Kannada Cinema
1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.
ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.
ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.
ಪಂಚ ಭಾಷೆಯಲ್ಲಿ ಬಿಡುಗಡೆಗೆ ಸಜ್ಜಾಗಿದೆ ಕನ್ನಡದ ‘ಕರಿಕಾಡ’ ಸಿನಿಮಾ
ಗಿಲ್ಲಿ ವೆಂಕಟೇಶ್ ನಿರ್ದೇಶನ ಮಾಡಿರುವ ‘ಕರಿಕಾಡ’ ಪ್ಯಾನ್ ಇಂಡಿಯಾ ಸಿನಿಮಾ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ಕಾಡ ನಟರಾಜ್ ಅವರು ಈ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಅವರಿಗೆ ನಿರೀಕ್ಷಾ ಶೆಟ್ಟಿ ಜೋಡಿ ಆಗಿದ್ದಾರೆ. ಟೀಸರ್ ನೋಡಿದ ಪ್ರೇಕ್ಷಕರು ಈ ಸಿನಿಮಾ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Dec 28, 2025
- 2:31 pm
ಬೆಳಗಾವಿ ಉತ್ಸವದಲ್ಲಿ ಡಾಲಿ ಮಾಸ್ ಡೈಲಾಗ್; ಅಭಿಮಾನಿಗಳ ಖುಷಿ ನೋಡಿ..
ನಟ ಡಾಲಿ ಧನಂಜಯ್ ಅವರು ಬೆಳಗಾವಿ ಉತ್ಸವಕ್ಕೆ ತೆರಳಿದ್ದಾರೆ. ಆ ಅವರು ವೇದಿಕೆಯಲ್ಲಿ ಮಾತನಾಡಿದ ವಿಡಿಯೋ ಇಲ್ಲಿದೆ. ಸಿನಿಮಾದ ಡೈಲಾಗ್ ಹೇಳುವ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ‘ಸುಬ್ಬಿ ಅಂಕಲ್ನ ಹೊಡಿತೀನಿ ಸುಬ್ಬಿ’ ಎನ್ನುವ ಡೈಲಾಗ್ ಹೇಳಿದಾಗ ಅಭಿಮಾನಿಗಳು ಖುಷಿಯಿಂದ ಕೇಕೆ ಹಾಕಿದರು.
- Madan Kumar
- Updated on: Dec 28, 2025
- 2:25 pm
‘ಟಾಕ್ಸಿಕ್’ ಸಿನಿಮಾ: ಎಲಿಜಬೆತ್ ಪಾತ್ರದಲ್ಲಿ ಹುಮಾ ಖುರೇಷಿ; ಫಸ್ಟ್ ಲುಕ್ ರಿಲೀಸ್
ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರತಂಡದಿಂದ ಹುಮಾ ಖುರೇಷಿ ಅವರ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. ಇತ್ತೀಚೆಗೆ ನಟಿ ಕಿಯಾರಾ ಅಡ್ವಾಣಿ ಅವರ ಪಾತ್ರದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆ ಆಗಿತ್ತು. 2026ರ ಮಾರ್ಚ್ 19ರಂದು ತೆರೆಕಾಣಲಿರುವ ಈ ಚಿತ್ರವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡುತ್ತಿದೆ.
