AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut

Kangana Ranaut

ಕಂಗನಾ ರಣಾವತ್ ಅವರರು ನಟನೆಯಿಂದ ಹಾಗೂ ವಿವಾದಗಳಿಂದ ಸದಾ ಸುದ್ದಿ ಆಗುವ ನಟಿ. ಪರದೆಯ ಮೇಲೆ ಮತ್ತು ಪರದೆಯ ಹೊರಗೆ ಸದಾ ಚರ್ಚೆಯಲ್ಲಿ ಇರುತ್ತಾರೆ. ಅವರು ದಿಟ್ಟತನಕ್ಕೆ ಹೆಸರುವಾಸಿಯಾಗಿದ್ದಾರೆ. 1987ರ ಮಾರ್ಚ್ 23ರಂದು ಹಿಮಾಚಲ ಪ್ರದೇಶದಲ್ಲಿ ಕಂಗನಾ ಜನಿಸಿದರು. ಅವರು 2006ರಲ್ಲಿ ‘ಗ್ಯಾಂಗ್‌ಸ್ಟರ್’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದರು. ಮೊದಲ ಸಿನಿಮಾದಲ್ಲೇ ಗೆಲುವು ಸಿಕ್ಕಿತು. ಈ ಚಿತ್ರಕ್ಕಾಗಿ ಅವರಿಗೆ ಫಿಲ್ಮ್‌ಫೇರ್ ಪ್ರಶಸ್ತಿ ಸಿಕ್ಕಿತು. ಕಂಗನಾ ಅವರು ‘ಕ್ವೀನ್’, ‘ತನು ವೆಡ್ಸ್ ಮನು’, ‘ಫ್ಯಾಶನ್’ ಅಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಕಂಗನಾ ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹೇಳಿಕೊಳ್ಳತ್ತಾರೆ. ಅವರು ನಿರ್ದೇಶಕಿ ಹಾಗೂ ನಿರ್ಮಾಪಕಿ ಕೂಡ ಹೌದು. ಸಾಕಷ್ಟು ವಿವಾದಗಳನ್ನು ಕೂಡ ಕಂಗನಾ ಮಾಡಿಕೊಂಡಿದ್ದಾರೆ.

ಇನ್ನೂ ಹೆಚ್ಚು ಓದಿ

ನಟಿಯರ ಚಾರಿತ್ರ್ಯ ವಧೆ ವಿರುದ್ಧ ದನಿ ಎತ್ತಿದ ಕಂಗನಾ ರಣಾವತ್: ತ್ರಿಷಾ ಕೃಷ್ಣನ್ ಉದಾಹರಣೆ

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಹಾಗೂ ನಟಿ ತ್ರಿಷಾ ಕೃಷ್ಣನ್ ಅವರು ಆಪ್ತವಾಗಿದ್ದಾರೆ. ಆ ಕಾರಣಕ್ಕೆ ತ್ರಿಷಾ ಅವರನ್ನು ಆಗಾಗ ಟ್ರೋಲ್ ಮಾಡಲಾಗುತ್ತದೆ. ಇದನ್ನು ನಟಿ ಕಂಗನಾ ರಣಾವತ್ ಅವರು ಖಂಡಿಸಿದ್ದಾರೆ. ನಟಿಯರನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

‘ಹನುಮಾನ್ ಅಂಶ್’ ಮೆಚ್ಚಿದ ಕಂಗನಾ: ಆದರೆ ಚಿತ್ರತಂಡಕ್ಕೆ ಪ್ರೇಮಾನಂದ್ ಮಹಾರಾಜ್ ಎಚ್ಚರಿಕೆ

ಹಲವು ಕಡೆಗಳಲ್ಲಿ ‘ಹನುಮಾನ್ ಅಂಶ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಭಕ್ತಿಪ್ರಧಾನ ಕಥೆ ಇರುವ ಈ ಸಿನಿಮಾಗೆ ಜನರು ಫಿದಾ ಆಗಿದ್ದಾರೆ. ನಟಿ ಕಂಗನಾ ರಣಾವತ್ ಅವರು ಈ ಸಿನಿಮಾವನ್ನು ಒಂದು ಸತ್ಸಂಗ ಎಂದು ಹೊಗಳಿದ್ದಾರೆ. ಈ ನಡುವೆ ಪ್ರೇಮಾನಂದ್ ಮಹಾರಾಜ್ ಅವರು ಚಿತ್ರತಂಡಕ್ಕೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಕೃತಿ ಸನನ್ ಜಾಹೀರಾತು ವಿವಾದ: ಸಿಬ್ಬಂದಿ ಸುರಕ್ಷತೆಗಾಗಿ ವಿಡಿಯೋ ಹಿಂಪಡೆದ ಕಂಪನಿ

