AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Cinema

Kannada Cinema

1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.

ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್​ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್​ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.

ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.

ಇನ್ನೂ ಹೆಚ್ಚು ಓದಿ

‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾದಿಂದ ಬಿಡುಗಡೆ ಆಯ್ತು 2 ಭಾಷೆಯ ವಿಶೇಷ ಹಾಡು

‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಖ್ಯಾತಿಯ ನಟಿ ಮೋಕ್ಷಿತಾ ಪೈ, ಭರತ್ ಕುಮಾರ್, ರಿಯಾ ಸಚ್ ದೇವ್ ಅವರು ‘ರುಕ್ಮಿಣಿ ರಾಧಾಕೃಷ್ಣ’ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಈ ಸಿನಿಮಾದ ಹಾಡುಗಳು ‘ಲಹರಿ ಮ್ಯೂಸಿಕ್’ ಮೂಲಕ ಇತ್ತೀಚೆಗೆ ಬಿಡುಗಡೆ ಆಗಿವೆ.

‘ಲೈಫ್ ಟುಡೇ’ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ನೀಡಲಿರುವ ಹೊಸ ನಟ ಕಿರಣ್ ಆದಿತ್ಯ

ಆಗಸ್ಟ್ 6ರಂದು ಬಿಡುಗಡೆ ಆಗಲಿರುವ ‘ಲೈಫ್ ಟುಡೇ’ ಸಿನಿಮಾದಲ್ಲಿ ಕಿರಣ್ ಆದಿತ್ಯ ಮತ್ತು ಲೇಖಾ ಚಂದ್ರ ಅವರು ಜೋಡಿಯಾಗಿ ನಟಿಸಿದ್ದಾರೆ. ಕಾಂತ ಕನ್ನಲಿ ನಿರ್ದೇಶನ ಮಾಡಿರುವ ಈ ಸಿನಿಮಾದ ಟ್ರೇಲರ್ ಆಕರ್ಷಕವಾಗಿ ಮೂಡಿಬಂದಿದೆ. ತಬಲಾ ನಾಣಿ, ಕಾಕ್ರೋಚ್ ಸುಧಿ ಮುಂತಾದವರು ಕೂಡ ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ.

‘ರೇಜ್ ಆಫ್ ಕಂಬಳ’ ಹಾಡಿನಿಂದ ಕುತೂಹಲ ಹೆಚ್ಚಿಸಿದ ‘ಕರಾವಳಿ’ ಸಿನಿಮಾ ತಂಡ

ಗುರುದತ್ ಗಾಣಿಗ ನಿರ್ದೇಶನದ ‘ಕರಾವಳಿ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ. ಶೆಟ್ಟಿ ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ‘ವಿಕೆ ಫಿಲ್ಮ್ಸ್’ ಮತ್ತು ‘ಗಾಣಿಗ ಫಿಲ್ಮ್ಸ್‌’ ಜೊತೆಯಾಗಿ ಈ ಸಿನಿಮಾ ನಿರ್ಮಾಣ ಮಾಡಿವೆ. ಈ ಚಿತ್ರದಿಂದ ‘ರೇಜ್ ಆಫ್ ಕಂಬಳ’ ಹಾಡು ಬಿಡುಗಡೆ ಆಗಿದೆ.

‘ಹೆಗ್ಗಣ ಮುದ್ದು’ ನನ್ನ ಕೊನೇ ಸಿನಿಮಾ ಆಗಬಹುದು; ನಿರ್ಮಾಣದ ಬಗ್ಗೆ ಡಾಲಿ ಬೇಸರ

ಡಾಲಿ ಧನಂಜಯ ಅವರು ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ ತಮ್ಮ ನಿರ್ಮಾಣದಲ್ಲಿ ‘ಹೆಗ್ಗಣ ಮುದ್ದು’ ಕೊನೆಯ ಸಿನಿಮಾ ಆಗಬಹುದು ಎಂದು ಅವರು ಹೇಳಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ವಿವರಿಸಿದ್ದಾರೆ. ಚಿತ್ರರಂಗದಲ್ಲಿ ಇರುವ ನೆಗೆಟಿವ್ ಪ್ರಚಾರದ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್ ಹೀಗೆ ಹೇಳಿದ್ದೇಕೆ?