- Madan Kumar
- Updated on: Dec 28, 2025
- 11:51 am
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಉಪೇಂದ್ರ, ರಾಜ್ ಬಿ. ಶೆಟ್ಟಿ, ಶಿವರಾಜ್ಕುಮಾರ್ ನಟನೆಯ ‘45’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಚಿತ್ರದ ಪೈರಸಿ ಆಗಿರುವುದು ಬೇಸರದ ಸಂಗತಿ. ಈ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
- Madan Kumar
- Updated on: Dec 26, 2025
- 8:16 pm
ಅಶ್ವಿನಿ ಪುನೀತ್ ರಾಜ್ಕುಮಾರ್ ಮೆಚ್ಚಿದ ‘ಪ್ರಣಯ ಪಯಣ’ ಗೀತೆ; ಡಿ.27ಕ್ಕೆ ಬಿಡುಗಡೆ
ಅರ್ಜುನ್ ಕಿಶೋರ್ ಚಂದ್ರ ಅವರ ಹೊಸ ಹಾಡನ್ನು ಬಿಡುಗಡೆ ಮಾಡಲು ಅಶ್ವಿನಿ ಪುನೀತ್ ರಾಜ್ಕುಮಾರ್ ಮುಂದಾಗಿದ್ದಾರೆ. ಇದೇ ಶನಿವಾರದಿಂದ (ಡಿ.27) ‘ಪಿಆರ್ಕೆ ಆಡಿಯೋ’ ಯೂಟ್ಯೂಬ್ ಚಾನೆಲ್ ಮೂಲಕ ಈ ವಿಡಿಯೋ ಸಾಂಗ್ ವೀಕ್ಷಿಸಬಹುದು. ಅರ್ಜುನ್ ಕಿಶೋರ್ ಚಂದ್ರ ಮತ್ತು ಎಡೆಲ್ ಆಶ್ಲಿಂಗ್ ಅವರು ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Dec 26, 2025
- 7:20 pm
‘ಕೆಡಿ’ ರಿಲೀಸ್ ದಿನಾಂಕ ಘೋಷಣೆ ಮಾಡಿದ ಪ್ರೇಮ್? ಯಾರ ಜೊತೆ ಕ್ಲ್ಯಾಶ್?
ಜೋಗಿ ಪ್ರೇಮ್ ನಿರ್ದೇಶನದ 'ಕೆಡಿ' ಸಿನಿಮಾದ ಬಿಡುಗಡೆ ದಿನಾಂಕ ಪ್ರಕಟವಾಗಿದೆ. 2026ರ ಏಪ್ರಿಲ್ನಲ್ಲಿ ಈ ಚಿತ್ರ ತೆರೆ ಕಾಣಲಿದೆ. 'ಅಣ್ತಮ್ಮ ಜೋಡೆತ್ತು ಕಣೋ' ಎಂಬ ಹೊಸ ಹಾಡನ್ನು ಸಹ ಬಿಡುಗಡೆ ಮಾಡಲಾಗಿದ್ದು, ಇದು ಧ್ರುವ, ರಮೇಶ್ ಅರವಿಂದ್, ಸಂಜಯ್ ದತ್ ಅವರ ರೆಟ್ರೋ ಲುಕ್ನಲ್ಲಿ ಸ್ನೇಹದ ಕುರಿತು ಮೂಡಿಬಂದಿದೆ.
- Rajesh Duggumane
- Updated on: Dec 26, 2025
- 3:01 pm
ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿದ ‘ಮಾರ್ಕ್’ ಹಾಗೂ ‘45’ ಸಿನಿಮಾ
ಕ್ರಿಸ್ಮಸ್ಗೆ ಬಿಡುಗಡೆಯಾದ '45' ಮತ್ತು 'ಮಾರ್ಕ್' ಕನ್ನಡ ಚಲನಚಿತ್ರಗಳು ಮೊದಲ ದಿನವೇ ಉತ್ತಮ ಗಳಿಕೆ ಕಂಡಿವೆ. ಶನಿವಾರ, ಭಾನುವಾರ ಮತ್ತು ಹೊಸ ವರ್ಷದಂದು ಈ ಚಿತ್ರ ಅಬ್ಬರದ ಕಲೆಕ್ಷನ್ ಮಾಡೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗುತ್ತದೆ ಎಂಬ ಕುತೂಹಲ ಮೂಡಿದೆ. ಮೊದಲ ದಿನದ ಗಳಿಕೆ ಬಗ್ಗೆ ಇಲ್ಲಿದೆ ವಿವರ.
- Rajesh Duggumane
- Updated on: Dec 26, 2025
- 6:54 am
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಕೆಲವು ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತು ಅಶ್ಲೀಲ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ದರ್ಶನ್ ದೂರು ನೀಡಿದ್ದಾರೆ. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವರಾಜ್ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ.
