AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Cinema

Kannada Cinema

1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.

ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್​ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್​ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.

ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.

ಇನ್ನೂ ಹೆಚ್ಚು ಓದಿ

Ayogya 2 Review: ಮುಗ್ಗರಿಸಿದ ‘ಅಯೋಗ್ಯ 2’; ನಿರೀಕ್ಷೆ ಇಟ್ಟುಕೊಂಡವರಿಗೆ ವಿಪರೀತ ನಿರಾಸೆ

Ayogya 2 Kannada Movie Review: ಎಸ್. ಮಹೇಶ್ ಕುಮಾರ್ ನಿರ್ದೇಶನದ ‘ಅಯೋಗ್ಯ 2’ ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಸತೀಶ್ ನೀನಾಸಂ, ರಚಿತಾ ರಾಮ್, ಪಿ. ರವಿಶಂಕರ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಮುನೇಗೌಡ ಅವರು ನಿರ್ಮಾಣ ಮಾಡಿರುವ ‘ಅಯೋಗ್ಯ 2’ ಸಿನಿಮಾ ಹೇಗಿದೆ ತಿಳಿಯಲು ಈ ವಿಮರ್ಶೆ ಓದಿ..

‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ

ದುನಿಯಾ ವಿಜಯ್ ಅವರ ಪುತ್ರಿ ಮೋನಿಷಾ ಹಾಗೂ ನಟ ವಿನಯ್ ರಾಜ್​ಕುಮಾರ್ ಅವರು ‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಚಿತ್ರಕ್ಕೆ ದುನಿಯಾ ವಿಜಯ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೆಂಗಳೂರಿನ ಮೆಜೆಸ್ಟಿಕ್ ಲೋಕ ಅನಾವರಣ ಆಗಲಿದೆ. ಆ ಬಗ್ಗೆ ವಿನಯ್ ರಾಜ್​ಕುಮಾರ್ ಮಾತನಾಡಿದ್ದಾರೆ.

‘ಬಾಸ್ ಸಿನಿಮಾ ರಿಲೀಸ್ ಮಾಡಲು ದರ್ಶನ್ ಒಪ್ಪಿದ್ದಾರೆ’: ತನುಷ್ ಶಿವಣ್ಣ

ಬಿಡುಗಡೆಗೂ ಮುನ್ನವೇ ‘ಬಾಸ್’ ಸಿನಿಮಾ ಸಾಕಷ್ಟು ಸದ್ದು ಮಾಡಿದೆ. ಈ ಸಿನಿಮಾದ ರಿಲೀಸ್​ಗೆ ತಡೆ ನೀಡುವಂತೆ ಕೋರಿ ಈ ಮೊದಲು ವಿಜಯಲಕ್ಷ್ಮಿ ದರ್ಶನ್ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಂತಿಮವಾಗಿ ಅವರು ಈ ಚಿತ್ರದ ಬಿಡುಗಡೆಗೆ ಅನುಮತಿ ನೀಡಿದ್ದಾರೆ. ಈ ಕುರಿತು ಚಿತ್ರದ ನಾಯಕ ನಟ ತನುಷ್ ಶಿವಣ್ಣ ಅವರು ಮಾತನಾಡಿದ್ದಾರೆ.

ಹಿರಿಯ ನಟ ಪ್ರದೀಪ್ ರಾವತ್ ನಿಧನ: ‘ಘಜಿನಿ’, ‘ಲಗಾನ್’ ಖ್ಯಾತಿಯ ಖಳನಟ ಇನ್ನಿಲ್ಲ

‘ಘಜಿನಿ’ ಸಿನಿಮಾದಲ್ಲಿ ವಿಲನ್ ಆಗಿ ಅಬ್ಬರಿಸಿದ್ದ ಹಿರಿಯ ನಟ ಪ್ರದೀಪ್ ರಾವತ್ ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರನ್ನು ಒಂದು ತಿಂಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಕೊನೆಯುಸಿರು ಎಳೆದಿದ್ದಾರೆ. ಪ್ರದೀಪ್ ರಾವತ್ ನಿಧನಕ್ಕೆ ಅಭಿಮಾನಿಗಳು, ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

