AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Cinema

Kannada Cinema

1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.

ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್​ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್​ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.

ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.

ಇನ್ನೂ ಹೆಚ್ಚು ಓದಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ದಿ ಡೆವಿಲ್ ಚಿತ್ರ ಎಲ್ಲ ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಆಗುತ್ತಿದೆ. ಫ್ಯಾನ್ಸ್ ಅಷ್ಟೇ ಅಲ್ಲದೇ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಸಹ ಬಂದು ಸಿನಿಮಾ ವೀಕ್ಷಿಸಿದ್ದಾರೆ. ನಟಿ ಪೂಜಾ ಗಾಂಧಿ ‘ದಿ ಡೆವಿಲ್’ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಅನಿಸಿಕೆ ಹಂಚಿಕೊಂಡರು.

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..

‘ನಾವು ಅಂದುಕೊಂಡಿದ್ದಕ್ಕಿಂತ ಡಬಲ್ ಚೆನ್ನಾಗಿದೆ. ಈ ಸಿನಿಮಾ 100 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತದೆ. ಒಂದೊಂದು ದೃಶ್ಯ ಕೂಡ ರೋಚಕವಾಗಿ ಇದೆ. ಸಾರಥಿ ಸಿನಿಮಾದ ಇತಿಹಾಸ ರಿಪೀಟ್ ಆಗುತ್ತದೆ’ ಎಂದು ‘ದಿ ಡೆವಿಲ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಮೈಸೂರಿನಲ್ಲಿ ಹೇಳಿದ್ದಾರೆ.

  • Ram
  • Updated on: Dec 12, 2025
  • 7:31 pm

ದಿ ಡೆವಿಲ್, ಅಖಂಡ 2, ಧುರಂಧರ್ ಸಿನಿಮಾಗಳ ನಡುವೆ ಕ್ಲ್ಯಾಶ್: ಯಾರಿಗೆ ಲಾಭ?

ಗಲ್ಲಾಪೆಟ್ಟಿಗೆಯಲ್ಲಿ ‘ದಿ ಡೆವಿಲ್’, ‘ಧುರಂಧರ್’ ಹಾಗೂ ‘ಅಖಂಡ 2’ ಸಿನಿಮಾಗಳು ಪರಸ್ಪರ ಫೈಟ್ ನೀಡುತ್ತಿವೆ. ‘ಧುರಂಧರ್’ ಸಿನಿಮಾವನ್ನು 2ನೇ ವಾರ ಕೂಡ ಜನರು ಮುಗಿಬಿದ್ದು ನೋಡುತ್ತಿದ್ದಾರೆ. ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಬಾಲಯ್ಯ ಅಭಿನಯದ ‘ಅಖಂಡ 2’ ಸಿನಿಮಾಗೆ ಬಹುತೇಕ ನೆಗೆಟಿವ್ ಪ್ರತಿಕ್ರಿಯೆ ಸಿಗುತ್ತಿದೆ. ಈ ಬಗ್ಗೆ ಇಲ್ಲಿದೆ ವಿವರ..

ಅಪ್ಪ-ಅಮ್ಮ ಸತ್ರೂ ಓಕೆ, ದರ್ಶನ್ ಜೈಲಲ್ಲಿರೋದನ್ನ ನೋಡೋಕಾಕ್ತಿಲ್ಲ; ಫ್ಯಾನ್ಸ್ ಅಂಧಾಭಿಮಾನ

ನಟ ದರ್ಶನ್ ಅವರ ‘ಡೆವಿಲ್’ ಸಿನಿಮಾ 10 ಕೋಟಿ ಗಳಿಸಿ ಉತ್ತಮ ಆರಂಭ ಕಂಡಿದೆ. ಆದರೆ, ದರ್ಶನ್ ಜೈಲಿನಲ್ಲಿರುವಾಗ ಸಿನಿಮಾ ಬಿಡುಗಡೆಯಾದದ್ದು ಅಭಿಮಾನಿಗಳಲ್ಲಿ ತೀವ್ರ ಬೇಸರ ಮೂಡಿಸಿದೆ. ಕೆಲವರು "ತಂದೆ-ತಾಯಿ ಸತ್ತರೂ ಇಷ್ಟು ಬೇಸರವಾಗುವುದಿಲ್ಲ" ಎಂದು ಹೇಳಿದ್ದು ವೈರಲ್ ಆಗಿದೆ. ಇದು ಅಭಿಮಾನವಲ್ಲ, ಅಂಧಾಭಿಮಾನ ಎಂದು ಹಲವರು ಟೀಕಿಸಿದ್ದಾರೆ.

