Kannada Cinema
1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.
ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.
ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.
ರಾಯರ ಸನ್ನಿಧಿಯಲ್ಲಿ ತಂದೆಗೆ ಗೌರವ ಡಾಕ್ಟರೇಟ್: ಯುವ ರಾಜ್ಕುಮಾರ್ ಫುಲ್ ಖುಷ್
ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮದಲ್ಲಿ ರಾಘವೇಂದ್ರ ರಾಜ್ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದಾನ ಮಾಡಲಾಗಿದೆ. ಈ ಬಗ್ಗೆ ಪುತ್ರ ಯುವ ರಾಜ್ಕುಮಾರ್ ಮಾತನಾಡಿದ್ದಾರೆ. ‘ರಾಯರ ಸಮ್ಮುಖದಲ್ಲಿ ಗೌರವ ಡಾಕ್ಟರೇಟ್ ಸಿಗುತ್ತಿರುವುದು ಸಂತೋಷದ ವಿಷಯ. ನಮ್ಮ ಕುಟುಂಬದವರು ಇಲ್ಲಿಗೆ ಬಂದಿದ್ದೇವೆ. ತುಂಬ ಖುಷಿ ಆಗಿದೆ’ ಎಂದು ಹೇಳಿದ್ದಾರೆ.
- Bhemesh Poojar
- Updated on: Feb 23, 2026
- 10:58 pm
ಗುರುವೈಭವೋತ್ಸವ ವೇದಿಕೆಯಲ್ಲಿ ಗೌರವ ಡಾಕ್ಟರೇಟ್ ಪಡೆದ ರಾಘವೇಂದ್ರ ರಾಜ್ಕುಮಾರ್
ಕನ್ನಡ ಚಿತ್ರರಂಗದ ಹಿರಿಯ ನಟ ರಾಘವೇಂದ್ರ ರಾಜ್ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಫ್ಲೋರಿಡಾದ ಯೋಗ ಸಂಸ್ಕೃತಂ ವಿಶ್ವವಿದ್ಯಾಲಯದಿಂದ ಅವರಿಗೆ ಈ ಗೌರವ ನೀಡಲಾಗಿದೆ. ‘ಇದನ್ನು ರಾಘವೇಂದ್ರ ಸ್ವಾಮಿಗಳ ಪಾದಕ್ಕೆ ಅರ್ಪಿಸುವೆ’ ಎಂದು ರಾಘವೇಂದ್ರ ರಾಜ್ಕುಮಾರ್ ಅವರು ಹೇಳಿದ್ದಾರೆ.
- Bhemesh Poojar
- Updated on: Feb 23, 2026
- 9:44 pm
Sarala Subbarao Review: ಜೆನ್ ಜೀ ಕಾಲಕ್ಕೆ ರೆಟ್ರೋ ಪ್ರೀತಿ ಪರಿಚಯಿಸುವ ‘ಸರಳ ಸುಬ್ಬರಾವ್’
ಅಜಯ್ ರಾವ್, ಮಿಶಾ ನಾರಂಗ್, ರಂಗಾಯಣ ರಘು ಮುಂತಾದವರು ‘ಸರಳ ಸುಬ್ಬರಾವ್’ ಸಿನಿಮಾದಲ್ಲಿ ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ. 1971ರ ಕಾಲಘಟ್ಟದ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಿದ್ದಾರೆ ನಿರ್ದೇಶಕ ಮಂಜು ಸ್ವರಾಜ್. ನಟ ಅಜಯ್ ರಾವ್ ಅವರ ಸಿನಿಖಾತೆಯಲ್ಲಿ ಈ ಚಿತ್ರ ಡಿಫರೆಂಟ್ ಆಗಿದೆ.
- Madan Kumar
- Updated on: Feb 23, 2026
- 8:56 pm
ಧುರಂಧರ್ 2 Vs ಟಾಕ್ಸಿಕ್: 10 ಕೋಟಿ ಮಂದಿ ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ
ಮಾರ್ಚ್ 19ರಂದು ‘ಟಾಕ್ಸಿಕ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಬಿಡುಗಡೆ ಆಗಲಿವೆ. ಈ ಎರಡೂ ಚಿತ್ರಗಳು ಜನಮನ ಗೆಲ್ಲಲು ಸಫಲವಾದರೆ ದೊಡ್ಡ ಸಿನಿ ಹಬ್ಬ ನಡೆಯಲಿದೆ. ಎರಡೂ ಸಿನಿಮಾ ಸೇರಿಸಿ ಒಟ್ಟು 10 ಕೋಟಿ ಜನರು ಚಿತ್ರಮಂದಿರಕ್ಕೆ ಬರುವ ನಿರೀಕ್ಷೆ ಇದೆ.
