AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannada Cinema

Kannada Cinema

1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.

ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್​ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್​ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.

ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.

ಇನ್ನೂ ಹೆಚ್ಚು ಓದಿ

2026ರ ಬಹುನಿರೀಕ್ಷಿತ ಭಾರತೀಯ ಸಿನಿಮಾಗಳಲ್ಲಿ ನಂ.1 ಸ್ಥಾನ ಪಡೆದ ‘ಟಾಕ್ಸಿಕ್’

‘ಟಾಕ್ಸಿಕ್’ ಸಿನಿಮಾದ ಟೀಸರ್ ರಿಲೀಸ್ ಆದ ಬಳಿಕ ಸಿನಿಪ್ರಿಯರಿಗೆ ಇದ್ದ ನಿರೀಕ್ಷೆ ಡಬಲ್ ಆಯಿತು. ಈಗ 2026ರ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಈ ಸಿನಿಮಾಗೆ ನಂಬರ್ ಒನ್ ಸ್ಥಾನ ಸಿಕ್ಕಿದೆ. ‘ಧುರಂಧರ್ 2’, ‘ಪೆದ್ದಿ’ ಮುಂತಾದ ಸಿನಿಮಾಗಳನ್ನು ಕನ್ನಡದ ‘ಟಾಕ್ಸಿಕ್’ ಚಿತ್ರ ಹಿಂದಿಕ್ಕಿದೆ.

ಜೀ5 ಒಟಿಟಿಯಲ್ಲಿ ಪ್ರಸಾರ ಆಗಲಿದೆ ಕನ್ನಡ, ತುಳು ಭಾಷೆಯ ‘ಜೈ’ ಸಿನಿಮಾ

ಕನ್ನಡ ಮತ್ತು ತುಳು ಭಾಷೆಯ ‘ಜೈ’ ಸಿನಿಮಾ 2025ರ ನವೆಂಬರ್ 14ರಂದು ರಿಲೀಸ್ ಆಗಿತ್ತು. ಚಿತ್ರಮಂದಿರದಲ್ಲಿ ಹಿಟ್ ಆದ ಆ ಸಿನಿಮಾ ಈಗ ‘ಜೀ5’ ಒಟಿಟಿಯಲ್ಲಿ ಪ್ರಸಾರ ಆಗಲು ಸಜ್ಜಾಗಿದೆ. ಫೆಬ್ರವರಿ 6ರಿಂದ ಕನ್ನಡ ಹಾಗೂ ತುಳುವಿನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯವಾಗಲಿದೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್

ಕಿಚ್ಚ ಸುದೀಪ್ ಅವರ ಆಪ್ತರಾದ ಚಕ್ರವರ್ತಿ ಚಂದ್ರಚೂಡ್ ಅವರು ನಿರ್ಮಾಪಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ನಿರ್ಮಾಪಕರು ಖಂಡಿಸುತ್ತಿದ್ದಾರೆ. ನಟಿ, ನಿರ್ಮಾಪಕಿ ಪ್ರಿಯಾ ಹಾಸನ್ ಕೂಡ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಟಿವಿ9 ಜೊತೆ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ..

ಹೀರೋಗೆ ಕಾಂಡೋಮ್ ಕೊಡ್ತಾರೆ ಎಂದ ಚಂದ್ರಚೂಡ್ ಮಾತಿಗೆ ಕೆ. ಮಂಜು ಗರಂ

ಕಿಚ್ಚ ಸುದೀಪ್ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡ ಚಕ್ರವರ್ತಿ ಚಂದ್ರಚೂಡ್ ಈಗ ವಿವಾದಕ್ಕೆ ಸಿಲುಕಿದ್ದಾರೆ. ನಿರ್ಮಾಪಕರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡುವ ಮೂಲಕ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಅವರ ವಿರುದ್ಧ ‘ನಿರ್ಮಾಪಕರ ಸಂಘ’ ದೂರು ನೀಡಿದೆ. ಆ ಬಗ್ಗೆ ಕೆ. ಮಂಜು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿರುದ್ಧ ದೂರು ನೀಡಿದ ನಿರ್ಮಾಪಕರ ಸಂಘ

ತಮಿಳಿನ ‘ಜನ ನಾಯಗನ್’ ಸಿನಿಮಾ ಬಗ್ಗೆ ಮಾತನಾಡುವಾಗ ಚಕ್ರವರ್ತಿ ಚಂದ್ರಚೂಡ್ ಅವರು ನಿರ್ಮಾಪಕರನ್ನು ಟೀಕಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆಯು ‘ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ’ಕ್ಕೆ ದೂರು ನೀಡಿತ್ತು. ಈಗ ನಿರ್ಮಾಪಕರ ಸಂಘವು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿ, ಚಂದ್ರಚೂಡ್ ಮೇಲೆ ಕ್ರಮಕ್ಕೆ ಒತ್ತಾಯಿಸಿದೆ.

ಫೆ.6ರಂದು ರಿಲೀಸ್ ಆಗಲಿದೆ ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಸಿನಿಮಾ

ಕಿರುತೆರೆ ಮಾತ್ರವಲ್ಲದೇ ಹಿರಿತೆರೆಯಲ್ಲೂ ಗಿಲ್ಲಿ ನಟ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಬೇಡಿಕೆ ಹೆಚ್ಚಿದೆ. ಗಿಲ್ಲಿ ಅಭಿನಯಿಸಿದ ‘ಸರ್ಕಾರಿ ಶಾಲೆ-H8’ ಬಿಡುಗಡೆ ಆಗಲಿದೆ. ಶೀರ್ಷಿಕೆಯಿಂದಲೇ ಈ ಸಿನಿಮಾ ಕೌತುಕ ಮೂಡಿಸಿದೆ. ಫೆ.6ರಂದು ‘ಸರ್ಕಾರಿ ಶಾಲೆ-H8’ ಚಿತ್ರ ತೆರೆಕಾಣಲಿದೆ. ಗುಣ ಹರಿಯಬ್ಬೆ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