ವಿಜಯಲಕ್ಷ್ಮಿ ದರ್ಶನ್ ಒತ್ತಾಯದಿಂದಲೇ ನಾವು ನಿರ್ಮಾಪಕರಾದೆವು: ಜಯಣ್ಣ-ಭೋಗೇಂದ್ರ

ಜಯಣ್ಣ ಹಾಗೂ ಭೋಗೇಂದ್ರ ತಾವು ನಿರ್ಮಾಪಕರಾದ ರೋಚಕ ಕಥೆಯನ್ನು ಹಂಚಿಕೊಂಡಿದ್ದಾರೆ. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಪ್ರೀತಿಯ ಒತ್ತಾಯವೇ ತಾವು 'ಅರ್ಜುನ್' ಸಿನಿಮಾ ನಿರ್ಮಾಣ ಮಾಡಲು ಮುಖ್ಯ ಕಾರಣ ಎಂದು ನೆನಪಿಸಿಕೊಂಡಿದ್ದಾರೆ. ಕೃತಜ್ಞತೆಯಾಗಿ 'ವಿಜಯಲಕ್ಷ್ಮಿ ದರ್ಶನ್ ಪ್ರೆಸೆಂಟ್ಸ್' ಎಂದೇ ಸಿನಿಮಾ ಶೀರ್ಷಿಕೆಯಲ್ಲಿ ಬಳಸಲಾಗಿತ್ತು.

‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ ಉಪೇಂದ್ರ

ನಟಿ ಪ್ರಿಯಾಂಕಾ ಉಪೇಂದ್ರ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಇದ್ದಾರೆ. ಆದರೂ ಕೂಡ ಕೆಲವು ಹೀರೋಗಳ ಜೊತೆ ನಟಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆ ಬಗ್ಗೆ ಅವರು ಮಾತನಾಡಿದ್ದಾರೆ. ಟಿವಿ9 ಜೊತೆ ಮಾತನಾಡಿದ ಅವರು ಆ ದಿನಗಳನ್ನು ನೆನಪಿಸಿಕೊಂಡರು. ಪ್ರಿಯಾಂಕಾ ಉಪೇಂದ್ರ ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಚಿತ್ರೋತ್ಸವದಲ್ಲಿ ಮೆಚ್ಚುಗೆ ಪಡೆದ ‘ಬ್ರಹ್ಮ ಕಮಲ’ ಶೀಘ್ರವೇ ಬಿಡುಗಡೆ; ಬಂತು ಟ್ರೇಲರ್

‘ದಾರಿ ಯಾವುದಯ್ಯ ವೈಕುಂಠಕೆ’ ಖ್ಯಾತಿಯ ಸಿದ್ದು ಪೂರ್ಣಚಂದ್ರ ಅವರು ‘ಬ್ರಹ್ಮ ಕಮಲ’ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಅದ್ವಿತಿ ಶೆಟ್ಟಿ, ಋತು ಚೈತ್ರಾ, ಲೋಕೇಂದ್ರ ಸೂರ್ಯ ಮುಂತಾದವರು ನಟಿಸಿರುವ ಈ ಸಿನಿಮಾದ ಟ್ರೇಲರ್ ರಿಲೀಸ್ ಮಾಡಲಾಗಿದ್ದು, ಕಥೆ ಬಗ್ಗೆ ಸುಳಿವು ನೀಡಲಾಗಿದೆ. ಸಿನಿಮಾ ಕುರಿತು ಇಲ್ಲಿದೆ ಮಾಹಿತಿ..

ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ

ನಟ ಧನ್ವೀರ್ ಅವರು ಕೆಲವೇ ದಿನಗಳ ಹಿಂದೆ ಜೈಲಿಗೆ ಬಂದು ದರ್ಶನ್ ಅವರನ್ನು ಭೇಟಿ ಮಾಡಿದ್ದರು. ಈ ಮೊದಲು ವಿಜಯಲಕ್ಷ್ಮಿ ಮತ್ತು ಧನ್ವೀರ್ ಅವರು ಒಟ್ಟಿಗೆ ಬಂದು ದರ್ಶನ್ ಅವರನ್ನು ಮಾತನಾಡಿಸುತ್ತಿದ್ದರು. ಈಗ ಅವರು ಬೇರೆ ಬೇರೆ ದಿನಗಳಲ್ಲಿ ಪ್ರತ್ಯೇಕವಾಗಿ ಜೈಲಿಗೆ ಬಂದಿರುವುದು ಅಚ್ಚರಿಗೆ ಕಾರಣ ಆಗಿದೆ.