- Madan Kumar
- Updated on: Feb 23, 2026
- 4:28 pm
ರವಿ ಬಸ್ರೂರು ಮಾತ್ರವಲ್ಲ: ಟಾಕ್ಸಿಕ್ ಚಿತ್ರಕ್ಕೆ 5 ಸಂಗೀತ ನಿರ್ದೇಶಕರು; ಜೀ ಮ್ಯೂಸಿಕ್ ತೆಕ್ಕೆಗೆ ಆಡಿಯೋ ಹಕ್ಕು
ಟೀಸರ್ ಮೂಲಕ ಸಖತ್ ಸದ್ದು ಮಾಡಿರುವ ‘ಟಾಕ್ಸಿಕ್’ ಚಿತ್ರತಂಡ ಹಾಡುಗಳಿಂದಲೂ ನಿರೀಕ್ಷೆ ಹೆಚ್ಚಿಸಲಿದೆ. ಈ ಸಿನಿಮಾಗೆ ರವಿ ಬಸ್ರೂರು ಸೇರಿ ಐವರು ಸಂಗೀತ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂಬುದು ವಿಶೇಷ. ‘ಜೀ ಮ್ಯೂಸಿಕ್’ ಮೂಲಕ ಹಾಡುಗಳು ಬಿಡುಗಡೆ ಆಗಲಿದೆ. ಆ ಬಗ್ಗೆ ಚಿತ್ರತಂಡದಿಂದ ಅಧಿಕೃತ ಮಾಹಿತಿ ಸಿಕ್ಕಿದೆ.
- Madan Kumar
- Updated on: Feb 22, 2026
- 2:44 pm
2 ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ರವಿ ಬಸ್ರೂರು: ತೆಲುಗು ವೇದಿಕೆಯಲ್ಲಿ ಎಮೋಷನಲ್ ಮಾತು
ವಿಶ್ವಕ್ ಸೇನ್ ನಟನೆಯ ತೆಲುಗಿನ ‘ಲಕ್ಟ್’ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ ರವಿ ಬಸ್ರೂರು ಮಾತನಾಡಿದ ವಿಡಿಯೋ ವೈರಲ್ ಆಗಿದೆ. 18ನೇ ವಯಸ್ಸಿನಲ್ಲಿ 2 ಬಾರಿ ಆತ್ಮಹತ್ಯೆ ಮಾಡಿಕೊಳ್ಳಲು ರವಿ ಬಸ್ರೂರು ಅವರು ಪ್ರಯತ್ನಿಸಿದ್ದರು.
- Madan Kumar
- Updated on: Feb 22, 2026
- 11:51 am
70ನೇ ಫಿಲ್ಮ್ಫೇರ್ ಪ್ರಶಸ್ತಿ: ಕನ್ನಡದಲ್ಲಿ ಅವಾರ್ಡ್ ಗೆದ್ದವರ ಪಟ್ಟಿ ಇಲ್ಲಿದೆ..
70ನೇ ಫಿಲ್ಮ್ಫೇರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೊಚ್ಚಿಯಲ್ಲಿ ಅದ್ದೂರಿ ಕಾರ್ಯಕ್ರಮ ನಡೆದಿದೆ. ಶ್ರೀಮುರಳಿ ಮತ್ತು ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟ, ನಟಿ ಪ್ರಶಸ್ತಿ ಪಡೆದಿದ್ದಾರೆ. ‘ಶಾಖಾಹಾರಿ’ ಸಿನಿಮಾಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಿಕ್ಕಿದೆ. ಪ್ರಶಸ್ತಿ ಪಡೆದವರು ಪೂರ್ಣ ಪಟ್ಟಿ ಇಲ್ಲಿದೆ..
- Madan Kumar
- Updated on: Feb 22, 2026
- 9:56 am
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ನಿರಂಜನ್ ಸುಧೀಂದ್ರ ಮತ್ತು ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅಭಿನಯಿಸಿರುವ ‘ಸೀತಾ ಪಯಣ’ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ನೋಡಿ ಶಿವರಾಜ್ಕುಮಾರ್ ಅವರು ವಿಮರ್ಶೆ ತಿಳಿಸಿದ್ದಾರೆ. ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ವಿಡಿಯೋ ನೋಡಿ..
