲ ಅಂತ ಯಾರು ಹೇಳಿದ್ದು?’; ಕಂಗನಾ ರಣಾವತ್
Kangana Ranaut Marriage: ಇತ್ತೀಚಿನ ಸಂದರ್ಶನದಲ್ಲಿ, ನಟಿ ಕಂಗನಾ ರನೌತ್ ಅವರು ಮದುವೆ ಮತ್ತು ಲಿವ್-ಇನ್ ಸಂಬಂಧಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಮದುವೆಯಾಗಲು ತಮಗೆ ಇನ್ನೂ ಸಮಯವಿದೆ ಎಂದು ಹೇಳಿದ ಅವರು, ಲಿವ್-ಇನ್ ಸಂಬಂಧಗಳು ಮಹಿಳೆಯರಿಗೆ ಅಪಾಯಕಾರಿ ಎಂದು ನಂಬುತ್ತಾರೆ ಎಂದು ಹೇಳಿದ್ದಾರೆ.
- Shreelaxmi H
- Updated on: Aug 16, 2025
- 10:03 am
ಈಗ ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಪ್ರವಾಹ ಸಂತ್ರಸ್ತೆಯ ಪ್ರಶ್ನೆಗೆ ಮಳೆಯಲ್ಲೂ ಬೆವರಿದ ಕಂಗನಾ ರಣಾವತ್
ಭಾರೀ ಪ್ರವಾಹಕ್ಕೆ ಒಳಗಾಗಿರುವ ಹಿಮಾಚಲ ಪ್ರದೇಶದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಇಲ್ಲಿನ ಮಂಡಿ ಸಂಸದೆಯಾಗಿರುವ ಕಂಗನಾ ರಣಾವತ್ ಇಷ್ಟು ದಿನಗಳಾದ ನಂತರ ಇಂದು ತಮ್ಮ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಮಂಡಿಗೆ ಭೇಟಿ ನೀಡುವಲ್ಲಿ ವಿಳಂಬವಾಗಿದ್ದಕ್ಕಾಗಿ ಕಾಂಗ್ರೆಸ್ ಕೂಡ ಬಿಜೆಪಿ ಸಂಸದೆ ಕಂಗನಾರನ್ನು ಟೀಕಿಸಿತ್ತು. ಅದಕ್ಕೆ ಕಂಗನಾ ಕೂಡ ಉತ್ತರ ನೀಡಿದ್ದರು.
- Sushma Chakre
- Updated on: Jul 7, 2025
- 8:55 pm