  • Ramu Ram
  • Updated on: Jul 31, 2026
  • 8:49 pm

Jolly Review: ಟ್ವಿಸ್ಟ್ ಜೊತೆಗೊಂದು ಪ್ರೇಮಕಥೆ ತೋರಿಸಿದ ಹೊಸ ಪ್ರತಿಭೆಗಳ ‘ಜಾಲಿ’ ಸಿನಿಮಾ

ತಾರುಷ್ ಅವರು ‘ಜಾಲಿ’ ಸಿನಿಮಾಗೆ ನಿರ್ದೇಶನ ಮಾಡಿ, ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಪದ್ಮಶ್ರೀ ಸಿ. ಜೈನ್ ನಾಯಕಿ ಆಗಿದ್ದಾರೆ. ಬ್ರಿಜ್ ಯಾದವ್, ನಾಗವೇಣಿ ಎನ್. ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಹೊಸಬರ ಜೊತೆ ಶೋಭರಾಜ್, ರೇಖಾ ದಾಸ್ ಮುಂತಾದ ಹಿರಿಯ ಕಲಾವಿದರು ಕೂಡ ಅಭಿನಯಿಸಿದ್ದಾರೆ.

ಕಾವೇರಿ ನೀರಿಗಾಗಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ವೆಂಕಟೇಶ್ ಗರಂ

ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟು ಇದೆಯಾ? ಕಾವೇರಿ ನೀರಿನ ಹೋರಾಟಕ್ಕೆ ಚಿತ್ರರಂಗದ ಎಲ್ಲರೂ ಬರುತ್ತಾರಾ ಎಂಬ ಪ್ರಶ್ನೆ ಎದುರಾಗಿದೆ. ‘ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ’ ನಡೆಸಿದ ಸುದ್ದಿಗೋಷ್ಠಿ ವೇಳೆ ಈ ಪ್ರಶ್ನೆ ಕೇಳಿಬಂದಿದ್ದಕ್ಕೆ ರಾಕ್​ಲೈನ್ ವೆಂಕಟೇಶ್ ಅವರು ಗರಂ ಆದರು. ಅವರು ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..

ಅರ್ಪಿತಾ ಲಂಕೇಶ್ ಮುಡಿಗೆ ‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ ಕಿರೀಟ

ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಪತ್ನಿ ಅರ್ಪಿತಾ ಲಂಕೇಶ್ ಅವರು ‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ ಸೌಂದರ್ಯ ಸ್ಪರ್ಧೆಯಲ್ಲಿ ಕಿರೀಟ ಪಡೆದಿದ್ದಾರೆ. ಅವರ ಈ ಸಾಧನೆಯು ಲಕ್ಷಾಂತರ ಮಹಿಳೆಯರಿಗೆ ಸ್ಫೂರ್ತಿಯಾಗಿದೆ. ಕುಟುಂಬ, ವೃತ್ತಿಜೀವನ ಮತ್ತು ವೈಯಕ್ತಿಕ ಆಕಾಂಕ್ಷೆಗಳನ್ನು ಸರಿದೂಗಿಸಲು ಮಹಿಳೆಯರಿಗೆ ಸಾಧ್ಯ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

KFCC Meeting On Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಈ ಬಗ್ಗೆ ಚರ್ಚಿಸಲು ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’ ಇಂದು (ಜುಲೈ 30) ಸಭೆ ನಡೆಸುತ್ತಿದೆ. ಮಂಡಳಿ ಅಧ್ಯಕ್ಷರಾದ ಜಯಮಾಲಾ ಅವರು ಭಾಗಿಯಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