ಮೊದಲ ದಿನ ‘ಡೆವಿಲ್’ ಸಿಡಿಲಬ್ಬರದ ಕಲೆಕ್ಷನ್; ದರ್ಶನ್ ಫ್ಯಾನ್ಸ್ ಫುಲ್ ಖುಷ್

The Devil First Day Collection: ನಟ ದರ್ಶನ್ ಜೈಲಿನಲ್ಲಿದ್ದರೂ 'ಡೆವಿಲ್' ಸಿನಿಮಾ ಮೊದಲ ದಿನ ಭರ್ಜರಿ ಕಲೆಕ್ಷನ್ ಮಾಡಿದೆ. ಸಿನಿಮಾ ಭರ್ಜರಿ ಗಳಿಸಿದೆ. ಪ್ರಚಾರದ ಕೊರತೆ ಇದ್ದರೂ, ಅಭಿಮಾನಿಗಳು ಸಕ್ರಿಯವಾಗಿ ಪ್ರಚಾರ ಮಾಡಿ ಚಿತ್ರವನ್ನು ಯಶಸ್ವಿಗೊಳಿಸಿದ್ದಾರೆ. 'ಕಾಂತಾರ: ಚಾಪ್ಟರ್ 1' ನಂತರ ಇಷ್ಟು ದೊಡ್ಡ ಗಳಿಕೆ ಕಂಡ ಮೊದಲ ಕನ್ನಡ ಚಿತ್ರವಿದು. ಅಧಿಕ ಟಿಕೆಟ್ ದರವೂ ಕಲೆಕ್ಷನ್‌ಗೆ ನೆರವಾಗಿದೆ.

‘ದಿ ಡೆವಿಲ್’ ಸಿನಿಮಾ: 15 ದಿನಗಳಿಂದ ಮನೆಗೆ ಹೋಗಿಲ್ಲ ದರ್ಶನ್ ಫ್ಯಾನ್ಸ್

‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರಕ್ಕೆ ದರ್ಶನ್ ಅಭಿಮಾನಿಗಳಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಬಹಳ ದಿನಗಳಿಂದ ಕಾದಿದ್ದರು. ಚಿತ್ರದ ಬಿಡುಗಡೆಗೂ ಮುನ್ನವೇ ಅನೇಕ ದಿನಗಳಿಂದ ತಯಾರಿ ನಡೆಸಿದ್ದರು. ಈಗ ರಾಜ್ಯಾದ್ಯಂತ ದರ್ಶನ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ.

ಹಿರಿಯ ನಟರ ಹೊಸ ಸಿನಿಮಾ ‘ಕ್ಲಾಸ್ ಆಫ್ ಮೈಸೂರು’: ಏನಿದರ ಕಥೆ?

ಗೌತಮ್ ಬಸವರಾಜು ಅವರು ನಿರ್ದೇಶನ ಮಾಡುತ್ತಿರುವ ‘ಕ್ಲಾಸ್ ಆಫ್ ಮೈಸೂರು’ ಚಿತ್ರದ ಥೀಮ್ ಭಿನ್ನವಾಗಿದೆ. ತಾರಾ, ದತ್ತಣ್ಣ, ರಂಗಾಯಣ ರಘು, ಬಿರಾದರ್, ಶರತ್ ಲೋಹಿತಾಶ್ವ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ನಡೆದ ಮುಹೂರ್ತ ಸಮಾರಂಭದಲ್ಲಿ ಇವರೆಲ್ಲರೂ ಭಾಗಿಯಾಗಿ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

ದರ್ಶನ್ ರಾಜಕೀಯಕ್ಕೆ ಬರಬೇಕಾ ಬೇಡವಾ ಅನ್ನೋದು ಫ್ಯಾನ್ಸ್ ನಿರ್ಧಾರ: ದಿನಕರ್

ಡಿ.11ಕ್ಕೆ ರಿಲೀಸ್ ಆದ ‘ದಿ ಡೆವಿಲ್’ ಚಿತ್ರದಲ್ಲಿ ರಾಜಕೀಯದ ಕಹಾನಿ ಇದೆ. ಈ ಚಿತ್ರವನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ. ಬಹುತೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್ ಆಗಿದೆ. ನಿಜ ಜೀವನದಲ್ಲಿ ದರ್ಶನ್ ರಾಜಕೀಯಕ್ಕೆ ಬರುತ್ತಾರಾ ಎಂಬ ಕೌತುಕ ಇದೆ. ಈ ಬಗ್ಗೆ ಸಹೋದರ ದಿನಕರ್ ತೂಗುದೀಪ್ ಅವರು ಉತ್ತರ ನೀಡಿದ್ದಾರೆ.

