Kannada Cinema

Kannada Cinema

1934ರಲ್ಲಿ ಮೊದಲ ಕನ್ನಡ ಸಿನಿಮಾ ‘ಸತಿ ಸುಲೋಚನಾ’ ಬಿಡುಗಡೆ ಆಗುವ ಮೂಲಕ ಉದಯವಾದ ಕನ್ನಡ ಚಿತ್ರರಂಗಕ್ಕೆ 89 ವರ್ಷದ ಸುದೀರ್ಘ ಇತಿಹಾಸವಿದೆ.

ಮನರಂಜನೆಯ ಜೊತೆಗೆ ಜನ ಜಾಗೃತಿ ಮೂಡಿಸುವ, ಅಭಿರುಚಿ ಬೆಳೆಸುವ ಸಿನಿಮಾಗಳನ್ನು ಕನ್ನಡ ಚಿತ್ರರಂಗ ನೀಡುತ್ತಲೇ ಬಂದಿದೆ. ಸಿನಿಮಾಗಳ ಮೂಲಕ ಕನ್ನಡತನವನ್ನು ಪಸರಿಸುತ್ತಾ ಬಂದಿದೆ. ಸುಬ್ಬಯ್ಯ ನಾಯ್ಡು, ಭಾಗವತರ್, ಪಂಡರೀಬಾಯಿ ಅವರುಗಳು ಬಿತ್ತಿದ ಕನ್ನಡ ಚಿತ್ರರಂಗದ ಬೀಜಕ್ಕೆ ರಾಜ್​ಕುಮಾರ್, ಕಲ್ಯಾಣ್ ಕುಮಾರ್, ಲೋಕೇಶ್, ವಿಷ್ಣುವರ್ಧನ್, ಶಂಕರ್ ನಾಗ್, ಅನಂತ್​ನಾಗ್, ಅಂಬರೀಶ್ ಅಂಥಹಾ ಇನ್ನೂ ಅನೇಕ ಮಹನೀಯರು ನೀರೆರೆದು ಹೆಮ್ಮರವಾಗಿ ಬಳೆಸಿದ್ದಾರೆ.

ಕನ್ನಡ ಚಿತ್ರರಂಗ ಇಂದು ವಾರ್ಷಿಕವಾಗಿ ಸಾವಿರಾರು ಕೋಟಿ ವ್ಯವಹಾರ ನಡೆಯುವ ತಾಣ, ವರ್ಷಕ್ಕೆ ಸರಾಸರಿ 200 ರಿಂದ 250 ಕನ್ನಡ ಸಿನಿಮಾಗಳು ಇಲ್ಲಿ ತಯಾರುತ್ತಿವೆ. ಇತ್ತೀಚೆಗಿನ ವರ್ಷಗಳಲ್ಲಿ ‘ಕೆಜಿಎಫ್’, ‘ಕಾಂತಾರ’, ‘ವಿಕ್ರಾಂತ್ ರೋಣ’ ಇನ್ನೂ ಕೆಲವು ಸಿನಿಮಾಗಳು ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಇನ್ನಷ್ಟು ವಿಸ್ತರಣೆ ಗೊಳಿಸಿವೆ.

ಇನ್ನೂ ಹೆಚ್ಚು ಓದಿ

‘ಹರ್ಷಿಣಿ ಸಿನಿಮಾಸ್’ ಸಂಸ್ಥೆಗೆ ಬೆಂಬಲ ನೀಡಿದ ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡ

ಲತಾಶ್ರೀ ಡಿ.ಸಿ ಅವರು ‘ಹರ್ಷಿಣಿ ಸಿನಿಮಾಸ್’ ಸಂಸ್ಥೆಯನ್ನು ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂಲಕ ‘ಕಿರುನಗೆ’ ಸಿನಿಮಾ ನಿರ್ಮಾಣ ಆಗುತ್ತಿದೆ. ಇದು ಈ ಸಂಸ್ಥೆಯ ಮೊದಲ ಸಿನಿಮಾ. ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅವರಿಂದ ‘ಹರ್ಷಿಣಿ ಸಿನಿಮಾಸ್’ ಸಂಸ್ಥೆಯ ಉದ್ಘಾಟನೆ ಆಗಿದೆ. ‘ಕಿರುನಗೆ’ ಸಿನಿಮಾ ಬಗ್ಗೆ ಚಿತ್ರತಂಡದವರು ಮಾಹಿತಿ ನೀಡಿದ್ದಾರೆ.

ಡಾ. ರಾಜ್ ಸಹೋದರ ವರದಪ್ಪನವರ ಮೊಮ್ಮಗನ ಮೊದಲ ಸಿನಿಮಾ ‘ಮಿಂಚುಹುಳು’ ಅ.4ಕ್ಕೆ ರಿಲೀಸ್

ಕನ್ನಡದ ‘ಮಿಂಚುಹುಳು’ ಸಿನಿಮಾ ಅಕ್ಟೋಬರ್​ 4ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ಪೃಥ್ವಿರಾಜ್​, ಪ್ರೀತಂ ಕೊಪ್ಪದ ಮುಂತಾದವರು ನಟಿಸಿದ್ದಾರೆ. ಮಹೇಶ್ ಕುಮಾರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಹಂಸಲೇಖ, ಜಯಮಾಲಾ, ಪಿ. ಶೇಷಾದ್ರಿ ಮುಂತಾದ ಗಣ್ಯರು ಸಿನಿಮಾ ವೀಕ್ಷಿಸಿ ಭೇಷ್​ ಎಂದಿದ್ದಾರೆ.

