AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Cinema

Kannada Cinema

1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.

ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್​ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್​ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.

ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.

ಇನ್ನೂ ಹೆಚ್ಚು ಓದಿ

ಶಿವಣ್ಣ ಫ್ಯಾನ್ಸ್ ಕ್ರೇಜ್ ಯಾವತ್ತೂ ಕಡಿಮೆ ಆಗಲ್ಲ: ಸಾಕ್ಷಿ ತೋರಿಸಿದ ಕೆ.ಪಿ. ಶ್ರೀಕಾಂತ್

ಅರ್ಜುನ್ ಜನ್ಯ ಅವರು ಆ್ಯಕ್ಷನ್-ಕಟ್ ಹೇಳಿರುವ ‘45’ ಸಿನಿಮಾದ ಪ್ರೀಮಿಯರ್ ಶೋ ಯಶಸ್ವಿ ಆಗಿದೆ. ಈ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಅವರ ಅಭಿನಯ ನೋಡಿ ಅವರ ಅಭಿಮಾನಿಗಳಿಗೆ ಬಹಳ ಖುಷಿಯಾಗಿದೆ. ಸಿನಿಮಾ ನೋಡಲು ಬಂದ ಕೆ.ಪಿ. ಶ್ರೀಕಾಂತ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ.

ಯುದ್ಧಕ್ಕೆ ಸಿದ್ಧ ಎಂದ ಸುದೀಪ್ ಮಾತಿಗೆ ಅರ್ಜುನ್ ಜನ್ಯ ಮೊದಲ ರಿಯಾಕ್ಷನ್

ನಟ ಸುದೀಪ್ ಹುಬ್ಬಳ್ಳಿಯಲ್ಲಿ ನಡೆದ ‘ಮಾರ್ಕ್’ ಚಿತ್ರದ ಪ್ರೀ-ರಿಲೀಸ್ ಇವೆಂಟ್​​ನಲ್ಲಿ ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಹೇಳಿದ್ದರು. ಹಾಗಾದ್ರೆ ಅವರು ಆ ಮಾತು ಹೇಳಿದ್ದು ಯಾರಿಗೆ ಎನ್ನುವ ಪ್ರಶ್ನೆ ಜನರ ಮನದಲ್ಲಿ ಮೂಡಿತ್ತು. ಅರ್ಜುನ್ ಜನ್ಯ ಅವರು ಈಗ ಆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ..

‘45’ ಸಿನಿಮಾ ಪ್ರೀಮಿಯರ್ ಶೋ: ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ಫ್ಯಾನ್ಸ್ ಸಂಭ್ರಮ ನೋಡಿ

ಶಿವರಾಜ್​​ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ ಅವರು ‘45’ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸ್ಟಾರ್ ಹೀರೋಗಳ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಜೋರಾಗಿ ಸಂಭ್ರಮಿಸುತ್ತಿದ್ದಾರೆ. ಈಗಾಗಲೇ ‘45’ ಚಿತ್ರ ನೋಡಿದ ಅಭಿಮಾನಿಗಳು ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಫ್ಯಾನ್ಸ್ ಸಂಭ್ರಮದ ವಿಡಿಯೋ ನೋಡಿ..

ಈ ವಾರ ಅಖಾಡಕ್ಕೆ ‘ಮಾರ್ಕ್’, ‘45’: ಇನ್ನೂ ಕಡಿಮೆ ಆಗುತ್ತಾ ‘ದಿ ಡೆವಿಲ್’ ಕಲೆಕ್ಷನ್?

ಒಂದೇ ದಿನ ‘ಮಾರ್ಕ್’ ಹಾಗೂ ‘45’ ಸಿನಿಮಾಗಳು ಬಿಡುಗಡೆ ಆಗುತ್ತಿದ್ದು, ಬಾಕ್ಸ್ ಆಫೀಸ್​​ನಲ್ಲಿ ಪೈಪೋಟಿ ಜೋರಾಗಿದೆ. ಪರಭಾಷೆಯ ಸಿನಿಮಾಗಳು ಕೂಡ ತೆರೆಕಾಣುತ್ತಿವೆ. ಈ ನಡುವೆ ‘ದಿ ಡೆವಿಲ್’ ಸಿನಿಮಾ ಸಹ ಚಿತ್ರಮಂದಿರದಲ್ಲಿ ಇದೆ. ಡಿಸೆಂಬರ್ 25ರಂದು ಕ್ರಿಸ್ಮಸ್ ರಜೆ ಇರುವ ಕಾರಣ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ ಇದೆ.