ನಟ ಡಾಲಿ ಧನಂಜಯ ಅವರು ನಟಿಸಿ, ನಿರ್ಮಾಣ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಬಿಡುಗಡೆ ಆಗಿದ್ದು, ಕೆಲವರು ನೆಗೆಟಿವ್ ಪ್ರಚಾರ ಮಾಡಿದ್ದಾರೆ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಧನಂಜಯ ಅವರು ಮಾತನಾಡಿದ್ದಾರೆ. ‘ಮುಂದಿನ ಸಿನಿಮಾಗಳನ್ನು ನಾವು ರಿಲೀಸ್ ಮಾಡುವಾಗ ಕೋರ್ಟ್ ಆರ್ಡರ್ ಇಟ್ಟುಕೊಳ್ಳಬೇಕಾಗುತ್ತದೆ’ ಎಂದು ಅವರು ಹೇಳಿದ್ದಾರೆ.

ಬಿಗ್ ಬಾಸ್ ಬೆಡಗಿ ಮೋಕ್ಷಿತಾ ಪೈ ಪಾಲಿಗೆ ರಾಧಾ ಪಾತ್ರ ಒಲಿದು ಬಂದಿದ್ದು ಹೇಗೆ?

‘ಪಾರು’ ಸೀರಿಯಲ್ ಮತ್ತು ‘ಬಿಗ್ ಬಾಸ್’ ರಿಯಾಲಿಟಿ ಶೋ ಖ್ಯಾತಿಯ ನಟಿ ಮೋಕ್ಷಿತಾ ಪೈ ಅವರು ‘ರುಕ್ಮಿಣಿ ರಾಧಾ ಕೃಷ್ಣ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ಅವರು ರಾಧಾ ಎಂಬ ಪಾತ್ರ ಮಾಡಿದ್ದಾರೆ. ಆ ಕುರಿತು ಅವರು ಟಿವಿ9 ಜೊತೆ ಮಾತನಾಡಿದ್ದಾರೆ.

ಗಮನ ಸೆಳೆದ ‘ಮ್ಯಾರೇಜ್ ಪಾರ್ಟಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್

ಚಯನ್ ಶೆಟ್ಟಿ ನಿರ್ದೇಶನ ಮಾಡಿರುವ ‘ಮ್ಯಾರೇಜ್ ಪಾರ್ಟಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಕಥೆ ಏನಿರಬಹುದು ಎಂಬ ಕೌತುಕವನ್ನು ಮೂಡಿಸುವ ರೀತಿಯಲ್ಲಿ ಫಸ್ಟ್ ಲುಕ್ ಪೋಸ್ಟರ್ ಮೂಡಿಬಂದಿದೆ. ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಆಗಲಿರುವ ಈ ಚಿತ್ರಕ್ಕೆ ವಿನೀತ್ ಕುಮಾರ್ ಹೀರೋ ಆಗಿದ್ದಾರೆ.

ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್

ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ‘ತಬಾಹಿ’ ಹಾಡಿನ ಕನ್ನಡ ವರ್ಷನ್​ಗೆ ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈಗಾಗಲೇ ಈ ಹಾಡು ಬಿಡುಗಡೆ ಆಗಿ ಗಮನ ಸೆಳೆದಿದೆ. ಯಶ್, ಕಿಯಾರಾ ಅಡ್ವಾಣಿ ಕಾಣಿಸಿಕೊಂಡಿರುವ ಈ ಗೀತೆಯ ಕೆಲಸ ಹೇಗೆ ನಡೆಯಿತು ಎಂಬುದನ್ನು ಯೋಗರಾಜ್ ಭಟ್ ವಿವರಿಸಿದ್ದಾರೆ.