ಪುನೀತ್​ ಮೇಲಿನ ಅಭಿಮಾನಕ್ಕೆ ಫ್ಯಾನ್ಸ್​ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ

ಹಾವೇರಿ ತಾಲೂಕು ಯಲಗಚ್ಚ ಗ್ರಾಮದಲ್ಲಿ ಪುನೀತ್​ ರಾಜ್​ಕುಮಾರ್​ ಅವರಿಗಾಗಿ ಅಭಿಮಾನಿಗಳು ದೇವಸ್ಥಾನ ಕಟ್ಟಿದ್ದಾರೆ. ಅದನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಉದ್ಘಾಟನೆ ಮಾಡಿದ್ದಾರೆ. ಬಳಿಕ ಅವರು ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಜನರು ತೋರಿಸುವ ಪ್ರೀತಿಗೆ ಅಶ್ವಿನಿ ಅವರು ಧನ್ಯವಾದ ತಿಳಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ..

ಮುಂಬೈನಲ್ಲಿ ಯಶ್​, ರಾಧಿಕಾ ಪಂಡಿತ್ ಡಿನ್ನರ್: ಫೋಟೋ, ವಿಡಿಯೋಗೆ ಮುಗಿಬಿದ್ದ ಪಾಪರಾಜಿಗಳು

ರಾಧಿಕಾ ಪಂಡಿತ್​ ಹಾಗೂ ‘ರಾಕಿಂಗ್​ ಸ್ಟಾರ್​’ ಯಶ್​ ಅವರು ಮುಂಬೈನಲ್ಲಿ ಜಾಲಿಯಾಗಿ ಕಾಲ ಕಳೆದಿದ್ದಾರೆ. ಡಿನ್ನರ್​ಗೆ ಜೊತೆಯಾಗಿ ತೆರಳಿದ ಅವರನ್ನು ಕಂಡು ಪಾಪರಾಜಿಗಳು ಮುಗಿಬಿದ್ದಿದ್ದಾರೆ. ತಮಗಾಗಿ ಕಾದಿದ್ದ ಪಾಪರಾಜಿಗಳ ಕಡೆಗೆ ಯಶ್​ ಕೈ ಬೀಸಿದ್ದಾರೆ. ಕೆಲವು ಕ್ಷಣಗಳ ಕಾಲ ನಿಂತು ಪೋಸ್​ ನೀಡಿ ನಂತರ ಮುಂದೆ ಸಾಗಿದ್ದಾರೆ. ಈ ವಿಡಿಯೋ ವೈರಲ್​ ಆಗಿದೆ.

ಬಳ್ಳಾರಿ ಜೈಲಲ್ಲಿ ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್ ತುಂಬ ತಂದಿದ್ದೇನು?

ದರ್ಶನ್​ ಜೈಲಿಗೆ ಹೋಗುವುದಕ್ಕೂ ಮುನ್ನ ‘ಡೆವಿಲ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಆದರೆ ಅವರ ಮೇಲೆ ಕೊಲೆ ಆರೋಪ ಬಂದಿದ್ದರಿಂದ ಸಿನಿಮಾದ ಕೆಲಸಗಳು ಅರ್ಧಕ್ಕೆ ನಿಂತು ಹೋದವು. ಇಂದು (ಸೆಪ್ಟೆಂಬರ್​ 26) ‘ಡೆವಿಲ್’ ಸಿನಿಮಾದ ನಿರ್ದೇಶಕ ಪ್ರಕಾಶ್ ವೀರ್​ ಅವರು ಬಳ್ಳಾರಿ ಜೈಲಿಗೆ ಹೋಗಿ ದರ್ಶನ್​ ಭೇಟಿ ಮಾಡಿದ್ದಾರೆ.

ಹಲವು ದಿನಗಳ ಬಳಿಕ ದರ್ಶನ್ ಮುಖದಲ್ಲಿ ನಗು; ಜಾಮೀನು ಸಿಗುವ ಮುನ್ಸೂಚನೆಯೇ?

ಬಳ್ಳಾರಿ ಜೈಲಿಗೆ ಶಿಫ್ಟ್ ಆದ ಬಳಿಕ ದರ್ಶನ್ ಮಂಕಾಗಿದ್ದರು. ಅವರ ವಿರುದ್ಧ ಚಾರ್ಜ್​ಶೀಟ್​ನಲ್ಲಿ ಗಂಭೀರ ಆರೋಪಗಳು ಇರುವುದು ಬಹಿರಂಗ ಆಯಿತು. ಜಾಮೀನು ಅರ್ಜಿ ಅರ್ಜಿಯ ವಿಚಾರಣೆ ಮುಂದೂಡಿಕೆ ಆಯಿತು. ಈ ಎಲ್ಲ ಕಾರಣಗಳಿಂದ ಅವರು ಸೈಲೆಂಟ್​ ಆಗಿದ್ದರು. ಆದರೆ ಇಂದು (ಸೆ.25) ದರ್ಶನ್​ ನಗು ನಗುತ್ತಾ ಇರುವುದು ಕಾಣಿಸಿದೆ. ಆ ವಿಡಿಯೋ ಇಲ್ಲಿದೆ ನೋಡಿ..