ದರ್ಶನ್ ಬಗ್ಗೆ ಸುದೀಪ್ ಯಾವತ್ತೂ ಕೆಟ್ಟದಾಗಿ ಮಾತನಾಡಿಲ್ಲ: ಜೋಗಿ ಪ್ರೇಮ್

ದರ್ಶನ್ ಮತ್ತು ಸುದೀಪ್ ಅವರು ಕನ್ನಡ ಚಿತ್ರರಂಗದ ಸ್ಟಾರ್ ನಟರು. ಅವರ ಫ್ಯಾನ್ಸ್ ನಡುವೆ ಬಿರುಕು ಮೂಡಿದೆ. ಈ ಪರಿಸ್ಥಿತಿಯ ಬಗ್ಗೆ ‘ಕೆಡಿ’ ಚಿತ್ರದ ನಿರ್ದೇಶಕ ಜೋಗಿ ಪ್ರೇಮ್ ಅವರು ತಮ್ಮ ಅಭಿಪ್ರಾಯ ಏನೆಂಬುದನ್ನು ತಿಳಿಸಿದ್ದಾರೆ. ಸುದೀಪ್ ಮತ್ತು ದರ್ಶನ್ ಜೊತೆ ಒಡನಾಟ ಹೊಂದಿರುವ ಪ್ರೇಮ್ ಅವರು ಟಿವಿ9 ಜೊತೆ ಮಾತನಾಡಿದ್ದಾರೆ.

‘45’ ಸಿನಿಮಾ ವಿಮರ್ಶೆ; ಅರ್ಜುನ್ ಜನ್ಯ ಮ್ಯಾಜಿಕ್​​ನಲ್ಲಿ ‘ಶಿವ’ತಾಂಡವ;

45 Kannada Movie Review: ಸಂಗೀತ ಸಂಯೋಜನೆ ಮೂಲಕ ಗಮನ ಸೆಳೆದ ಅರ್ಜುನ್ ಜನ್ಯ ಅವರು ‘45’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಮೊದಲ ಸಿನಿಮಾನೇ ಮಲ್ಟಿ ಸ್ಟಾರರ್ ಚಿತ್ರ. ಬಿಗ್ ಬಜೆಟ್ ಸಿನಿಮಾನ ಅವರು ಹ್ಯಾಂಡಲ್ ಮಾಡಿದ್ದಾರೆ. ಈ ಸಿನಿಮಾ ಹೇಗಿದೆ? ಈ ಚಿತ್ರದ ವಿಮರ್ಶೆ ಇಲ್ಲಿದೆ ನೋಡಿ.

ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್

ಕನ್ನಡ ಚಿತ್ರರಂಗದಲ್ಲಿ ಸುದೀಪ್ ಫ್ಯಾನ್ಸ್ ಮತ್ತು ದರ್ಶನ್ ಫ್ಯಾನ್ಸ್ ನಡುವೆ ವಾರ್ ಶುರುವಾಗಿದೆ. ಈ ಬಗ್ಗೆ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ತಾವು ಕಂಡಂತೆ ದರ್ಶನ್ ಫ್ಯಾನ್ಸ್ ಎಂಥವರು ಎಂಬುದನ್ನು ತರುಣ್ ಸುಧೀರ್ ವಿವರಿಸಿದ್ದಾರೆ. ವಿಡಿಯೋ ನೋಡಿ..

ಜೈಲಿಗೆ ತೆರಳಿ ಫ್ಯಾನ್ಸ್ ವಾರ್ ಬಗ್ಗೆ ದರ್ಶನ್​​ಗೆ ಮಾಹಿತಿ ನೀಡಿದ ವಿಜಯಲಕ್ಷ್ಮಿ: ದಾಸನ ರಿಯಾಕ್ಷನ್ ಏನು?

ದರ್ಶನ್ ಫ್ಯಾನ್ಸ್ ಮತ್ತು ಸುದೀಪ್ ಫ್ಯಾನ್ಸ್ ನಡುವೆ ವಿವಾದ ಶುರುವಾಗಿದೆ. ಸದ್ಯ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲು ವಾಸ ಅನುಭವಿಸುತ್ತಿದ್ದಾರೆ. ಫ್ಯಾನ್ಸ್ ವಾರ್ ಆರಂಭ ಆದ ಬಳಿಕ ಜೈಲಿನಲ್ಲಿ ಇದೇ ಮೊದಲ ಬಾರಿಗೆ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮಿ ಭೇಟಿ ಆಗಿದ್ದಾರೆ.

