Kannada Cinema
1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.
ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.
ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.
ಇನ್ನೂ ಹೆಚ್ಚು ಓದಿಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ. ಆ ಬಗ್ಗೆ ಉಪೇಂದ್ರ ಅವರು ಮಾತನಾಡಿದ್ದಾರೆ. ಇಂದು (ಸೆಪ್ಟೆಂಬರ್ 18) ಉಪೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡುವಾಗ ಅನಂತ್ ನಾಗ್ ಅವರಿಗೆ ಉಪೇಂದ್ರ ಅಭಿನಂದನೆ ಸಲ್ಲಿಸಿದರು.
- Madan Kumar
- Updated on: Sep 18, 2026
- 5:56 pm
ಸರಳ, ಸುಂದರ ಪ್ರೇಮಕಥೆ ಹೇಳುವ ‘ಕನಸಲು’ ಆಲ್ಬಂ ಹಾಡು ಬಿಡುಗಡೆ
ಶ್ರೀರಾಮ್ ಗಂಧರ್ವ ಅವರು ‘ಕನಸಲು’ ಎಂಬ ಆಲ್ಬಂ ಗೀತೆಯನ್ನು ಹೊರತಂದಿದ್ದಾರೆ. ಇದರಲ್ಲಿ ದರ್ಶನ್ ಮತ್ತು ಗಗನಾ ನಟಿಸಿದ್ದಾರೆ. ರಿಚರ್ಡ್ ಅವರು ಈ ಹಾಡನ್ನು ನಿರ್ಮಿಸಿದ್ದಾರೆ. ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಂಡದವರು ಒಂದಷ್ಟು ಮಾಹಿತಿ ಹಂಚಿಕೊಂಡರು. ‘ಆನಂದ್ ಆಡಿಯೋ’ ಮೂಲಕ ‘ಕನಸಲು’ ಗೀತೆ ರಿಲೀಸ್ ಆಗಿದೆ.
- Madan Kumar
- Updated on: Sep 18, 2026
- 4:42 pm
‘ರಿಯಲ್ ಸ್ಟಾರ್’ ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಅವರು ಇಂದು (ಸೆ.18) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿಗಳು ಅವರ ಮನೆ ಬಳಿ ಬಂದು ಜನ್ಮದಿನಕ್ಕೆ ವಿಶ್ ಮಾಡಿದ್ದಾರೆ. ನೋಟಿನ ಹಾರವನ್ನು ಹಾಕಲಾಗಿದೆ. ಬಗೆಬಗೆಯ ಕೇಕ್ ತಂದು ಕತ್ತರಿಸಲಾಗಿದೆ. ಇದೇ ವೇಳೆ, ಉಪೇಂದ್ರ ನಟಿಸಲಿರುವ ಹೊಸ ಸಿನಿಮಾದ ಪೋಸ್ಟರ್ ಅನಾವರಣ ಮಾಡಲಾಗಿದೆ.
- Madan Kumar
- Updated on: Sep 18, 2026
- 4:15 pm
‘ಸಿಟಿ ಲೈಟ್ಸ್’ ವಿಮರ್ಶೆ: ಮೆಜೆಸ್ಟಿಕ್ ಏರಿಯಾದ ಕರಾಳ ಮುಖ ಅನಾವರಣ ಮಾಡುವ ಸಿನಿಮಾ
ವಿನಯ್ ರಾಜ್ಕುಮಾರ್ ಮತ್ತು ಮೋನಿಷಾ ವಿಜಯ್ ಕುಮಾರ್ ಜೋಡಿಯಾಗಿ ನಟಿಸಿರುವ ‘ಸಿಟಿ ಲೈಟ್ಸ್’ ಸಿನಿಮಾ ಸೆಪ್ಟೆಂಬರ್ 18ರಂದು ಬಿಡುಗಡೆ ಆಗಿದೆ. ದುನಿಯಾ ವಿಜಯ್ (ವಿಜಯ್ ಕುಮಾರ್) ನಿರ್ದೇಶನ ಮಾಡಿರುವ ಈ ಸಿನಿಮಾದ ಪೂರ್ತಿ ಕಥೆ ಮೆಜೆಸ್ಟಿಕ್ನಲ್ಲಿ ಸಾಗುತ್ತದೆ. ಸಿನಿಮಾದ ವಿಮರ್ಶೆ ಇಲ್ಲಿದೆ..