ನಟಿ ಕೃತಿ ಸನನ್ ಅಭಿನಯಿಸಿದ್ದ ಹೊಸ ಜಾಹೀರಾತು ಸಖತ್ ವಿವಾದಕ್ಕೆ ಕಾರಣವಾದ ಬಳಿಕ ಅದನ್ನು ತೆಗೆದುಹಾಕಲಾಯಿತು. ಆ ನಿರ್ಧಾರಕ್ಕೆ ಅಸಲಿ ಕಾರಣ ಏನು ಎಂಬುದನ್ನು ಆ ಸಂಸ್ಥೆಯ ಸಂಸ್ಥಾಪಕರು ತಿಳಿಸಿದ್ದಾರೆ. ವಿವಾದ ಹೆಚ್ಚಾದ ಬಳಿಕ ತಮ್ಮ ಸಿಬ್ಬಂದಿಗೆ ಅಭದ್ರತೆಯ ವಾತಾವರಣ ಸೃಷ್ಟಿ ಆಗಿತ್ತು ಎಂದು ಅವರು ಹೇಳಿದ್ದಾರೆ.

ಕೃತಿ ಸನನ್ ಮಾಡಿದರೆ ತಪ್ಪು, ಕಂಗನಾ ಮಾಡಿದರೆ ಸರಿಯೇ? ನೆಟ್ಟಿಗರ ಪ್ರಶ್ನೆ

ನಟಿ ಕಂಗನಾ ರಣಾವತ್ ಅವರು ತಮಗೆ ಸಂಬಂಧವೇ ಇಲ್ಲದ ವಿಚಾರಗಳಿಗೆ ತಲೆ ಹಾಕುತ್ತಾರೆ. ಇದರಿಂದ ಅವರು ಟ್ರೋಲ್ ಆಗುತ್ತಾರೆ. ಇತ್ತೀಚೆಗೆ ನಟಿ ಕೃತಿ ಸನನ್ ಅವರ ಜಾಹೀರಾತಿಗೆ ವಿರೋಧ ವ್ಯಕ್ತವಾಗಿತ್ತು. ಆ ಜಾಹೀರಾತನ್ನು ಕಂಗನಾ ಕೂಡ ಖಂಡಿಸಿದ್ದರು. ಅದರ ಬೆನ್ನಲ್ಲೇ ಕಂಗನಾ ಅವರ ಹಳೇ ವಿಡಿಯೋಗಳನ್ನು ವೈರಲ್ ಮಾಡಲಾಗುತ್ತಿದೆ.

‘ಬಿಕಿನಿ, ಒಳಉಡುಪು ಧರಿಸಿ ಸಹೋದರನಿಗೆ ರಾಖಿ ಕಟ್ಟುತ್ತಾರಾ?’: ಕೃತಿ ಸನನ್​ ವಿರುದ್ಧ ಕಂಗನಾ ಗರಂ

ಜಾಹೀರಾತಿನಲ್ಲಿ ಕೃತಿ ಸನನ್ ಅವರು ಧರಿಸಿದ ಬಟ್ಟೆ ಬಗ್ಗೆ ಟೀಕೆ ವ್ಯಕ್ತವಾಗಿದೆ. ಸಹೋದರನಿಗೆ ರಾಖಿ ಕಟ್ಟುವಾಗ ಗ್ಲಾಮರಸ್ ಬಟ್ಟೆ ಧರಿಸಿದ್ದಕ್ಕೆ ನೆಟ್ಟಿಗರು ಕಿಡಿಕಾರುತ್ತಿದ್ದಾರೆ. ನಟಿ ಕಂಗನಾ ರಣಾವತ್ ಕೂಡ ಈ ಬಗ್ಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಅದಕ್ಕೆ ಕೃತಿ ಸನನ್ ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬ ಕೌತುಕ ಮೂಡಿದೆ.