‘ದಿ ಡೆವಿಲ್’ ನೋಡಿ ಸ್ಪೆಷಲ್ ವಿಮರ್ಶೆ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್

ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾ ಇಂದು (ಡಿಸೆಂಬರ್ 11) ಬಿಡುಗಡೆ ಆಗಿದ್ದು, ಬಹುತೇಕ ಕಡೆಗಳಲ್ಲಿ ಹೌಸ್​ಫುಲ್ ಆಗಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಅಭಿಮಾನಿಗಳ ಜೊತೆ ಕುಳಿತು ಸಿನಿಮಾ ನೋಡಿದ್ದಾರೆ. ತಮ್ಮ ವಿಮರ್ಶೆ ತಿಳಿಸಿದ್ದಾರೆ. ದರ್ಶನ್ ಅಭಿಮಾನಿಗಳ ಕ್ರೇಜ್ ನೋಡಿ ವಿಜಯಲಕ್ಷ್ಮಿ ಅವರು ಫಿದಾ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟ್ ಮಾಡಿದ್ದಾರೆ.

The Devil Movie Review: ‘ದಿ ಡೆವಿಲ್’ ರಾಜಕೀಯ ಸಮರದಲ್ಲಿ ದರ್ಶನ್ ವರ್ಸಸ್ ದರ್ಶನ್

ನಟ ದರ್ಶನ್ ತೂಗುದೀಪ ಅವರು ಜೈಲಿನಲ್ಲಿ ಇರುವಾಗಲೇ ಅವರ ‘ದಿ ಡೆವಿಲ್’ ಸಿನಿಮಾ ರಾಜ್ಯಾದ್ಯಂತ ತೆರೆಕಂಡಿದೆ. ಪ್ರಕಾಶ್ ವೀರ್ ನಿರ್ದೇಶನದ ಈ ಸಿನಿಮಾದಲ್ಲಿ ಸಂಪೂರ್ಣ ಪೊಲಿಟಿಕಲ್ ಥ್ರಿಲ್ಲರ್ ಕಹಾನಿ ತೋರಿಸಲಾಗಿದೆ. ದರ್ಶನ್ ಅವರು ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಟ್ಟಾರೆ ಸಿನಿಮಾ ಹೇಗಿದೆ ಎಂಬುದಕ್ಕೆ ಈ ವಿಮರ್ಶೆಯಲ್ಲಿದೆ ಉತ್ತರ.

‘ದಿ ಡೆವಿಲ್’ ಫಸ್ಟ್ ಹಾಫ್​​ನಲ್ಲಿ ದರ್ಶನ್ ಅಭಿಮಾನಿಗಳಿಗೆ ಇಷ್ಟ ಆಗುವಂಥದ್ದು ಏನೆಲ್ಲ ಇದೆ?

Devil First Half Review: 300ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ದಿ ಡೆವಿಲ್’ ಸಿನಿಮಾ ಅದ್ದೂರಿಯಾಗಿ ಪ್ರದರ್ಶನ ಕಾಣುತ್ತಿದೆ. ದರ್ಶನ್ ಅಭಿಮಾನಿಗಳು ಎಲ್ಲ ಕಡೆಗಳಲ್ಲಿ ಸಂಭ್ರಮಿಸುತ್ತಿದ್ದಾರೆ. ಪ್ರಕಾಶ್ ವೀರ್ ನಿರ್ದೇಶನದ ಈ ಸಿನಿಮಾ ಮಾಸ್ ಆಗಿ ಮೂಡಿಬಂದಿದೆ. ಚಿತ್ರದ ಪ್ರತಿ ಫ್ರೇಮ್ ಕೂಡ ಅದ್ದೂರಿಯಾಗಿದೆ. ‘ದಿ ಡೆವಿಲ್’ ಚಿತ್ರದ ಫಸ್ಟ್ ಹಾಫ್ ಹೇಗಿದೆ ಎಂಬುದಕ್ಕೆ ಇಲ್ಲಿದೆ ಉತ್ತರ..

15 ದಿನ ರಜೆ ಹಾಕಿದ್ದೇವೆ, ಊಟ ಹಾಕಿಸ್ತೀವಿ: ‘ದಿ ಡೆವಿಲ್’ ಬಿಡುಗಡೆಗೆ ದರ್ಶನ್ ಫ್ಯಾನ್ಸ್ ತಯಾರಿ

ಈ ಸಿನಿಮಾಗಾಗಿಯೇ ಒಂದು ವಾರ, 15 ದಿನ ರಜೆ ಹಾಕಿದ್ದೇವೆ ಎಂದು ಫ್ಯಾನ್ಸ್ ಹೇಳಿದ್ದಾರೆ. ಸಿನಿಮಾ ನೋಡಲು ಬರುವ ಪ್ರೇಕ್ಷಕರಿಗೆ ಅನ್ನದಾನ ಮಾಡಲು ತೀರ್ಮಾನಿಸಲಾಗಿದೆ. ಹೋಳಿಗೆ ಊಟ ಹಾಕಿಸುವುದಾಗಿ ದರ್ಶನ್ ಫ್ಯಾನ್ಸ್ ಹೇಳಿದ್ದಾರೆ. ದರ್ಶನ್ ಅಭಿಮಾನಿಗಳು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