‘ಮಿಸ್ಟರ್ ಆ್ಯಂಡ್ ಮಿಸಸ್ ರಾಜಾಹುಲಿ’ ಸಿನಿಮಾ ತಂಡಕ್ಕೆ ಸಾಥ್ ನೀಡಿದ ರಾಮಲಿಂಗಾ ರೆಡ್ಡಿ

‘ಮಿಸ್ಟರ್ ಆ್ಯಂಡ್ ಮಿಸಸ್ ರಾಜಾಹುಲಿ’ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸಿನಿಮಾ ರಿಲೀಸ್ ಮಾಡುವ ಪ್ಲ್ಯಾನ್ ಇದೆ. ಇತ್ತೀಚೆಗೆ ಈ ಸಿನಿಮಾದ ಆಡಿಯೋ ಬಿಡುಗಡೆ ಮಾಡಲಾಯಿತು. ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಕಾರ್ಯಕ್ರಮಕ್ಕೆ ಬಂದು ಶುಭಕೋರಿದರು.

ಎಸ್. ಜಾನಕಿ ನಿಧನದ ಬೆನ್ನಲ್ಲೇ ಮೊಮ್ಮಗಳಿಗೆ ಟ್ರೋಲ್ ಕಾಟ; ಕಣ್ಣೀರು ಹಾಕಿಲ್ಲ ಎಂದವರಿಗೆ ಅಪ್ಸರಾ ಸ್ಪಷ್ಟನೆ

ಎಸ್. ಜಾನಕಿ ಅವರ ಚಿತೆಗೆ ಮೊಮ್ಮಗಳು ಅಪ್ಸರಾ ಅವರು ಅಗ್ನಿಸ್ಪರ್ಶ ಮಾಡಿದರು. ಆದರೆ ಅಪ್ಸರಾ ಅವರು ಕಣ್ಣೀರು ಹಾಕಿಲ್ಲ ಎಂಬ ಕಾರಣಕ್ಕೆ ಅವರನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಪ್ಸರಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮನ್ನು ಟ್ರೋಲ್ ಮಾಡಿದವರಿಗೆ ಖಡಕ್ ಆಗಿ ಉತ್ತರಿಸಿದ್ದಾರೆ.

ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್

‘ಮದರ್ ಪ್ರಾಮಿಸ್’ ಸಿನಿಮಾದ ನಟ, ನಿರ್ಮಾಪಕ ಡಾಲಿ ಧನಂಜಯ ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸದ್ಯಕ್ಕೆ ಕನ್ನಡ ಚಿತ್ರರಂಗ ಕಷ್ಟದಲ್ಲಿದೆ. ಪುನೀತ್ ರಾಜ್​ಕುಮಾರ್ ನಿಧನರಾಗಿದ್ದು ಹಾಗೂ ದರ್ಶನ್ ಅವರು ಜೈಲು ಸೇರಿದ್ದು ಚಿತ್ರರಂಗಕ್ಕೆ ದೊಡ್ಡ ಪೆಟ್ಟುಕೊಟ್ಟಂತೆ ಆಗಿದೆ. ಆ ಬಗ್ಗೆ ಡಾಲಿ ಪ್ರತಿಕ್ರಿಯೆ ನೀಡಿದ್ದಾರೆ.

ಜೈಪುರದಲ್ಲಿ ನಡೆಯಿತು ಶರ್ಮಿಳಾ ಮಾಂಡ್ರೆ ಮದುವೆ; ಇಲ್ಲಿದೆ ಫೋಟೋ ಗ್ಯಾಲರಿ

ಜೈಪುರದಲ್ಲಿ ಅದ್ದೂರಿಯಾಗಿ ನಟಿ ಶರ್ಮಿಳಾ ಮಾಂಡ್ರೆ ಮತ್ತು ನಿರ್ಮಾಪಕ ಸುಧನ್ ಸುಂದರಂ ಅವರು ಮದುವೆ ಆಗಿದ್ದಾರೆ. ಜುಲೈ 12ರಂದು ವಿವಾಹ ನಡೆದಿದ್ದು, ಫೋಟೋಗಳು ವೈರಲ್ ಆಗುತ್ತಿವೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶರ್ಮಿಳಾ ಮಾಂಡ್ರೆ ಅವರಿಗೆ ಸೆಲೆಬ್ರಿಟಿಗಳು, ಆಪ್ತರು ಮತ್ತು ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.