- Madan Kumar
- Updated on: Sep 18, 2026
- 3:13 pm
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಇತ್ತೀಚೆಗೆ ಬಿಡುಗಡೆ ಆದ ‘ಅಮೆರಿಕ ಅಮೆರಿಕ 2’ ಸಿನಿಮಾವನ್ನು ಅನೇಕ ಸೆಲೆಬ್ರಿಟಿಗಳು ವೀಕ್ಷಿಸಿದ್ದಾರೆ. ಸುಧಾ ಮೂರ್ತಿ ಅವರು ಈ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಅವರಿಗೆ ಈ ಚಿತ್ರ ಸಖತ್ ಇಷ್ಟ ಆಗಿದೆ. ನಾಗತಿಹಳ್ಳಿ ಚಂದ್ರಶೇಖರ್ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ.
- Madan Kumar
- Updated on: Sep 17, 2026
- 8:31 pm
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಫಾಲ್ಕೆ ಗೌರವ ಪಡೆದ ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ ಆಗಿದೆ. ಇದು ಕನ್ನಡ ಚಿತ್ರರಂಗಕ್ಕೆ ಸಂಭ್ರಮದ ಸಂಗತಿ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಅವರು ಟಿವಿ9 ಜತೆ ಮಾತನಾಡಿದ್ದಾರೆ. ಅನಂತ್ ನಾಗ್ ಅವರ ಪ್ರತಿಭೆಯನ್ನು ಜಯಮಾಲಾ ಕೊಂಡಾಡಿದ್ದಾರೆ.
- Malatesh Jaggin
- Updated on: Sep 17, 2026
- 5:27 pm
‘ಪುಟ್ಟಣ್ಣನ ಕತ್ತೆ’: ಮೆಲ್ಬೋರ್ನ್ ಫಿಲ್ಮ್ ಫೆಸ್ಟಿವಲ್ಗೆ ಆಯ್ಕೆಯಾದ ಕನ್ನಡದ ಸಿನಿಮಾ
ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ ‘ಪುಟ್ಟಣ್ಣನ ಕತ್ತೆ’ ಸಿನಿಮಾ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುತ್ತಿದೆ. ಮೆಲ್ಬೋರ್ನ್ ಫಿಲ್ಮ್ ಫೆಸ್ಟಿವಲ್ಗೆ ಈ ಚಿತ್ರ ಆಯ್ಕೆ ಆಗಿದೆ. ಹಳ್ಳಿಯಿಂದ ಕತ್ತೆಯೊಂದಿಗೆ ಪಟ್ಟಣಕ್ಕೆ ವಲಸೆ ಬರುವ ವ್ಯಕ್ತಿಯ ಬದುಕು ಮತ್ತು ಆತನ ಸುತ್ತ ಘಟಿಸುವ ಕುತೂಹಲಕಾರಿ, ಸಂಕೀರ್ಣ ಘಟನೆಗಳೇ ಈ ಸಿನಿಮಾದ ಕಥಾಹಂದರ.
- Madan Kumar
- Updated on: Sep 17, 2026
- 4:20 pm
ಅಂದು ಅನಂತ್ ನಾಗ್ ಬಗ್ಗೆ ರಿಷಬ್ ಇಟ್ಟ ಕೋರಿಕೆ ಕೊನೆಗೂ ಈಡೇರಿತು
ಹಿರಿಯ ನಟ ಅನಂತ್ ನಾಗ್ ಅವರಿಗೆ ಅತ್ಯುನ್ನತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದ ಬೆನ್ನಲ್ಲೇ ರಿಷಬ್ ಶೆಟ್ಟಿ ಅವರ ಹಳೆಯ ವೀಡಿಯೊ ವೈರಲ್ ಆಗಿದೆ. ಅನಂತ್ ನಾಗ್ ಅವರಿಗೆ ರಾಷ್ಟ್ರೀಯ ಗೌರವ ಸಿಗಬೇಕೆಂದು ಅಂದು ರಿಷಬ್ ಆಡಿದ್ದ ಮಾತುಗಳು ಈಗ ನಿಜವಾಗಿರುವುದಕ್ಕೆ ಅಭಿಮಾನಿಗಳಿಂದ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.
- Rajesh Duggumane
- Updated on: Sep 17, 2026
- 12:01 pm
ಸುದೀಪ್-ಪ್ರೇಮ್ ಹೊಸ ಸಿನಿಮಾ ಪೋಸ್ಟರ್ಗೆ ಎಐ ಬಳಕೆ; ನೆಟ್ಟಿಗರ ಟೀಕೆ
ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ಕಾಂಬಿನೇಷನ್ನ ಹೊಸ ಸಿನಿಮಾದ ಎಐ ಪೋಸ್ಟರ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಳಪೆ ಮಟ್ಟದ ಪೋಸ್ಟರ್ ರಿಲೀಸ್ ಮಾಡಿ ಸಿನಿಮಾದ ಮೇಲಿರುವ ನಿರೀಕ್ಷೆ ಹಾಳುಮಾಡಬೇಡಿ ಎಂದು ಫ್ಯಾನ್ಸ್ ಕಿಡಿಕಾರಿದ್ದಾರೆ. ಅಕ್ಟೋಬರ್ 20ರ ಟೈಟಲ್ ಅನೌನ್ಸ್ಮೆಂಟ್ಗಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ.