- Mangala RR
- Updated on: Dec 25, 2025
- 8:53 pm
ಬಿಗ್ ಬಾಸ್ ಧರ್ಮ ಕೀರ್ತಿರಾಜ್ ನಟನೆಯ 25ನೇ ಸಿನಿಮಾ ‘ನಯನ ಮನೋಹರ’
ಧರ್ಮ ಕೀರ್ತಿರಾಜ್ ಅವರ 25ನೇ ಸಿನಿಮಾಗೆ ಶುಭ ಕೋರಲು ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ಪ್ರಿಯಾಂಕಾ ಉಪೇಂದ್ರ, ವಿನೋದ್ ಪ್ರಭಾಕರ್ ಅವರು ಕಾರ್ಯಕ್ರಮಕ್ಕೆ ಬಂದು ಚಿತ್ರತಂಡಕ್ಕೆ ವಿಶ್ ಮಾಡಿದರು. ನವೀನ್ ಶಂಕರ್, ಸಿಂಧೂ ಲೋಕನಾಥ್, ಅನುಷಾ ರೈ, ಐಶ್ವರ್ಯ ಸಿಂಧೋಗಿ ಮುಂತಾದವರು ಬಂದಿದ್ದರು.
- Madan Kumar
- Updated on: Dec 25, 2025
- 8:32 pm
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿಗೆ ಚಿತ್ರಮಂದಿರದಲ್ಲೇ ಅರ್ಜುನ್ ಜನ್ಯ ಉತ್ತರ
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಇದೇ ಮೊದಲ ಬಾರಿಗೆ ‘45’ ಚಿತ್ರದ ಮೂಲಕ ಡೈರೆಕ್ಟರ್ ಆಗಿದ್ದಾರೆ. ಇದು ಅವರ ಮೊದಲ ನಿರ್ದೇಶನದ ಚಿತ್ರ. ಮೊದಲ ದಿನ ಸಿನಿಮಾ ವೀಕ್ಷಿಸಿದ ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ವಿಮರ್ಶೆ ತಿಳಿಸುತ್ತಿದ್ದಾರೆ. ಅವುಗಳಿಗೆ ಅರ್ಜುನ್ ಜನ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಡಿಯೋ ನೋಡಿ..
- Madan Kumar
- Updated on: Dec 25, 2025
- 6:32 pm
ಬಿಡುಗಡೆ ಸಿದ್ಧವಾಗಿದೆ ಹೊಸಬರ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾ ‘ವಿಕಲ್ಪ’
ಪೃಥ್ವಿರಾಜ್ ಪಾಟೀಲ್ ಅವರು ನಿರ್ದೇಶನ ಮಾಡಿರುವ ‘ವಿಕಲ್ಪ’ ಸಿನಿಮಾದಲ್ಲಿ ಹಿರಿ-ಕಿರಿಯ ಕಲಾವಿದರ ಸಂಗಮ ಆಗಿದೆ. ಇದು ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಸಿನಿಮಾ. ಇಂದಿರಾ ಶಿವಸ್ವಾಮಿ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ‘ವಿಕಲ್ಪ’ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಿದೆ. ಈಗ ಅಂತಿಮ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ.
- Madan Kumar
- Updated on: Dec 25, 2025
- 5:18 pm
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಇತ್ತೀಚಿನ ದಿನಗಳಲ್ಲಿ ಫ್ಯಾನ್ಸ್ ವಾರ್ ಜೋರಾಗಿದೆ. ಕಿಚ್ಚ ಸುದೀಪ್ ಅಭಿಮಾನಿಗಳು ಮತ್ತು ದರ್ಶನ್ ಅಭಿಮಾನಿಗಳು ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದಾರೆ. ಕೆಟ್ಟ ಕಮೆಂಟ್ಗಳನ್ನು ಮಾಡಲಾಗುತ್ತಿದೆ. ಇದರಿಂದ ಸಿನಿಮಾದ ಮೇಲೆ ಪರಿಣಾಮ ಬೀರುತ್ತಿದೆ. ಈ ಕುರಿತು ಶಿವರಾಜ್ಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
- Madan Kumar
- Updated on: Dec 25, 2025
- 3:13 pm