- Madan Kumar
- Updated on: Feb 20, 2026
- 10:58 pm
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕಾರ್ತಿಕ್ ಮಹೇಶ್ ಅವರು ‘ಆಲ್ಫಾ’ ಚಿತ್ರದಲ್ಲಿ ನೆಗೆಟಿವ್ ಪಾತ್ರ ಮಾಡಿದ್ದಾರೆ. ಬಿಗ್ ಬಾಸ್ ಶೋ ಗೆದ್ದ ಬಳಿಕ ಅವರು ಸಿನಿಮಾಗಳಲ್ಲಿ ಹೆಚ್ಚು ಬ್ಯುಸಿ ಆಗಿದ್ದಾರೆ. ಕಾರ್ತಿಕ್ ಮಹೇಶ್ ಅವರ ಹೊಸ ಸಿನಿಮಾ ನೋಡಲು ಸ್ನೇಹಿತರು ಬಂದಿದ್ದಾರೆ. ತನಿಷಾ ಕುಪ್ಪಂಡ, ನಮ್ರತಾ ಗೌಡ ಬಂದು ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ.
- Madan Kumar
- Updated on: Feb 20, 2026
- 10:40 pm
Maarnami Movie: ‘ಮಾರ್ನಮಿ’ ಸಿನಿಮಾಗೆ ಪ್ರೇಕ್ಷಕರಿಂದ ಸಿಕ್ತು ಭರ್ಜರಿ ರೆಸ್ಪಾನ್ಸ್
‘ಮಾರ್ನಮಿ’ ಸಿನಿಮಾದ ಕಥೆಗೆ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಕಥೆ ರಿಯಲ್ ಆಗಿದೆ ಎಂದು ಜನರು ಹೇಳುತ್ತಿದ್ದಾರೆ. ಮೊದಲ ದಿನ ಸಿನಿಮಾ ನೋಡಿದ ಜನರಿಗೆ ಇಷ್ಟ ಆಗಿದೆ. ಪ್ರೇಮಿಗಳಿಗೆ ಈ ಸಿನಿಮಾದಲ್ಲಿ ನೀಡಿರುವ ಮೆಸೇಜ್ ಗಮನ ಸೆಳೆದಿದೆ. ಕರಾವಳಿ ಸೊಗಡನ್ನು ಕಂಡು ಪ್ರೇಕ್ಷಕರು ಖುಷಿ ಆಗಿದ್ದಾರೆ.
- Madan Kumar
- Updated on: Feb 20, 2026
- 9:43 pm
ಟಾಕ್ಸಿಕ್ ಟೀಸರ್: ಹಸಿಬಿಸಿ ದೃಶ್ಯ ನೋಡಿ ರುಕ್ಮಿಣಿ ವಸಂತ್ ಅಭಿಮಾನಿಗಳಿಗೆ ಆತಂಕ
‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ‘ಟಾಕ್ಸಿಕ್’ ಟೀಸರ್ನಲ್ಲಿ ಹತ್ತು ಹಲವು ಅಂಶಗಳು ಹೈಲೈಟ್ ಆಗಿವೆ. ಹಸಿಬಿಸಿ ದೃಶ್ಯಗಳು ಕೂಡ ಇದರಲ್ಲಿ ಇವೆ. ಅದನ್ನು ಕಂಡು ಕೆಲವರಿಗೆ ಈಗಾಗಲೇ ಆತಂಕ ಶುರುವಾಗಿದೆ. ರುಕ್ಮಿಣಿ ವಸಂತ್ ಅಭಿಮಾನಿಗಳು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.
- Madan Kumar
- Updated on: Feb 20, 2026
- 8:43 pm
‘ಟಾಕ್ಸಿಕ್’ ಡೈರೆಕ್ಟರ್ ಮಹಿಳೆ ಆದ್ರೂ ಟೀಸರ್ನಲ್ಲಿ ನಟಿಯರಿಗೆ ಜಾಗ ಇಲ್ಲ; ನೆಟ್ಟಿಗರ ಟೀಕೆ
ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಹಲವು ಸ್ಟಾರ್ ನಟಿಯರು ಅಭಿನಯಿಸಿದ್ದಾರೆ. ಈಗ ಈ ಚಿತ್ರದ ಟೀಸರ್ ಬಿಡುಗಡೆ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ನಟಿಯರ ಪಾತ್ರವನ್ನು ಕಿಂಚಿತ್ತೂ ತೋರಿಸಿಲ್ಲ ಎಂದು ಕೆಲವು ನೆಟ್ಟಿಗರು ಟೀಕೆ ಮಾಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Feb 20, 2026
- 6:59 pm