Seat Edge Movie Review: ನಗಿಸುತ್ತಾ ಹೆದರಿಸುವ ‘ಸೀಟ್ ಎಡ್ಜ್’ ಸಿನಿಮಾ

‘ಸೀಟ್ ಎಡ್ಜ್’ ಸಿನಿಮಾದ ಕಥೆ ಹೀಗಿದೆ.. ಯುವಕನೊಬ್ಬ ತನ್ನ ಜೀವವನ್ನು ಪಣಕ್ಕಿಟ್ಟು ಭೂತಬಂಗಲೆ ಒಳಗೆ ಹೋಗುತ್ತಾನೆ. ಅಲ್ಲಿ ಅವನಿಗೆ ಚಿತ್ರ-ವಿಚಿತ್ರ ಅನುಭವಗಳು ಆಗುತ್ತವೆ. ಅಲ್ಲಿಗೆ ಹೋದವರು ಯಾರೂ ಜೀವಂತವಾಗಿ ಮರಳಿ ಬರಲ್ಲ ಎಂಬ ಮಾತಿದೆ. ಹಾಗಾದ್ರೆ ಈ ಯುವಕ ಬದುಕಿ ವಾಪಸ್ ಬರುತ್ತಾನಾ ಅಥವಾ ಇಲ್ಲವಾ ಎಂಬುದೇ ಈ ಸಿನಿಮಾದ ಕಥೆಯ ತಿರುಳು.

ಬಿಡುಗಡೆ ಆಯ್ತು ‘ಕರಿಕಾಡ’ ಟ್ರೇಲರ್; ಯಾವುದಕ್ಕೆ ಈ ಹೀರೋ ಯುದ್ಧ?

‘ಕರಿಕಾಡ’ ಸಿನಿಮಾಗೆ ಯು/ಎ ಪ್ರಮಾಣಪತ್ರ ಸಿಕ್ಕಿದೆ. ಕನ್ನಡದ ಜೊತೆ ಬೇರೆ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗಲಿದೆ. ಟ್ರೇಲರ್ ಮೂಲಕ ಸಿನಿಮಾದ ಕಥೆಯ ಬಗ್ಗೆ ಸುಳಿವು ನೀಡಲಾಗಿದೆ. ಕರ್ನಾಟಕದ ಅಂದಾಜು 100 ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ. ಸಿನಿಮಾ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಟಿ ಜಯಮಾಲಾ

ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ನಟಿ ಜಯಮಾಲಾ ಅವರು ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ಅವರು ಈಗ ಅಧಿಕಾರ ವಹಿಸಿಕೊಂಡಿದ್ದಾರೆ. ಮಾಜಿ ಅಧ್ಯಕ್ಷರಾದ ನರಸಿಂಹಲು ಅವರು ಅಧಿಕಾರ ಹಸ್ತಾಂತರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಒಟಿಟಿಗೆ ಬಂತು ಆಶಿಕಾ, ದುಷ್ಯಂತ್, ಸಿಂಪಲ್ ಸುನಿ ಸಿನಿಮಾ ‘ಗತವೈಭವ’

ತುಂಬಾ ಎಮೋಷನಲ್ ಆದಂತಹ ಒಂದು ಲವ್ ಸ್ಟೋರಿ ‘ಗತವೈಭವ’ ಸಿನಿಮಾದಲ್ಲಿದೆ. ಸಿಂಪಲ್ ಸುನಿ ಅವರು 4 ಬೇರೆ ಬೇರೆ ಕಾಲಘಟ್ಟದಲ್ಲಿ ಈ ಚಿತ್ರದ ಕಥೆಯನ್ನು ತೋರಿಸಿದ್ದಾರೆ. ಆಶಿಕಾ ರಂಗನಾಥ್ ಅವರ ವೃತ್ತಿಜೀವನದಲ್ಲಿ ಇದೊಂದು ಡಿಫರೆಂಟ್ ಸಿನಿಮಾ ಆಗಿದೆ. ಈ ಚಿತ್ರವೀಗ ಒಟಿಟಿಗೆ ಬಂದಿದೆ.

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿದ್ದರಾಮಯ್ಯ: ಝೈದ್ ಖಾನ್ ಹೇಳಿದ್ದಿಷ್ಟು..

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಾಗಿ ಬೆಂಗಳೂರಿನಲ್ಲಿ ‘ಕಲ್ಟ್’ ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಈ ಚಿತ್ರವನ್ನು ಸಿಎಂ ಸಿದ್ದರಾಮಯ್ಯ ಕೂಡ ನೋಡಿದ್ದಾರೆ. ಸಿನಿಮಾ ವೀಕ್ಷಿಸುವಾಗ ಮಗನನ್ನು ನೆನಪಿಸಿಕೊಂಡು ಸಿದ್ದರಾಮಯ್ಯ ಭಾವುಕರಾದರು. ಆ ಬಗ್ಗೆ ಝೈದ್ ಖಾನ್ ಮಾಹಿತಿ ನೀಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಸಿಎಂ ಸಿದ್ದರಾಮಯ್ಯ

ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಅವರು ‘ಕಲ್ಟ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುವು ಮಾಡಿಕೊಂಡು ಈ ಸಿನಿಮಾವನ್ನು ನೋಡಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಅವರು ತಮ್ಮ ವಿಮರ್ಶೆ ಹಂಚಿಕೊಂಡರು. ಅವರಿಗೆ ಈ ಚಿತ್ರ ಇಷ್ಟ ಆಗಿದೆ.