  • Ramu Ram
  • Updated on: Dec 23, 2025
  • 8:35 pm

Kichcha Sudeep About Controversy: ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ? ಉತ್ತರ ನೀಡಿದ ಕಿಚ್ಚ ಸುದೀಪ್

Kichcha Sudeep On Mark Movie: ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾದ ಬಿಡುಗಡೆಗೂ ಮುನ್ನ ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಫ್ಯಾನ್ಸ್ ಮತ್ತು ಸುದೀಪ್ ಫ್ಯಾನ್ಸ್ ನಡುವೆ ಕಿತ್ತಾಟ ಶುರುವಾಗಿದೆ. ಪೈರಸಿ ವಿರುದ್ಧ ಕಿಚ್ಚ ಸುದೀಪ್ ಅವರು ಯುದ್ಧ ಸಾರಿದ್ದಾರೆ. ಅದರ ಕುರಿತು ಈ ಸಂದರ್ಶನದಲ್ಲಿ ಸುದೀಪ್ ಅವರು ಮಾತನಾಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ 15 ವರ್ಷ ಪೂರೈಸಿದ ನಟಿ ರಾಗಿಣಿ ದ್ವಿವೇದಿ

ನಟಿ ರಾಗಿಣಿ ದ್ವಿವೇದಿ ಅವರು ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 15 ವರ್ಷಗಳು ಕಳೆದಿವೆ. ಸೋಲು-ಗೆಲುವು, ಏಳು-ಬೀಳು, ನೋವು-ನಲಿವು, ಅವಮಾನ-ಸನ್ಮಾನ ಎಲ್ಲವನ್ನೂ ಅವರು ಕಂಡಿದ್ದಾರೆ. ಚಿತ್ರರಂಗದಲ್ಲಿ ತಮ್ಮ 15 ವರ್ಷಗಳ ಜರ್ನಿಯನ್ನು ರಾಗಿಣಿ ಅವರು ಈಗ ಮೆಲುಕು ಹಾಕಿದ್ದಾರೆ.

ಜನವರಿ 29ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮೂರು ಕಡೆಗಳಲ್ಲಿ ಚಿತ್ರ ಪ್ರದರ್ಶನ

ಪ್ರತಿ ವರ್ಷ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಸಿನಿಮೋತ್ಸವ ನಡೆಯುತ್ತದೆ. ಈ ಬಾರಿ ಚಲನಚಿತ್ರೋತ್ಸವದಲ್ಲಿ 60 ದೇಶಗಳ ಸಿನಿಮಾಗಳ ಪ್ರದರ್ಶನ ಆಗಲಿವೆ. ಎಲ್ಲಾ ಸಿನಿಮಾಗಳನ್ನು ಒಂದೇ ಕಡೆ ನೋಡಲು ಅವಕಾಶ ಇರಲಿದೆ. ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ಸಿನಿಮಾ ಸಹ ಪ್ರದರ್ಶನ ಆಗಲಿದೆ ಎಂಬುದು ವಿಶೇಷ. ಈ ವರ್ಷ ಮಹಿಳಾ ಸಬಲೀಕರಣ ಥೀಮ್ ಬಗ್ಗೆ ಚರ್ಚೆ ನಡೆಯಲಿದೆ.

ನಟ ಶಿವರಾಜ್​​ಕುಮಾರ್ ಸಾವು ಗೆದ್ದು ಒಂದು ವರ್ಷ; ಅಂದು ನಡೆದಿದ್ದೇನು?

ನಟ ಶಿವರಾಜ್​ಕುಮಾರ್ ಕ್ಯಾನ್ಸರ್ ಗೆದ್ದು ಒಂದು ವರ್ಷ ಕಳೆದಿದೆ. ಅಮೆರಿಕದ ಮಿಯಾಮಿಯಲ್ಲಿ ಯಶಸ್ವಿ ಸರ್ಜರಿ ನಡೆದು ಡಿಸೆಂಬರ್ 24ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಈಗ ಸಂಪೂರ್ಣ ಕ್ಯಾನ್ಸರ್ ಮುಕ್ತರಾಗಿರುವ ಶಿವಣ್ಣ, '45', 'ಜೈಲರ್ 2', 'ಉತ್ತರಕಾಂಡ' ಸೇರಿದಂತೆ ಹಲವು ಸಿನಿಮಾಗಳಲ್ಲಿ ಸಕ್ರಿಯರಾಗಿದ್ದಾರೆ.