ಹೊಸ ಕೇಸ್​ ಬಗ್ಗೆ ದರ್ಶನ್​ ಜತೆ ಲಾಯರ್​ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ

ನಟ ದರ್ಶನ್​ ಅವರನ್ನು ಬಳ್ಳಾರಿ ಜೈಲಿನಲ್ಲಿ ಇಂದು (ಸೆ.25) ಲಾಯರ್​ ಭೇಟಿ ಮಾಡಿದ್ದಾರೆ. ಗುರುವಾರ (ಸೆ.26) ಆರಂಭ ಆಗಲಿರುವ ಹೊಸ ಪ್ರಕರಣದ ತನಿಖೆಯ ಬಗ್ಗೆ ದರ್ಶನ್​ಗೆ ವಕೀಲರು ಕೆಲವು ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ಅಂದಾಜು 35 ನಿಮಿಷಗಳ ಕಾಲ ದರ್ಶನ್ ಜೊತೆ ವಕೀಲರು ಮಾತುಕಥೆ ನಡೆಸಿದ್ದಾರೆ. ಇನ್ನೊಂದೆಡೆ, ದರ್ಶನ್​ಗೆ ಜಾಮೀನು ಕೊಡಿಸಲು ಪ್ರಯತ್ನ ನಡೆಯುತ್ತಿದೆ.

‘ಗೋಪಿಲೋಲ’ ಸಿನಿಮಾಗೆ ಸಾಥ್​ ನೀಡಿದ ಸ್ಯಾಂಡಲ್​ವುಡ್​ ಗಣ್ಯರು; ಅ.4ಕ್ಕೆ ಬಿಡುಗಡೆ

ಮಂಜುನಾಥ್​ ಅರಸ್ ಅವರು ‘ಗೋಪಿಲೋಲ’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಸ್ಯಾಂಡಲ್​ವುಡ್​ನ ಹಿರಿಯರು ಈ ಚಿತ್ರದ ಟ್ರೇಲರ್​ ಅನಾವರಣ ಮಾಡಿ ಶುಭ ಕೋರಿದ್ದಾರೆ. ನೈಸರ್ಗಿಕ ಕೃಷಿಯ ಬಗ್ಗೆ ಈ ಸಿನಿಮಾದ ಮೂಲಕ ಹೇಳಲಾಗುತ್ತಿದೆ. ಅಕ್ಟೋಬರ್​ 4ರಂದು ಸಿನಿಮಾ ಬಿಡುಗಡೆ ಆಗಲಿದೆ. ಆರ್​. ರವೀಂದ್ರ ಅವರ ನಿರ್ದೇಶನ ಈ ಸಿನಿಮಾಗಿದೆ.

ಕರಣ್ ಜೋಹರ್​ ನಿರ್ಮಾಣದ ಸಿನಿಮಾದಲ್ಲಿ ಇಂದ್ರಜಿತ್​ ಲಂಕೇಶ್​ ಪುತ್ರ ಸಮರ್ಜಿತ್

‘ಗೌರಿ’ ಸಿನಿಮಾದ ಮೂಲಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ಹೀರೋ ಆಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು. ಅವರ ನಟನೆಗೆ ವೀಕ್ಷಕರಿಂದ ಮೆಚ್ಚುಗೆ ಸಿಕ್ಕಿತು. ಆ ಸಿನಿಮಾಗೆ ಸ್ವತಃ ಇಂದ್ರಜಿತ್​ ಲಂಕೇಶ್​ ನಿರ್ದೇಶನ ಮಾಡಿದ್ದರು. ಈಗ ಸಮರ್ಜಿತ್​ ಲಂಕೇಶ್​ ಅವರ ಮುಂದಿನ ಹಾದಿ ಹಿರಿದಾಗಿದೆ. ಅವರಿಗೆ ಬಾಲಿವುಡ್​ನಿಂದ ಆಫರ್​ ಬಂದಿದೆ ಎಂಬುದು ವಿಶೇಷ.

ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ಆರೋಪಿ ದರ್ಶನ್​ ಜಾಮೀನು ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ. ಅವರ ಪರ ವಕೀಲರು ಆ ಬಗ್ಗೆ ಮಾತನಾಡಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಇಂದು (ಸೆಪ್ಟೆಂಬರ್​ 24) ವಕೀಲರು ದರ್ಶನ್​ ಜೊತೆ ಮಾತನಾಡಿ ಬಂದಿದ್ದಾರೆ. ನಂತರ ಮಾಧ್ಯಮಗಳ ಎದುರು ಕೆಲವು ಮಾಹಿತಿ ಹಂಚಿಕೊಂಡಿದ್ದಾರೆ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