‘ನನ್ನ ಬೆಡ್‌ರೂಮ್ ಬಗ್ಗೆ ಹಗಲುಗನಸು ಕಾಣಬೇಡಿ’: ಬಾಬಾ ರಾಮ್‌ದೇವ್‌ಗೆ ಕಂಗನಾ ರಣಾವತ್ ತಿರುಗೇಟು

ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಹಾಗೂ ಯೋಗ ಗುರು ಬಾಬಾ ರಾಮ್​ದೇವ್ ನಡುವೆ ಕಿರಿಕ್ ಶುರುವಾಗಿದೆ. ಜೆನ್ ಜಿ ಬಗ್ಗೆ ಕಂಗನಾ ನೀಡಿದ್ದ ಹೇಳಿಕೆಯನ್ನು ಬಾಬಾ ರಾಮ್​ದೇವ್ ತೀವ್ರವಾಗಿ ಖಂಡಿಸಿದ್ದಾರೆ. ಅದರಿಂದ ಗರಂ ಆಗಿರುವ ಕಂಗನಾ ಅವರು ಖಾರದ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಜಂತರ್ ಮಂತರ್ ಪ್ರತಿಭಟನೆಯಲ್ಲಿ ಇದ್ದ ಬಹುತೇಕರು ಜೆನ್ ಜಿ ಅಲ್ಲ’ ಎಂದ ಕಂಗನಾ ರಣಾವತ್

ದೆಹಲಿಯ ಜಂತರ್ ಮಂತರ್​ನಲ್ಲಿ ಪ್ರತಿಭಟನೆ ಮುಗಿದು ಬಹಳ ದಿನಗಳೇ ಕಳೆದಿವೆ. ನಟಿ ಕಂಗನಾ ರಣಾವತ್ ಅವರು ಆ ಪ್ರತಿಭಟನೆಯ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ನಡೆದ ಆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರ ಪೈಕಿ ಹೆಚ್ಚಿನವರು ಜೆನ್ ಜಿ ಅಲ್ಲ ಎಂದು ಕಂಗನಾ ಹೇಳಿದ್ದಾರೆ.

ಹಿರಿಯ ನಟನನ್ನು ನರಿಗೆ ಹೋಲಿಸಿದ ನಟಿ ಕಂಗನಾ ರನೌತ್

Kangana Ranaut controversy: ನಟಿ ಕಂಗನಾ ರನೌತ್ ಅವರು ಬಾಲಿವುಡ್​​ನ ಹಿರಿಯ ನಟರೋರ್ವರನ್ನು ನರಿಗೆ ಹೋಲಿಸಿದ್ದಾರೆ. ಕನ್ನಡದ ಸಿನಿಮಾಗಳಲ್ಲೂ ನಟಿಸಿರುವ ಬಾಲಿವುಡ್​​ನ ಹಿರಿಯ ನಟ ನಸಿರುದ್ಧೀನ್ ಶಾ ಅವರ ಹೇಳಿಕೆಯೊಂದನ್ನು ಕಂಗನಾ ತೀವ್ರವಾಗಿ ಖಂಡಿಸಿದ್ದು, ನಸೀರುದ್ಧೀನ್ ಅವರನ್ನು ನರಿಗೆ ಹೋಲಿಕೆ ಮಾಡಿದ್ದಾರೆ.

‘ಜನರೇಷನ್ ಗಟಾರ್’ ಎಂದಿದ್ದ ಕಂಗನಾ ಈಗ ಯೂ ಟರ್ನ್; ‘ಜೆನ್ ಜಿ ಭಾರತದ ಶಕ್ತಿ’ ಎಂದ ನಟಿ

ನಟಿ ಕಂಗನಾ ರಣಾವತ್ ಅವರು ಈ ಮೊದಲು ಜೆನ್ ಜಿ ಯುವಜನತೆ ಬಗ್ಗೆ ನೀಡಿದ್ದ ಹೇಳಿಕೆಗಳು ತೀವ್ರ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದವು. ಇದೀಗ ಕಂಗನಾ ರಣಾವತ್ ಅವರು ತಮ್ಮ ಹೇಳಿಕೆಯಿಂದ ಹಿಂದೆ ಸರಿದು, ಯುವ ಪೀಳಿಗೆಯನ್ನು ಕೊಂಡಾಡಿರುವುದು ಮತ್ತೆ ಸುದ್ದಿಯಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