- Rajesh Duggumane
- Updated on: Sep 16, 2026
- 7:34 am
ಮಾಲಾಶ್ರೀ-ರುಕ್ಮಿಣಿ ವಸಂತ್ ಕಾಂಬಿನೇಷನ್ನಲ್ಲಿ ಬರ್ತಿದೆ ‘ಮಂಗಳಗೌರಿ’ ಸಿನಿಮಾ
ಕನಸಿನ ರಾಣಿ ಮಾಲಾಶ್ರೀ ಹಾಗೂ ನಟಿ ರುಕ್ಮಿಣಿ ವಸಂತ್ ಹೊಸ ಸಿನಿಮಾದಲ್ಲಿ ಒಂದಾಗಿದ್ದಾರೆ. 'ಮಂಗಳಗೌರಿ' ಹೆಸರಿನ ಈ ಚಿತ್ರಕ್ಕೆ ರಾಹುಲ್ ಪಿ.ಕೆ ನಿರ್ದೇಶನ ಮಾಡುತ್ತಿದ್ದು ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿದೆ. ಗಣೇಶ ಹಬ್ಬದಂದು ಬಿಡುಗಡೆಯಾದ ಪೊಲೀಸ್ ಹಾಗೂ ಮಾಸ್ ಲುಕ್ನ ಫಸ್ಟ್ ಲುಕ್ ಪೋಸ್ಟರ್ ಸಖತ್ ವೈರಲ್ ಆಗಿದೆ.
- Rajesh Duggumane
- Updated on: Sep 14, 2026
- 5:19 pm
ಮಗನಿಗೆ ಎರೆಯ ಎಂದು ಹೆಸರಿಟ್ಟ ಡಾಲಿ ಧನಂಜಯ; ಈ ಹೆಸರಿಗೆ ಇದೆ ವಿಶೇಷ ಅರ್ಥ
ನಟ ಡಾಲಿ ಧನಂಜಯ ಅವರು ಗೌರಿ-ಗಣೇಶ ಹಬ್ಬದ ಪ್ರಯುಕ್ತ ಮಗನ ಹೆಸರನ್ನು ಬಹಿರಂಗಪಡಿಸಿದ್ದಾರೆ. ಮಗನಿಗೆ ‘ಎರೆಯ’ ಎಂದು ಅವರು ನಾಮಕರಣ ಮಾಡಿದ್ದಾರೆ. ಈ ವಿಶೇಷ ಹೆಸರಿಗೆ ಇರುವ ಅರ್ಥ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ಡಾಲಿ ಧನಂಜಯ ಅವರ ಮಗನ ಫೋಟೋ ಗ್ಯಾಲರಿ ಇಲ್ಲಿದೆ..
- Madan Kumar
- Updated on: Sep 14, 2026
- 9:21 am
‘ಸಿಟಿ ಲೈಟ್ಸ್’ ಸಿನಿಮಾ ಟ್ರೇಲರ್ ರಿಲೀಸ್; ಸಿಕ್ತು ಹ್ಯಾಟ್ರಿಕ್ ಹೀರೋ ಮೆಚ್ಚುಗೆ
ಹಾಡುಗಳ ಮೂಲಕ ಸದ್ದು ಮಾಡಿದ ಬಳಿಕ, ‘ಸಿಟಿ ಲೈಟ್ಸ್’ ಚಿತ್ರದಿಂದ ಈಗ ಟ್ರೇಲರ್ ಅನಾವರಣ ಮಾಡಲಾಗಿದೆ. ಶಿವರಾಜ್ಕುಮಾರ್ ಅವರು ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಮೋನಿಷಾ ವಿಜಯ್ ಕುಮಾರ್, ಉಮಾಶ್ರೀ, ವಿನಯ್ ರಾಜ್ಕುಮಾರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸೆ.18ಕ್ಕೆ ‘ಸಿಟಿ ಲೈಟ್ಸ್’ ತೆರೆಕಾಣಲಿದೆ.
- Madan Kumar
- Updated on: Sep 13, 2026
- 1:35 pm