ಉದಯನಿಧಿ ಸ್ಟಾಲಿನ್‌ ಬಂಧಿಸಿದ್ದು ಉತ್ತಮ ನಿರ್ಧಾರ: ಖಡಕ್ ಆಗಿ ಹೇಳಿದ ಕಂಗನಾ ರಣಾವತ್‌

ನಟಿ ತ್ರಿಷಾ ಕೃಷ್ಣನ್‌ ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್‌ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದನ್ನು ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಬೆಂಬಲಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ನಾನು ಸಂಘಿ ಆಗಬೇಕು’: ವಿಡಿಯೋ ನೋಡಿ ಟ್ರೋಲ್‌ ಮಾಡಿದವರಿಗೆ ಕಂಗನಾ ತಿರುಗೇಟು

ನಟಿ ಕಂಗನಾ ರಣಾವತ್ ಅವರು ಒಂದರ ಮೇಲೊಂದು ಹೇಳಿಕೆಗಳನ್ನು ನೀಡುತ್ತಾ ಸುದ್ದಿಯಾಗುತ್ತಿದ್ದಾರೆ. ವಿದ್ಯಾರ್ಥಿಗಳ ಪ್ರತಿಭಟನೆಯ ರೀತಿಯನ್ನು ಟೀಕಿಸುವುದರಿಂದ ಆರಂಭವಾದ ಅವರ ವಿವಾದ ಈಗ ಇನ್ನೊಂದು ಹಂತಕ್ಕೆ ಏರಿದೆ. ‘ನಾನು ಸಂಘಿ ಆಗಬೇಕು’ ಎಂದು ಕಂಗನಾ ರಣಾವತ್ ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಸೋನಾಕ್ಷಿ ಸಿನ್ಹಾ ವಿರುದ್ಧ ಕಿಡಿಕಾರಿದ ಕಂಗನಾ ರಣಾವತ್; ಖಾರದ ಮಾತುಗಳಲ್ಲಿ ಟೀಕೆ

ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ ನಟಿಯೊಬ್ಬರ ವಿರುದ್ಧ ಕಂಗನಾ ರಣಾವತ್ ಗರಂ ಆಗಿದ್ದಾರೆ. ಹೆಸರು ಹೇಳದೆಯೇ ಕಟುವಾಗಿ ಟೀಕೆ ಮಾಡಿದ್ದಾರೆ. ಆದರೆ ಅವರು ಟೀಕಿಸಿರುವುದು ಸೋನಾಕ್ಷಿ ಸಿನ್ಹಾ ಅವರನ್ನು ಎಂದು ನೆಟ್ಟಿಗರು ಊಹಿಸಿದ್ದಾರೆ. ಈ ಟೀಕೆಗೆ ಸೋನಾಕ್ಷಿ ಹೇಗೆ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬ ಕುತೂಹಲ ಸೃಷ್ಟಿ ಆಗಿದೆ.

ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಙಷ್ಟನೆ: ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಙಷ್ಟನೆ: ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ
ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಸಂಭ್ರಮ
ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಸಂಭ್ರಮ
ಟಿ ನರಸೀಪುರದಲ್ಲಿ ಪ್ರತಿಭಟನೆ ವೇಳೆ ಬಿಜೆಪಿ ಅಸಮಾಧಾನ ಸ್ಫೋಟ!
ಟಿ ನರಸೀಪುರದಲ್ಲಿ ಪ್ರತಿಭಟನೆ ವೇಳೆ ಬಿಜೆಪಿ ಅಸಮಾಧಾನ ಸ್ಫೋಟ!
ಮೈಸೂರಿನಲ್ಲಿ ಸಿದ್ದರಾಮಯ್ಯ ನೂತನ ಗೃಹಪ್ರವೇಶ: ಹೋಮ-ಹವನ, ಪೂಜೆ
ಮೈಸೂರಿನಲ್ಲಿ ಸಿದ್ದರಾಮಯ್ಯ ನೂತನ ಗೃಹಪ್ರವೇಶ: ಹೋಮ-ಹವನ, ಪೂಜೆ